HomeಮುಖಪುಟINDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

INDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

- Advertisement -
- Advertisement -

INDIA ಮೈತ್ರಿಕೂಟಕ್ಕೆ ಬಹುಜನ ಸಮಾಜಪಕ್ಷವನ್ನು ಸೇರಿಸಬಾರದು, ಬಿಎಸ್ಪಿಯನ್ನು ಸೇರಿಸಿದರೆ ನಮ್ಮ ಪಕ್ಷವು  INDIA ಮೈತ್ರಿಕೂಟವನ್ನು ತೊರೆಯಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬೆದರಿಕೆ ಹಾಕಿದ್ದಾರೆ.

ಡಿ.19ರಂದು ನಡೆದ INDIA ಸಭೆಯಲ್ಲಿ ಬಹುಜನ ಸಮಾಜ ಪಕ್ಷವನ್ನು ಒಕ್ಕೂಟಕ್ಕೆ ಸೇರಿಸುವ ಬಗ್ಗೆ ಅಖಿಲೇಶ್ ಯಾದವ್ ಆಕ್ರೋಶ ವ್ಯಕ್ತಪಡಿಸಿದ್ದು, ಹಾಜರಿದ್ದ ಹೆಚ್ಚಿನ ವಿರೋಧಪಕ್ಷದ ನಾಯಕರನ್ನು ಈ ಬೆಳವಣಿಗೆ ಅಚ್ಚರಿಗೊಳಿಸಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮಾಯಾವತಿ ಅವರನ್ನು ಒಕ್ಕೂಟಕ್ಕೆ ಸೇರಿಸುವ ಪ್ರಯತ್ನ ನಡೆಯುತ್ತಿದೆ. ಬಹುಜನ ಸಮಾಜ ಪಕ್ಷವನ್ನು ಸೇರ್ಪಡೆ ಮಾಡಿದರೆ ತಮ್ಮ ಪಕ್ಷವು ಒಕ್ಕೂಟವನ್ನು ತೊರೆಯಲಿದೆ ಎಂದು ಅಖಿಲೇಶ್ ಸಭೆಯಲ್ಲಿ ಘೋಷಿಸಿದ್ದರು. ಈವರೆಗೆ ನಡೆದ ಒಕ್ಕೂಟದ 4 ಸಭೆಗಳಲ್ಲಿ ಬಿಎಸ್‌ಪಿ ಸೇರ್ಪಡೆ ಕುರಿತು ಯಾವುದೇ ಚರ್ಚೆ ನಡೆಯದ ಕಾರಣ ಸಭೆಯಲ್ಲಿ ಉಪಸ್ಥಿತರಿದ್ದ ವಿರೋಧ ಪಕ್ಷಗಳ ಮುಖಂಡರು ಎಸ್‌ಪಿ ಮುಖ್ಯಸ್ಥರ ಹೇಳಿಕೆಯಿಂದ ಆಚ್ಚರಿಗೊಂಡಿದ್ದರು.

ಮೂಲಗಳ ಪ್ರಕಾರ ಕಾಂಗ್ರೆಸ್‌ ಉತ್ತರ ಪ್ರದೇಶದಲ್ಲಿ ಬಿಎಸ್‌ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕವಾಗಿದೆ ಎಂದು ಅಖಿಲೇಶ್ ಭಾವಿಸಿದ್ದಾರೆ ಮತ್ತು ಬಿಎಸ್ಪಿಯನ್ನು ಸೇರ್ಪಡೆಗೊಳಿಸುವ ಮೊದಲು ಅಖಿಲೇಶ್‌ ಈ ಬಗ್ಗೆ ಎಚ್ಚರಿಕೆಯನ್ನು ನೀಡಲು ಬಯಸಿದ್ದರು ಎಂದು ಹೇಳಲಾಗಿದೆ.

