Homeಮುಖಪುಟದೂರಸಂಪರ್ಕ ಮಸೂದೆ ಅಂತರ್ಜಾಲದ ಮೇಲಿನ ಸರ್ಕಾರದ ನಿಯಂತ್ರಣ ಹೆಚ್ಚಿಸಲಿದೆ: ತಜ್ಞರ ಎಚ್ಚರಿಕೆ

ದೂರಸಂಪರ್ಕ ಮಸೂದೆ ಅಂತರ್ಜಾಲದ ಮೇಲಿನ ಸರ್ಕಾರದ ನಿಯಂತ್ರಣ ಹೆಚ್ಚಿಸಲಿದೆ: ತಜ್ಞರ ಎಚ್ಚರಿಕೆ

- Advertisement -
- Advertisement -

ಭಾರತೀಯ ದೂರ ಸಂಪರ್ಕ ಮಸೂದೆ-2023 (Telecommunication Bill-2023) ಗುರುವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗಿತ್ತು. ಚರ್ಚೆಯ ಬಳಿಕ ಗುರುವಾರ ಅನುಮೋದನೆ ಪಡೆದಿದೆ. ಈ ಮಸೂದೆಯು ಭಾರತೀಯ ಟೆಲಿಗ್ರಾಫ್ ಕಾಯ್ದೆ-1885 (Indian Telegraph Act-1885) ಮತ್ತು ಭಾರತೀಯ ವೈರ್‌ಲೆಸ್ ಟೆಲಿಗ್ರಫಿ ಕಾಯ್ದೆ- 1933(Indian Wireless Telegraphy Act-1933)ರನ್ನು ತೆಗೆದು ಹಾಕಲಾಗಿದೆ.

ಹೊಸ ಮಸೂದೆಯು ಇಂಟರ್‌ನೆಟ್ ಮೇಲಿನ ಕೇಂದ್ರ ಸರ್ಕಾರದ ಹಿಡಿತ ವಿಸ್ತರಣೆ ಮತ್ತು ದೇಶದ ಜನರ ಇಂಟರ್‌ನೆಟ್ ಸ್ವಾತಂತ್ರ್ಯದ ಮೇಲೆ ಬೀರಲಿರುವ ಪರಿಣಾಮಗಳ ಬಗ್ಗೆ ಚರ್ಚೆ ಹುಟ್ಟು ಹಾಕಿದೆ.

ಈ ಮಸೂದೆಯು ದೂರ ಸಂಪರ್ಕ ಸೇವೆಗಳ ಮೇಲೆ ವಸಾಹತುಶಾಹಿ ಯುಗದದಂತೆ ಸರ್ಕಾರ ಕಣ್ಗಾವಲಿಡಲು ಮತ್ತು ಯಾವುದೇ ಸುರಕ್ಷತೆಗಳಿಲ್ಲದೆ ಟೆಲಿಕಾಂ ಸೇವೆಗಳ ಮೇಲೆ ನಿಯಂತ್ರಣ ಸಾಧಿಸಲು ಸಹಕಾರಿಯಾಗಲಿದೆ ಎಂದು ಡಿಜಿಟಲ್ ಮತ್ತು ಮಾಧ್ಯಮ ಹಕ್ಕುಗಳ ತಜ್ಞರು ಹೇಳಿದ್ದಾರೆ. ಆದರೆ, ದೂರ ಸಂಪರ್ಕ ಉದ್ಯಮದ ಪ್ರತಿನಿಧಿಗಳು ಮಸೂದೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ.

ಈ ಮಸೂದೆಯು ದೂರಸಂಪರ್ಕ ಸೇವೆಗಳ ಬಗ್ಗೆ ನಿಗೂಢ ವ್ಯಾಖ್ಯಾನಗಳನ್ನು ಒಳಗೊಂಡಿದೆ ಎಂದು ಡಿಜಿಟಲ್ ತಜ್ಞರು ಸ್ಕ್ರಾಲ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಇದರ ಪರಿಣಾಮವಾಗಿ, ಈವರೆಗೆ ದೂರಸಂಪರ್ಕ ಸೇವೆಗಳು ಎಂದು ಸಾಂಪ್ರದಾಯಿಕವಾಗಿ ಪರಿಗಣಿತವಾಗಿರದಿದ್ದ ಇಮೇಲ್ ಹಾಗೂ ಸಂದೇಶ ವೇದಿಕೆಗಳ ಮೇಲಿನ ನಿಯಂತ್ರಣ ವಿಸ್ತರಿಸಲಿದೆ ಎಂದಿದ್ದಾರೆ.

‘ಸಂದೇಶ, ದೂರಸಂಪರ್ಕ ಹಾಗೂ ದೂರಸಂಪರ್ಕ ಸೇವೆಗಳು’ ಎಂಬ ವ್ಯಾಖ್ಯಾನದಡಿ ಇಮೇಲ್, ಕ್ಲೌಡ್ ಸೇವೆಗಳು, ಪ್ರಸರಣ ಹಾಗೂ ತಂತ್ರಾಂಶ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಭಾರತದಲ್ಲಿನ ತಾಂತ್ರಿಕ ನೀತಿಗಳ ಕುರಿತು ವರದಿ ಮಾಡುವ ಮೀಡಿಯಾನಾಮ ಎಂಬ ಡಿಜಿಟಲ್ ಮಾಧ್ಯಮ ವೇದಿಕೆಯ ಸಂಸ್ಥಾಪಕ ನಿಖಿಲ್ ಪಹ್ವಾ ಹೇಳಿದ್ದಾರೆ.

