Homeಮುಖಪುಟಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನೆಯ ವಶದಲ್ಲಿದ್ದ ವೇಳೆ ಮೂವರು ನಾಗರಿಕರು  ಸಾವನ್ನಪ್ಪಿದ್ದಾರೆ. ಕಸ್ಟಡಿ ಹಿಂಸೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿಗಳು ಮತ್ತು ಸ್ಥಳೀಯರು ಆರೋಪಿಸಿದ್ದು, ಈ ಬಗ್ಗೆ ಜಮ್ಮು-ಕಾಶ್ಮೀರದ ಆಡಳಿತವಾಗಲೀ, ಸೇನೆಯಾಗಲಿ ಸ್ಪಷ್ಟ ಪ್ರತಿಕ್ರಿಯೆ ನೀಡಿಲ್ಲ. ಇದರಿಂದಾಗಿ ಪೂಂಛ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಐವರು ಯೋಧರು, ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ ಮೂವರು ನಾಗರಿಕರ ಹತ್ಯೆಗೆ ಯಾರು ಹೊಣೆ ಎಂದು ಸೇನೆ ಮತ್ತು ಜಮ್ಮು-ಕಾಶ್ಮೀರ ಹೇಳಿಲ್ಲವಾದರೂ, ಸೇನಾ ಕಸ್ಟಡಿಯಲ್ಲಿ ಪುರುಷರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಡಿ.21ರಂದು ಪೂಂಛ್‌ನಲ್ಲಿ ಭಯೋತ್ಪಾದಕರು ನಡೆಸಿದ್ದ ಹೊಂಚುದಾಳಿಯಲ್ಲಿ ಸೇನೆಯ ನಾಲ್ವರು ಯೋಧರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ 8 ಮಂದಿಯನ್ನು ವಿಚಾರಣೆಗಾಗಿ ಸೇನೆಯು ತನ್ನ ವಶಕ್ಕೆ ತೆಗೆದುಕೊಂಡಿತ್ತು. ಸೇನೆಯು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದ 8 ಜನರಲ್ಲಿ ಮೂವರು ನಾಗರಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಕೇಂದ್ರಾಡಳಿತ ಪ್ರದೇಶದ ಆಡಳಿತವು ಕೇಂದ್ರ ಗೃಹ ಸಚಿವಾಲಯದ ಮೇಲ್ವಿಚಾರಣೆಯಡಿಯಲ್ಲಿ ಬರುತ್ತದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯವೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಗ್ರಾಮದ ಮುಖ್ಯಸ್ಥ ಮೆಹಮೂದ್ ಅಹ್ಮದ್,  ಶಬ್ಬೀರ್ ಮತ್ತು ಶೋಕತ್ ಅವರನ್ನು ವೈರಲ್ ವೀಡಿಯೊದಲ್ಲಿ ಗುರುತಿಸಿರುವುದಾಗಿ ಹೇಳಿದ್ದಾರೆ. ಇದರಲ್ಲಿ ಸೈನಿಕರು ಸೆರೆಯಾಳುಗಳನ್ನು ಕ್ರೂರವಾಗಿ ಥಳಿಸುವುದನ್ನು ಮತ್ತು ಕೆಲವರು ಪೃಷ್ಠದ ಮೇಲೆ ಮೆಣಸಿನ ಪುಡಿಯನ್ನು ಎರಚುವುದನ್ನು ಕಾಣಬಹುದು ಎಂದು ಹೇಳಿದ್ದಾರೆ.

ಸೇನಾ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟರು ಎಂದು ಹೇಳಲಾದ ಮೂವರು ನಾಗರಿಕರಲ್ಲಿ ಒಬ್ಬರಾದ ಮೊಹಮ್ಮದ್ ಶೌಕಾತ್‌ನ ಚಿಕ್ಕಪ್ಪ ಮೊಹಮ್ಮದ್ ಸಿದ್ದಿಕ್ ಮಾತನಾಡಿದ್ದು, ವೀಡಿಯೊದಲ್ಲಿ ಕಾಣಿಸಿಕೊಂಡಿರುವುದು ತನ್ನ ಸೋದರಳಿಯನೇ. ಲಾಠಿ ಬೀಸುವ ಸೈನಿಕನನ್ನು ಆತ ಕೈಮುಗಿದು ಬಿಟ್ಟು ಬಿಡುವಂತೆ ಬೇಡಿಕೊಂಡಿದ್ದಾನೆ. ಆದರೆ ಅವರ ಮನಕರಗಲಿಲ್ಲ. ವಿಡಿಯೋದಲ್ಲಿ ಕಾಣಿಸಿಕೊಂಡ ಕಪ್ಪು ಬಟ್ಟೆಯನ್ನು ಧರಿಸಿರುವ ವ್ಯಕ್ತಿ ಸಫೀರ್. ಅವರ ಸಹೋದರ ಗಡಿ ಭದ್ರತಾ ಪಡೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದಾರೆ. ವಿಡಿಯೋದಲ್ಲಿ ಕಂಡು ಬಂದ ಕೆಂಪು ಟೀ ಶರ್ಟ್ ಧರಿಸಿರುವ ಮೂರನೇ ಯುವಕ ಇರ್ಫಾನ್ ಅಹ್ಮದ್. ಅವರು 16 ವರ್ಷ ವಯಸ್ಸಿನವರಾಗಿದ್ದಾರೆ ಮತ್ತು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಡೀ ಘಟನೆಯು ಬಡತನ ಮತ್ತು ಹಕ್ಕುಗಳಿಗಾಗಿ ಹೋರಾಡುತ್ತಿರುವ ಸಮುದಾಯಕ್ಕೆ ಆಘಾತ ಉಂಟುಮಾಡಿದೆ ಎಂದು ಸಿದ್ದಿಕ್ ಹೇಳಿದರು.

