Homeಮುಖಪುಟಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

- Advertisement -
- Advertisement -

ಕೇರಳದ ಡಿಜಿಪಿ ಕಚೇರಿ ಕಡೆಗೆ ಶನಿವಾರ ಪ್ರತಿಪಕ್ಷ ಕಾಂಗ್ರೆಸ್ ನಡೆಸಿದ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ.

‘ನವ ಕೇರಳ ಸದಾಸ್’ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯ ವೇಳೆ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಡಿಜಿಪಿ ಕಚೇರಿಯತ್ತ ಕಾಂಗ್ರೆಸ್‌ ಪ್ರತಿಭಟನಾ ನಡಿಗೆ ಕೈಗೊಳ್ಳಲಾಗಿತ್ತು.

ಪ್ರತಿಭಟನೆಯ ವೇಳೆ  ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಪ್ರಯೋಗಿಸಿದಾಗ ಕೆಪಿಸಿಸಿ ಮುಖ್ಯಸ್ಥ ಕೆ ಸುಧಾಕರನ್, ವಿಧಾನಸಭೆ ಪ್ರತಿಪಕ್ಷ ನಾಯಕ ವಿ ಡಿ ಸತೀಶನ್, ಹಿರಿಯ ಕಾಂಗ್ರೆಸ್‌ ನಾಯಕ ರಮೇಶ್ ಚೆನ್ನಿತ್ತಲ ಸೇರಿದಂತೆ ಹಿರಿಯ ನಾಯಕರು ಡಿಜಿಪಿ ಕಚೇರಿ ಬಳಿಯ ತಾತ್ಕಾಲಿಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೊಲೀಸರು ಅಶ್ರುವಾಯು ಪ್ರಯೋಗಿಸಿದಾಗ ಸುಧಾಕರನ್ ಮತ್ತು ಚೆನ್ನಿತ್ತಲ ಅವರ ಕಣ್ಣಿಗೆ ಬಿದ್ದಿದ್ದು, ಸಮೀಪದಲ್ಲೇ ಇದ್ದ ಕಾಂಗ್ರೆಸ್‌ ಕಾರ್ಯಕರ್ತರು ಅವರನ್ನು ಕಾರಿನತ್ತ ತೆರಳಲು ಸಹಕಾರವನ್ನು ಮಾಡಿದ್ದಾರೆ.

ಸುಧಾಕರನ್ ಭಾಷಣ ಮುಗಿಸಿದ ಕೂಡಲೇ ಡಿಜಿಪಿ ಕಚೇರಿ ಬಳಿ ನಿರ್ಮಿಸಲಾಗಿದ್ದ ಬ್ಯಾರಿಕೇಡ್‌ಗಳನ್ನು ಏರಲು ಪ್ರತಿಭಟನಾಕಾರರು ಪ್ರಯತ್ನಿಸಿದ್ದಾರೆ. ಡಿಜಿಪಿ ಕಚೇರಿಗೆ ನುಗ್ಗಲು ಪ್ರಯತ್ನಿಸಿದ್ದಾರೆ. ಸತೀಶನ್ ಭಾಷಣ ಆರಂಭಿಸುವ ಹಂತದಲ್ಲಿ ಅಶ್ರುವಾಯು ಹಾಗೂ ಜಲಪಿರಂಗಿ ಪ್ರಯೋಗವನ್ನು ಮಾಡಿ ಪೊಲೀಸರು ಗುಂಪನ್ನು ಚದುರಿಸಿದ್ದಾರೆ.

ಇದಕ್ಕೂ ಮೊದಲು ‘ನವ ಕೇರಳ ಸದಾಸ್’ ವಿರುದ್ಧ ಕೇರಳದ ವಿವಿಧೆಡೆ ಪ್ರತಿಭಟನೆ ನಡೆದಿದೆ. ಆಟಿಂಗರ್‌ ಬಳಿ ಸಿಎಂಗೆ ಕಪ್ಪು ಭಾವುಟವನ್ನು ಕಾಂಗ್ರೆಸ್ ಕಾರ್ಯಕರ್ತರು ಪ್ರದರ್ಶಿಸಿದ್ದರು.  ಆ ಬಳಿಕ ಡಿವೈಎಫ್ಐ ಕಾರ್ಯಕರ್ತರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದವು.

ಇದಲ್ಲದೆ ಕಣ್ಣೂರು ಜಿಲ್ಲೆಯ ಕಲ್ಲಿಯಶ್ಶೇರಿಯಲ್ಲಿ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಕಪ್ವು ಬಾವುಟ ತೋರಿಸಿದ್ದ ಕಾಂಗ್ರೆಸ್‌ ಹಾಗೂ ವಿದ್ಯಾರ್ಥಿ ಘಟಕ ಕೆಎಸ್‌ಯು ಕಾರ್ಯಕರ್ಯರ ಮೇಲೆ ದಾಳಿ ನಡೆಸಲಾಗಿತ್ತು. ಈ ದಾಳಿ ಖಂಡಿಸಿ ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ರಾಹುಲ್‌ ಮಂಕೂಟ್ಟತ್ತಿಲ್‌ ನೇತೃತ್ವದಲ್ಲಿ ಕಾರ್ಯಕರ್ತರು ವಿಧಾನಸಭೆ ಬಳಿ ಪ್ರತಿಭಟನೆ ನಡೆಸಿದ್ದರು.

ನವ ಕೇರಳ ಸದಾಸ್:

ಕೇರಳ ಸರಕಾರ ಮಾಡಿರುವ ಕಾರ್ಯಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಕೇರಳ ಸರಕಾರ ‘ನವ ಕೇರಳ ಸದಾಸ್’  ಕಾರ್ಯಕ್ರಮವನ್ನು ಆಯೋಜಿಸಿತ್ತು. ಮಂಜೇಶ್ವರಂನಿಂದ ತಿರುವನಂತಪುರದವರೆಗೆ 36 ದಿನಗಳ ಯಾತ್ರೆಯಲ್ಲಿ 140 ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನವ ಕೇರಳ ಸದಸ್ಯವನ್ನು ನ.18ರಿಂದ ಆರಂಭವಾಗಿತ್ತು.  ಡಿಸೆಂಬರ್ 24 ರಂದು ತಿರುವನಂತಪುರದಲ್ಲಿ ಕಾರ್ಯಕ್ರಮವು ಮುಕ್ತಾಯಗೊಂಡಿದೆ. 20 ಮಂತ್ರಿಗಳು ಮತ್ತು ಸಿಎಂ ಸೇರಿ ‘ನವ ಕೇರಳ ಸದಾಸ್’  ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...