Homeಮುಖಪುಟಗರ್ಭಾಶಯವಿಲ್ಲದ ಯಾವ ಸಲಿಂಗ ಕಾಮಿಗೆ ಋತುಚಕ್ರವಿದೆ ಹೇಳಿ? ಸ್ಮೃತಿ ಇರಾನಿ ಹೇಳಿಕೆಗೆ ಪ್ರತಿಪಕ್ಷಗಳ ಟೀಕೆ

ಗರ್ಭಾಶಯವಿಲ್ಲದ ಯಾವ ಸಲಿಂಗ ಕಾಮಿಗೆ ಋತುಚಕ್ರವಿದೆ ಹೇಳಿ? ಸ್ಮೃತಿ ಇರಾನಿ ಹೇಳಿಕೆಗೆ ಪ್ರತಿಪಕ್ಷಗಳ ಟೀಕೆ

- Advertisement -
- Advertisement -

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಸಂಸತ್ತಿನಲ್ಲಿ ಮಹಿಳೆಯರಿಗೆ  ಮುಟ್ಟಿನ ರಜೆಗೆ ಪಾವತಿ ಪರಿಕಲ್ಪನೆಯನ್ನು ವಿರೋಧಿಸಿದ ನಂತರ ಪ್ರತಿಪಕ್ಷ I.N.D.I.A ಬಣದಿಂದ ಟೀಕೆಗೆ ಗುರಿಯಾಗಿದ್ದಾರೆ.

ಆರ್‌ಜೆಡಿ ಸಂಸದ ಮನೋಜ್ ಝಾ ಅವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವೆ, ಸ್ಮೃತಿ ಇರಾನಿ, ಗರ್ಭಾಶಯವಿಲ್ಲದ ಯಾವ ಸಲಿಂಗ ಕಾಮಿಗೆ ಋತುಚಕ್ರವಿದೆ ಹೇಳಿ ಎಂದು ಪ್ರಶ್ನಿಸಿದ್ದರು. ಕೇಂದ್ರ ಸಚಿವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಸ್ಮೃತಿ ಹೇಳಿಕೆಯನ್ನು ವಿರೋಧಿಸಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ಮತ್ತು ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಇರಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾವು ಎಲ್‌ಜಿಬಿಟಿಕ್ಯೂಐಎ ಪ್ಲಸ್ ಸಮುದಾಯದ ಬಗ್ಗೆ ಅರಿವಿಲ್ಲದ ಸಚಿವರನ್ನು ಹೊಂದಿದ್ದೇವೆ ಎಂಬುದು ನಾಚಿಕೆಗೇಡಿನ ಸಂಗತಿಯಾಗಿದೆ. ಅವರಲ್ಲಿ ಅನೇಕರು ಋತುಮತಿಯಾಗುತ್ತಾರೆ. ಅನೇಕರ ಜೀವಂತ ಅನುಭವವಾಗಿರುವ ಈ ಸಮಸ್ಯೆಯ ಬಗ್ಗೆ ಅವರ ಅಹಂಕಾರದ ಪ್ರತಿಕ್ರಿಯೆಯು ಆಘಾತಕಾರಿ ಮತ್ತು ಸಂವೇದನಾಶೀಲವಲ್ಲ ಎಂದು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಿಯಾಂಕಾ ಚತುರ್ವೇದಿ ಅವರು ಹೇಳಿದ್ದಾರೆ. ಈ ವೇಳೆ ಅವರು ಸ್ಮೃತಿ ಇರಾನಿ ಅವರ ಸಂದರ್ಶನದ ವಿಡಿಯೋವನ್ನು ಕೂಡ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರಿಯಾ ಶ್ರೀನೇಟ್, ಈ ವಿಚಾರದಲ್ಲಿ ಸ್ಮೃತಿ ಇರಾನಿ ಅವರ ನಿರಾಸಕ್ತಿ, ದುರಹಂಕಾರ ಮತ್ತು ಅಜ್ಞಾನವು ಭಯಾನಕವಾಗಿದೆ. ಎಲ್‌ಜಿಬಿಟಿಕ್ಯೂಐಎ+ ಕೇವಲ ಸಲಿಂಗಕಾಮಿ ಪುರುಷರಲ್ಲ, ಸಮುದಾಯವು ಪುರುಷರು ಮತ್ತು ಹಲವಾರು ಮುಟ್ಟಿನ ಮಹಿಳೆಯರನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಇದರಲ್ಲಿ ಲೆಸ್ಬಿಯನ್, ಗೇ, ಬೈ ಸೆಕ್ಸುವಲ್, ಟ್ರಾನ್ಸ್‌ಜಂಡರ್‌, ಕ್ವೀರ್‌, ಇಂಟರ್‌ಸೆಕ್ಸ್‌ ಮತ್ತು ಇತರರು ಸೇರಿದ್ದಾರೆ ಎಂದು ಪೋಸ್ಟ್‌ನಲ್ಲಿ ಪಟ್ಟಿಯನ್ನು ಉಲ್ಲೇಖಿಸಿದ್ದಾರೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಮುಟ್ಟು ಮತ್ತು ಋತುಚಕ್ರವು ಅಂಗವೈಕಲ್ಯವಲ್ಲ; ಇದು ಮಹಿಳೆಯರ ಜೀವನ ಪಯಣದಲ್ಲಿ ಸಹಜ,  ಪ್ರತಿ ತಿಂಗಳು ವೇತನ ಸಹಿತ ರಜೆ ನೀಡುವುದರ ಮೂಲಕ ಉದ್ಯೋಗದಾತರಿಗೆ ಆಕೆಯ ಮುಟ್ಟಿನ ಕುರಿತು ಯಾಕೆ ತಿಳಿದಿರಬೇಕು? ಸರ್ಕಾರವು ಮಹಿಳಾ ಉದ್ಯೋಗಿಗಳಿಗೆ ಅವರ ಮುಟ್ಟಿನ ಸಮಯದಲ್ಲಿ ಕಡ್ಡಾಯ ವೇತನ ಸಹಿತ ರಜೆ ನೀತಿಯನ್ನು ಅಳವಡಿಸಿಕೊಂಡರೆ ಇದೆಲ್ಲಾ ಉಂಟಾಗುತ್ತದೆ ಎಂದು ಹೇಳಿದ್ದರು.

ಮುಟ್ಟು ಅಂಗವೈಕಲ್ಯವಲ್ಲ ಮತ್ತು ಕಡ್ಡಾಯವಾಗಿ ವೇತನ ಸಹಿತ ರಜೆಗಾಗಿ ಸರ್ಕಾರವು ಯಾವುದೇ ನೀತಿಯನ್ನು ತರುತ್ತಿಲ್ಲ ಎಂದು ಸಂಸತ್ತಿನಲ್ಲಿ ಹೇಳಿಕೆ ನೀಡಿದ ನಂತರ ವಿವಾದ ಸ್ವರೂಪ ಪಡೆದುಕೊಂಡಿತ್ತು.  ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶದಲ್ಲಿ ಅವರು ಮನೋಜ್ ಝಾ ಅವರ ಪ್ರಶ್ನೆಗೆ ಉತ್ತರಿಸಿ ಸ್ಮೃತಿ ಇರಾನಿ, ಗರ್ಭಾಶಯವಿಲ್ಲದ ಯಾವ ಸಲಿಂಗ ಕಾಮಿಗೆ ಋತುಚಕ್ರವಿದೆ ಹೇಳಿ ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ರಾಜಸ್ಥಾನ: ಪ್ರಯಾಣಿಕರ ಮೇಲೆ ಗುಂಪು ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...