Homeಮುಖಪುಟಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

- Advertisement -
- Advertisement -

ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ. ಆದರೆ, ಈ ನಿರ್ಣಯ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿಲ್ಲ.

ಯುಎಸ್ , ರಷ್ಯಾ ನಿರ್ಣಯದ ಪರ ಮತ ಹಾಕಿಲ್ಲ. ಈ ಎರಡು ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು. ಮಾನವೀಯ ನೆರವು ಒದಗಿಸುವ ನಿರ್ಣಯಕ್ಕೆ ಯುಎಸ್ ವಿರೋಧ ವ್ಯಕ್ತಪಡಿಸಿದೆ. ಮಾನವೀಯ ವಿತರಣೆಗಳ ವಿಶೇಷ ನಿಯಂತ್ರಣವನ್ನು ವಿಶ್ವ ಸಂಸ್ಥೆಗೆ ನೀಡುವ ಷರತ್ತನ್ನು ತೆಗೆದುಹಾಕಲು ಅದು ಒತ್ತಾಯಿಸಿದೆ.

ತಕ್ಷಣ ಗಾಝಾಗೆ ಮಾನವೀಯ ನೆರವು ಹೆಚ್ಚಿಸಬೇಕು. ಇದಕ್ಕಾಗಿ ವಿಶ್ವಸಂಸ್ಥೆಯಿಂದ ಸಂಯೋಜಕರನ್ನು ನೇಮಿಸಬೇಕು. ಇಸ್ರೇಲ್ ಕುರಿತು ಇದುವರೆಗೆ ಮಾತನಾಡದ ರಾಷ್ಟ್ರಗಳು ಕೂಡ ಇದರಲ್ಲಿ ಕೈ ಜೋಡಿಸಬೇಕು ಎಂದು ನಿರ್ಣಯ ಒತ್ತಾಯಿಸಿದೆ.

ನಿರ್ಣಯದ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಕದನ ವಿರಾಮವಿಲ್ಲದೆ ಕೇವಲ ಮಾನವೀಯ ವಿತರಣೆ ಹೆಚ್ಚಿಸುವ ನಿರ್ಣಯದ ಸಫಲತೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

“ಗಾಝಾದ ಜನತೆಗೆ ಮಾನವೀಯ ನೆರವು ಹೆಚ್ಚಿಸುವ ಭದ್ರತಾ ಮಂಡಳಿಯ ನಿರ್ಣಯ ಜನರಿಗೆ ಸಹಕಾರಿಯಾಗಲಿದೆ ಎಂದು ನಾನು ಒಪ್ಪುತ್ತೇನೆ. ಆದರೆ, ಇದು ಸಫಲತೆ ಕಾಣಬೇಕಾದರೆ, ಗಾಝಾದ ಜನತೆಯ ದುಃಸ್ವಪ್ನ ಕೊನೆಗೊಳಿಸಲು ಮಾನವೀಯ ಕದನ ವಿರಾಮವು ಏಕೈಕ ಮಾರ್ಗವಾಗಿದೆ” ಎಂದು ಗುಟೆರೆಸ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

“ಈಜಿಪ್ಟ್ ರೆಡ್ ಕ್ರೆಸೆಂಟ್, ವಿಶ್ವಸಂಸ್ಥೆ ಮತ್ತು ನಮ್ಮ ಸಹವರ್ತಿಗಳು ಕಳಿಸಿದ ಮಾನವೀಯ ನೆರವಿನ ಟ್ರಕ್‌ಗಳ ಸಂಖ್ಯೆ ನೋಡಿ ಕೆಲವರು ಗಾಝಾದಲ್ಲಿ ಮಾನವೀಯ ಕಾರ್ಯಾಚರಣೆಯ ಪರಿಣಾಮಕಾರಿತ್ವವನ್ನು ಅಳೆಯುತ್ತಿದ್ದಾರೆ. ಇದು ತಪ್ಪು, ನಿಜವಾದ ಸಮಸ್ಯೆ ಏನೆಂದರೆ ಇಸ್ರೇಲ್ ಆಕ್ರಮಣ ನಡೆಸುತ್ತಿರುವ ವಿಧಾನ ಗಾಝಾದೊಳಗೆ ಮಾನವೀಯ ನೆರವು ವಿತರಣೆಗೆ ಭಾರೀ ಅಡೆತಡೆಗಳನ್ನು ಉಂಟು ಮಾಡುತ್ತಿದೆ ಎಂದು ಗುಟೆರಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭದ್ರತಾ ಮಂಡಳಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಶುಕ್ರವಾರ ನಿರ್ಣಯ ಮಂಡಿಸಿದೆ. ಇದರ ಪರ ಭದ್ರತಾ ಮಂಡಳಿಯ ಎಲ್ಲಾ ಸದಸ್ಯರು ಮತ ಹಾಕಿದ್ದಾರೆ. ಯುಎಸ್ ಮತ್ತು ರಷ್ಯಾ ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು.

