Homeಮುಖಪುಟ'ಡಬ್ಲೂಎಫ್ಐ'ಗೆ ತಾತ್ಕಾಲಿಕ ಸಮಿತಿ ರಚಿಸುವಂತೆ 'ಐಒಎ'ಗೆ ಪತ್ರ ಬರೆದ ಕ್ರೀಡಾ ಸಚಿವಾಲಯ

‘ಡಬ್ಲೂಎಫ್ಐ’ಗೆ ತಾತ್ಕಾಲಿಕ ಸಮಿತಿ ರಚಿಸುವಂತೆ ‘ಐಒಎ’ಗೆ ಪತ್ರ ಬರೆದ ಕ್ರೀಡಾ ಸಚಿವಾಲಯ

- Advertisement -
- Advertisement -

ಕುಸ್ತಿ ಫೆಡರೇಷನ್ ನೂತನ ಆಡಳಿತ ಮಂಡಳಿಯನ್ನು ಅಮಾನತು ಮಾಡಿದ ನಂತರ, ಭಾರತ ಒಲಿಂಪಿಕ್ ಅಸೋಸಿಯೇಷನ್ (ಐಒಎ)ಗೆ ಪತ್ರ ಬರೆದಿರುವ ಕ್ರೀಡಾ ಸಚಿವಾಲಯ, ‘ಕುಸ್ತಿ ಸಂಸ್ಥೆಯನ್ನು ಮುನ್ನಡೆಸಲು ತಾತ್ಕಾಲಿಕ ಸಮಿತಿ’ ರಚಿಸುವಂತೆ ಸೂಚನೆ ನೀಡಿದೆ.

‘ತಾತ್ಕಾಲಿಕ ಸಮಿತಿಯು ಅಥ್ಲೀಟ್‌ಗಳ ಆಯ್ಕೆ ಸೇರಿದಂತೆ ಡಬ್ಲ್ಯುಎಫ್ಐನ ವ್ಯವಹಾರಗಳನ್ನು ನಿರ್ವಹಿಸಬಹುದು ಮತ್ತು ನಿಯಂತ್ರಿಸಬಹುದು’ ಎಂದು ಐಒಎ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕ್ರೀಡಾ ಸಚಿವಾಲಯವು ಹೇಳಿದೆ.

‘ಡಬ್ಲ್ಯುಎಫ್ಐನ ಮಾಜಿ ಪದಾಧಿಕಾರಿಗಳ ಪ್ರಭಾವ ಮತ್ತು ನಿಯಂತ್ರಣದಿಂದ ಉಂಟಾದ ಪರಿಸ್ಥಿತಿಯನ್ನು ಗಮನಿಸಿದರೆ, ಸಂಸ್ಥೆಯ ಆಡಳಿತ ಮತ್ತು ಸಮಗ್ರತೆಯ ಬಗ್ಗೆ ಗಂಭೀರ ಕಳವಳ ಹುಟ್ಟಿಕೊಂಡಿವೆ’ ಎಂದು ಕ್ರೀಡಾ ಇಲಾಖೆ ಅಧೀನ ಕಾರ್ಯದರ್ಶಿ ತರುಣ್ ಪರೀಕ್ ಅವರು ಸಹಿ ಹಾಕಿರುವ ಪತ್ರದಲ್ಲಿ ತಿಳಿಸಿದ್ದಾರೆ.

‘ಆದ್ದರಿಂದ, ಕ್ರೀಡಾ ಸಂಸ್ಥೆಗಳಲ್ಲಿ ಉತ್ತಮ ಆಡಳಿತದ ತತ್ವಗಳನ್ನು ಎತ್ತಿಹಿಡಿಯಲು ತಕ್ಷಣದ ಮತ್ತು ಕಟ್ಟುನಿಟ್ಟಾದ ಕ್ರಮಗಳ ಅಗತ್ಯವಿದೆ. ಡಬ್ಲ್ಯೂಎಫ್ಐನ ವ್ಯವಹಾರಗಳನ್ನು ನಿರ್ವಹಿಸಲು ಮಧ್ಯಂತರ ಅವಧಿಗೆ ಸೂಕ್ತವಾದ ವ್ಯವಸ್ಥೆಗಳನ್ನು ಮಾಡಲು ಐಒಎ ಸಂಸ್ಥೆಯು ಅಧಿಕಾರ ಹೊಂದಿದೆ. ಇದರಿಂದ ಕುಸ್ತಿಪಟುಗಳು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸುವುದಿಲ್ಲ ಮತ್ತು ಇನ್ನೂ ಉತ್ತಮ ಆಡಳಿತದ ತತ್ವವೆಂದರೆ, ಕ್ರೀಡಾ ಸಂಸ್ಥೆಯು ಅಪಾಯಕ್ಕೆ ಒಳಗಾಗುವುದಿಲ್ಲ’ ಎಂದು ಕ್ರೀಡಾ ಸಚಿವಾಲಯ ತನ್ನ ಪತ್ರದಲ್ಲಿ ತಿಳಿಸಿದೆ.

