Homeಕರ್ನಾಟಕಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು.....

ಬಳ್ಳಾರಿ ಜಿಲ್ಲೆ ವಿಭಜನೆ: ಪರ ಮತ್ತು ವಿರೋಧದ ಹಿಂದಿದೆ ಸ್ವಾರ್ಥ, ಮಸಲತ್ತು, ಒಳ ಏಟು…..

- Advertisement -
- Advertisement -

ರಾಜ್ಯದ 31 ನೇ ಜಿಲ್ಲೆಯಾಗಿ ಹೊಸಪೇಟೆ ಕೇಂದ್ರಿತ ವಿಜಯನಗರ ಜಿಲ್ಲೆ ಉದ್ಭವವಾಗಲು ತಯಾರಿ ನಡೆದಿವೆ. ಇದು ಅಭಿವೃದ್ಧಿಯ ಯಾವ ಮಾನದಂಡವನ್ನೂ ನೋಡದೇ ಕೇವಲ ರಾಜಕೀಯ ಕಾರಣಕ್ಕಾಗಿ ಹೊಸ ಜಿಲ್ಲೆ ಮಾಡಲು ಹೊರಟಂತಿದೆ. ಬಳ್ಳಾರಿಯ ರೆಡ್ಡಿ-ರಾಮುಲುಗಳು ಇದಕ್ಕೆ ವಿರೋಧವಾಗಿದ್ದರೆ, ಹೊಸಪೇಟೆಯ ಆನಂದ್‍ಸಿಂಗ್ ಹೊಸ ಜಿಲ್ಲೆಯ ನಿರ್ಮಾತೃ ಎಂಬ ಪದವಿ ಪಡೆಯಲು ಹಾತೊರೆಯುತ್ತಿದ್ದಾರೆ.

ಜಿಲ್ಲೆ ವಿಭಜನೆಯಾದರೆ ಬಳ್ಳಾರಿ ಜಿಲ್ಲೆ ರೆವಿನ್ಯೂ ದೃಷ್ಟಿಯಿಂದ ಬಡವಾಗಿ ಹೋಗಲಿದೆ. ಬಳ್ಳಾರಿ ಜಿಲ್ಲೆ ಮೇಲೆ ಹಿಡಿತ ಹೊಂದಲು ಸದಾ ಯತ್ನಿಸುತ್ತ ಬಂದಿರುವ ರೆಡ್ಡಿ-ರಾಮುಲುಗಳ ರಾಜಕೀಯ ಅಸ್ತಿತ್ವಕ್ಕೆ ಹೊಸ ವಿಜಯನಗರ ಜಿಲ್ಲೆ ಸವಾಲು ಎಸೆಯಲಿದೆ. ಹೀಗಾಗಿ ರೆಡ್ಡಿ-ರಾಮುಲುಗಳು ಈಗ ಬಹಿರಂಗವಾಗಿ ಹೊಸ ಜಿಲ್ಲೆ ಬೇಡ ಎಂದು ವಾದ ಮಂಡಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಒತ್ತಡ ಹಾಕುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಹೊಸ ಜಿಲ್ಲೆಯಾದರೆ ಅದರ ಕ್ರೆಡಿಟ್ಟು ತನಗೆ ಸಿಕ್ಕಿ ಉಪ ಚುನಾವಣೆಯನ್ನು ಸುಲಭವಾಗಿ ಗೆಲ್ಲುವ ಮತ್ತು ಮುಂದೆ ಹೊಸ ಜಿಲ್ಲೆಯ ರಾಜಕಾರಣದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಉಮೇದಿನಲ್ಲಿ ಆನಂದ್‍ಸಿಂಗ್ ಇದ್ದಾರೆ.

ಸುಪ್ರಿಂಕೋರ್ಟಿನಿಂದ ಕ್ಲೀನ್‍ಚಿಟ್ ಸಿಕ್ಕರೆ ಹೊಸಪೇಟೆ (ವಿಜಯನಗರ ಕ್ಷೇತ್ರ)ಯಿಂದ ತಾನು ನಿಲ್ಲುವುದು ಇಲ್ಲವಾದರೆ ಮಗ ಸಿದ್ದಾರ್ಥನನ್ನು ನಿಲ್ಲಿಸುವ ಮತ್ತು ಹೊಸ ಜಿಲ್ಲೆ ಗರಿಮೆ ಇಟ್ಟುಕೊಂಡು ಗೆಲ್ಲುವ ತರಾತುರುಯಲ್ಲಿ ಆನಂದಸಿಂಗ್ ಇದ್ದಾರೆ.

