Homeಮುಖಪುಟಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

ಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಗೆ ಮೇಜರ್‌ ಸರ್ಜರಿ ಮಾಡಿದ್ದಾರೆ. ಕಾಂಗ್ರೆಸ್‌ಗೆ ಪ್ರಧಾನ ಕಾರ್ಯದರ್ಶಿಗಳನ್ನು ಮತ್ತು ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳನ್ನು ನೇಮಿಸಲಾಗಿದ್ದು, ಉತ್ತರ ಪ್ರದೇಶದ ಉಸ್ತುವಾರಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಬಿಡುಗಡೆಗೊಳಿಸಿದ್ದಾರೆ. ಛತ್ತೀಸ್‌ಗಢದ ಉಸ್ತುವಾರಿಯಾಗಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್‌ ಪೈಲಟ್‌ ಅವರನ್ನು ನೇಮಕ ಮಾಡಲಾಗಿದೆ. 12 ಪ್ರಧಾನ ಕಾರ್ಯದರ್ಶಿಗಳ ಜೊತೆಗೆ 11 ರಾಜ್ಯ ಉಸ್ತುವಾರಿಗಳನ್ನೂ ಪಕ್ಷ ನೇಮಿಸಿದೆ.

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ನೇತೃತ್ವದ ಪ್ರಣಾಳಿಕೆ ಸಮಿತಿಯನ್ನು ಪಕ್ಷವು ನೇಮಿಸಿದ ಒಂದು ದಿನದ ನಂತರ ಈ ನೇಮಕಾತಿಗಳು ನಡೆದಿವೆ. ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ ಹಲವಾರು ಮುಖಂಡರು ಸಾರ್ವತ್ರಿಕ ಚುನಾವಣೆಗೆ ತಯಾರಿ ಆರಂಭಿಸುವಂತೆ ಕರೆ ನೀಡಿದ್ದರು.

ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಆದರೆ ಅವರನ್ನು ಉತ್ತರಪ್ರದೇಶ ಕಾಂಗ್ರೆಸ್‌ ಉಸ್ತುವಾರಿಯಿಂದ ಬಿಡುಗಡೆಗೊಳಿಸಲಾಗಿದೆ. ಅವರಿಗೆ ಚುನಾವಣೆಯಲ್ಲಿ ದೊಡ್ಡ ಜವಾಬ್ಧಾರಿ ನೀಡಬಹುದು ಎಂದು ಹೇಳಲಾಗುತ್ತಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್‌ ಪೈಲಟ್‌ ಅವರನ್ನು ನೇಮಕ ಮಾಡಲಾಗಿದೆ. ರಾಜಸ್ಥಾನದಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ ಹೊಸ ಮುಖವನ್ನು ಹುಡುಕಾಟ ನಡೆಸುತ್ತದೆ ಎಂಬುವುದನ್ನು ಈ ಬೆಳವಣಿಗೆ ಸ್ಪಷ್ಟಪಡಿಸುತ್ತದೆ.

ಪ್ರಿಯಾಂಕಾ ಗಾಂಧಿ ಬದಲಿಗೆ ಜಾರ್ಖಂಡ್ ಉಸ್ತುವಾರಿಯಾಗಿದ್ದ ಅವಿನಾಶ್ ಪಾಂಡೆ ಅವರನ್ನು ಉತ್ತರಪ್ರದೇಶ ಕಾಂಗ್ರೆಸ್‌ನ ಉಸ್ತುವಾರಿಯಾಗಿ ನೇಮಿಸಲಾಗಿದೆ. ಕಳೆದ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಸಬಲೀಕರಣವನ್ನು ಮುಖ್ಯ ವಿಚಾರವಾಗಿ ಪ್ರಚಾರವನ್ನು ನಡೆಸಿದರೂ ಯಶಸ್ಸು ಕಾಣದ ಪ್ರಿಯಾಂಕ ಗಾಂಧಿ ಬಳಿಕ ಉತ್ತರಪ್ರದೇಶದಲ್ಲಿ ಉಸ್ತುವಾರಿಯಾಗಿ ಮುಂದುವರಿಯಲು ಉತ್ಸುಕತೆ ತೋರಲಿಲ್ಲ ಎನ್ನಲಾಗಿದೆ.

ಈ ಹಿಂದೆ ಹಲವು ರಾಜ್ಯಗಳ ಉಸ್ತುವಾರಿ ವಹಿಸಿದ್ದ ಮುಕುಲ್ ವಾಸ್ನಿಕ್ ಅವರನ್ನು ಗುಜರಾತ್ ಕಾಂಗ್ರೆಸ್‌ನ ಉಸ್ತುವಾರಿಯಾಗಿ, ಕುಮಾರಿ ಸೆಲ್ಜಾ ಅವರನ್ನು ಛತ್ತೀಸ್‌ಗಢದಿಂದ ಉತ್ತರಾಖಂಡಕ್ಕೆ, ದೇವೇಂದ್ರ ಯಾದವ್ ಉತ್ತರಾಖಂಡದಿಂದ ಪಂಜಾಬ್‌ಗೆ, ಮಾಣಿಕಂ ಟ್ಯಾಗೋರ್ ಗೋವಾದಿಂದ ಆಂಧ್ರಪ್ರದೇಶಕ್ಕೆ ಮತ್ತು ಮೋಹನ್ ಪ್ರಕಾಶ್‌ ಅವರನ್ನು ಬಿಹಾರ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಪ್ರಧಾನ ಕಾರ್ಯದರ್ಶಿಗಳಾಗಿ ಹೊಸದಾಗಿ ಸೇರ್ಪಡೆಗೊಂಡವರು:

ಸಚಿನ್ ಪೈಲಟ್ ಹೊರತಾಗಿ ಪ್ರಧಾನ ಕಾರ್ಯದರ್ಶಿಗಳಾಗಿ ಹೊಸದಾಗಿ ಸೇರ್ಪಡೆಗೊಂಡವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಗುಲಾಮ್ ಅಹ್ಮದ್ ಮಿರ್ ಅವರು ಪಶ್ಚಿಮ ಬಂಗಾಳದ ಹೆಚ್ಚುವರಿ ಉಸ್ತುವಾರಿಯೊಂದಿಗೆ ಜಾರ್ಖಂಡ್‌ನ ಉಸ್ತುವಾರಿ ಕೂಡ ವಹಿಸಿದ್ದಾರೆ. ದೀಪಾ ದಾಸ್ಮುನ್ಸಿ ಅವರನ್ನು ಕೇರಳ, ಲಕ್ಷದ್ವೀಪ್ ಮತ್ತು ಹೆಚ್ಚುವರಿಯಾಗಿ ತೆಲಂಗಾಣದ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರನ್ನು ಕರ್ನಾಟಕದ ಉಸ್ತುವಾರಿಯಾಗಿ ಮುಂದುವರಿಸಲಾಗಿದ್ದು, ದೀಪಕ್ ಬಬಾರಿಯಾ ಹರಿಯಾಣದ ಹೆಚ್ಚುವರಿ ಉಸ್ತುವಾರಿಯೊಂದಿಗೆ ದೆಹಲಿಯ ಉಸ್ತುವಾರಿಯನ್ನು  ವಹಿಸಲಿದ್ದಾರೆ. ಜೈರಾಮ್ ರಮೇಶ್ ಎಐಸಿಸಿ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದು, ಕೆಸಿ ವೇಣುಗೋಪಾಲ್ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಜವಾಬ್ಧಾರಿಯಲ್ಲಿ ಮುಂದುವರಿಯಲಿದ್ದಾರೆ. ಅಸ್ಸಾಂ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಜಿತೇಂದ್ರ ಸಿಂಗ್ ಅವರಿಗೆ ಮಧ್ಯಪ್ರದೇಶ ಕಾಂಗ್ರೆಸ್‌ನ ಹೆಚ್ಚುವರಿ ಉಸ್ತುವಾರಿಯನ್ನು ನೀಡಲಾಗಿದೆ.

ಅಚ್ಚರಿ ಎಂದರೆ ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರನ್ನು ಮಹಾರಾಷ್ಟ್ರದ ಕಾಂಗ್ರೆಸ್‌ ಉಸ್ತುವಾರಿಯಾಗಿ ನೇಮಿಸಲಾಗಿದೆ. ಆದರೆ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿಲ್ಲ. ಒಡಿಶಾ ಉಸ್ತುವಾರಿ ವಹಿಸಿದ್ದ ಲೋಕಸಭಾ ಸಂಸದ ಚೆಲ್ಲಕುಮಾರ್ ಅವರನ್ನು ಮೇಘಾಲಯ, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಕ್ಕೆ ವರ್ಗಾಯಿಸಲಾಗಿದೆ. ಸಿಕ್ಕಿಂ, ನಾಗಾಲ್ಯಾಂಡ್ ಮತ್ತು ತ್ರಿಪುರಾ ಉಸ್ತುವಾರಿ ವಹಿಸಿದ್ದ ಅಜೋಯ್ ಕುಮಾರ್ ಅವರನ್ನು ತಮಿಳುನಾಡು ಮತ್ತು ಪುದುಚೇರಿಯ ಹೆಚ್ಚುವರಿ ಉಸ್ತುವಾರಿಯೊಂದಿಗೆ ಒಡಿಶಾದ ಉಸ್ತುವಾರಿ ನಾಯಕರನ್ನಾಗಿ ನೇಮಿಸಲಾಗಿದೆ. ರಜನಿ ಪಾಟೀಲ್ ಬದಲಿಗೆ ಗುಜರಾತ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಭರತ್ ಸಿಂಗ್ ಸೋಲಂಕಿ ಅವರಿಗೆ ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿ ನೀಡಲಾಗಿದೆ. ಸುಖಜಿಂದರ್ ಸಿಂಗ್ ರಾಂಧವಾ ಅವರು ರಾಜಸ್ಥಾನ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.

ಅಚ್ಚರಿಯ ಸಂಗತಿಯೆಂದರೆ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೆಲಂಗಾಣದ ಉಸ್ತುವಾರಿ ಹೊತ್ತಿದ್ದ ಮಹಾರಾಷ್ಟ್ರದ ಕಾಂಗ್ರೆಸ್‌ ನಾಯಕ ಮಾಣಿಕ್ರಾವ್ ಠಾಕ್ರೆ ಅವರನ್ನು ಗೋವಾ, ದಮನ್ ಮತ್ತು ದಿಯು ಮತ್ತು ದಾದ್ರಾ ಮತ್ತು ನಗರ ಹವೇಲಿಗೆ ವರ್ಗಾಯಿಸಲಾಗಿದೆ. ಗೋವಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಗಿರೀಶ್ ಚೋಡಂಕರ್ ಅವರನ್ನು ತ್ರಿಪುರಾ, ಸಿಕ್ಕಿಂ, ಮಣಿಪುರ ಮತ್ತು ನಾಗಾಲ್ಯಾಂಡ್‌ಗೆ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಇದನ್ನು ಓದಿ: ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...