ದೂರಸಂಪರ್ಕ ಸೇವೆಗಳ ಬಳಕೆದಾರರು ಬಯೋಮೆಟ್ರಿಕ್ ಪರಿಶೀಲನೆಗೆ ಒಳಗಾಗಬೇಕಿರುವುದರಿಂದ ಅದರ ಪರಿಣಾಮವು ಎಂಡ್‌ ಟು ಎಂಡ್ ಎನ್‌ಕ್ರಿಪ್ಶನ್( end-to-end encryption) ಸೇವೆಗಳನ್ನು ಒದಗಿಸುವ ಸಂದೇಶ ವೇದಿಕೆಗಳ ಮೇಲಾಗಲಿದೆ. ಇದರಿಂದ ಬಳಕೆದಾರರ ಖಾಸಗಿತನಕ್ಕೆ ಧಕ್ಕೆಯಾಗಲಿದೆ ಎನ್ನುತ್ತಾರೆ ತಜ್ಞರು.

ಹೊಸ ಮಸೂದೆಯ ವ್ಯಾಪ್ತಿಯಲ್ಲಿ ದೂರ ಸಂಪರ್ಕ ಮತ್ತು ಇಂಟರ್‌ನೆಟ್‌ ಸೇವೆಗಳನ್ನು ಪಡೆಯಲು ಜನರು ಬಯೋಮೆಟ್ರಿಕ್ ಪರಿಶೀನೆಗೆ ಒಳಗಾಗಬೇಕಾಗುತ್ತದೆ. ಇಂಟರ್‌ನೆಟ್ ಬಳಸುವುದಕ್ಕಾಗಿ ಬಯೋಮೆಟ್ರಿಕ್ ಪರಿಶೀಲನೆಯನ್ನು ಕಡ್ಡಾಯಗೊಳಿಸುವ ಸಾಮರ್ಥ್ಯವನ್ನು ಸರ್ಕಾರ ಹೊಂದಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಇಂಟರ್‌ನೆಟ್ ಸಂಪರ್ಕವು ಭಾರತೀಯ ಸಂವಿಧಾನದಡಿಯಲ್ಲಿ ಮೂಲಭೂತ ಹಕ್ಕುಗಳ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಸ್ತುತ ಕಾನೂನಿನ ಪ್ರಕಾರ ಇಂಟರ್‌ನೆಟ್ ಬಳಕೆದಾರರು ಗೌಪ್ಯತೆ ಕಾಪಾಡಿಕೊಳ್ಳಬಹುದು. ಇಂಟರ್‌ನೆಟ್ ಬಳಕೆಗೂ ಬಯೋಮೆಟ್ರಿಕ್ ಕಡ್ಡಾಯಗೊಳಿಸುವುದು ಮತ್ತು ಬಳಕೆದಾರರಿಗೆ ಮಾಹಿತಿಯಿಲ್ಲದೆ ಇಂಟರ್‌ನೆಟ್ ಬಳಕೆಯನ್ನು ನಿಯಂತ್ರಿಸುವುದು ಕಳವಳಕಾರಿ ಎಂದು ಏಷ್ಯಾ ಪೆಸಿಫಿಕ್ ನೀತಿ ಸಲಹೆಗಾರ್ತಿ ನಮ್ರತಾ ಮಹೇಶ್ವರಿ ಹೇಳಿದ್ದಾರೆ.

ಹೊಸ ಮಸೂದೆಯನ್ನು ಹಲವರು ಹಲವು ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಕೆಲ ತಜ್ಞರು ಇದು ಬಳಕೆದಾರರ ಗೌಪ್ಯತಾ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡುತ್ತದೆ ಎಂದಿದ್ದಾರೆ. ಇನ್ನೂ ಕೆಲವರು ಹೊಸ ಮಸೂದೆ ದೂರಸಂಪರ್ಕ ಸೇವೆಗಳನ್ನು ಸುಲಭವಾಗಿ ಬಳಸಿಕೊಳ್ಳಲು ಜನರಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಟೆಲಿಕಾಂ ಸೇವೆ ಒದಗಿಸುವ ಕಾರ್ಪೋರೇಟ್ ವಲಯ ಮಸೂದೆಯನ್ನು ಒಪ್ಪಿಕೊಂಡಿರುವುದು ಜನ ಸಾಮಾನ್ಯರು ಆತಂಕಪಡುವ ವಿಚಾರ. ವ್ಯಾವಹಾರಿಕವಾಗಿ ಲಾಭವಿಲ್ಲದೆ ಯಾವುದೇ ಉದ್ಯಮ ವಲಯ ಹೊಸ ನೀತಿಯನ್ನು ಕಣ್ಣುಮುಚ್ಚಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ಕೊನೆಯದಾಗಿ ಹೇಳುವುದಾದರೆ, ದೂರ ಸಂಪರ್ಕ, ಇಂಟರ್‌ನೆಟ್‌ ಸೇವೆಗಳು ಜನರಿಗೆ ಸುಲಭವಾಗಿ ದೊರೆಯಬೇಕು ಎಂಬುವುದು ನಿಜ. ಇದು ಅಭಿವೃದ್ದಿಯ ಒಂದು ಭಾಗವೂ ಹೌದು. ಆದರೆ, ಆಳುವ ಸರ್ಕಾರ ನಮ್ಮ ದೂರ ಸಂಪರ್ಕ, ಇಂಟರ್‌ನೆಟ್ ಬಳಕೆಯ ಮೇಲೆ ಕಣ್ಣಿಡುತ್ತದೆ ಎಂದರೆ ಅಪಾಯಕಾರಿ.

ಇದನ್ನೂ ಓದಿ : ಏಕರೂಪ ನಾಗರಿಕ ಸಂಹಿತೆ: ಕರಡು ಸಮಿತಿಯ ನಿರ್ಧಾರಕ್ಕೆ ಅನುಮೋದನೆ ನೀಡಿದ ಉತ್ತರಾಖಂಡ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...