Homeಮುಖಪುಟಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

- Advertisement -
- Advertisement -

ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ. ಆದರೆ, ಈ ನಿರ್ಣಯ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿಲ್ಲ.

ಯುಎಸ್ , ರಷ್ಯಾ ನಿರ್ಣಯದ ಪರ ಮತ ಹಾಕಿಲ್ಲ. ಈ ಎರಡು ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು. ಮಾನವೀಯ ನೆರವು ಒದಗಿಸುವ ನಿರ್ಣಯಕ್ಕೆ ಯುಎಸ್ ವಿರೋಧ ವ್ಯಕ್ತಪಡಿಸಿದೆ. ಮಾನವೀಯ ವಿತರಣೆಗಳ ವಿಶೇಷ ನಿಯಂತ್ರಣವನ್ನು ವಿಶ್ವ ಸಂಸ್ಥೆಗೆ ನೀಡುವ ಷರತ್ತನ್ನು ತೆಗೆದುಹಾಕಲು ಅದು ಒತ್ತಾಯಿಸಿದೆ.

ತಕ್ಷಣ ಗಾಝಾಗೆ ಮಾನವೀಯ ನೆರವು ಹೆಚ್ಚಿಸಬೇಕು. ಇದಕ್ಕಾಗಿ ವಿಶ್ವಸಂಸ್ಥೆಯಿಂದ ಸಂಯೋಜಕರನ್ನು ನೇಮಿಸಬೇಕು. ಇಸ್ರೇಲ್ ಕುರಿತು ಇದುವರೆಗೆ ಮಾತನಾಡದ ರಾಷ್ಟ್ರಗಳು ಕೂಡ ಇದರಲ್ಲಿ ಕೈ ಜೋಡಿಸಬೇಕು ಎಂದು ನಿರ್ಣಯ ಒತ್ತಾಯಿಸಿದೆ.

ನಿರ್ಣಯದ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಕದನ ವಿರಾಮವಿಲ್ಲದೆ ಕೇವಲ ಮಾನವೀಯ ವಿತರಣೆ ಹೆಚ್ಚಿಸುವ ನಿರ್ಣಯದ ಸಫಲತೆಯ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

“ಗಾಝಾದ ಜನತೆಗೆ ಮಾನವೀಯ ನೆರವು ಹೆಚ್ಚಿಸುವ ಭದ್ರತಾ ಮಂಡಳಿಯ ನಿರ್ಣಯ ಜನರಿಗೆ ಸಹಕಾರಿಯಾಗಲಿದೆ ಎಂದು ನಾನು ಒಪ್ಪುತ್ತೇನೆ. ಆದರೆ, ಇದು ಸಫಲತೆ ಕಾಣಬೇಕಾದರೆ, ಗಾಝಾದ ಜನತೆಯ ದುಃಸ್ವಪ್ನ ಕೊನೆಗೊಳಿಸಲು ಮಾನವೀಯ ಕದನ ವಿರಾಮವು ಏಕೈಕ ಮಾರ್ಗವಾಗಿದೆ” ಎಂದು ಗುಟೆರೆಸ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

“ಈಜಿಪ್ಟ್ ರೆಡ್ ಕ್ರೆಸೆಂಟ್, ವಿಶ್ವಸಂಸ್ಥೆ ಮತ್ತು ನಮ್ಮ ಸಹವರ್ತಿಗಳು ಕಳಿಸಿದ ಮಾನವೀಯ ನೆರವಿನ ಟ್ರಕ್‌ಗಳ ಸಂಖ್ಯೆ ನೋಡಿ ಕೆಲವರು ಗಾಝಾದಲ್ಲಿ ಮಾನವೀಯ ಕಾರ್ಯಾಚರಣೆಯ ಪರಿಣಾಮಕಾರಿತ್ವವನ್ನು ಅಳೆಯುತ್ತಿದ್ದಾರೆ. ಇದು ತಪ್ಪು, ನಿಜವಾದ ಸಮಸ್ಯೆ ಏನೆಂದರೆ ಇಸ್ರೇಲ್ ಆಕ್ರಮಣ ನಡೆಸುತ್ತಿರುವ ವಿಧಾನ ಗಾಝಾದೊಳಗೆ ಮಾನವೀಯ ನೆರವು ವಿತರಣೆಗೆ ಭಾರೀ ಅಡೆತಡೆಗಳನ್ನು ಉಂಟು ಮಾಡುತ್ತಿದೆ ಎಂದು ಗುಟೆರಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಭದ್ರತಾ ಮಂಡಳಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಶುಕ್ರವಾರ ನಿರ್ಣಯ ಮಂಡಿಸಿದೆ. ಇದರ ಪರ ಭದ್ರತಾ ಮಂಡಳಿಯ ಎಲ್ಲಾ ಸದಸ್ಯರು ಮತ ಹಾಕಿದ್ದಾರೆ. ಯುಎಸ್ ಮತ್ತು ರಷ್ಯಾ ಒಕ್ಕೂಟಗಳು ಮತದಾನದಿಂದ ದೂರ ಉಳಿದಿತ್ತು.