“ಯುಎಸ್ ನಿರ್ಣಯವನ್ನು ಬೆಂಬಲಿಸಿತ್ತು. ಆದರೆ, ನಿರ್ಣಯದಲ್ಲಿ ಯುದ್ಧವನ್ನು ಪ್ರಚೋದಿಸಿದ ಹಮಾಸ್ ದಾಳಿಯ ಬಗ್ಗೆ ಯಾವುದೇ ಖಂಡನೆ ಇಲ್ಲದ ಕಾರಣ ಮತದಾನದಿಂದ ದೂರ ಉಳಿದಿದೆ” ಎಂದು ವಿಶ್ವಸಂಸ್ಥೆಗೆ ಯುಎಸ್ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್ ಹೇಳಿದ್ದಾರೆ.

“ಅಕ್ಟೋಬರ್ 7ರಂದು ಹಮಾಸ್ ಗುಂಪು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ನಿರ್ಣಯ ಉಲ್ಲೇಖಿಸಿಲ್ಲ ಎಂಬುವುದು ನಮಗೆ ತೀವ್ರ ನಿರಾಶೆ ಉಂಟು ಮಾಡಿದೆ” ಎಂದು ಲಿಂಡಾ ಥಾಮಸ್ ಹೇಳಿದ್ದಾರೆ. ಇಸ್ರೇಲ್ ದಾಳಿಯಿಂದ ಗಾಝಾದಲ್ಲಿ 20 ಸಾವಿರಕ್ಕೂ ಅಧಿಕ ಅಮಾಯಕ ನಾಗರಿಕರು ಬಲಿಯಾಗಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿಲ್ಲ.

ಈ ನಡುವೆ “ಯುಎಸ್ ನಿರ್ಣಯದ ಹಲ್ಲು ಕಿತ್ತು ಹಾಕಿದೆ” ಎಂದು ರಷ್ಯಾದ ರಾಯಭಾರಿ ವಾಸಿಲಿ ನೆಬೆನ್ಜ್ಯಾ ದೂರಿದ್ದಾರೆ. “ಈ ನಿರ್ಣಯವು ಇಸ್ರೇಲಿ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡುತ್ತದೆ. ಹಾಗಾಗಿ, ರಷ್ಯಾ ಮತದಾನದಿಂದ ದೂರ ಉಳಿದಿದೆ” ಎಂದು ಅವರು ತಿಳಿಸಿದ್ದಾರೆ.

ಯುಎಸ್ ಗೆ ಬೆದರಿತಾ ವಿಶ್ವಸಂಸ್ಥೆ?

ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯದಲ್ಲಿ ಗಾಝಾದಲ್ಲಿ ಕದನ ವಿರಾಮದ ಬಗ್ಗೆ ಉಲ್ಲೇಖಿಸಿಲ್ಲ. ಇದರ ಹಿಂದೆ ಯುಎಸ್ ಬೆದರಿಕೆ ಇದೆಯಾ? ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ಈ ಹಿಂದೆ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿದ್ದ ನಿರ್ಣಯದ ಪರ ಯುಎಸ್ ಮತ ಹಾಕಿರಲಿಲ್ಲ. ಅಲ್ಲದೆ, ಯುಎಸ್ ನಿರ್ಣಯದ ಹಲ್ಲು ಕಿತ್ತಿದೆ ಎಂಬ ರಷ್ಯಾ ರಾಯಬಾರಿಯ ಹೇಳಿಕೆ ಈ ಸಂದೇಹವನ್ನು ಪುಷ್ಠೀಕರಿಸುತ್ತದೆ.

ಅಕ್ಟೋಬರ್ 7ರಂದು ಗಾಝಾದ ಹಮಾಸ್ ಗುಂಪು ಇಸ್ರೇಲ್‌ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 1,200 ಮಂದಿ ಇಸ್ರೇಲ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಮಾಸ್‌ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಿರಂತರ ದಾಳಿ ನಡೆಸುತ್ತಾ ಬಂದಿದ್ದು, ಇದರಿಂದ 20 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಇಸ್ರೇಲ್ ರಕ್ತದಾಹಕ್ಕೆ ಗಾಝಾ ನರಕವಾಗಿ ಮಾರ್ಪಟ್ಟಿದೆ. ಅಲ್ಲಿನ ಶೇ.90ರಷ್ಟು ಜನರು ತಮ್ಮ ಮನೆ, ಆಸ್ತಿ-ಪಾಸ್ತಿ ಬಿಟ್ಟು ಪಲಾಯನ ಮಾಡಿದ್ದಾರೆ. ಉಳಿದವರಲ್ಲಿ ಅನೇಕರು ಬಲಿಯಾಗಿದ್ದಾರೆ. ಸುಮಾರು 50 ಸಾವಿರ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಕನಿಷ್ಠ ವ್ಯವಸ್ಥೆಗಳಲಿಲ್ಲದೆ ಜನರು ನರಳುತ್ತಿದ್ದಾರೆ. ಗಾಯಾಳುಗಲ್ಲದ ಜನರು ಆಹಾರ, ಪಾನಿಯಕ್ಕಾಗಿ ಅಲೆದಾಡುತ್ತಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...