Homeಮುಖಪುಟಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

ಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಗೆ ಮೇಜರ್‌ ಸರ್ಜರಿ ಮಾಡಿದ್ದಾರೆ. ಕಾಂಗ್ರೆಸ್‌ಗೆ ಪ್ರಧಾನ ಕಾರ್ಯದರ್ಶಿಗಳನ್ನು ಮತ್ತು ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳನ್ನು ನೇಮಿಸಲಾಗಿದ್ದು, ಉತ್ತರ ಪ್ರದೇಶದ ಉಸ್ತುವಾರಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಬಿಡುಗಡೆಗೊಳಿಸಿದ್ದಾರೆ. ಛತ್ತೀಸ್‌ಗಢದ ಉಸ್ತುವಾರಿಯಾಗಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್‌ ಪೈಲಟ್‌ ಅವರನ್ನು ನೇಮಕ ಮಾಡಲಾಗಿದೆ. 12 ಪ್ರಧಾನ ಕಾರ್ಯದರ್ಶಿಗಳ ಜೊತೆಗೆ 11 ರಾಜ್ಯ ಉಸ್ತುವಾರಿಗಳನ್ನೂ ಪಕ್ಷ ನೇಮಿಸಿದೆ.

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ನೇತೃತ್ವದ ಪ್ರಣಾಳಿಕೆ ಸಮಿತಿಯನ್ನು ಪಕ್ಷವು ನೇಮಿಸಿದ ಒಂದು ದಿನದ ನಂತರ ಈ ನೇಮಕಾತಿಗಳು ನಡೆದಿವೆ. ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ ಹಲವಾರು ಮುಖಂಡರು ಸಾರ್ವತ್ರಿಕ ಚುನಾವಣೆಗೆ ತಯಾರಿ ಆರಂಭಿಸುವಂತೆ ಕರೆ ನೀಡಿದ್ದರು.

ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಆದರೆ ಅವರನ್ನು ಉತ್ತರಪ್ರದೇಶ ಕಾಂಗ್ರೆಸ್‌ ಉಸ್ತುವಾರಿಯಿಂದ ಬಿಡುಗಡೆಗೊಳಿಸಲಾಗಿದೆ. ಅವರಿಗೆ ಚುನಾವಣೆಯಲ್ಲಿ ದೊಡ್ಡ ಜವಾಬ್ಧಾರಿ ನೀಡಬಹುದು ಎಂದು ಹೇಳಲಾಗುತ್ತಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್‌ ಪೈಲಟ್‌ ಅವರನ್ನು ನೇಮಕ ಮಾಡಲಾಗಿದೆ. ರಾಜಸ್ಥಾನದಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ ಹೊಸ ಮುಖವನ್ನು ಹುಡುಕಾಟ ನಡೆಸುತ್ತದೆ ಎಂಬುವುದನ್ನು ಈ ಬೆಳವಣಿಗೆ ಸ್ಪಷ್ಟಪಡಿಸುತ್ತದೆ.

ಪ್ರಿಯಾಂಕಾ ಗಾಂಧಿ ಬದಲಿಗೆ ಜಾರ್ಖಂಡ್ ಉಸ್ತುವಾರಿಯಾಗಿದ್ದ ಅವಿನಾಶ್ ಪಾಂಡೆ ಅವರನ್ನು ಉತ್ತರಪ್ರದೇಶ ಕಾಂಗ್ರೆಸ್‌ನ ಉಸ್ತುವಾರಿಯಾಗಿ ನೇಮಿಸಲಾಗಿದೆ. ಕಳೆದ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಸಬಲೀಕರಣವನ್ನು ಮುಖ್ಯ ವಿಚಾರವಾಗಿ ಪ್ರಚಾರವನ್ನು ನಡೆಸಿದರೂ ಯಶಸ್ಸು ಕಾಣದ ಪ್ರಿಯಾಂಕ ಗಾಂಧಿ ಬಳಿಕ ಉತ್ತರಪ್ರದೇಶದಲ್ಲಿ ಉಸ್ತುವಾರಿಯಾಗಿ ಮುಂದುವರಿಯಲು ಉತ್ಸುಕತೆ ತೋರಲಿಲ್ಲ ಎನ್ನಲಾಗಿದೆ.

ಈ ಹಿಂದೆ ಹಲವು ರಾಜ್ಯಗಳ ಉಸ್ತುವಾರಿ ವಹಿಸಿದ್ದ ಮುಕುಲ್ ವಾಸ್ನಿಕ್ ಅವರನ್ನು ಗುಜರಾತ್ ಕಾಂಗ್ರೆಸ್‌ನ ಉಸ್ತುವಾರಿಯಾಗಿ, ಕುಮಾರಿ ಸೆಲ್ಜಾ ಅವರನ್ನು ಛತ್ತೀಸ್‌ಗಢದಿಂದ ಉತ್ತರಾಖಂಡಕ್ಕೆ, ದೇವೇಂದ್ರ ಯಾದವ್ ಉತ್ತರಾಖಂಡದಿಂದ ಪಂಜಾಬ್‌ಗೆ, ಮಾಣಿಕಂ ಟ್ಯಾಗೋರ್ ಗೋವಾದಿಂದ ಆಂಧ್ರಪ್ರದೇಶಕ್ಕೆ ಮತ್ತು ಮೋಹನ್ ಪ್ರಕಾಶ್‌ ಅವರನ್ನು ಬಿಹಾರ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಪ್ರಧಾನ ಕಾರ್ಯದರ್ಶಿಗಳಾಗಿ ಹೊಸದಾಗಿ ಸೇರ್ಪಡೆಗೊಂಡವರು:

ಸಚಿನ್ ಪೈಲಟ್ ಹೊರತಾಗಿ ಪ್ರಧಾನ ಕಾರ್ಯದರ್ಶಿಗಳಾಗಿ ಹೊಸದಾಗಿ ಸೇರ್ಪಡೆಗೊಂಡವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಗುಲಾಮ್ ಅಹ್ಮದ್ ಮಿರ್ ಅವರು ಪಶ್ಚಿಮ ಬಂಗಾಳದ ಹೆಚ್ಚುವರಿ ಉಸ್ತುವಾರಿಯೊಂದಿಗೆ ಜಾರ್ಖಂಡ್‌ನ ಉಸ್ತುವಾರಿ ಕೂಡ ವಹಿಸಿದ್ದಾರೆ. ದೀಪಾ ದಾಸ್ಮುನ್ಸಿ ಅವರನ್ನು ಕೇರಳ, ಲಕ್ಷದ್ವೀಪ್ ಮತ್ತು ಹೆಚ್ಚುವರಿಯಾಗಿ ತೆಲಂಗಾಣದ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರನ್ನು ಕರ್ನಾಟಕದ ಉಸ್ತುವಾರಿಯಾಗಿ ಮುಂದುವರಿಸಲಾಗಿದ್ದು, ದೀಪಕ್ ಬಬಾರಿಯಾ ಹರಿಯಾಣದ ಹೆಚ್ಚುವರಿ ಉಸ್ತುವಾರಿಯೊಂದಿಗೆ ದೆಹಲಿಯ ಉಸ್ತುವಾರಿಯನ್ನು  ವಹಿಸಲಿದ್ದಾರೆ. ಜೈರಾಮ್ ರಮೇಶ್ ಎಐಸಿಸಿ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದು, ಕೆಸಿ ವೇಣುಗೋಪಾಲ್ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಜವಾಬ್ಧಾರಿಯಲ್ಲಿ ಮುಂದುವರಿಯಲಿದ್ದಾರೆ. ಅಸ್ಸಾಂ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಜಿತೇಂದ್ರ ಸಿಂಗ್ ಅವರಿಗೆ ಮಧ್ಯಪ್ರದೇಶ ಕಾಂಗ್ರೆಸ್‌ನ ಹೆಚ್ಚುವರಿ ಉಸ್ತುವಾರಿಯನ್ನು ನೀಡಲಾಗಿದೆ.

ಅಚ್ಚರಿ ಎಂದರೆ ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರನ್ನು ಮಹಾರಾಷ್ಟ್ರದ ಕಾಂಗ್ರೆಸ್‌ ಉಸ್ತುವಾರಿಯಾಗಿ ನೇಮಿಸಲಾಗಿದೆ. ಆದರೆ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿಲ್ಲ. ಒಡಿಶಾ ಉಸ್ತುವಾರಿ ವಹಿಸಿದ್ದ ಲೋಕಸಭಾ ಸಂಸದ ಚೆಲ್ಲಕುಮಾರ್ ಅವರನ್ನು ಮೇಘಾಲಯ, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಕ್ಕೆ ವರ್ಗಾಯಿಸಲಾಗಿದೆ. ಸಿಕ್ಕಿಂ, ನಾಗಾಲ್ಯಾಂಡ್ ಮತ್ತು ತ್ರಿಪುರಾ ಉಸ್ತುವಾರಿ ವಹಿಸಿದ್ದ ಅಜೋಯ್ ಕುಮಾರ್ ಅವರನ್ನು ತಮಿಳುನಾಡು ಮತ್ತು ಪುದುಚೇರಿಯ ಹೆಚ್ಚುವರಿ ಉಸ್ತುವಾರಿಯೊಂದಿಗೆ ಒಡಿಶಾದ ಉಸ್ತುವಾರಿ ನಾಯಕರನ್ನಾಗಿ ನೇಮಿಸಲಾಗಿದೆ. ರಜನಿ ಪಾಟೀಲ್ ಬದಲಿಗೆ ಗುಜರಾತ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಭರತ್ ಸಿಂಗ್ ಸೋಲಂಕಿ ಅವರಿಗೆ ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿ ನೀಡಲಾಗಿದೆ. ಸುಖಜಿಂದರ್ ಸಿಂಗ್ ರಾಂಧವಾ ಅವರು ರಾಜಸ್ಥಾನ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.

ಅಚ್ಚರಿಯ ಸಂಗತಿಯೆಂದರೆ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೆಲಂಗಾಣದ ಉಸ್ತುವಾರಿ ಹೊತ್ತಿದ್ದ ಮಹಾರಾಷ್ಟ್ರದ ಕಾಂಗ್ರೆಸ್‌ ನಾಯಕ ಮಾಣಿಕ್ರಾವ್ ಠಾಕ್ರೆ ಅವರನ್ನು ಗೋವಾ, ದಮನ್ ಮತ್ತು ದಿಯು ಮತ್ತು ದಾದ್ರಾ ಮತ್ತು ನಗರ ಹವೇಲಿಗೆ ವರ್ಗಾಯಿಸಲಾಗಿದೆ. ಗೋವಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಗಿರೀಶ್ ಚೋಡಂಕರ್ ಅವರನ್ನು ತ್ರಿಪುರಾ, ಸಿಕ್ಕಿಂ, ಮಣಿಪುರ ಮತ್ತು ನಾಗಾಲ್ಯಾಂಡ್‌ಗೆ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಇದನ್ನು ಓದಿ: ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...