ಮೃತ ನಾಗರಿಕರ ದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಿದಾಗಿನಿಂದ ಪೂಂಚ್‌ನ ಟೋಪಾ ಪೀರ್ ಗ್ರಾಮದಲ್ಲಿ ಕರ್ಪ್ಯೂ ವಿಧಿಸಲಾಗಿದೆ. ಸಂಪೂರ್ಣವಾಗಿ ಮಿಲಿಟರಿ ನಿಯೋಜಿಸಲಾಗಿದೆ. ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಸೇನೆಯು ಸುತ್ತುವರಿದಿರುವುದರಿಂದ ಗ್ರಾಮಸ್ಥರು ದುಃಖದ ಸಮಯದಲ್ಲಿ ಮೂರು ಕುಟುಂಬಗಳನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸರಪಂಚ್ ಅಹ್ಮದ್ ಹೇಳಿದ್ದಾರೆ.

ಮೃತ ಯುವಕ ಮೊಹಮ್ಮದ್ ಶಬ್ಬೀರ್ ಅವರ ತಂದೆ ವಾಲಿ ಮೊಹಮ್ಮದ್ ಅವರು ತಮ್ಮ ಮಗನ ಹತ್ಯೆ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಅವರು ನನ್ನ ಸುಂದರವಾಗಿದ್ದ ಮಗನನ್ನು ಎಲ್ಲೆಡೆ ಹೊಲಿಗೆಗಳಿಂದ ತುಂಬಿದ ದೇಹವನ್ನಾಗಿ ಮಾಡಿದರು. ನನಗೆ 60 ವರ್ಷ, ನನ್ನ 27 ವರ್ಷದ ಮಗನನ್ನು ದೇಹದಾದ್ಯಂತ ಹೊಲಿಗೆಗಳಿಂದ ನನ್ನ ಬಳಿಗೆ ತಂದರು. ತಲೆ ಮತ್ತು ಎದೆಗೆ ಸಹ ಹೊಲಿಗೆಗಳನ್ನು ಹಾಕಲಾಗಿತ್ತು. ಮಗನಿಗೆ ಎಲೆಕ್ಟ್ರಿಕ್‌ ಶಾಕ್‌ ಕೂಡ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸೇನೆಯು, ಈ ವಿಷಯವು ತನಿಖೆಯ ಹಂತದಲ್ಲಿದೆ ಮತ್ತು ತನಿಖೆ ನಡೆಸುವಲ್ಲಿ ಸಂಪೂರ್ಣ ಬೆಂಬಲ ಮತ್ತು ಸಹಕಾರವನ್ನು ನೀಡುವುದಾಗಿ ಹೇಳಿದೆ. ಆದರೆ ಸ್ಥಳೀಯರು, ನಮ್ಮ ಮತ್ತು ಸೇನೆಯ ನಡುವಿನ ಬಾಂದವ್ಯವನ್ನು ಪುನರ್ನಿರ್ಮಿಸಲು ಬಹಳ ಸಮಯ ತೆಗೆದುಕೊಳ್ಳಬಹದು ಎಂದು ಹೇಳುತ್ತಿದ್ದಾರೆ.

ಜಮ್ಮು-ಕಾಶ್ಮೀರದ ಆಡಳಿತವು ಮೂವರು ನಾಗರಿಕರ ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿಕೊಂಡು ಘಟನೆಯಿಂದ ನುಣುಚಿಕೊಂಡಿದೆ.

ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಮೂವರು ಯುವಕರ ಹತ್ಯೆಯನ್ನು ಖಂಡಿಸಿದ್ದಾರೆ. ಇದು ಬೇರೆ ಯಾವುದೇ ಸರ್ಕಾರದ ಅಡಿಯಲ್ಲಿ ಸಂಭವಿಸಿದ್ದರೆ, ಗೋದಿ ಮಾದ್ಯ ಮವು ಪ್ರಶ್ನೆಗಳನ್ನು ಎತ್ತುತ್ತಿತ್ತು. ಅವರು ಚಿತ್ರಹಿಂಸೆಗೊಳಗಾದ 15 ಜನರನ್ನು ತಮ್ಮ ಮನೆಗಳಿಂದ ಎಳೆದುಕೊಂಡು ಹೋಗಿದ್ದರು. ಅವರಲ್ಲಿ ಮೂವರು ಈಗಾಗಲೇ ಸಾವನ್ನಪ್ಪಿದ್ದಾರೆ. ಈ ನಯಾ ಕಾಶ್ಮೀರ ಹೇಗಿದೆ? ಅಲ್ಲಿ ಸೈನಿಕರಾಗಲಿ ಅಥವಾ ಸಾಮಾನ್ಯ ಜನರಾಗಲಿ ಸುರಕ್ಷಿತವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕೂಡ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನೆಯ ವಶದಲ್ಲಿದ್ದ ಮೂವರು ನಾಗರಿಕರನ್ನು ಕ್ರೂರವಾಗಿ ಹತ್ಯೆಗೈದಿರುವುದು ಬಲವಾಗಿ ಖಂಡಿಸಿದೆ. ಮೃತರ ಕುಟುಂಬಗಳಿಗೆ ಕೇವಲ ಪರಿಹಾರ ಘೋಷಿಸಿದರೆ ಸಾಕಾಗುವುದಿಲ್ಲ, ತ್ವರಿತ ತನಿಖೆಯಾಗಬೇಕು ಮತ್ತು ಹೊಣೆಗಾರರಿಗೆ ಶಿಕ್ಷೆ ವಿಧಿಸಬೇಕು ಎಂದು ಹೇಳಿದೆ.

ಇದನ್ನು ಓದಿ: ಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಎಫ್‌ಐಆರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...