Homeಮುಖಪುಟಸಾಕ್ಷಿ ಮಲಿಕ್‌ ನಿವಾಸಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ: ಕುಸ್ತಿಪಟುಗಳ ಜೊತೆ ಮಾತುಕತೆ

ಸಾಕ್ಷಿ ಮಲಿಕ್‌ ನಿವಾಸಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ: ಕುಸ್ತಿಪಟುಗಳ ಜೊತೆ ಮಾತುಕತೆ

- Advertisement -
- Advertisement -

ಒಲಿಂಪಿಯನ್ ಕುಸ್ತಿಪಟು ಸಾಕ್ಷಿ ಮಲಿಕ್ ಅವರ ನಿವಾಸಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭೇಟಿ ನೀಡಿದ್ದು, ನ್ಯಾಯಕ್ಕಾಗಿ ಅವರ ಹೋರಾಟಕ್ಕೆ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ಸಾಕ್ಷಿ ಮಲಿಕ್ ಅವರ ನಿವಾಸಕ್ಕೆ ಭೇಟಿ ಮಾಡಿ ಸಾಕ್ಷಿ ಮತ್ತು ಇತರ ಕುಸ್ತಿಪಟುಗಳ  ಜೊತೆ ಮಾತುಕತೆ ನಡೆಸಿದ್ದಾರೆ.

ಬಳಿಕ ಮಾತನಾಡಿದ ಪ್ರಿಯಾಂಕ ಗಾಂಧಿ, ಬಿಜೆಪಿ ಈಗಲೂ ಆರೋಪಿಗಳ ಜೊತೆ ನಿಂತಿದೆ ಮತ್ತು ಅವರಿಗೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡುತ್ತಿದ್ದಾರೆ. ದೇಶದ ಮಹಿಳೆಯರು ಈ ದೌರ್ಜನ್ಯಗಳನ್ನು ನೋಡುತ್ತಿದ್ದಾರೆ. ದೇಶಕ್ಕೆ ಕೀರ್ತಿ ತಂದ ಮಹಿಳಾ ಆಟಗಾರರು ಬಿಜೆಪಿ ಸಂಸದ ಮತ್ತು ಆಗಿನ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಿಜೆಪಿ ಸರ್ಕಾರವು ಅವರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಮತ್ತು ಇದಕ್ಕೆ ವಿರುದ್ಧವಾಗಿ ಸಂತ್ರಸ್ತರಿಗೆ ವಿವಿಧ ರೀತಿಯಲ್ಲಿ ಚಿತ್ರಹಿಂಸೆ ನೀಡಲಾಯಿತು ಎಂದು ಹೇಳಿದ್ದಾರೆ.

ಈ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು ಭಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಅವರಂತಹ ಆಟಗಾರರಿಗೆ ಮಾಡಿದ ಮಾತ್ರ ಅವಮಾನವಲ್ಲ, ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.

ವಿಶ್ವಮಟ್ಟದಲ್ಲಿ ಭಾರತದ ಕೀರ್ತಿಯನ್ನು ಹೆಚ್ಚಿಸಿದ ಆಟಗಾರರು ತಮ್ಮದೇ ಸರ್ಕಾರದ ಮುಂದೆ ಅಸಹಾಯಕರಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಪ್ರಧಾನಿ ಈ ವಿಚಾರದಲ್ಲಿಯಾದರೂ ತಮ್ಮ ಅಹಂ ಬಿಟ್ಟು ದೇಶವೇ ಹೆಮ್ಮೆ ಪಡುವಂತೆ ಮಾಡಿದ ಆಟಗಾರರಿಗೆ ನ್ಯಾಯ ಒದಗಿಸುವ ಭರವಸೆ ನೀಡಬೇಕಿತ್ತು. ಆದರೆ ಪ್ರಧಾನಿ ಮತ್ತು ಬಿಜೆಪಿ ಲೈಂಗಿಕ ಶೋಷಣೆಯ ಆರೋಪಿಗಳ ಜೊತೆಗಿದ್ದಾರೆ, ದೇಶವು ತನ್ನ ಚಾಂಪಿಯನ್‌ಗಳೊಂದಿಗೆ ನಿಂತಿದೆ ಎಂದು ಹೇಳಿದ್ದರು.

ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯೂಎಫ್ಐ‌) ಸಂಸ್ಥೆಗೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾದ ನಂತರ ಕೇಂದ್ರ ಸರ್ಕಾರದ ವಿರುದ್ಧ ದೇಶದ ಅಥ್ಲೀಟ್‌ಗಳ ಅಸಮಾಧಾನ ಹೆಚ್ಚಾಗಿತ್ತು. ಸಾಕ್ಷಿ ಮಲಿಕ್‌ ಅವರು ಈ ಕುರಿತು ಪತ್ರಿಕಾಗೋಷ್ಟಿಯನ್ನು ನಡೆಸಿ  ಕುಸ್ತಿ ತ್ಯಜಿಸುವುದಾಗಿ ಘೋಷಿಸಿದ್ದು,  ಪ್ರತ್ರಕರ್ತರ ಮುಂದೆಯೇ ತಮ್ಮ ಬೂಟು ಕಳಚಿಟ್ಟು ಪ್ರತಿಭಟನೆ ವ್ಯಕ್ತಪಡಿಸಿದ್ದರು. ಕಣ್ಣೀರಿಟ್ಟು ಪತ್ರಿಕಾಗೋಷ್ಟಿಯಿಂದ ನಿರ್ಗಮಿಸಿದ್ದರು.

ಇದರ ಬೆನ್ನಲ್ಲೇ  ಪ್ರಧಾನಿ ಮೋದಿ ಅವರಿಗೆ ಒಲಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಪತ್ರ ಬರೆದು,  ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿದ್ದೇನೆ ಎಂದು ಹೇಳಿದ್ದರು. ಬಳಿಕ ತಮಗೆ ಲಭಿಸಿದ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿ ಮೋದಿ ನಿವಾಸವಿರುವ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ತೊರೆದು ಹೋಗಿದ್ದರು. ನಾನು ಮೊದಲೇ ಹೇಳಿದಂತೆ ನಾವು ನಮ್ಮ ಹೆಣ್ಣುಮಕ್ಕಳು ಮತ್ತು ಸಹೋದರಿಯರಿಗಾಗಿ ಹೋರಾಡುತ್ತಿದ್ದೆವು. ನನ್ನಿಂದ ಅವರಿಗೆ ನ್ಯಾಯ ಸಿಗಲಿಲ್ಲ. ಈ ಕಾರಣದಿಂದಾಗಿ ನಾನು ಈ ಗೌರವಕ್ಕೆ ಅರ್ಹನಲ್ಲ ಎಂದು ನಾನು ಭಾವಿಸುತ್ತೇನೆ. ನನ್ನ ಪ್ರಶಸ್ತಿಯನ್ನು ಹಿಂದಿರುಗಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಆದರೆ ನನಗೆ ಅಪಾಯಿಂಟ್‌ಮೆಂಟ್ ಇಲ್ಲದ ಕಾರಣ ಪ್ರಧಾನಿಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಹಾಗಾಗಿ ಪ್ರಧಾನಿಗೆ ಬರೆದ ಪತ್ರದೊಂದಿಗೆ ನನ್ನ ಪ್ರಶಸ್ತಿಯನ್ನು ಬಿಟ್ಟು ಹೋಗುತ್ತಿದ್ದೇನೆ. ನಾನು ಈ ಪದಕವನ್ನು ನನ್ನ ಮನೆಗೆ ತೆಗೆದುಕೊಂಡು ಹೋಗುವುದಿಲ್ಲ ಎಂದು ಬಜರಂಗ್ ಪುನಿಯಾ ಹೇಳಿಕೊಂಡಿದ್ದರು.

ಇದನ್ನು ಓದಿ: ‘ಪ್ರಶಸ್ತಿಗಳಿಗಿಂತ ದುಃಖವು ಹೆಚ್ಚು ಭಾರವಾಗಿದೆ…’; ಪದ್ಮಶ್ರೀ ಮರಳಿಸಿದ ಬಜರಂಗ್ ಪುನಿಯಾ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...