Homeಮುಖಪುಟ"ನಾನೂ ಪದ್ಮಶ್ರೀ ಹಿಂದಿರುಗಿಸುತ್ತೇನೆ"...ಸಾಕ್ಷಿ ಮಲಿಕ್ ಬೆಂಬಲಿಸಿದ ಮತ್ತೊಬ್ಬ ಕುಸ್ತಿಪಟು

“ನಾನೂ ಪದ್ಮಶ್ರೀ ಹಿಂದಿರುಗಿಸುತ್ತೇನೆ”…ಸಾಕ್ಷಿ ಮಲಿಕ್ ಬೆಂಬಲಿಸಿದ ಮತ್ತೊಬ್ಬ ಕುಸ್ತಿಪಟು

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶ್ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾಗಿರುವುದನ್ನು ವಿರೋಧಿಸಿ ಕುಸ್ತಿಗೆ ವಿದಾಯ ಹೇಳಿರುವ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರಿಗೆ ಕುಸ್ತಿಪಟು ವೀರೇಂದ್ರ ಸಿಂಗ್ ಯಾದವ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಾಕ್ಷಿ ಮಲಿಕ್ ಅವರನ್ನು ಬೆಂಬಲಿಸಿ ಕುಸ್ತಿಪಟು ಬಜರಂಗ್ ಪೂನಿಯಾ ಪದ್ಮಶ್ರೀ ಮರಳಿಸಿದ ಬೆನ್ನಲ್ಲೇ ವೀರೇಂದ್ರ ಸಿಂಗ್ ಕೂಡ “ನಾನು ಪದ್ಮಶ್ರೀ ವಾಪಸ್ ಕೊಡುತ್ತೇನೆ” ಎಂದಿದ್ದಾರೆ.

“ನಾನು ನನ್ನ ಸಹೋದರಿ, ದೇಶದ ಮಗಳಿಗಾಗಿ ಪದ್ಮಶ್ರೀ ಹಿಂದಿರುಗಿಸುತ್ತೇನೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರೇ ನಿಮ್ಮ ಮಗಳು, ನನ್ನ ಸಹೋದರಿ ಸಾಕ್ಷಿ ಮಲಿಕ್ ಬಗ್ಗೆ ನನಗೆ ಹೆಮ್ಮಯಿದೆ. ನಾನು ದೇಶದ ಉನ್ನತ ಆಟಗಾರರನ್ನು ಕೂಡ ಈ ವಿಚಾರದಲ್ಲಿ ನಿಮ್ಮ ನಿರ್ಧಾರ ಕೋರುತ್ತೇನೆ” ಎಂದು ವೀರೇಂದ್ರ ಸಿಂಗ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ನೀರಜ್ ಚೋಪ್ರಾ ಅವರಿಗೆ ಪೋಸ್ಟ್‌ ಟ್ಯಾಗ್ ಮಾಡಿದ್ದಾರೆ.

ಸಾಕ್ಷಿ ಮಲಿಕ್ ಅವರನ್ನು ಬೆಂಬಲಿಸಿ ನಿನ್ನೆ(ಡಿ.22) ಸಂಜೆ ಬಜರಂಗ್ ಪೂನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ದೆಹಲಿಯ ಕರ್ತವ್ಯ ಪಥದಲ್ಲಿ ಇಟ್ಟು ತೆರಳಿದ್ದರು. ಇದನ್ನು ಪ್ರಧಾನಿ ಮೋದಿಯವರಿಗೆ ತಲುಪಿಸಿ ಎಂದಿದ್ದರು. ಬಳಿಕ ಪೊಲೀಸರು ಬಂದು ಪ್ರಶಸ್ತಿಯನ್ನು ತೆಗೆದುಕೊಂಡು ಹೋಗಿದ್ದಾರೆ.