ಇಂಡಿಯಾ ಮೈತ್ರಿಕೂಟ ಹಾಗೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ದೂರವಿರುವ ಮಾಯಾವತಿ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿ ಜನರು ಮತ್ತು ದೇಶಕ್ಕಾಗಿ ಭವಿಷ್ಯದಲ್ಲಿ ಯಾರಿಗೆ ಯಾರ ಸಹಾಯ ಬೇಕೆಂಬುದು ಯಾರಿಗೂ ತಿಳಿದಿಲ್ಲ. ಅಖಿಲೇಶ್‌ ಯಾದವ್‌ ಅವರನ್ನು ನೇರವಾಗಿ ಗುರಿಯಾಗಿಸಿ ಮಾತನಾಡಿದ ಮಾಯಾವತಿ ಇಂತಹ ಹೇಳಿಕೆಗಳನ್ನು ನೀಡುವ ಪಕ್ಷಗಳು ನಂತರ ಮುಜುಗರಕ್ಕೊಳಗಾಗಬೇಕಾಗಬಹುದು ಎಂದು ಹೇಳಿದ್ದಾರೆ. ಅಖಿಲೇಶ್‌ ವಿರುದ್ಧ ತಕ್ಷಣ ಮಾಯಾವತಿ ತಿರುಗೇಟು ನೀಡಿರುವುದು ಅವರು ವಿಪಕ್ಷದೊಂದಿಗೆ ಹೊಂದಾಣಿಕೆಗೆ ಸಿದ್ಧ ಎಂಬುದನ್ನು ಸೂಚಿಸುತ್ತದೆ ಎಂಬುದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

2024ರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟಕ್ಕೆ ಪ್ರತಿಯಾಗಿ ಪ್ರತಿಪಕ್ಷಗಳು INDIA ಮೈತ್ರಿಕೂಟವನ್ನು ರಚಿಸಿತ್ತು. INDIA ಮೈತ್ರಿಕೂಟದಲ್ಲಿ ಕಾಂಗ್ರೆಸ್‌,  ಟಿಎಂಸಿ, ಡಿಎಂಕೆ, ಆಮ್‌ ಆದ್ಮಿ ಪಾರ್ಟಿ, ಜೆಡಿಯು, ಆರ್‌ಜೆಡಿ,  ಎನ್‌ಸಿಪಿ (ಶರದ್‌ ಪವಾರ್‌), ಜೆಎಂಎಂ, ಶಿವಸೇನೆ(ಉದ್ಧವ್‌), ಎಸ್‌ಪಿ, ಆರ್‌ಎಲ್‌ಡಿ, ಅಪ್ನಾದಳ (ಕಾಮೇರವಾಡಿ), ನ್ಯಾಷನಲ್‌ ಕಾನ್ಫರೆನ್ಸ್‌, ಪಿಡಿಪಿ, ಸಿಪಿಐ (ಎಂ), ಸಿಪಿಐ, ಆರ್‌ಎಸ್‌ಪಿ,  ಎಎಫ್‌ಬಿ, ಎಂಡಿಎಂಕೆ, ವಿಸಿಕೆ, ಕೆಎಂಡಿಕೆ, ಎಂಎಂಕೆ, ಐಯುಎಂಎಲ್, ಕೇರಳ ಕಾಂಗ್ರೆಸ್‌, ಕೇರಳ ಕಾಂಗ್ರೆಸ್‌ (ಜೆ), ಸಿಪಿಐ (ಎಂ) ಎಲ್‌ ಸೇರಿ 26 ಪಕ್ಷಗಳು ಇವೆ. ಆದರೆ ಬಿಎಸ್ಪಿ ಈವೆರೆಗೆ INDIA ಮೈತ್ರಿಕೂಟ ಅಥವಾ ಎನ್‌ಡಿಎ ಮೈತ್ರಿ ಕೂಟಕ್ಕೆ ಸೇರದೆ ಸ್ವತಂತ್ರವಾಗಿ ಉಳಿದಿದೆ.

ಇದನ್ನು ಓದಿ: ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...