HomeಮುಖಪುಟINDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

INDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

- Advertisement -
- Advertisement -

INDIA ಮೈತ್ರಿಕೂಟಕ್ಕೆ ಬಹುಜನ ಸಮಾಜಪಕ್ಷವನ್ನು ಸೇರಿಸಬಾರದು, ಬಿಎಸ್ಪಿಯನ್ನು ಸೇರಿಸಿದರೆ ನಮ್ಮ ಪಕ್ಷವು  INDIA ಮೈತ್ರಿಕೂಟವನ್ನು ತೊರೆಯಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬೆದರಿಕೆ ಹಾಕಿದ್ದಾರೆ.

ಡಿ.19ರಂದು ನಡೆದ INDIA ಸಭೆಯಲ್ಲಿ ಬಹುಜನ ಸಮಾಜ ಪಕ್ಷವನ್ನು ಒಕ್ಕೂಟಕ್ಕೆ ಸೇರಿಸುವ ಬಗ್ಗೆ ಅಖಿಲೇಶ್ ಯಾದವ್ ಆಕ್ರೋಶ ವ್ಯಕ್ತಪಡಿಸಿದ್ದು, ಹಾಜರಿದ್ದ ಹೆಚ್ಚಿನ ವಿರೋಧಪಕ್ಷದ ನಾಯಕರನ್ನು ಈ ಬೆಳವಣಿಗೆ ಅಚ್ಚರಿಗೊಳಿಸಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮಾಯಾವತಿ ಅವರನ್ನು ಒಕ್ಕೂಟಕ್ಕೆ ಸೇರಿಸುವ ಪ್ರಯತ್ನ ನಡೆಯುತ್ತಿದೆ. ಬಹುಜನ ಸಮಾಜ ಪಕ್ಷವನ್ನು ಸೇರ್ಪಡೆ ಮಾಡಿದರೆ ತಮ್ಮ ಪಕ್ಷವು ಒಕ್ಕೂಟವನ್ನು ತೊರೆಯಲಿದೆ ಎಂದು ಅಖಿಲೇಶ್ ಸಭೆಯಲ್ಲಿ ಘೋಷಿಸಿದ್ದರು. ಈವರೆಗೆ ನಡೆದ ಒಕ್ಕೂಟದ 4 ಸಭೆಗಳಲ್ಲಿ ಬಿಎಸ್‌ಪಿ ಸೇರ್ಪಡೆ ಕುರಿತು ಯಾವುದೇ ಚರ್ಚೆ ನಡೆಯದ ಕಾರಣ ಸಭೆಯಲ್ಲಿ ಉಪಸ್ಥಿತರಿದ್ದ ವಿರೋಧ ಪಕ್ಷಗಳ ಮುಖಂಡರು ಎಸ್‌ಪಿ ಮುಖ್ಯಸ್ಥರ ಹೇಳಿಕೆಯಿಂದ ಆಚ್ಚರಿಗೊಂಡಿದ್ದರು.

ಮೂಲಗಳ ಪ್ರಕಾರ ಕಾಂಗ್ರೆಸ್‌ ಉತ್ತರ ಪ್ರದೇಶದಲ್ಲಿ ಬಿಎಸ್‌ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕವಾಗಿದೆ ಎಂದು ಅಖಿಲೇಶ್ ಭಾವಿಸಿದ್ದಾರೆ ಮತ್ತು ಬಿಎಸ್ಪಿಯನ್ನು ಸೇರ್ಪಡೆಗೊಳಿಸುವ ಮೊದಲು ಅಖಿಲೇಶ್‌ ಈ ಬಗ್ಗೆ ಎಚ್ಚರಿಕೆಯನ್ನು ನೀಡಲು ಬಯಸಿದ್ದರು ಎಂದು ಹೇಳಲಾಗಿದೆ.

