Homeಮುಖಪುಟ"ನಾನೂ ಪದ್ಮಶ್ರೀ ಹಿಂದಿರುಗಿಸುತ್ತೇನೆ"...ಸಾಕ್ಷಿ ಮಲಿಕ್ ಬೆಂಬಲಿಸಿದ ಮತ್ತೊಬ್ಬ ಕುಸ್ತಿಪಟು

“ನಾನೂ ಪದ್ಮಶ್ರೀ ಹಿಂದಿರುಗಿಸುತ್ತೇನೆ”…ಸಾಕ್ಷಿ ಮಲಿಕ್ ಬೆಂಬಲಿಸಿದ ಮತ್ತೊಬ್ಬ ಕುಸ್ತಿಪಟು

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶ್ ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾಗಿರುವುದನ್ನು ವಿರೋಧಿಸಿ ಕುಸ್ತಿಗೆ ವಿದಾಯ ಹೇಳಿರುವ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರಿಗೆ ಕುಸ್ತಿಪಟು ವೀರೇಂದ್ರ ಸಿಂಗ್ ಯಾದವ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಾಕ್ಷಿ ಮಲಿಕ್ ಅವರನ್ನು ಬೆಂಬಲಿಸಿ ಕುಸ್ತಿಪಟು ಬಜರಂಗ್ ಪೂನಿಯಾ ಪದ್ಮಶ್ರೀ ಮರಳಿಸಿದ ಬೆನ್ನಲ್ಲೇ ವೀರೇಂದ್ರ ಸಿಂಗ್ ಕೂಡ “ನಾನು ಪದ್ಮಶ್ರೀ ವಾಪಸ್ ಕೊಡುತ್ತೇನೆ” ಎಂದಿದ್ದಾರೆ.

“ನಾನು ನನ್ನ ಸಹೋದರಿ, ದೇಶದ ಮಗಳಿಗಾಗಿ ಪದ್ಮಶ್ರೀ ಹಿಂದಿರುಗಿಸುತ್ತೇನೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರೇ ನಿಮ್ಮ ಮಗಳು, ನನ್ನ ಸಹೋದರಿ ಸಾಕ್ಷಿ ಮಲಿಕ್ ಬಗ್ಗೆ ನನಗೆ ಹೆಮ್ಮಯಿದೆ. ನಾನು ದೇಶದ ಉನ್ನತ ಆಟಗಾರರನ್ನು ಕೂಡ ಈ ವಿಚಾರದಲ್ಲಿ ನಿಮ್ಮ ನಿರ್ಧಾರ ಕೋರುತ್ತೇನೆ” ಎಂದು ವೀರೇಂದ್ರ ಸಿಂಗ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ನೀರಜ್ ಚೋಪ್ರಾ ಅವರಿಗೆ ಪೋಸ್ಟ್‌ ಟ್ಯಾಗ್ ಮಾಡಿದ್ದಾರೆ.

ಸಾಕ್ಷಿ ಮಲಿಕ್ ಅವರನ್ನು ಬೆಂಬಲಿಸಿ ನಿನ್ನೆ(ಡಿ.22) ಸಂಜೆ ಬಜರಂಗ್ ಪೂನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ದೆಹಲಿಯ ಕರ್ತವ್ಯ ಪಥದಲ್ಲಿ ಇಟ್ಟು ತೆರಳಿದ್ದರು. ಇದನ್ನು ಪ್ರಧಾನಿ ಮೋದಿಯವರಿಗೆ ತಲುಪಿಸಿ ಎಂದಿದ್ದರು. ಬಳಿಕ ಪೊಲೀಸರು ಬಂದು ಪ್ರಶಸ್ತಿಯನ್ನು ತೆಗೆದುಕೊಂಡು ಹೋಗಿದ್ದಾರೆ.

