Homeಮುಖಪುಟಏಕರೂಪ ನಾಗರಿಕ ಸಂಹಿತೆ: ಕರಡು ಸಮಿತಿಯ ನಿರ್ಧಾರಕ್ಕೆ ಅನುಮೋದನೆ ನೀಡಿದ ಉತ್ತರಾಖಂಡ ಸರಕಾರ

ಏಕರೂಪ ನಾಗರಿಕ ಸಂಹಿತೆ: ಕರಡು ಸಮಿತಿಯ ನಿರ್ಧಾರಕ್ಕೆ ಅನುಮೋದನೆ ನೀಡಿದ ಉತ್ತರಾಖಂಡ ಸರಕಾರ

- Advertisement -
- Advertisement -

ಉತ್ತರಾಖಂಡ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಈ ಮೊದಲು ಸುದ್ದಿಯಾಗಿತ್ತು. ಇದೀಗ ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ಕುರಿತು ತಜ್ಞರ ಕರಡು ಸಮಿತಿಯು ಈವರೆಗೆ ತೆಗೆದುಕೊಂಡ ನಿರ್ಧಾರಗಳನ್ನು ಉತ್ತರಾಖಂಡ ಸರ್ಕಾರವು ಅನುಮೋದಿಸಿದೆ.

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕರಡು ಸಮಿತಿಯ ನಿರ್ಧಾರಗಳಿಗೆ ಸಂಪುಟ ಅನುಮೋದನೆ ನೀಡಿದೆ ಎಂದು ಮುಖ್ಯ ಕಾರ್ಯದರ್ಶಿ ಎಸ್‌ಎಸ್ ಸಂಧು ಸುದ್ದಿಗಾರರಿಗೆ ತಿಳಿಸಿದ್ದಾರೆ. ಈ ಕುರಿತು ಸಮಿತಿಯನ್ನು ಮೇ.2022ರಲ್ಲಿ ರಚಿಸಲಾಗಿತ್ತು. ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿಯು ಜನವರಿಯಲ್ಲಿ ಕರಡನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ. ನಂತರ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಪ್ರಕ್ರಿಯೆಯು ಪ್ರಾರಂಭವಾಗಲಿದೆ ಎಂದು ಹೇಳಲಾಗಿದೆ.

ಜೂನ್‌ನಲ್ಲಿ ಏಕರೂಪ ನಾಗರಿಕ ಸಂಹಿತೆಯ ಕರಡು ಸಮಿತಿಯ ಸದಸ್ಯರಾದ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರು ಉತ್ತರಾಖಂಡಕ್ಕೆ ಏಕರೂಪ ನಾಗರಿಕ ಸಂಹಿತೆಯ ಕರಡು ರಚನೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದ್ದರು. ಉತ್ತರಖಂಡದ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆಯ ಕರಡು ಈಗ ಪೂರ್ಣಗೊಂಡಿದೆ ಎಂದು ನಿಮಗೆ ತಿಳಿಸಲು ನನಗೆ ಅಪಾರ ಸಂತೋಷವಾಗಿದೆ. ತಜ್ಞರ ಸಮಿತಿಯ ವರದಿಯನ್ನು ಕರಡು ಪ್ರತಿಯೊಂದಿಗೆ ಮುದ್ರಿಸಿ ಉತ್ತರಾಖಂಡ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ನ್ಯಾಯಮೂರ್ತಿ ದೇಸಾಯಿ ಹೇಳಿದ್ದರು.

ಸಮಿತಿಯ ನೇತೃತ್ವವನ್ನು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರು ವಹಿಸಿದ್ದು, ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪ್ರಮೋದ್ ಕೊಹ್ಲಿ, ಸಾಮಾಜಿಕ ಕಾರ್ಯಕರ್ತ ಮನು ಗೌರ್, ಮಾಜಿ ಮುಖ್ಯ ಕಾರ್ಯದರ್ಶಿ ಮತ್ತು ಐಎಎಸ್ ಅಧಿಕಾರಿ ಶತ್ರುಘ್ನ ಸಿಂಗ್ ಮತ್ತು ಡೂನ್ ವಿಶ್ವವಿದ್ಯಾಲಯದ ಉಪಕುಲಪತಿ ಸುರೇಖಾ ದಂಗ್ವಾಲ್ ಸೇರಿದ್ದಾರೆ.

ಏನಿದು ಏಕರೂಪ ನಾಗರಿಕ ಸಂಹಿತೆ?

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರೋದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ, ವೈವಿಧ್ಯತೆಗೆ ಧಕ್ಕೆ ಬರಲಿದೆ.

 

ಇದನ್ನು ಓದಿ: ಬಿಹಾರ: ತೋಟದಿಂದ ಸೊಪ್ಪು ಕಿತ್ತ ಆರೋಪದಲ್ಲಿ ದಲಿತ ಬಾಲಕಿಯನ್ನು ಥಳಿಸಿ ಹತ್ಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...