HomeಮುಖಪುಟINDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

INDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

- Advertisement -
- Advertisement -

INDIA ಮೈತ್ರಿಕೂಟಕ್ಕೆ ಬಹುಜನ ಸಮಾಜಪಕ್ಷವನ್ನು ಸೇರಿಸಬಾರದು, ಬಿಎಸ್ಪಿಯನ್ನು ಸೇರಿಸಿದರೆ ನಮ್ಮ ಪಕ್ಷವು  INDIA ಮೈತ್ರಿಕೂಟವನ್ನು ತೊರೆಯಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬೆದರಿಕೆ ಹಾಕಿದ್ದಾರೆ.

ಡಿ.19ರಂದು ನಡೆದ INDIA ಸಭೆಯಲ್ಲಿ ಬಹುಜನ ಸಮಾಜ ಪಕ್ಷವನ್ನು ಒಕ್ಕೂಟಕ್ಕೆ ಸೇರಿಸುವ ಬಗ್ಗೆ ಅಖಿಲೇಶ್ ಯಾದವ್ ಆಕ್ರೋಶ ವ್ಯಕ್ತಪಡಿಸಿದ್ದು, ಹಾಜರಿದ್ದ ಹೆಚ್ಚಿನ ವಿರೋಧಪಕ್ಷದ ನಾಯಕರನ್ನು ಈ ಬೆಳವಣಿಗೆ ಅಚ್ಚರಿಗೊಳಿಸಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮಾಯಾವತಿ ಅವರನ್ನು ಒಕ್ಕೂಟಕ್ಕೆ ಸೇರಿಸುವ ಪ್ರಯತ್ನ ನಡೆಯುತ್ತಿದೆ. ಬಹುಜನ ಸಮಾಜ ಪಕ್ಷವನ್ನು ಸೇರ್ಪಡೆ ಮಾಡಿದರೆ ತಮ್ಮ ಪಕ್ಷವು ಒಕ್ಕೂಟವನ್ನು ತೊರೆಯಲಿದೆ ಎಂದು ಅಖಿಲೇಶ್ ಸಭೆಯಲ್ಲಿ ಘೋಷಿಸಿದ್ದರು. ಈವರೆಗೆ ನಡೆದ ಒಕ್ಕೂಟದ 4 ಸಭೆಗಳಲ್ಲಿ ಬಿಎಸ್‌ಪಿ ಸೇರ್ಪಡೆ ಕುರಿತು ಯಾವುದೇ ಚರ್ಚೆ ನಡೆಯದ ಕಾರಣ ಸಭೆಯಲ್ಲಿ ಉಪಸ್ಥಿತರಿದ್ದ ವಿರೋಧ ಪಕ್ಷಗಳ ಮುಖಂಡರು ಎಸ್‌ಪಿ ಮುಖ್ಯಸ್ಥರ ಹೇಳಿಕೆಯಿಂದ ಆಚ್ಚರಿಗೊಂಡಿದ್ದರು.

ಮೂಲಗಳ ಪ್ರಕಾರ ಕಾಂಗ್ರೆಸ್‌ ಉತ್ತರ ಪ್ರದೇಶದಲ್ಲಿ ಬಿಎಸ್‌ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕವಾಗಿದೆ ಎಂದು ಅಖಿಲೇಶ್ ಭಾವಿಸಿದ್ದಾರೆ ಮತ್ತು ಬಿಎಸ್ಪಿಯನ್ನು ಸೇರ್ಪಡೆಗೊಳಿಸುವ ಮೊದಲು ಅಖಿಲೇಶ್‌ ಈ ಬಗ್ಗೆ ಎಚ್ಚರಿಕೆಯನ್ನು ನೀಡಲು ಬಯಸಿದ್ದರು ಎಂದು ಹೇಳಲಾಗಿದೆ.