“ಯುಎಸ್ ನಿರ್ಣಯವನ್ನು ಬೆಂಬಲಿಸಿತ್ತು. ಆದರೆ, ನಿರ್ಣಯದಲ್ಲಿ ಯುದ್ಧವನ್ನು ಪ್ರಚೋದಿಸಿದ ಹಮಾಸ್ ದಾಳಿಯ ಬಗ್ಗೆ ಯಾವುದೇ ಖಂಡನೆ ಇಲ್ಲದ ಕಾರಣ ಮತದಾನದಿಂದ ದೂರ ಉಳಿದಿದೆ” ಎಂದು ವಿಶ್ವಸಂಸ್ಥೆಗೆ ಯುಎಸ್ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್ ಹೇಳಿದ್ದಾರೆ.

“ಅಕ್ಟೋಬರ್ 7ರಂದು ಹಮಾಸ್ ಗುಂಪು ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ನಿರ್ಣಯ ಉಲ್ಲೇಖಿಸಿಲ್ಲ ಎಂಬುವುದು ನಮಗೆ ತೀವ್ರ ನಿರಾಶೆ ಉಂಟು ಮಾಡಿದೆ” ಎಂದು ಲಿಂಡಾ ಥಾಮಸ್ ಹೇಳಿದ್ದಾರೆ. ಇಸ್ರೇಲ್ ದಾಳಿಯಿಂದ ಗಾಝಾದಲ್ಲಿ 20 ಸಾವಿರಕ್ಕೂ ಅಧಿಕ ಅಮಾಯಕ ನಾಗರಿಕರು ಬಲಿಯಾಗಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿಲ್ಲ.

ಈ ನಡುವೆ “ಯುಎಸ್ ನಿರ್ಣಯದ ಹಲ್ಲು ಕಿತ್ತು ಹಾಕಿದೆ” ಎಂದು ರಷ್ಯಾದ ರಾಯಭಾರಿ ವಾಸಿಲಿ ನೆಬೆನ್ಜ್ಯಾ ದೂರಿದ್ದಾರೆ. “ಈ ನಿರ್ಣಯವು ಇಸ್ರೇಲಿ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡುತ್ತದೆ. ಹಾಗಾಗಿ, ರಷ್ಯಾ ಮತದಾನದಿಂದ ದೂರ ಉಳಿದಿದೆ” ಎಂದು ಅವರು ತಿಳಿಸಿದ್ದಾರೆ.

ಯುಎಸ್ ಗೆ ಬೆದರಿತಾ ವಿಶ್ವಸಂಸ್ಥೆ?

ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯದಲ್ಲಿ ಗಾಝಾದಲ್ಲಿ ಕದನ ವಿರಾಮದ ಬಗ್ಗೆ ಉಲ್ಲೇಖಿಸಿಲ್ಲ. ಇದರ ಹಿಂದೆ ಯುಎಸ್ ಬೆದರಿಕೆ ಇದೆಯಾ? ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ, ಈ ಹಿಂದೆ ಗಾಝಾದಲ್ಲಿ ಕದನ ವಿರಾಮಕ್ಕೆ ಒತ್ತಾಯಿಸಿದ್ದ ನಿರ್ಣಯದ ಪರ ಯುಎಸ್ ಮತ ಹಾಕಿರಲಿಲ್ಲ. ಅಲ್ಲದೆ, ಯುಎಸ್ ನಿರ್ಣಯದ ಹಲ್ಲು ಕಿತ್ತಿದೆ ಎಂಬ ರಷ್ಯಾ ರಾಯಬಾರಿಯ ಹೇಳಿಕೆ ಈ ಸಂದೇಹವನ್ನು ಪುಷ್ಠೀಕರಿಸುತ್ತದೆ.

ಅಕ್ಟೋಬರ್ 7ರಂದು ಗಾಝಾದ ಹಮಾಸ್ ಗುಂಪು ಇಸ್ರೇಲ್‌ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 1,200 ಮಂದಿ ಇಸ್ರೇಲ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಮಾಸ್‌ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಿರಂತರ ದಾಳಿ ನಡೆಸುತ್ತಾ ಬಂದಿದ್ದು, ಇದರಿಂದ 20 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಇಸ್ರೇಲ್ ರಕ್ತದಾಹಕ್ಕೆ ಗಾಝಾ ನರಕವಾಗಿ ಮಾರ್ಪಟ್ಟಿದೆ. ಅಲ್ಲಿನ ಶೇ.90ರಷ್ಟು ಜನರು ತಮ್ಮ ಮನೆ, ಆಸ್ತಿ-ಪಾಸ್ತಿ ಬಿಟ್ಟು ಪಲಾಯನ ಮಾಡಿದ್ದಾರೆ. ಉಳಿದವರಲ್ಲಿ ಅನೇಕರು ಬಲಿಯಾಗಿದ್ದಾರೆ. ಸುಮಾರು 50 ಸಾವಿರ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಕನಿಷ್ಠ ವ್ಯವಸ್ಥೆಗಳಲಿಲ್ಲದೆ ಜನರು ನರಳುತ್ತಿದ್ದಾರೆ. ಗಾಯಾಳುಗಲ್ಲದ ಜನರು ಆಹಾರ, ಪಾನಿಯಕ್ಕಾಗಿ ಅಲೆದಾಡುತ್ತಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...