“ಮಹಿಳಾ ಕುಸ್ತಿಪಟುಗಳಿಗೆ ಸರಿಯಾದ ಗೌರವ ಸಿಗದಿದ್ದಾಗ ನಾನು ಈ ಪ್ರಶಸ್ತಿ ಇಟ್ಟುಕೊಳ್ಳುವುದರಲ್ಲಿ ಅರ್ಥವಿಲ್ಲ. ನಾವು 40 ದಿನಗಳ ಕಾಲ ರಸ್ತೆಯಲ್ಲಿದ್ದೆವು. ಸರ್ಕಾರ ನಮಗೆ ನೀಡಿದ್ದ ಭರವಸೆಗಳು ಈಡೇರಿಲ್ಲ. ನಮ್ಮ ಹೋರಾಟವು ಸರ್ಕಾರದ ವಿರುದ್ಧವಲ್ಲ ಒಬ್ಬ ವ್ಯಕ್ತಿಯ ವಿರುದ್ದ. ನಾನು ನ್ಯಾಯಾಂಗವನ್ನು ನಂಬುತ್ತೇನೆ. ಆದರೆ, ಈಗ ಏನಾಗ್ತಿದೆ? ನನಗೆ ಈ ವ್ಯವಸ್ಥೆಯ ಮೇಲೆ ನಂಬಿಕೆಯಿಲ್ಲ” ಎಂದು ಪ್ರಶಸ್ತಿ ಹಿಂದಿರುಗಿಸಲು ಬಂದಿದ್ದ ವೇಳೆ ಬಜರಂಗ್ ಪೂನಿಯಾ ಬೇಸರದಿಂದ ಹೇಳಿದ್ದಾರೆ.

“ಹೆಣ್ಣುಮಕ್ಕಳ ಪೋಷಕರು ಒಲಿಂಪಿಕ್ ಪದಕ ವಿಜೇತರಿಗೆ ನ್ಯಾಯ ನೀಡದಿದ್ದರೆ, ಮತ್ತೆ ನಾವು ಹೇಗೆ ನ್ಯಾಯ ಪಡೆಯುವುದು? ಪ್ರಧಾನಮಂತ್ರಿ, ಉಪ ರಾಷ್ಟ್ರಪತಿ ಮತ್ತು ರಾಷ್ಟ್ರಪತಿಗಳು ಎಲ್ಲರೂ ಈ ರೀತಿ ಯಾಕೆ ನಡೆಯುತ್ತಿದೆ ಎಂದು ಉತ್ತರಿಸಬೇಕು. ಇಂತಹ ಘಟನೆಗಳು ನಮ್ಮ ನ್ಯಾಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹಳಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕುತ್ತವೆ” ಎಂದು ಹೇಳಿದ್ದಾರೆ ವೀರೇಂದ್ರ ಸಿಂಗ್.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಡಿ.21ರಂದು ಆಯ್ಕೆಯಾಗಿದ್ದಾರೆ. ಈ ಬೆನ್ನಲ್ಲೇ ಕುಸ್ತಿ ತ್ಯಜಿಸುವುದಾಗಿ ಘೋಷಿಸಿದ ಒಲಿಂಪಿಕ್ ಪದಕ ವಿಜೇತೆ ಹಾಗೂ ಕುಸ್ತಿಪಟು ಸಾಕ್ಷಿ ಮಲಿಕ್, ಪ್ರತ್ರಕರ್ತರ ಮುಂದೆಯೇ ತಮ್ಮ ಬೂಟು ಕಳಚಿಟ್ಟು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದ ಬೆನ್ನಲ್ಲೇ ಅವರಿಗೆ ಬೆಂಬಲ ವ್ಯಕ್ತಪಡಿಸಿ ಬಜರಂಗ್ ಪೂನಿಯಾ ಪದ್ಮಶ್ರೀ ಹಿಂದಿರುಗಿಸಿದ್ದಾರೆ.

ಇದನ್ನೂ ಓದಿ : ‘ಪ್ರಶಸ್ತಿಗಳಿಗಿಂತ ದುಃಖವು ಹೆಚ್ಚು ಭಾರವಾಗಿದೆ…’; ಪದ್ಮಶ್ರೀ ಮರಳಿಸಿದ ಬಜರಂಗ್ ಪುನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...