Homeಮುಖಪುಟಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

ಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಗೆ ಮೇಜರ್‌ ಸರ್ಜರಿ ಮಾಡಿದ್ದಾರೆ. ಕಾಂಗ್ರೆಸ್‌ಗೆ ಪ್ರಧಾನ ಕಾರ್ಯದರ್ಶಿಗಳನ್ನು ಮತ್ತು ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳನ್ನು ನೇಮಿಸಲಾಗಿದ್ದು, ಉತ್ತರ ಪ್ರದೇಶದ ಉಸ್ತುವಾರಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಬಿಡುಗಡೆಗೊಳಿಸಿದ್ದಾರೆ. ಛತ್ತೀಸ್‌ಗಢದ ಉಸ್ತುವಾರಿಯಾಗಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್‌ ಪೈಲಟ್‌ ಅವರನ್ನು ನೇಮಕ ಮಾಡಲಾಗಿದೆ. 12 ಪ್ರಧಾನ ಕಾರ್ಯದರ್ಶಿಗಳ ಜೊತೆಗೆ 11 ರಾಜ್ಯ ಉಸ್ತುವಾರಿಗಳನ್ನೂ ಪಕ್ಷ ನೇಮಿಸಿದೆ.

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ನೇತೃತ್ವದ ಪ್ರಣಾಳಿಕೆ ಸಮಿತಿಯನ್ನು ಪಕ್ಷವು ನೇಮಿಸಿದ ಒಂದು ದಿನದ ನಂತರ ಈ ನೇಮಕಾತಿಗಳು ನಡೆದಿವೆ. ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ ಹಲವಾರು ಮುಖಂಡರು ಸಾರ್ವತ್ರಿಕ ಚುನಾವಣೆಗೆ ತಯಾರಿ ಆರಂಭಿಸುವಂತೆ ಕರೆ ನೀಡಿದ್ದರು.

ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಆದರೆ ಅವರನ್ನು ಉತ್ತರಪ್ರದೇಶ ಕಾಂಗ್ರೆಸ್‌ ಉಸ್ತುವಾರಿಯಿಂದ ಬಿಡುಗಡೆಗೊಳಿಸಲಾಗಿದೆ. ಅವರಿಗೆ ಚುನಾವಣೆಯಲ್ಲಿ ದೊಡ್ಡ ಜವಾಬ್ಧಾರಿ ನೀಡಬಹುದು ಎಂದು ಹೇಳಲಾಗುತ್ತಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್‌ ಪೈಲಟ್‌ ಅವರನ್ನು ನೇಮಕ ಮಾಡಲಾಗಿದೆ. ರಾಜಸ್ಥಾನದಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ ಹೊಸ ಮುಖವನ್ನು ಹುಡುಕಾಟ ನಡೆಸುತ್ತದೆ ಎಂಬುವುದನ್ನು ಈ ಬೆಳವಣಿಗೆ ಸ್ಪಷ್ಟಪಡಿಸುತ್ತದೆ.

ಪ್ರಿಯಾಂಕಾ ಗಾಂಧಿ ಬದಲಿಗೆ ಜಾರ್ಖಂಡ್ ಉಸ್ತುವಾರಿಯಾಗಿದ್ದ ಅವಿನಾಶ್ ಪಾಂಡೆ ಅವರನ್ನು ಉತ್ತರಪ್ರದೇಶ ಕಾಂಗ್ರೆಸ್‌ನ ಉಸ್ತುವಾರಿಯಾಗಿ ನೇಮಿಸಲಾಗಿದೆ. ಕಳೆದ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಸಬಲೀಕರಣವನ್ನು ಮುಖ್ಯ ವಿಚಾರವಾಗಿ ಪ್ರಚಾರವನ್ನು ನಡೆಸಿದರೂ ಯಶಸ್ಸು ಕಾಣದ ಪ್ರಿಯಾಂಕ ಗಾಂಧಿ ಬಳಿಕ ಉತ್ತರಪ್ರದೇಶದಲ್ಲಿ ಉಸ್ತುವಾರಿಯಾಗಿ ಮುಂದುವರಿಯಲು ಉತ್ಸುಕತೆ ತೋರಲಿಲ್ಲ ಎನ್ನಲಾಗಿದೆ.

ಈ ಹಿಂದೆ ಹಲವು ರಾಜ್ಯಗಳ ಉಸ್ತುವಾರಿ ವಹಿಸಿದ್ದ ಮುಕುಲ್ ವಾಸ್ನಿಕ್ ಅವರನ್ನು ಗುಜರಾತ್ ಕಾಂಗ್ರೆಸ್‌ನ ಉಸ್ತುವಾರಿಯಾಗಿ, ಕುಮಾರಿ ಸೆಲ್ಜಾ ಅವರನ್ನು ಛತ್ತೀಸ್‌ಗಢದಿಂದ ಉತ್ತರಾಖಂಡಕ್ಕೆ, ದೇವೇಂದ್ರ ಯಾದವ್ ಉತ್ತರಾಖಂಡದಿಂದ ಪಂಜಾಬ್‌ಗೆ, ಮಾಣಿಕಂ ಟ್ಯಾಗೋರ್ ಗೋವಾದಿಂದ ಆಂಧ್ರಪ್ರದೇಶಕ್ಕೆ ಮತ್ತು ಮೋಹನ್ ಪ್ರಕಾಶ್‌ ಅವರನ್ನು ಬಿಹಾರ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಪ್ರಧಾನ ಕಾರ್ಯದರ್ಶಿಗಳಾಗಿ ಹೊಸದಾಗಿ ಸೇರ್ಪಡೆಗೊಂಡವರು:

