HomeಮುಖಪುಟINDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

INDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

- Advertisement -
- Advertisement -

INDIA ಮೈತ್ರಿಕೂಟಕ್ಕೆ ಬಹುಜನ ಸಮಾಜಪಕ್ಷವನ್ನು ಸೇರಿಸಬಾರದು, ಬಿಎಸ್ಪಿಯನ್ನು ಸೇರಿಸಿದರೆ ನಮ್ಮ ಪಕ್ಷವು  INDIA ಮೈತ್ರಿಕೂಟವನ್ನು ತೊರೆಯಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬೆದರಿಕೆ ಹಾಕಿದ್ದಾರೆ.

ಡಿ.19ರಂದು ನಡೆದ INDIA ಸಭೆಯಲ್ಲಿ ಬಹುಜನ ಸಮಾಜ ಪಕ್ಷವನ್ನು ಒಕ್ಕೂಟಕ್ಕೆ ಸೇರಿಸುವ ಬಗ್ಗೆ ಅಖಿಲೇಶ್ ಯಾದವ್ ಆಕ್ರೋಶ ವ್ಯಕ್ತಪಡಿಸಿದ್ದು, ಹಾಜರಿದ್ದ ಹೆಚ್ಚಿನ ವಿರೋಧಪಕ್ಷದ ನಾಯಕರನ್ನು ಈ ಬೆಳವಣಿಗೆ ಅಚ್ಚರಿಗೊಳಿಸಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮಾಯಾವತಿ ಅವರನ್ನು ಒಕ್ಕೂಟಕ್ಕೆ ಸೇರಿಸುವ ಪ್ರಯತ್ನ ನಡೆಯುತ್ತಿದೆ. ಬಹುಜನ ಸಮಾಜ ಪಕ್ಷವನ್ನು ಸೇರ್ಪಡೆ ಮಾಡಿದರೆ ತಮ್ಮ ಪಕ್ಷವು ಒಕ್ಕೂಟವನ್ನು ತೊರೆಯಲಿದೆ ಎಂದು ಅಖಿಲೇಶ್ ಸಭೆಯಲ್ಲಿ ಘೋಷಿಸಿದ್ದರು. ಈವರೆಗೆ ನಡೆದ ಒಕ್ಕೂಟದ 4 ಸಭೆಗಳಲ್ಲಿ ಬಿಎಸ್‌ಪಿ ಸೇರ್ಪಡೆ ಕುರಿತು ಯಾವುದೇ ಚರ್ಚೆ ನಡೆಯದ ಕಾರಣ ಸಭೆಯಲ್ಲಿ ಉಪಸ್ಥಿತರಿದ್ದ ವಿರೋಧ ಪಕ್ಷಗಳ ಮುಖಂಡರು ಎಸ್‌ಪಿ ಮುಖ್ಯಸ್ಥರ ಹೇಳಿಕೆಯಿಂದ ಆಚ್ಚರಿಗೊಂಡಿದ್ದರು.

ಮೂಲಗಳ ಪ್ರಕಾರ ಕಾಂಗ್ರೆಸ್‌ ಉತ್ತರ ಪ್ರದೇಶದಲ್ಲಿ ಬಿಎಸ್‌ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕವಾಗಿದೆ ಎಂದು ಅಖಿಲೇಶ್ ಭಾವಿಸಿದ್ದಾರೆ ಮತ್ತು ಬಿಎಸ್ಪಿಯನ್ನು ಸೇರ್ಪಡೆಗೊಳಿಸುವ ಮೊದಲು ಅಖಿಲೇಶ್‌ ಈ ಬಗ್ಗೆ ಎಚ್ಚರಿಕೆಯನ್ನು ನೀಡಲು ಬಯಸಿದ್ದರು ಎಂದು ಹೇಳಲಾಗಿದೆ.