ಇಂಡಿಯಾ ಮೈತ್ರಿಕೂಟ ಹಾಗೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ದೂರವಿರುವ ಮಾಯಾವತಿ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿ ಜನರು ಮತ್ತು ದೇಶಕ್ಕಾಗಿ ಭವಿಷ್ಯದಲ್ಲಿ ಯಾರಿಗೆ ಯಾರ ಸಹಾಯ ಬೇಕೆಂಬುದು ಯಾರಿಗೂ ತಿಳಿದಿಲ್ಲ. ಅಖಿಲೇಶ್‌ ಯಾದವ್‌ ಅವರನ್ನು ನೇರವಾಗಿ ಗುರಿಯಾಗಿಸಿ ಮಾತನಾಡಿದ ಮಾಯಾವತಿ ಇಂತಹ ಹೇಳಿಕೆಗಳನ್ನು ನೀಡುವ ಪಕ್ಷಗಳು ನಂತರ ಮುಜುಗರಕ್ಕೊಳಗಾಗಬೇಕಾಗಬಹುದು ಎಂದು ಹೇಳಿದ್ದಾರೆ. ಅಖಿಲೇಶ್‌ ವಿರುದ್ಧ ತಕ್ಷಣ ಮಾಯಾವತಿ ತಿರುಗೇಟು ನೀಡಿರುವುದು ಅವರು ವಿಪಕ್ಷದೊಂದಿಗೆ ಹೊಂದಾಣಿಕೆಗೆ ಸಿದ್ಧ ಎಂಬುದನ್ನು ಸೂಚಿಸುತ್ತದೆ ಎಂಬುದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

2024ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟಕ್ಕೆ ಪ್ರತಿಯಾಗಿ ಪ್ರತಿಪಕ್ಷಗಳು INDIA ಮೈತ್ರಿಕೂಟವನ್ನು ರಚಿಸಿತ್ತು. INDIA ಮೈತ್ರಿಕೂಟದಲ್ಲಿ ಕಾಂಗ್ರೆಸ್‌,  ಟಿಎಂಸಿ, ಡಿಎಂಕೆ, ಆಮ್‌ ಆದ್ಮಿ ಪಾರ್ಟಿ, ಜೆಡಿಯು, ಆರ್‌ಜೆಡಿ,  ಎನ್‌ಸಿಪಿ (ಶರದ್‌ ಪವಾರ್‌), ಜೆಎಂಎಂ, ಶಿವಸೇನೆ(ಉದ್ಧವ್‌), ಎಸ್‌ಪಿ, ಆರ್‌ಎಲ್‌ಡಿ, ಅಪ್ನಾದಳ (ಕಾಮೇರವಾಡಿ), ನ್ಯಾಷನಲ್‌ ಕಾನ್ಫರೆನ್ಸ್‌, ಪಿಡಿಪಿ, ಸಿಪಿಐ (ಎಂ), ಸಿಪಿಐ, ಆರ್‌ಎಸ್‌ಪಿ,  ಎಎಫ್‌ಬಿ, ಎಂಡಿಎಂಕೆ, ವಿಸಿಕೆ, ಕೆಎಂಡಿಕೆ, ಎಂಎಂಕೆ, ಐಯುಎಂಎಲ್, ಕೇರಳ ಕಾಂಗ್ರೆಸ್‌, ಕೇರಳ ಕಾಂಗ್ರೆಸ್‌ (ಜೆ), ಸಿಪಿಐ (ಎಂ) ಎಲ್‌ ಸೇರಿ 26 ಪಕ್ಷಗಳು ಇವೆ. ಆದರೆ ಬಿಎಸ್ಪಿ ಈವೆರೆಗೆ INDIA ಮೈತ್ರಿಕೂಟ ಅಥವಾ ಎನ್‌ಡಿಎ ಮೈತ್ರಿ ಕೂಟಕ್ಕೆ ಸೇರದೆ ಸ್ವತಂತ್ರವಾಗಿ ಉಳಿದಿದೆ.

ಇದನ್ನು ಓದಿ: ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...