ಡಬ್ಲ್ಯುಎಫ್ಐ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ, ನೂತನ ಚುನಾಯಿತ ಮುಖ್ಯಸ್ಥ ಸಂಜಯ್ ಸಿಂಗ್ ನೇತೃತ್ವದ ಇತ್ತೀಚಿನ ಆಡಳಿತ ಮಂಡಳಿಯನ್ನು ಕೇಂದ್ರ ಸರ್ಕಾರವು ಅಮಾನತುಗೊಳಿಸಿರುವುದರಿಂದ ಡಬ್ಲ್ಯೂಎಫ್ಐಗೆ ಮತ್ತೊಂದು ಸುತ್ತಿನ ಚುನಾವಣೆ ಶಿಘ್ರದಲ್ಲೇ ನಡೆಯುವ ಸಾಧ್ಯತೆ ಇದೆ.

ಐಒಎ ರಚಿಸುವ ತಾತ್ಕಾಲಿಕ ಸಮಿತಿಯು ಕುಸ್ತಿ ಫೆಡರೇಷನ್‌ನ ದಿನನಿತ್ಯದ ವ್ಯವಹಾರಗಳನ್ನು ನೋಡಿಕೊಳ್ಳುತ್ತದೆ. ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಅಥ್ಲೀಟ್‌ಗಳು ಭಾಗವಹಿಸಲು ಅನುಮತಿ ನೀಡಿವುದು ಮತ್ತು ಕ್ರೀಡಾಕೂಟಗಳನ್ನು ಏರ್ಪಡಿಸುವುದು ಸೇರಿದಂತೆ ಹಲವು ಕೆಲಸಗಳನ್ನು ಮಾಡಬೇಕಾಗುತ್ತದೆ.

ಹಿರಿಯ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಮುಂಬರುವ ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ ಬಗ್ಗೆ ನಿನ್ನೆ ಕಳವಳ ವ್ಯಕ್ತಪಡಿಸಿದ್ದರು. ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳ ‘ತರಾತುರಿ’ ಘೋಷಣೆಯನ್ನು ಕೇಂದ್ರವು ಗಮನಿಸಿದ್ದು, ಸಾಕ್ಷಿ ಈ ಕುರಿತು ಪೋಸ್ಟ್ ಮಾಡಿದ ನಂತರ ಕ್ರೀಡಾ ಸಚಿವಾಲಯವು ಹೊಸದಾಗಿ ಆಯ್ಕೆಯಾದ ಕುಸ್ತಿ ಫೆಡರೇಷನ್ ಆಡಳಿತ ಮಂಡಳಿಯು ಮುಂದಿನ ಆದೇಶದವರೆಗೆ ಎಲ್ಲಾ ಚಟುವಟಿಕೆಗಳನ್ನು ನಿಲ್ಲಿಸುವಂತೆ ಆದೇಶಿಸಿದೆ. ಕ್ರೀಡಾ ಸಚಿವಾಲಯವು ಹೇಳಿಕೆಯಲ್ಲಿ ಹೊಸದಾಗಿ ಚುನಾಯಿತ ಸಂಸ್ಥೆಯು ‘ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣಕ್ಕೆ ಒಳಪಟ್ಟಿದೆ’ ಎಂದು ಆರೋಪಿಸಿದೆ.

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸಾಕ್ಷಿ ಮಲ್ಲಿಕ್ ಸೇರಿದಂತೆ ದೇಶದ ಹಲವು ಹಿರಿಯ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ತಮ್ಮ ಸ್ಥಾನದಿಂದ ದೂರ ಸರಿಯಬೇಕಾಯಿತು.

ಒಲಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನವರಿಯಲ್ಲಿ ಬೀದಿಗಿಳಿದಿದ್ದರು.

ಬ್ರಿಜ್ ಭೂಷಣ್ ವಿರುದ್ಧ ತನಿಖೆ ಆರಂಭಿಸಿದ ನಂತರ, ಸರ್ಕಾರದ ಭರವಸೆ ಮೇರೆಗೆ ಧರಣಿ ಹಿಂಪಡೆದಿದ್ದರು. ಇತ್ತೀಚಿನ ಡಬ್ಲ್ಯುಎಫ್ಐ ಚುನಾವಣೆಯಲ್ಲಿ ಸಂಜಯ್ ಸಿಂಗ್ ಅವರು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆಯೊರನ್ ವಿರುದ್ಧ ಅಮೋಘ ಜಯ ಸಾಧಿಸಿದರು, ಅವರನ್ನು ಪ್ರತಿಭಟನಾಕಾರ ಕುಸ್ತಿಪಟುಗಳು ಬೆಂಬಲಿಸಿದ್ದರು.

ಬ್ರಿಜ್ ಭೂಷಣ್ ಅವರ ಆಪ್ತರು ಮತ್ತು ಸಂಬಂಧಿಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆಯ ಹೊರತಾಗಿಯೂ, ಸಂಜಯ್ ಸಿಂಗ್ ಅವರ ನಾಮನಿರ್ದೇಶನವನ್ನು ಸಿಂಧುಗೊಳಿಸಿದ್ದು ಕುಸ್ತಿಪಟುಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ; ಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...