Homeಮುಖಪುಟದೂರಸಂಪರ್ಕ ಮಸೂದೆ ಅಂತರ್ಜಾಲದ ಮೇಲಿನ ಸರ್ಕಾರದ ನಿಯಂತ್ರಣ ಹೆಚ್ಚಿಸಲಿದೆ: ತಜ್ಞರ ಎಚ್ಚರಿಕೆ

ದೂರಸಂಪರ್ಕ ಮಸೂದೆ ಅಂತರ್ಜಾಲದ ಮೇಲಿನ ಸರ್ಕಾರದ ನಿಯಂತ್ರಣ ಹೆಚ್ಚಿಸಲಿದೆ: ತಜ್ಞರ ಎಚ್ಚರಿಕೆ

- Advertisement -
- Advertisement -

ಭಾರತೀಯ ದೂರ ಸಂಪರ್ಕ ಮಸೂದೆ-2023 (Telecommunication Bill-2023) ಗುರುವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗಿತ್ತು. ಚರ್ಚೆಯ ಬಳಿಕ ಗುರುವಾರ ಅನುಮೋದನೆ ಪಡೆದಿದೆ. ಈ ಮಸೂದೆಯು ಭಾರತೀಯ ಟೆಲಿಗ್ರಾಫ್ ಕಾಯ್ದೆ-1885 (Indian Telegraph Act-1885) ಮತ್ತು ಭಾರತೀಯ ವೈರ್‌ಲೆಸ್ ಟೆಲಿಗ್ರಫಿ ಕಾಯ್ದೆ- 1933(Indian Wireless Telegraphy Act-1933)ರನ್ನು ತೆಗೆದು ಹಾಕಲಾಗಿದೆ.

ಹೊಸ ಮಸೂದೆಯು ಇಂಟರ್‌ನೆಟ್ ಮೇಲಿನ ಕೇಂದ್ರ ಸರ್ಕಾರದ ಹಿಡಿತ ವಿಸ್ತರಣೆ ಮತ್ತು ದೇಶದ ಜನರ ಇಂಟರ್‌ನೆಟ್ ಸ್ವಾತಂತ್ರ್ಯದ ಮೇಲೆ ಬೀರಲಿರುವ ಪರಿಣಾಮಗಳ ಬಗ್ಗೆ ಚರ್ಚೆ ಹುಟ್ಟು ಹಾಕಿದೆ.

ಈ ಮಸೂದೆಯು ದೂರ ಸಂಪರ್ಕ ಸೇವೆಗಳ ಮೇಲೆ ವಸಾಹತುಶಾಹಿ ಯುಗದದಂತೆ ಸರ್ಕಾರ ಕಣ್ಗಾವಲಿಡಲು ಮತ್ತು ಯಾವುದೇ ಸುರಕ್ಷತೆಗಳಿಲ್ಲದೆ ಟೆಲಿಕಾಂ ಸೇವೆಗಳ ಮೇಲೆ ನಿಯಂತ್ರಣ ಸಾಧಿಸಲು ಸಹಕಾರಿಯಾಗಲಿದೆ ಎಂದು ಡಿಜಿಟಲ್ ಮತ್ತು ಮಾಧ್ಯಮ ಹಕ್ಕುಗಳ ತಜ್ಞರು ಹೇಳಿದ್ದಾರೆ. ಆದರೆ, ದೂರ ಸಂಪರ್ಕ ಉದ್ಯಮದ ಪ್ರತಿನಿಧಿಗಳು ಮಸೂದೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ.

ಈ ಮಸೂದೆಯು ದೂರಸಂಪರ್ಕ ಸೇವೆಗಳ ಬಗ್ಗೆ ನಿಗೂಢ ವ್ಯಾಖ್ಯಾನಗಳನ್ನು ಒಳಗೊಂಡಿದೆ ಎಂದು ಡಿಜಿಟಲ್ ತಜ್ಞರು ಸ್ಕ್ರಾಲ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಇದರ ಪರಿಣಾಮವಾಗಿ, ಈವರೆಗೆ ದೂರಸಂಪರ್ಕ ಸೇವೆಗಳು ಎಂದು ಸಾಂಪ್ರದಾಯಿಕವಾಗಿ ಪರಿಗಣಿತವಾಗಿರದಿದ್ದ ಇಮೇಲ್ ಹಾಗೂ ಸಂದೇಶ ವೇದಿಕೆಗಳ ಮೇಲಿನ ನಿಯಂತ್ರಣ ವಿಸ್ತರಿಸಲಿದೆ ಎಂದಿದ್ದಾರೆ.

‘ಸಂದೇಶ, ದೂರಸಂಪರ್ಕ ಹಾಗೂ ದೂರಸಂಪರ್ಕ ಸೇವೆಗಳು’ ಎಂಬ ವ್ಯಾಖ್ಯಾನದಡಿ ಇಮೇಲ್, ಕ್ಲೌಡ್ ಸೇವೆಗಳು, ಪ್ರಸರಣ ಹಾಗೂ ತಂತ್ರಾಂಶ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಭಾರತದಲ್ಲಿನ ತಾಂತ್ರಿಕ ನೀತಿಗಳ ಕುರಿತು ವರದಿ ಮಾಡುವ ಮೀಡಿಯಾನಾಮ ಎಂಬ ಡಿಜಿಟಲ್ ಮಾಧ್ಯಮ ವೇದಿಕೆಯ ಸಂಸ್ಥಾಪಕ ನಿಖಿಲ್ ಪಹ್ವಾ ಹೇಳಿದ್ದಾರೆ.

