Homeಮುಖಪುಟಅಮಾನತುಗೊಂಡ ಸಂಸದರು ಕೇಳಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: PUCL

ಅಮಾನತುಗೊಂಡ ಸಂಸದರು ಕೇಳಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: PUCL

- Advertisement -
- Advertisement -

8 ದಿನಗಳ ಅವಧಿಯಲ್ಲಿ ಸಂಸತ್ತಿನಲ್ಲಿ 146 ವಿರೋಧ ಪಕ್ಷದ ಸದಸ್ಯರನ್ನು ವಜಾಗೊಳಿಸಿರುವುದನ್ನು ಪಿಯುಸಿಎಲ್‌( PEOPLE’S UNION FOR CIVIL LIBERTIES) ಖಂಡಿಸಿದ್ದು, ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದೊಂದು ಕಳಂಕ ಎಂದು ಹೇಳಿದೆ ಮತ್ತು ಅಮಾನತುಗೊಂಡ ಸಂಸದರು ಎತ್ತಿರುವ ಎಲ್ಲಾ 290 ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ತಕ್ಷಣವೇ ಉತ್ತರವನ್ನು ಸಚಿವರುಗಳು ಅಪ್‌ಲೋಡ್ ಮಾಡಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ಈ ಕುರಿತು ಪಿಯುಸಿಎಲ್‌ ಅಧ್ಯಕ್ಷರಾದ ಕವಿತಾ ಶ್ರೀವತ್ಸವ್‌ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿ,ಸುರೇಶ್‌ ಅವರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

146 ಸಂಸದರನ್ನು ಅಮಾನತುಗೊಳಿಸಿದ ಬಳಿಕ ಆಡಳಿತಾರೂಢ ಬಿಜೆಪಿ ಸರ್ಕಾರವು ಹಿಂದಿನ ಅಧಿವೇಶನಗಳಲ್ಲಿ ಯಾವುದೇ ಅರ್ಥಪೂರ್ಣ ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮಗಳು ಆಕಸ್ಮಿಕವಲ್ಲ. ಇದು ಸಂಸತ್ತಿನ ಪ್ರಕ್ರಿಯೆಯನ್ನು ಅಪಮೌಲ್ಯಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಸ್ಪಷ್ಟವಾಗಿ ಸೂಚಿಸಿದೆ ಎಂದು ಪಿಯುಸಿಎಲ್‌ ಹೇಳಿದೆ.

ವಿರೋಧ ಪಕ್ಷದ ಸದಸ್ಯರ ಸಾಮೂಹಿಕ ಅಮಾನತಿನಿಂದ ಸಂಸತ್ತಿನಲ್ಲಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಿದಂತಾಗುತ್ತದೆ. ಈ ಹಿಂದೆ ಲೋಕಸಭೆಯಿಂದ ಅಮಾನತುಗೊಂಡ ಹೆಚ್ಚು ಸಂಸದರ ಸಂಖ್ಯೆ 63. ಈ ಬಾರಿ 100 ಸಂಸದರನ್ನು ಅಮಾನತು ಮಾಡಲಾಗಿದೆ. ವಿರೋಧ ಪಕ್ಷಗಳಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಸಮಾಜವಾದಿ ಪಕ್ಷ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಯೂನಿಯನ್ ಮುಸ್ಲಿಂ ಲೀಗ್, ಜನತಾ ದಳ ಯುನೈಟೆಡ್, ಡಿಎಂಕೆ, ಆಮ್ ಆದ್ಮಿ ಪಾರ್ಟಿ,  ಬಹುಜನ ಸಮಾಜ ಪಕ್ಷ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸೇರಿ ಹಲವು ಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ. ರಾಜ್ಯಸಭೆಯಲ್ಲಿ 46 ಸಂಸದರನ್ನು ಅಮಾನತುಗೊಳಿಸಲಾಗಿದೆ, ಅಸ್ಸಾಂನ ಪಕ್ಷೇತರ ಸಂಸದ, ಜನತಾ ದಳ ಯುನೈಟೆಡ್, ಜಾರ್ಖಂಡ್ ಮುಕ್ತಿ ಮೋರ್ಚಾದ ಸಂಸದರನ್ನು ಕೂಡ ಅಮಾನತು ಮಾಡಲಾಗಿದೆ. ಈ ಎಲ್ಲಾ ಅಮಾನತುಗಳು ಅಶಿಸ್ತಿನ ನಡವಳಿಕೆ ನೆಪದಲ್ಲಿ ನಡೆದಿದೆ. ಸಂಸದರ ನಿಜವಾದ ಬೇಡಿಕೆ ಎಂದರೆ ಸಂಸತ್ತಿನ ಭದ್ರತಾ ಉಲ್ಲಂಘನೆಯ ಬಗ್ಗೆ ಚರ್ಚಿಸುವುದಾಗಿತ್ತು. ಗೃಹ ಸಚಿವರೊಬ್ಬರು ವಿಶೇಷವಾಗಿ ಸಂಸತ್ತಿನ ಭದ್ರತೆಯ ಉಲ್ಲಂಘನೆಯಂತಹ ಗಂಭೀರ ವಿಷಯದ ಬಗ್ಗೆ ಹೇಳಿಕೆ ನೀಡಲು ನಿರಾಕರಿಸುವುದು  ಆಘಾತಕಾರಿಯಾಗಿದೆ ಎಂದು ಪಿಯುಸಿಎಲ್‌ ಹೇಳಿದೆ.

