Homeಮುಖಪುಟಇದು ಕುಸ್ತಿಪಟುಗಳ ಗೆಲುವು; ಡಬ್ಲ್ಯೂಎಫ್ಐ ಮಂಡಳಿಯ ಅಮಾನತಿನ ಬಗ್ಗೆ ವಿನೇಶ್ ಫೋಗಟ್ ಪ್ರತಿಕ್ರಿಯೆ

ಇದು ಕುಸ್ತಿಪಟುಗಳ ಗೆಲುವು; ಡಬ್ಲ್ಯೂಎಫ್ಐ ಮಂಡಳಿಯ ಅಮಾನತಿನ ಬಗ್ಗೆ ವಿನೇಶ್ ಫೋಗಟ್ ಪ್ರತಿಕ್ರಿಯೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ ಸಂಸ್ಥೆಗೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಆಯ್ಕೆಗೆ ಕುಸ್ತಿಪಟುಗಳು ವ್ಯಾಪಕವಾದಂತಹ ವಿರೋಧವನ್ನು ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇಂದು ನೂತನ ಆಡಳಿತ ಮಂಡಳಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕುಸ್ತಿಪಟು ವಿನೇಶ್ ಫೋಗಟ್, ಇದು ಕುಸ್ತಿಪಟುಗಳ ಗೆಲುವು, ಈ ಗೆಲುವು ಪ್ರಪಂಚದಾದ್ಯಂತದ ಇತರ ಮಹಿಳೆಯರು ತಮ್ಮ ಧ್ವನಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಡಿ.24ರಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ)ವನ್ನು ನೇಮಕ ಮಾಡಲಾಗಿತ್ತು. ಇದೀಗ ಬ್ರಿಜ್ ಭೂಷಣ್ ಬದಲಿಗೆ ಸಂಜಯ್ ಸಿಂಗ್ ಡಬ್ಲ್ಯುಎಫ್‌ಐ ಮುಖ್ಯಸ್ಥರಾಗಿ ನೇಮಕಗೊಂಡ 3 ದಿನಗಳ ಬೆನ್ನಲ್ಲೇ  ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಹೊಸ ಡಬ್ಲ್ಯುಎಫ್‌ಐ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ತರಾತುರಿಯಲ್ಲಿತ್ತು ಮತ್ತು ವ್ಯವಸ್ಥಿತ ಪ್ರಕ್ರಿಯೆಯನ್ನು ಅನುಸರಿಸಲಾಗಿಲ್ಲ ಎಂದು ಸಚಿವಾಲಯ ಹೇಳಿದೆ. ಸಂಜಯ್ ಸಿಂಗ್ ನೇತೃತ್ವದ ಹೊಸ ಆಡಳಿತ ಮಂಡಳಿಯು ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಉಲ್ಲೇಖಿಸಿರುವ ಸಚಿವಾಲಯವು ಭಾನುವಾರದಂದು ತನ್ನ ನಿರ್ಧಾರ ಪ್ರಕಟಿಸಿತ್ತು.

ನಾವು ಸೋಲನ್ನು ಒಪ್ಪಿಕೊಂಡಿದ್ದರೆ, ಪ್ರಪಂಚದಾದ್ಯಂತ ಮಹಿಳೆಯರು, ಅದು ಕುಸ್ತಿ ಅಥವಾ ಯಾವುದೇ ಕ್ಷೇತ್ರವಾಗಿರಬಹುದು, ತಮ್ಮ ಧ್ವನಿಯನ್ನು ಎತ್ತಲು ಹೆಣಗಾಡುತ್ತಿದ್ದರು. ಕುಸ್ತಿಪಟುಗಳಿಗೆ ಒಳ್ಳೆಯದನ್ನು ಮಾಡುವವರು WFIನ ಅಧ್ಯಕ್ಷರಾಗಬೇಕು. ವಿಶೇಷವಾಗಿ ಮಹಿಳೆಯರಿಗೆ ಒಳ್ಳೆಯವರಾಗಿರಬೇಕು. ನಾವು ಇದನ್ನು ಮೊದಲಿನಿಂದಲೂ ಹೇಳುತ್ತಿದ್ದೇವೆ. ನಾವು ಸಹಿಸಿಕೊಂಡಿರುವ ವಿಷಯಗಳನ್ನು ಇತರರು ಸಹಿಸಬೇಕಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಅದು ನಮ್ಮ ಹೋರಾಟ ಎಂದು ಆಜ್ ತಕ್‌ಗೆ ನೀಡಿದ ಸಂದರ್ಶನದಲ್ಲಿ ಫೋಗಟ್ ಹೇಳಿದ್ದಾರೆ.

ಭಾರತೀಯ ಕುಸ್ತಿ ಫೆಡರೇಷನ್ ಸಂಸ್ಥೆಗೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್‌ನ್ನು ಆಯ್ಕೆ ಮಾಡಿದ ಬೆನ್ನಲ್ಲೇ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಪತ್ರಿಕಾಗೋಷ್ಟಿಯನ್ನು ನಡೆಸಿ ಕುಸ್ತಿಯನ್ನು ತ್ಯಜಿಸುವುದಾಗಿ ಹೇಳಿಕೆ ಕೊಟ್ಟಿದ್ದರು. ಬಳಿಕ ಕಣ್ಣೀರಿಟ್ಟು ಪತ್ರಿಕಾಗೋಷ್ಟಿಯಿಂದ ನಿರ್ಗಮಿಸಿದ್ದರು. ಕುಸ್ತಿ ಫೆಡರೇಷನ್ ಸಂಸ್ಥೆಗೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್‌ನ್ನು ನೇಮಿಸಿರುವುದಕ್ಕೆ ಬಳಿಕ ವ್ಯಾಪಕವಾದಂತಹ ವಿರೋಧ ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ  ಪ್ರಧಾನಿ ಮೋದಿ ಅವರಿಗೆ ಒಲಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಪತ್ರ ಬರೆದು, ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿದ್ದೇನೆ ಎಂದು ಹೇಳಿದ್ದರು. ಬಳಿಕ ತಮಗೆ ಲಭಿಸಿದ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿ ಮೋದಿ ನಿವಾಸವಿರುವ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ತೊರೆದು ಹೋಗಿದ್ದರು.

ಇದನ್ನು ಓದಿ: ಅಥ್ಲೀಟ್‌ಗಳ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ; ಡಬ್ಲ್ಯೂಎಫ್ಐ ನೂತನ ಆಡಳಿತ ಮಂಡಳಿ ಅಮಾನತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...