ದೂರಸಂಪರ್ಕ ಸೇವೆಗಳ ಬಳಕೆದಾರರು ಬಯೋಮೆಟ್ರಿಕ್ ಪರಿಶೀಲನೆಗೆ ಒಳಗಾಗಬೇಕಿರುವುದರಿಂದ ಅದರ ಪರಿಣಾಮವು ಎಂಡ್‌ ಟು ಎಂಡ್ ಎನ್‌ಕ್ರಿಪ್ಶನ್( end-to-end encryption) ಸೇವೆಗಳನ್ನು ಒದಗಿಸುವ ಸಂದೇಶ ವೇದಿಕೆಗಳ ಮೇಲಾಗಲಿದೆ. ಇದರಿಂದ ಬಳಕೆದಾರರ ಖಾಸಗಿತನಕ್ಕೆ ಧಕ್ಕೆಯಾಗಲಿದೆ ಎನ್ನುತ್ತಾರೆ ತಜ್ಞರು.

ಹೊಸ ಮಸೂದೆಯ ವ್ಯಾಪ್ತಿಯಲ್ಲಿ ದೂರ ಸಂಪರ್ಕ ಮತ್ತು ಇಂಟರ್‌ನೆಟ್‌ ಸೇವೆಗಳನ್ನು ಪಡೆಯಲು ಜನರು ಬಯೋಮೆಟ್ರಿಕ್ ಪರಿಶೀನೆಗೆ ಒಳಗಾಗಬೇಕಾಗುತ್ತದೆ. ಇಂಟರ್‌ನೆಟ್ ಬಳಸುವುದಕ್ಕಾಗಿ ಬಯೋಮೆಟ್ರಿಕ್ ಪರಿಶೀಲನೆಯನ್ನು ಕಡ್ಡಾಯಗೊಳಿಸುವ ಸಾಮರ್ಥ್ಯವನ್ನು ಸರ್ಕಾರ ಹೊಂದಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಇಂಟರ್‌ನೆಟ್ ಸಂಪರ್ಕವು ಭಾರತೀಯ ಸಂವಿಧಾನದಡಿಯಲ್ಲಿ ಮೂಲಭೂತ ಹಕ್ಕುಗಳ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಸ್ತುತ ಕಾನೂನಿನ ಪ್ರಕಾರ ಇಂಟರ್‌ನೆಟ್ ಬಳಕೆದಾರರು ಗೌಪ್ಯತೆ ಕಾಪಾಡಿಕೊಳ್ಳಬಹುದು. ಇಂಟರ್‌ನೆಟ್ ಬಳಕೆಗೂ ಬಯೋಮೆಟ್ರಿಕ್ ಕಡ್ಡಾಯಗೊಳಿಸುವುದು ಮತ್ತು ಬಳಕೆದಾರರಿಗೆ ಮಾಹಿತಿಯಿಲ್ಲದೆ ಇಂಟರ್‌ನೆಟ್ ಬಳಕೆಯನ್ನು ನಿಯಂತ್ರಿಸುವುದು ಕಳವಳಕಾರಿ ಎಂದು ಏಷ್ಯಾ ಪೆಸಿಫಿಕ್ ನೀತಿ ಸಲಹೆಗಾರ್ತಿ ನಮ್ರತಾ ಮಹೇಶ್ವರಿ ಹೇಳಿದ್ದಾರೆ.

ಹೊಸ ಮಸೂದೆಯನ್ನು ಹಲವರು ಹಲವು ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಕೆಲ ತಜ್ಞರು ಇದು ಬಳಕೆದಾರರ ಗೌಪ್ಯತಾ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡುತ್ತದೆ ಎಂದಿದ್ದಾರೆ. ಇನ್ನೂ ಕೆಲವರು ಹೊಸ ಮಸೂದೆ ದೂರಸಂಪರ್ಕ ಸೇವೆಗಳನ್ನು ಸುಲಭವಾಗಿ ಬಳಸಿಕೊಳ್ಳಲು ಜನರಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಟೆಲಿಕಾಂ ಸೇವೆ ಒದಗಿಸುವ ಕಾರ್ಪೋರೇಟ್ ವಲಯ ಮಸೂದೆಯನ್ನು ಒಪ್ಪಿಕೊಂಡಿರುವುದು ಜನ ಸಾಮಾನ್ಯರು ಆತಂಕಪಡುವ ವಿಚಾರ. ವ್ಯಾವಹಾರಿಕವಾಗಿ ಲಾಭವಿಲ್ಲದೆ ಯಾವುದೇ ಉದ್ಯಮ ವಲಯ ಹೊಸ ನೀತಿಯನ್ನು ಕಣ್ಣುಮುಚ್ಚಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ.

ಕೊನೆಯದಾಗಿ ಹೇಳುವುದಾದರೆ, ದೂರ ಸಂಪರ್ಕ, ಇಂಟರ್‌ನೆಟ್‌ ಸೇವೆಗಳು ಜನರಿಗೆ ಸುಲಭವಾಗಿ ದೊರೆಯಬೇಕು ಎಂಬುವುದು ನಿಜ. ಇದು ಅಭಿವೃದ್ದಿಯ ಒಂದು ಭಾಗವೂ ಹೌದು. ಆದರೆ, ಆಳುವ ಸರ್ಕಾರ ನಮ್ಮ ದೂರ ಸಂಪರ್ಕ, ಇಂಟರ್‌ನೆಟ್ ಬಳಕೆಯ ಮೇಲೆ ಕಣ್ಣಿಡುತ್ತದೆ ಎಂದರೆ ಅಪಾಯಕಾರಿ.

ಇದನ್ನೂ ಓದಿ : ಏಕರೂಪ ನಾಗರಿಕ ಸಂಹಿತೆ: ಕರಡು ಸಮಿತಿಯ ನಿರ್ಧಾರಕ್ಕೆ ಅನುಮೋದನೆ ನೀಡಿದ ಉತ್ತರಾಖಂಡ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...