ಇಂಡಿಯಾ ಮೈತ್ರಿಕೂಟ ಹಾಗೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ದೂರವಿರುವ ಮಾಯಾವತಿ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿ ಜನರು ಮತ್ತು ದೇಶಕ್ಕಾಗಿ ಭವಿಷ್ಯದಲ್ಲಿ ಯಾರಿಗೆ ಯಾರ ಸಹಾಯ ಬೇಕೆಂಬುದು ಯಾರಿಗೂ ತಿಳಿದಿಲ್ಲ. ಅಖಿಲೇಶ್‌ ಯಾದವ್‌ ಅವರನ್ನು ನೇರವಾಗಿ ಗುರಿಯಾಗಿಸಿ ಮಾತನಾಡಿದ ಮಾಯಾವತಿ ಇಂತಹ ಹೇಳಿಕೆಗಳನ್ನು ನೀಡುವ ಪಕ್ಷಗಳು ನಂತರ ಮುಜುಗರಕ್ಕೊಳಗಾಗಬೇಕಾಗಬಹುದು ಎಂದು ಹೇಳಿದ್ದಾರೆ. ಅಖಿಲೇಶ್‌ ವಿರುದ್ಧ ತಕ್ಷಣ ಮಾಯಾವತಿ ತಿರುಗೇಟು ನೀಡಿರುವುದು ಅವರು ವಿಪಕ್ಷದೊಂದಿಗೆ ಹೊಂದಾಣಿಕೆಗೆ ಸಿದ್ಧ ಎಂಬುದನ್ನು ಸೂಚಿಸುತ್ತದೆ ಎಂಬುದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

2024ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟಕ್ಕೆ ಪ್ರತಿಯಾಗಿ ಪ್ರತಿಪಕ್ಷಗಳು INDIA ಮೈತ್ರಿಕೂಟವನ್ನು ರಚಿಸಿತ್ತು. INDIA ಮೈತ್ರಿಕೂಟದಲ್ಲಿ ಕಾಂಗ್ರೆಸ್‌,  ಟಿಎಂಸಿ, ಡಿಎಂಕೆ, ಆಮ್‌ ಆದ್ಮಿ ಪಾರ್ಟಿ, ಜೆಡಿಯು, ಆರ್‌ಜೆಡಿ,  ಎನ್‌ಸಿಪಿ (ಶರದ್‌ ಪವಾರ್‌), ಜೆಎಂಎಂ, ಶಿವಸೇನೆ(ಉದ್ಧವ್‌), ಎಸ್‌ಪಿ, ಆರ್‌ಎಲ್‌ಡಿ, ಅಪ್ನಾದಳ (ಕಾಮೇರವಾಡಿ), ನ್ಯಾಷನಲ್‌ ಕಾನ್ಫರೆನ್ಸ್‌, ಪಿಡಿಪಿ, ಸಿಪಿಐ (ಎಂ), ಸಿಪಿಐ, ಆರ್‌ಎಸ್‌ಪಿ,  ಎಎಫ್‌ಬಿ, ಎಂಡಿಎಂಕೆ, ವಿಸಿಕೆ, ಕೆಎಂಡಿಕೆ, ಎಂಎಂಕೆ, ಐಯುಎಂಎಲ್, ಕೇರಳ ಕಾಂಗ್ರೆಸ್‌, ಕೇರಳ ಕಾಂಗ್ರೆಸ್‌ (ಜೆ), ಸಿಪಿಐ (ಎಂ) ಎಲ್‌ ಸೇರಿ 26 ಪಕ್ಷಗಳು ಇವೆ. ಆದರೆ ಬಿಎಸ್ಪಿ ಈವೆರೆಗೆ INDIA ಮೈತ್ರಿಕೂಟ ಅಥವಾ ಎನ್‌ಡಿಎ ಮೈತ್ರಿ ಕೂಟಕ್ಕೆ ಸೇರದೆ ಸ್ವತಂತ್ರವಾಗಿ ಉಳಿದಿದೆ.

ಇದನ್ನು ಓದಿ: ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...