ಸಚಿನ್ ಪೈಲಟ್ ಹೊರತಾಗಿ ಪ್ರಧಾನ ಕಾರ್ಯದರ್ಶಿಗಳಾಗಿ ಹೊಸದಾಗಿ ಸೇರ್ಪಡೆಗೊಂಡವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಗುಲಾಮ್ ಅಹ್ಮದ್ ಮಿರ್ ಅವರು ಪಶ್ಚಿಮ ಬಂಗಾಳದ ಹೆಚ್ಚುವರಿ ಉಸ್ತುವಾರಿಯೊಂದಿಗೆ ಜಾರ್ಖಂಡ್‌ನ ಉಸ್ತುವಾರಿ ಕೂಡ ವಹಿಸಿದ್ದಾರೆ. ದೀಪಾ ದಾಸ್ಮುನ್ಸಿ ಅವರನ್ನು ಕೇರಳ, ಲಕ್ಷದ್ವೀಪ್ ಮತ್ತು ಹೆಚ್ಚುವರಿಯಾಗಿ ತೆಲಂಗಾಣದ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರನ್ನು ಕರ್ನಾಟಕದ ಉಸ್ತುವಾರಿಯಾಗಿ ಮುಂದುವರಿಸಲಾಗಿದ್ದು, ದೀಪಕ್ ಬಬಾರಿಯಾ ಹರಿಯಾಣದ ಹೆಚ್ಚುವರಿ ಉಸ್ತುವಾರಿಯೊಂದಿಗೆ ದೆಹಲಿಯ ಉಸ್ತುವಾರಿಯನ್ನು  ವಹಿಸಲಿದ್ದಾರೆ. ಜೈರಾಮ್ ರಮೇಶ್ ಎಐಸಿಸಿ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದು, ಕೆಸಿ ವೇಣುಗೋಪಾಲ್ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಜವಾಬ್ಧಾರಿಯಲ್ಲಿ ಮುಂದುವರಿಯಲಿದ್ದಾರೆ. ಅಸ್ಸಾಂ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಜಿತೇಂದ್ರ ಸಿಂಗ್ ಅವರಿಗೆ ಮಧ್ಯಪ್ರದೇಶ ಕಾಂಗ್ರೆಸ್‌ನ ಹೆಚ್ಚುವರಿ ಉಸ್ತುವಾರಿಯನ್ನು ನೀಡಲಾಗಿದೆ.

ಅಚ್ಚರಿ ಎಂದರೆ ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರನ್ನು ಮಹಾರಾಷ್ಟ್ರದ ಕಾಂಗ್ರೆಸ್‌ ಉಸ್ತುವಾರಿಯಾಗಿ ನೇಮಿಸಲಾಗಿದೆ. ಆದರೆ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿಲ್ಲ. ಒಡಿಶಾ ಉಸ್ತುವಾರಿ ವಹಿಸಿದ್ದ ಲೋಕಸಭಾ ಸಂಸದ ಚೆಲ್ಲಕುಮಾರ್ ಅವರನ್ನು ಮೇಘಾಲಯ, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಕ್ಕೆ ವರ್ಗಾಯಿಸಲಾಗಿದೆ. ಸಿಕ್ಕಿಂ, ನಾಗಾಲ್ಯಾಂಡ್ ಮತ್ತು ತ್ರಿಪುರಾ ಉಸ್ತುವಾರಿ ವಹಿಸಿದ್ದ ಅಜೋಯ್ ಕುಮಾರ್ ಅವರನ್ನು ತಮಿಳುನಾಡು ಮತ್ತು ಪುದುಚೇರಿಯ ಹೆಚ್ಚುವರಿ ಉಸ್ತುವಾರಿಯೊಂದಿಗೆ ಒಡಿಶಾದ ಉಸ್ತುವಾರಿ ನಾಯಕರನ್ನಾಗಿ ನೇಮಿಸಲಾಗಿದೆ. ರಜನಿ ಪಾಟೀಲ್ ಬದಲಿಗೆ ಗುಜರಾತ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಭರತ್ ಸಿಂಗ್ ಸೋಲಂಕಿ ಅವರಿಗೆ ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿ ನೀಡಲಾಗಿದೆ. ಸುಖಜಿಂದರ್ ಸಿಂಗ್ ರಾಂಧವಾ ಅವರು ರಾಜಸ್ಥಾನ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.

ಅಚ್ಚರಿಯ ಸಂಗತಿಯೆಂದರೆ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೆಲಂಗಾಣದ ಉಸ್ತುವಾರಿ ಹೊತ್ತಿದ್ದ ಮಹಾರಾಷ್ಟ್ರದ ಕಾಂಗ್ರೆಸ್‌ ನಾಯಕ ಮಾಣಿಕ್ರಾವ್ ಠಾಕ್ರೆ ಅವರನ್ನು ಗೋವಾ, ದಮನ್ ಮತ್ತು ದಿಯು ಮತ್ತು ದಾದ್ರಾ ಮತ್ತು ನಗರ ಹವೇಲಿಗೆ ವರ್ಗಾಯಿಸಲಾಗಿದೆ. ಗೋವಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಗಿರೀಶ್ ಚೋಡಂಕರ್ ಅವರನ್ನು ತ್ರಿಪುರಾ, ಸಿಕ್ಕಿಂ, ಮಣಿಪುರ ಮತ್ತು ನಾಗಾಲ್ಯಾಂಡ್‌ಗೆ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಇದನ್ನು ಓದಿ: ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...