Homeಮುಖಪುಟಗಾಝಾ ಮೇಲಿನ ಯುದ್ಧ ನಿಲ್ಲಿಸದಿದ್ದರೆ ಮೆಡಿಟರೇನಿಯನ್ ಸಮುದ್ರ ಮಾರ್ಗಗಳನ್ನು ಬಂದ್‌ ಮಾಡುತ್ತೇವೆ: ಇರಾನ್ ಎಚ್ಚರಿಕೆ

ಗಾಝಾ ಮೇಲಿನ ಯುದ್ಧ ನಿಲ್ಲಿಸದಿದ್ದರೆ ಮೆಡಿಟರೇನಿಯನ್ ಸಮುದ್ರ ಮಾರ್ಗಗಳನ್ನು ಬಂದ್‌ ಮಾಡುತ್ತೇವೆ: ಇರಾನ್ ಎಚ್ಚರಿಕೆ

- Advertisement -
- Advertisement -

ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚಲಾಗುವುದು ಎಂದು ಇರಾನ್‌ನ ಕಮಾಂಡರ್ ಹೇಳಿದ್ದು, ಅದು ಹೇಗೆ ಸಂಭವಿಸುತ್ತದೆ ಎಂಬುದನ್ನು ವಿವರಿಸಿಲ್ಲ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಇರಾನ್ ಇಸ್ರೇಲ್ ಹತ್ಯಾಕಾಂಡವನ್ನು ವಿರೋಧಿಸುತ್ತದೆ ಮತ್ತು ಗಾಝಾಕ್ಕೆ ಬೆಂಬಲವನ್ನು ಸೂಚಿಸುತ್ತದೆ.  ಗಾಝಾದಲ್ಲಿನ ಇಸ್ರೇಲ್‌ ನಡೆಸುವ ಅಪರಾಧಗಳಿಗೆ ಅಮೆರಿಕ ಬೆಂಬಲಿಸುತ್ತದೆ ಮತ್ತು ಸಾವಿರಾರು ಮಂದಿಯನ್ನು ಕಳೆದ ಒಂದು ವಾರದಿಂದ ಹತ್ಯೆ ಮಾಡಿದೆ. ಹೆಚ್ಚಿನ ಜನರನ್ನು ಮನೆಗಳಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್‌ ಹೇಳಿಕೊಂಡಿದೆ. ಶೀಘ್ರದಲ್ಲೇ ಮೆಡಿಟರೇನಿಯನ್ ಸಮುದ್ರದ ಜಿಬ್ರಾಲ್ಟರ್ ಮತ್ತು ಇತರ ಜಲಮಾರ್ಗಗಳನ್ನು ಮುಚ್ಚುತ್ತೇವೆ ಎಂದು ಗಾರ್ಡ್‌ಗಳ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ನಕ್ದಿ ಹೇಳಿದ್ದಾರೆ.

ಹೌತಿ ಗುಂಪು ಕಳೆದ ತಿಂಗಳು ಗಾಝಾದ ಮೇಲೆ ಇಸ್ರೇಲ್‌ನ ದಾಳಿಗೆ ಪ್ರತೀಕಾರವಾಗಿ ಕೆಂಪು ಸಮುದ್ರದ ಮೂಲಕ ತೆರಳುತ್ತಿದ್ದ ವ್ಯಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡಿದೆ. ಈ ದಾಳಿ ಕೆಲವು ಹಡಗುಗಳು ಮಾರ್ಗಗಳನ್ನು ಬದಲಾಯಿಸಲು ಕಾರಣವಾಯಿತು. ಕೆಂಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ವಿರುದ್ಧ ದಾಳಿ ನಡೆಸುವಲ್ಲಿ ಇರಾನ್ ಹೆಚ್ಚು ತೊಡಗಿಸಿಕೊಂಡಿದೆ ಎಂದು ಅಮೆರಿಕ ಆರೋಪಿಸಿತ್ತು.