“ಮಹಿಳಾ ಕುಸ್ತಿಪಟುಗಳಿಗೆ ಸರಿಯಾದ ಗೌರವ ಸಿಗದಿದ್ದಾಗ ನಾನು ಈ ಪ್ರಶಸ್ತಿ ಇಟ್ಟುಕೊಳ್ಳುವುದರಲ್ಲಿ ಅರ್ಥವಿಲ್ಲ. ನಾವು 40 ದಿನಗಳ ಕಾಲ ರಸ್ತೆಯಲ್ಲಿದ್ದೆವು. ಸರ್ಕಾರ ನಮಗೆ ನೀಡಿದ್ದ ಭರವಸೆಗಳು ಈಡೇರಿಲ್ಲ. ನಮ್ಮ ಹೋರಾಟವು ಸರ್ಕಾರದ ವಿರುದ್ಧವಲ್ಲ ಒಬ್ಬ ವ್ಯಕ್ತಿಯ ವಿರುದ್ದ. ನಾನು ನ್ಯಾಯಾಂಗವನ್ನು ನಂಬುತ್ತೇನೆ. ಆದರೆ, ಈಗ ಏನಾಗ್ತಿದೆ? ನನಗೆ ಈ ವ್ಯವಸ್ಥೆಯ ಮೇಲೆ ನಂಬಿಕೆಯಿಲ್ಲ” ಎಂದು ಪ್ರಶಸ್ತಿ ಹಿಂದಿರುಗಿಸಲು ಬಂದಿದ್ದ ವೇಳೆ ಬಜರಂಗ್ ಪೂನಿಯಾ ಬೇಸರದಿಂದ ಹೇಳಿದ್ದಾರೆ.

“ಹೆಣ್ಣುಮಕ್ಕಳ ಪೋಷಕರು ಒಲಿಂಪಿಕ್ ಪದಕ ವಿಜೇತರಿಗೆ ನ್ಯಾಯ ನೀಡದಿದ್ದರೆ, ಮತ್ತೆ ನಾವು ಹೇಗೆ ನ್ಯಾಯ ಪಡೆಯುವುದು? ಪ್ರಧಾನಮಂತ್ರಿ, ಉಪ ರಾಷ್ಟ್ರಪತಿ ಮತ್ತು ರಾಷ್ಟ್ರಪತಿಗಳು ಎಲ್ಲರೂ ಈ ರೀತಿ ಯಾಕೆ ನಡೆಯುತ್ತಿದೆ ಎಂದು ಉತ್ತರಿಸಬೇಕು. ಇಂತಹ ಘಟನೆಗಳು ನಮ್ಮ ನ್ಯಾಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹಳಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕುತ್ತವೆ” ಎಂದು ಹೇಳಿದ್ದಾರೆ ವೀರೇಂದ್ರ ಸಿಂಗ್.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಫೆಡರೇಶನ್‌ನ ನೂತನ ಅಧ್ಯಕ್ಷರಾಗಿ ಡಿ.21ರಂದು ಆಯ್ಕೆಯಾಗಿದ್ದಾರೆ. ಈ ಬೆನ್ನಲ್ಲೇ ಕುಸ್ತಿ ತ್ಯಜಿಸುವುದಾಗಿ ಘೋಷಿಸಿದ ಒಲಿಂಪಿಕ್ ಪದಕ ವಿಜೇತೆ ಹಾಗೂ ಕುಸ್ತಿಪಟು ಸಾಕ್ಷಿ ಮಲಿಕ್, ಪ್ರತ್ರಕರ್ತರ ಮುಂದೆಯೇ ತಮ್ಮ ಬೂಟು ಕಳಚಿಟ್ಟು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದ ಬೆನ್ನಲ್ಲೇ ಅವರಿಗೆ ಬೆಂಬಲ ವ್ಯಕ್ತಪಡಿಸಿ ಬಜರಂಗ್ ಪೂನಿಯಾ ಪದ್ಮಶ್ರೀ ಹಿಂದಿರುಗಿಸಿದ್ದಾರೆ.

ಇದನ್ನೂ ಓದಿ : ‘ಪ್ರಶಸ್ತಿಗಳಿಗಿಂತ ದುಃಖವು ಹೆಚ್ಚು ಭಾರವಾಗಿದೆ…’; ಪದ್ಮಶ್ರೀ ಮರಳಿಸಿದ ಬಜರಂಗ್ ಪುನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...