ಲೋಕಸಭೆಯಲ್ಲಿ ಸಂಸದರನ್ನು ಅಮಾನತುಗೊಳಿಸಿದ ಪರಿಣಾಮ 19 ಕೋಟಿಗೂ ಅಧಿಕ ಜನರು ಸಂಸತ್ತಿನಲ್ಲಿ ಧ್ವನಿ ಕಳೆದುಕೊಂಡಂತಾಗಿದೆ. ಈ ಅಮಾನತುಗಳಿಂದ ಪ್ರಜಾಸತ್ತಾತ್ಮಕ ಭರವಸೆ ಹುಸಿಯಾಗಿದೆ. ಸರ್ಕಾರವು ತನ್ನ ಅಜೆಂಡಾಗಳನ್ನು ಸಾಧಿಸಲು ಸಂಸತ್ತಿನ ಅಧಿಕಾರಗಳನ್ನು ಬಳಸುವುದನ್ನು ಮುಂದುವರೆಸಿದಾಗ, ಅದು ಸಂಸದೀಯ ಪ್ರಜಾಪ್ರಭುತ್ವದ ಅರ್ಥವನ್ನು ವಿರೂಪಗೊಳಿಸುತ್ತದೆ. ಇದು ಚರ್ಚೆ ಮತ್ತು ಚರ್ಚೆಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾಂವಿಧಾನಿಕ ನಿಯಮವನ್ನು ಅಣಕಿಸುತ್ತದೆ ಎಂದು ಪಿಯುಸಿಎಲ್‌ ಹೇಳಿದೆ.