ಇಂಡಿಯಾ ಮೈತ್ರಿಕೂಟ ಹಾಗೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ದೂರವಿರುವ ಮಾಯಾವತಿ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿ ಜನರು ಮತ್ತು ದೇಶಕ್ಕಾಗಿ ಭವಿಷ್ಯದಲ್ಲಿ ಯಾರಿಗೆ ಯಾರ ಸಹಾಯ ಬೇಕೆಂಬುದು ಯಾರಿಗೂ ತಿಳಿದಿಲ್ಲ. ಅಖಿಲೇಶ್‌ ಯಾದವ್‌ ಅವರನ್ನು ನೇರವಾಗಿ ಗುರಿಯಾಗಿಸಿ ಮಾತನಾಡಿದ ಮಾಯಾವತಿ ಇಂತಹ ಹೇಳಿಕೆಗಳನ್ನು ನೀಡುವ ಪಕ್ಷಗಳು ನಂತರ ಮುಜುಗರಕ್ಕೊಳಗಾಗಬೇಕಾಗಬಹುದು ಎಂದು ಹೇಳಿದ್ದಾರೆ. ಅಖಿಲೇಶ್‌ ವಿರುದ್ಧ ತಕ್ಷಣ ಮಾಯಾವತಿ ತಿರುಗೇಟು ನೀಡಿರುವುದು ಅವರು ವಿಪಕ್ಷದೊಂದಿಗೆ ಹೊಂದಾಣಿಕೆಗೆ ಸಿದ್ಧ ಎಂಬುದನ್ನು ಸೂಚಿಸುತ್ತದೆ ಎಂಬುದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

2024ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟಕ್ಕೆ ಪ್ರತಿಯಾಗಿ ಪ್ರತಿಪಕ್ಷಗಳು INDIA ಮೈತ್ರಿಕೂಟವನ್ನು ರಚಿಸಿತ್ತು. INDIA ಮೈತ್ರಿಕೂಟದಲ್ಲಿ ಕಾಂಗ್ರೆಸ್‌,  ಟಿಎಂಸಿ, ಡಿಎಂಕೆ, ಆಮ್‌ ಆದ್ಮಿ ಪಾರ್ಟಿ, ಜೆಡಿಯು, ಆರ್‌ಜೆಡಿ,  ಎನ್‌ಸಿಪಿ (ಶರದ್‌ ಪವಾರ್‌), ಜೆಎಂಎಂ, ಶಿವಸೇನೆ(ಉದ್ಧವ್‌), ಎಸ್‌ಪಿ, ಆರ್‌ಎಲ್‌ಡಿ, ಅಪ್ನಾದಳ (ಕಾಮೇರವಾಡಿ), ನ್ಯಾಷನಲ್‌ ಕಾನ್ಫರೆನ್ಸ್‌, ಪಿಡಿಪಿ, ಸಿಪಿಐ (ಎಂ), ಸಿಪಿಐ, ಆರ್‌ಎಸ್‌ಪಿ,  ಎಎಫ್‌ಬಿ, ಎಂಡಿಎಂಕೆ, ವಿಸಿಕೆ, ಕೆಎಂಡಿಕೆ, ಎಂಎಂಕೆ, ಐಯುಎಂಎಲ್, ಕೇರಳ ಕಾಂಗ್ರೆಸ್‌, ಕೇರಳ ಕಾಂಗ್ರೆಸ್‌ (ಜೆ), ಸಿಪಿಐ (ಎಂ) ಎಲ್‌ ಸೇರಿ 26 ಪಕ್ಷಗಳು ಇವೆ. ಆದರೆ ಬಿಎಸ್ಪಿ ಈವೆರೆಗೆ INDIA ಮೈತ್ರಿಕೂಟ ಅಥವಾ ಎನ್‌ಡಿಎ ಮೈತ್ರಿ ಕೂಟಕ್ಕೆ ಸೇರದೆ ಸ್ವತಂತ್ರವಾಗಿ ಉಳಿದಿದೆ.

ಇದನ್ನು ಓದಿ: ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...