Homeಮುಖಪುಟಶಾಲಾ ಮಕ್ಕಳಿಗೆ 'ಭಗವದ್ಗೀತೆ' ಬೋಧನೆ: ಪೂರಕ ಪಠ್ಯ ಬಿಡುಗಡೆ

ಶಾಲಾ ಮಕ್ಕಳಿಗೆ ‘ಭಗವದ್ಗೀತೆ’ ಬೋಧನೆ: ಪೂರಕ ಪಠ್ಯ ಬಿಡುಗಡೆ

- Advertisement -
- Advertisement -

ಗುಜರಾತ್ ಸರಕಾರವು ಶಾಲಾ ಮಕ್ಕಳಿಗೆ ‘ಭಗವದ್ಗೀತೆ’ ಕುರಿತು ಕಲಿಸಲು ಪೂರಕ ಪಠ್ಯಪುಸ್ತಕವನ್ನು ಬಿಡುಗಡೆ ಮಾಡಿದ್ದು, ಮುಂದಿನ ವರ್ಷದಿಂದಲೇ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ‘ಭಗವದ್ಗೀತೆ’ ಬೋಧಿಸುವುದಾಗಿ ಹೇಳಿದೆ.

ಗುಜರಾತ್‌ನಲ್ಲಿ ಮುಂಬರುವ ಶೈಕ್ಷಣಿಕ ವರ್ಷದಂದಲೇ 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಪಾಠಗಳನ್ನು ಕಲಿಸಲಾಗುತ್ತಿದೆ. ಗೀತಾ ಜಯಂತಿಯಂದು ಈ ಘೋಷಣೆ ಮಾಡಲಾಗಿದೆ. ಗುಜರಾತ್‌ನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆಯಲ್ಲಿರುವ ಆಧ್ಯಾತ್ಮಿಕ ತತ್ವಗಳನ್ನು ಪೂರಕ ಪಠ್ಯಪುಸ್ತಕದ ಮೂಲಕ ಬೋಧನಾ ಕಾರ್ಯ ನಡೆಯಲಿದೆ.

ಗುಜರಾತ್‌ನ ಶಿಕ್ಷಣ ರಾಜ್ಯ ಸಚಿವ ಪ್ರಫುಲ್ ಪನ್ಶೇರಿಯಾ ಈ ಕುರಿತು ಮಾಹಿತಿ ನೀಡಿದ್ದು, 6ರಿಂದ 8ನೇ ತರಗತಿಯ ಪಠ್ಯಕ್ರಮದಲ್ಲಿ ಭಗವದ್ಗೀತೆಯಿಂದ ಆಯ್ದ ಆಧ್ಯಾತ್ಮಿಕ ತತ್ವಗಳು ಮತ್ತು ಮೌಲ್ಯಗಳನ್ನು ಪೂರಕ ಪಠ್ಯಪುಸ್ತಕವಾಗಿ ಸೇರಿಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ನಿರ್ಧಾರವು 3 ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿಯ ತತ್ವಗಳೊಂದಿಗೆ ಹೊಂದಿಕೆಯಾಗುತ್ತದೆ ಎಂದು ಹೇಳಿದ್ದಾರೆ.

ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಕೃತಜ್ಞತೆಗಳು. ಈ ಮೂಲಕ ವಿದ್ಯಾರ್ಥಿಗಳಿಗೆ  ಭಾರತದ ಶ್ರೀಮಂತ, ವೈವಿಧ್ಯಮಯ, ಪ್ರಾಚೀನ ಸಂಸ್ಕೃತಿ ಮತ್ತು ಸಂಪ್ರದಾಯಗಳ ಜ್ಞಾನ ಸಿಗಲಿದೆ. ಪೂಜ್ಯ ಗ್ರಂಥವನ್ನು ಆಧರಿಸಿದ ಪೂರಕ ಪಠ್ಯಪುಸ್ತಕವು ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳನ್ನು ತುಂಬುತ್ತದೆ. 6 ರಿಂದ 8ನೇ ತರಗತಿಗಳಿಗೆ ಮೊದಲ ಭಾಗವನ್ನು ಶೀಘ್ರದಲ್ಲೇ ದೇಶಾದ್ಯಂತ ಶಾಲೆಗಳಿಗೆ ವಿತರಿಸಲಾಗುವುದು ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020ರಡಿಯಲ್ಲಿ ತೆಗೆದುಕೊಂಡ ಈ ನಿರ್ಧಾರವು ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪನ್ಶೇರಿಯಾ ಹೇಳಿದರು.

ಮಾ.2022ರಲ್ಲಿ ಗುಜರಾತ್ ಸರ್ಕಾರವು ಭಗವದ್ಗೀತೆಯನ್ನು 6ರಿಂದ 12ನೇ ತರಗತಿಗಳಿಗೆ ರಾಜ್ಯದಾದ್ಯಂತ ಶಾಲಾ ಪಠ್ಯಕ್ರಮದಲ್ಲಿ ಕಲಿಸಲಿದೆ ಎಂದು ಗುಜರಾತ್‌ ಸರಕಾರವು ವಿಧಾನಸಭೆಯಲ್ಲಿ ಹೇಳಿತ್ತು.

ಈ ಬಗ್ಗೆ ಮಾತನಾಡಿದ ಗುಜರಾತ್ ಸರ್ಕಾರದ ಬುಡಕಟ್ಟು ಅಭಿವೃದ್ಧಿ, ಪ್ರಾಥಮಿಕ, ಮಾಧ್ಯಮಿಕ ಮತ್ತು ವಯಸ್ಕ ಶಿಕ್ಷಣದ ಸಚಿವ ಕುಬೇರ್ ದಿಂಡೋರ್, ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರವಾಗಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ನೇತೃತ್ವದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಗುಜರಾತ್ ಶಿಕ್ಷಣ ಇಲಾಖೆಯು ಸಂಸ್ಕೃತ ಶ್ಲೋಕಗಳು, ಭಗವದ್ಗೀತೆಯ ಗುಜರಾತ್‌ನಲ್ಲಿ ಭಾಷಾಂತರವನ್ನು ಹೊಂದಿರುವ ಪೂರಕ ಪಠ್ಯಪುಸ್ತಕವನ್ನು ಬಿಡುಗಡೆ ಮಾಡಿದೆ. ಜೀವನ ಮೌಲ್ಯಗಳ ಪಾಠಗಳನ್ನು ಕಲಿಸುವ ಈ ಪುಸ್ತಕವನ್ನು ಅಧ್ಯಯನದ ಅನುಕ್ರಮದಲ್ಲಿ ಸೇರಿಸುವ ಮೂಲಕ ಮಕ್ಕಳಲ್ಲಿ ಜೀವನದ ಮೌಲ್ಯಗಳು ಮತ್ತು ಕರ್ಮದ ತತ್ವಗಳನ್ನು ಬಲಪಡಿಸುವುದು ಗುರಿಯಾಗಿದೆ ಎಂದು ಅದು ಹೇಳಿದೆ. ಇಲಾಖೆಯು 12ನೇ ತರಗತಿಯವರೆಗೆ ಭಗವದ್ಗೀತೆ ಪಾಠಗಳನ್ನು ಸೇರಿಸಲು ಸಿದ್ದತೆ ನಡೆಸುತ್ತಿದೆ.

ಇದನ್ನು ಓದಿ: ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...