Homeಮುಖಪುಟಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

- Advertisement -
- Advertisement -

ಭಾರತದ ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ಭಾರತೀಯ ಕುಸ್ತಿ ಫೆಡರೇಷನ್ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯೂಎಫ್ಐ ಮಾಜಿ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಆಯ್ಕೆ ನಂತರ ಕುಸ್ತಿಪಟುಗಳು ಹಾಗೂ ಇತರೆ ಅಥ್ಲೀಟ್‌ಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಚುನಾವಣಾ ಪ್ರೋಟೋಕಾಲ್ ಅನುಸರಿಸಲು ವಿಫಲವಾದ ಕಾರಣಕ್ಕಾಗಿ ಕ್ರೀಡಾ ಸಚಿವಾಲಯವು ಡಬ್ಲ್ಯೂಎಫ್ಐ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಿದೆ.

ಸಂಜಯ್ ಸಿಂಗ್ ನೇತೃತ್ವದ ಹೊಸ ಆಡಳಿತ ಮಂಡಳಿಯು ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಉಲ್ಲೇಖಿಸಿರುವ ಸಚಿವಾಲಯವು, ಭಾನುವಾರದಂದು ತನ್ನ ನಿರ್ಧಾರ ಪ್ರಕಟಿಸಿದೆ.

ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ‘ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳು ಈ ವರ್ಷಾಂತ್ಯದ ಮೊದಲು ಪ್ರಾರಂಭವಾಗಲಿದೆ ಎಂದು ಡಿ.21 ರಂದು ಘೋಷಿಸಿದರು’ ಎಂದು ಸಚಿವಾಲಯ ಉಲ್ಲೇಖಿಸಿದೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ಕುಸ್ತಿಪಟುಗಳು ತಯಾರಿ ಮಾಡಿಕೊಳ್ಳಲು ಕನಿಷ್ಠ 15 ದಿನಗಳ ಮೊದಲು ಸೂಚನೆ ನೀಡುವ ಅಗತ್ಯವಿದೆ ಎಂದು ಸಚಿವಾಲಯ ವಿವರಿಸಿದೆ.

‘ಪ್ರಮುಖ ನಿರ್ಧಾರಗಳನ್ನು ಕಾರ್ಯಕಾರಿ ಸಮಿತಿಯು ತೆಗೆದುಕೊಳ್ಳಬೇಕು, ಅದಕ್ಕೂ ಮೊದಲು ತಮ್ಮ ಕಾರ್ಯಸೂಚಿಗಳನ್ನು ಪರಿಗಣನೆಗೆ ಇರಿಸಬೇಕಾಗುತ್ತದೆ. ಡಬ್ಲ್ಯೂಎಫ್ಐ ನಿಯಯಮಗಳು- XIರ ಪ್ರಕಾರ ‘ನೋಟಿಸ್‌ಗಳು ಮತ್ತು ಸಭೆಗಳಿಗೆ ಕೋರಂ’ ಶೀರ್ಷಿಕೆಯಡಿಯಲ್ಲಿ ಕನಿಷ್ಠ 15 ದಿನಗಳ ಮೊದಲು ಅಧಿಸೂಚನೆ ಹೊರಡಿಸಬೇಕು. ನಿರ್ರಾರ ತೆಗೆದುಕೊಳ್ಳುವಾಗ ಸಭೆಯಲ್ಲಿ 1/3 ರಷ್ಟು ಕೋರಂ ಪ್ರತಿನಿಧಿಗಳು ಇರಬೇಕು. ತುರ್ತು ಇಸಿ ಸಭೆಗೆ ಸಹ ಕನಿಷ್ಠ ಸೂಚನೆ ಅವಧಿಯು 7 ದಿನಗಳು ಹಾಗೂ 1/3 ರಷ್ಟು ಪ್ರತಿನಿಧಿಗಳ ಕೋರಂ ಅಗತ್ಯತೆ ಇದೆ’ ಎಂದು ಸಚಿವಾಲಯ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಸ ಆಡಳಿತ ಮಂಡಳಿಯು ಹಿಂದೆ ಲೈಂಗಿಕ ಕಿರುಕುಳದ ಆರೋಪಗಳನ್ನು ಎದುರಿಸುತ್ತಿರುವ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣವನ್ನು ಹೊಂದಿರುವಂತೆ ಕಾಣಿಸುತ್ತಿದೆ. ಸಂಸ್ಥೆಯು ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ, ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣದಲ್ಲಿರುವಂತೆ ತೋರುತ್ತಿದೆ ಎಂದು ಸಚಿವಾಲಯ ಆರೋಪಿಸಿದೆ.

‘ಫೆಡರೇಶನ್‌ನ ವ್ಯವಹಾರವನ್ನು ಆಟಗಾರರ ಮೇಲೆ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮಾಜಿ ಪದಾಧಿಕಾರಿಗಳ ಆವರಣದಿಂದ ನಿಯಂತ್ರಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈಗಾಗಲೇ ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ’ ಎಂದು ಸಚಿವಾಲಯ ಹೇಳಿದೆ.

‘ಡಬ್ಲ್ಯುಎಫ್ಐನ ನೂತನ ಚುನಾಯಿತ ಕಾರ್ಯನಿರ್ವಾಹಕ ಮಂಡಳಿಯು ತೆಗೆದುಕೊಂಡಿರುವ ನಿರ್ಧಾರಗಳು ಸ್ಥಾಪಿತ ಕಾನೂನು ಮತ್ತು ಕಾರ್ಯವಿಧಾನದ ಮಾನದಂಡಗಳನ್ನು ನಿರ್ಲಕ್ಷಿಸಿದೆ. ಡಬ್ಲ್ಯುಎಫ್ಐನ ಸಾಂವಿಧಾನಿಕ ನಿಬಂಧನೆಗಳು ಮತ್ತು ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ಸಂಹಿತೆ ಎರಡನ್ನೂ ಉಲ್ಲಂಘಿಸುತ್ತವೆ’ ಎಂದು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ; ಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Really its a great victory for the sports community. Now its ur challenge to see that these people should be punished properly. Then only this ugly chapter can be closed. Dont allow him to go scot free. May god bless u all.👌👌👍👍👍👍🙏🏻🙏🏻🙏🏻

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...