ಮೆಡಿಟರೇನಿಯನ್‌ನಿಂದ ಇರಾನ್‌ಗೆ ನೇರ ಪ್ರವೇಶ ಮಾರ್ಗವಿಲ್ಲ ಆದರೆ ಗಾರ್ಡ್‌ಗಳು ಅದನ್ನು ಹೇಗೆ ಮುಚ್ಚುವುದಾಗಿ ಬೆದರಿಸಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಆದರೂ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಯುದ್ಧ ಅಪರಾಧ ಮುಂದುವರಿಸಿದರೆ ಜಲಮಾರ್ಗಗಳ ಮುಚ್ಚುವುದಾಗಿ ಎಚ್ಚರಿಸಿದ್ದಾರೆ.

ಅಕ್ಟೋಬರ್‌ 7ರಂದು ಗಾಝಾದ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ ಈವರೆಗೆ ಇಸ್ರೇಲ್‌ ಸೇನೆ ಪ್ಯಾಲೆಸ್ತೀನ್‌ನ 20,000ಕ್ಕೂ ಅಧಿಕ ನಾಗರಿಕರನ್ನು ಹತ್ಯೆ ಮಾಡಿದೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳ ಹತ್ಯೆ ಹೆಚ್ಚಿನ ಸಂಖ್ಯೆಯಲ್ಲಿ ನಡೆದಿದೆ. ಸಾವನ್ನಪ್ಪಿದವರಲ್ಲಿ ಕನಿಷ್ಠ 8,000 ಮಕ್ಕಳು ಮತ್ತು 6,200 ಮಹಿಳೆಯರು ಸೇರಿದ್ದಾರೆ ಎಂದು ಗಾಝಾದ ಸರ್ಕಾರಿ ಮಾದ್ಯಮ ಕಚೇರಿ ತಿಳಿಸಿದೆ.

ವಿಶ್ವಸಂಸ್ಥೆ ಈ ಮೊದಲು ಹಲವು ಬಾರಿ ಗಾಝಾದಲ್ಲಿ ಕದನ ವಿರಾಮಕ್ಕೆ ನಿರ್ಣಯವನ್ನು ಮಂಡಿಸಿತ್ತು. ಇತ್ತೀಚೆಗೆ ವಿಟೊ ಅಧಿಕಾರ ಬಳಸಿ ಅಮೆರಿಕ ಕದನ ವಿರಾಮವನ್ನು ವಿರೋಧಿಸಿತ್ತು. ಆದರೆ ಯುಎನ್‌ ಮತ್ತೆ ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ಕುರಿತು ನಿರ್ಣಯವನ್ನು ಮಂಡಿಸಿದೆ. ಇದಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ.

ಕಳೆದ 2 ತಿಂಗಳಿನಿಂದ ಇಸ್ರೇಲ್‌, ಪ್ಯಾಲೆಸ್ತೀನ್‌ ಮೇಲೆ ನಡೆಸಿದ ನಿರಂತರ ಬಾಂಬ್‌ ದಾಳಿ ಗಾಝಾದಲ್ಲಿ ಯುದ್ಧ ಭೀಕರತೆಯ ಜೊತೆಗೆ ಮಾನವೀಯ ಬಿಕ್ಕಟ್ಟನ್ನು ಕೂಡ ಸೃಷ್ಟಿಸಿದೆ. ಗಾಝಾದ ರಫಾ ಕ್ರಾಸಿಂಗ್‌ನಲ್ಲಿ ಆಹಾರ, ನೀರಿಗಾಗಿ ಜನರು ಟ್ರಕ್‌ಗಳನ್ನು ತಡೆಯುತ್ತಿದ್ದರು. ಹಸಿವಿನಿಂದ ತತ್ತರಿಸಿದ ಜನರು ಪರಿಹಾರ ಸಾಮಾಗ್ರಿ ವಾಹನಗಳನ್ನು ತಡೆದು ಆಹಾರ ಕಸಿದು ತಿನ್ನುತ್ತಿರುವ ಮನಕಲಕುವ ದೃಶ್ಯಗಳು ಕಂಡು ಬಂದಿತ್ತು. ಗಾಝಾದ ನಿರಾಶ್ರಿತರ ಶಿಬಿರಗಳಲ್ಲಿ ಸಾಂಕ್ರಾಮಿಕ ರೋಗದಿಂದ ಜನರು ಬಳಲುತ್ತಿರವ ಬಗ್ಗೆಯೂ ವರದಿಯಾಗಿತ್ತು.

ಇದನ್ನು ಓದಿ: ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...