ಮುಂದೆ ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ತನ್ನ ಸಂಬಂಧಿಕರನ್ನು ನಿಲ್ಲಿಸುವ ವಿಚಾರವೂ ಆನಂದ್‍ಸಿಂಗ್‍ ತಲೆಯಲ್ಲಿದೆ. ಅದಕ್ಕೆ ಅಲ್ಲಿನ ಶಾಸಕ ಭೀಮಾನಾಯ್ಕ್ ವಿರೋಧ ಎದುರಿಸುತ್ತಿರುವ ಆನಂದ್‍ಸಿಂಗ್ ಮೇಲೆ ಹಲ್ಲೆ ಆಗಲು ಇದೂ ಒಂದು ಕಾರಣವಾಗಿತ್ತು. ಕಂಪ್ಲಿಯಲ್ಲೂ ಶಾಸಕ ಗಣೇಶ್‍ಗೆ ಎದುರಾಗಿ ಆನಂದ್‍ಸಿಂಗ್ ಸಂಬಂಧಿ ಸಂದೀಪ್‍ಸಿಂಗ್‍ನನ್ನು ಬೆಳೆಸುತ್ತಿದ್ದಾರೆ. ಹೊಸ ಜಿಲ್ಲೆಯಾದರೆ ಇಡೀ ಜಿಲ್ಲೆಯ ಮೇಲೆ ಪಾರುಪತ್ಯ ಸಾಧಿಸುವುದು ಆನಂದ್‍ಸಿಂಗ್ ಗುರಿಯಾಗಿದೆ.

ಇತ್ತ ಜಿಲ್ಲೆ ವಿಭಜನೆಯಾದರೆ ತಮ್ಮ ರಾಜಕೀಯ ಅಸ್ತಿತ್ವಕ್ಕೇ ಧಕ್ಕೆ ಎಂದು ಗಾಬರಿ ಬಿದ್ದಿರುವ ಶಾಸಕ ಸೋಮಶೇಖರ್‍ರೆಡ್ಡಿ ಮತ್ತು ಸಚಿವ ಶ್ರೀರಾಮುಲು ಜಿಲ್ಲೆಯ ವಿಭಜನೆ ಬೇಡ, ಬದಲಿಗೆ ಬಳ್ಳಾರಿ ಜಿಲ್ಲೆಗೆ ವಿಜಯನಗರ ಜಿಲ್ಲೆ ಎಂದು ನಾಮಕರಣ ಮಾಡಲಿ ಎಂದು ಮೀಡಿಯಾಗಳ ಮುಂದೆ ಹೇಳುವ ಮೂಲಕ ಸಿಎಂ ಮೇಲೆ ಒತ್ತಡ ಹಾಕುವ ಯತ್ನ ನಡೆಸಿದ್ದಾರೆ. ಬಳ್ಳಾರಿ ರೆಡ್ಡಿಗಳನ್ನು ಹದ್ದುಬಸ್ತಿನಲ್ಲಿ ಇಡಲು ಹೊಸ ಜಿಲ್ಲೆ ಮಾಡುವ ತಂತ್ರವನ್ನು ಸಂತೋಷ್ ಗ್ಯಾಂಗ್ ಹೆಣೆದಿದೆ. ಯಡಿಯೂರಪ್ಪನವರಿಗೂ ಅದೇ ಬೇಕಾಗಿದ್ದು ಆನಂದ್‍ಸಿಂಗ್ ಪರ ನಿಂತಿದ್ದಾರೆ ಎನ್ನಲಾಗುತ್ತಿದೆ.

ಹೊಸ ಜಿಲ್ಲೆಯಾದರೆ, ಹಳೆ ಬಳ್ಳಾರಿ ಜಿಲ್ಲೆ ‘ಆದಾಯವಿಲ್ಲದ’ ಜಿಲ್ಲೆಯಾಗಲಿದೆ. ಬಳ್ಳಾರಿ, ಕುರಗೋಡು ಮತ್ತು ಕೂಡ್ಲಿಗಿ ರೆವಿನ್ಯೂ ಲೆಕ್ಕದಲ್ಲಿ ಹಿಂದಿವೆ. ಹೊಸ ಜಿಲ್ಲೆಗೆ ರೆವಿನ್ಯೂವಿನಲ್ಲಿ ಮುಂದಿರುವ ಹೊಸಪೇಟೆ, ಕಂಪ್ಲಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳು ಸೇರಲಿವೆ.

ಕೊಟ್ಟೂರಿನ ಸಂಗಬಸವಸ್ವಾಮಿ ಮತ್ತು ಉಜ್ಜಯಿನಿ ಪೀಠದ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳನ್ನು ಬಳಸಿಕೊಂಡಿರುವ ಆನಂದ್‍ಸಿಂಗ್ ಯಡಿಯೂರಪ್ಪನವರ ವಿಶ್ವಾಸ ಗೆಲ್ಲುವಲ್ಲಿ ಮತ್ತು ರೆಡ್ಡಿಗಳ ಪೊರತಿರೋಧವನ್ನು ಮೆತ್ತಗೆ ಮಾಡುವಲ್ಲಿ ಸಫಲರಾಗಿದ್ದಾರೆ.

ಹೊಸ ಜಿಲ್ಲೆಯ ಪರ ಮತ್ತು ವಿರೋಧಗಳ ಹಿಂದೆ ಎಲ್ಲರದ್ದೂ ಸ್ವಾರ್ಥವಿದೆ, ಒಬ್ಬರು ಇನ್ನೊಬ್ಬರನ್ನು ಹಣಿಯುವ ಮಸಲತ್ತೂ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...