ಸಂಸತ್ತಿನಲ್ಲಿ ಬಹುತೇಕ ಸಂಸದರನ್ನು ಅಮಾನತು ಮಾಡಿದ ಬಳಿಕ ಆಡಳಿತಾರೂಢ ಸರ್ಕಾರವು ಭಾರತದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯ ಸ್ವರೂಪವನ್ನು ಬದಲಾಯಿಸಲು ಮೂರು ನಿರ್ಣಾಯಕ ಕಾನೂನುಗಳನ್ನು ಅಂಗೀಕರಿಸಿದೆ. ಭಾರತೀಯ ಸಾಕ್ಷಿ (ಎರಡನೇ) ಮಸೂದೆ-2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ-2023 ಮತ್ತು ಭಾರತೀಯ ನ್ಯಾಯ (ಎರಡನೇ) ಸಂಹಿತಾ-2023ನ್ನು ಆಡಳಿತ ಪಕ್ಷದ ಸದಸ್ಯರ ಧ್ವನಿ ಮತದೊಂದಿಗೆ ಅಂಗೀಕರಿಸಿದವು. ಇದಲ್ಲದೆ ವಿವಾದಾತ್ಮಕ ದೂರಸಂಪರ್ಕ ಮಸೂದೆ-2023 ನ್ನು ಲೋಕಸಭೆ ಮತ್ತು ರಾಜ್ಯಸಭೆ ಎರಡರಿಂದಲೂ ಅಂಗೀಕರಿಸಲಾಯಿತು. ಇದ ಗಂಭೀರ ಗೌಪ್ಯತೆಯ ಕಾಳಜಿಯನ್ನು ಹೊಂದಿದೆ. ಸಂಸದರ ಅಮಾನತು ಆರಂಭವಾದ ನಂತರ ಈ ಅಧಿವೇಶನದಲ್ಲಿ ಆತಂಕಕಾರಿಯಾದ ಒಟ್ಟು 14 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಇದಲ್ಲದೆ ಪೋಸ್ಟ್ ಆಫೀಸ್ ಬಿಲ್-2023, ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ- 2023, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವೆಯ ಷರತ್ತುಗಳು) ಮಸೂದೆ-2023ನ್ನು ಅಂಗೀಕರಿಸಲಾಗಿದೆ. ಇವೆಲ್ಲಾ ಮಸೂದೆಗಳನ್ನು ಚರ್ಚೆ ಮಾಡದೆ, ಪ್ರತಿಪಕ್ಷಗಳ ಅಭಿಪ್ರಾಯವನ್ನು ಪಡೆಯದೆ ಏಕಪಕ್ಷೀಯವಾಗಿ ಅಂಗೀಕರಿಸಲಾಗಿದೆ ಎಂದು ಪಿಯುಸಿಎಲ್‌ ಕಳವಳ ವ್ಯಕ್ತಪಡಿಸಿದೆ.

146 ಸಂಸದರನ್ನು ಅಮಾನತುಗೊಳಿಸುವುದರೊಂದಿಗೆ ಅವರು ಸಂಸತ್ತಿನಲ್ಲಿ ಉತ್ತರಿಸಲು ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳನ್ನು ಕೂಡ ಡಿಲಿಟ್‌ ಮಾಡಲಾಗಿದೆ. ಭಾರತದ ಸಾಮಾನ್ಯ ನಾಗರಿಕರ ಮಾಹಿತಿಯ ಹಕ್ಕನ್ನು ಪ್ರತಿನಿಧಿಸುವ ವಿರೋಧ ಪಕ್ಷದ ಸಂಸದರು ಈ ಅಧಿವೇಶನದಲ್ಲಿ ಎತ್ತಿದ 290 ಪ್ರಶ್ನೆಗಳನ್ನು ರದ್ದುಗೊಳಿಸಿರುವುದು ಆಘಾತಕಾರಿಯಾಗಿದೆ. 146 ಸಂಸದರ ಅಮಾನತು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಅಡಿಪಾಯವನ್ನು ದುರ್ಬಲಗೊಳಿಸಿದೆ. ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಮುಕ್ತವಾಗಿ ಭಾಗವಹಿಸಲು 146 ಸಂಸದರ ಅಮಾನತು ತಕ್ಷಣವೇ ಜಾರಿಗೆ ಬರುವಂತೆ ಹಿಂಪಡೆಯಬೇಕು. ಎಲ್ಲಾ 290 ಪ್ರಶ್ನೆಗಳಿಗೆ ಉತ್ತರಗಳನ್ನು ತಕ್ಷಣವೇ ಸಂಸತ್ತಿನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. 2024ರ ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಅವುಗಳನ್ನು ಹೆಚ್ಚಿನ ಚರ್ಚೆಗೆ ತೆಗೆದುಕೊಳ್ಳಬೇಕು. ಮುಂದಿನ ಅಧಿವೇಶನವು ಲೋಕಸಭೆಯ ಭದ್ರತೆಯ ಉಲ್ಲಂಘನೆಯನ್ನು ಚರ್ಚಿಸುವುದರೊಂದಿಗೆ ಪ್ರಾರಂಭವಾಗಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ಇದನ್ನು ಓದಿ: ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...