Homeಮುಖಪುಟಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

ಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

- Advertisement -
- Advertisement -

‘ಹಾಸ್ಯವನ್ನು ಅರ್ಥಮಾಡಿಕೊಳ್ಳದಿದ್ದರೆ, ಮಿಮಿಕ್ರಿಯನ್ನು ಮೆಚ್ಚುವ ಸುಸಂಸ್ಕೃತ ಮನಸ್ಸು ಇಲ್ಲದಿದ್ದರೆ ನಾನು ಅಸಹಾಯಕ ಎಂದು ಸಂಸತ್ತಿನ ಆವರಣದಲ್ಲಿ ತಮ್ಮ ಮಿಮಿಕ್ರಿ ಮೂಲಕ ರಾಜಕೀಯ ಬಿರುಗಾಳಿ ಎಬ್ಬಿಸಿದ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಸೆರಾಂಪೋರ್ನಲ್ಲಿ ಭಾನುವಾರ ನಡೆದ ರಾಜಕೀಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ‘ಲೋಕಸಭೆಯೊಳಗೆ ಮಿಮಿಕ್ರಿ ಮಾಡಿದ ಮೊದಲ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ. ಅವರು ಹಾಗೆ ಮಾಡಿದಾಗಲೂ ನಾವು ಮುಗುಳ್ನಕ್ಕು ಸುಮ್ಮನಾದೆವು. ನಾವು ವಿರೋಧಿಸುವ ಯಾವುದೇ ವಿನಾಯಿತಿಯನ್ನು ತೆಗೆದುಕೊಳ್ಳಲಿಲ್ಲ’ ಎಂದು ಎಂದು ಹೇಳಿದ ಅವರು, ವೇದಿಕೆ ಮೇಲೆ ಪ್ರಧಾನಿಯನ್ನು ಅನುಕರಿಸಿದರು.

ಮಿಮಿಕ್ರಿ ಒಂದು ಕಲೆ, ಯಾರಿಗಾದರೂ ಕಲೆ ಅರ್ಥವಾಗದಿದ್ದರೆ ನಾನೇನು ಮಾಡಲಿ, ಯಾರಿಗಾದರೂ ಹಾಸ್ಯ ಅರ್ಥವಾಗದಿದ್ದರೆ, ಅವರಿಗೆ ಸುಸಂಸ್ಕೃತ ಮನಸ್ಸು ಇಲ್ಲದಿದ್ದರೆ, ಯಾರೋ ನನ್ನನ್ನು ಗುರಿಯಾಗಿಸಿ ಮಾತನಾಡಿದರೆ ನಾನು ಅಸಹಾಯಕ ಎಂದು ಅವರು ಉಪರಾಷ್ಟ್ರಪತಿ ಹೆಸರನ್ನು ಹೇಳದೆ ತಮ್ಮ ನಡೆಯನ್ನು ಸಮರ್ಥಿಸಿಕೊಂಡರು. ‘ಜಗದೀಪ್ ಧನ್ಖರ್ ಅವರು ನನ್ನ ಮಿಮಿಕ್ರಿಯನ್ನು ತೀವ್ರವಾಗಿ ಗಮನಿಸಿದ್ದಾರೆ’ ಎಂದರು.

‘ನಿಮ್ಮ ಬಗ್ಗೆ ನೀವು ಏಕೆ ಯೋಚಿಸುತ್ತೀರಿ ಎಂದು ನನಗೆ ಅರ್ಥವಾಗುತ್ತಿಲ್ಲ, ಅವರು ಹಗಲಿನಿಂದ ರಾತ್ರಿವರೆಗೂ ಅಳುತ್ತಿದ್ದಾರೆ. ಅವರು ಮಗುವಿನಂತೆ ಏಕೆ ಅಳುತ್ತಿದ್ದಾರೆ’ ಎಂದ ಅವರು, ಯಾರೋ ನನ್ನನ್ನು ಕೀಟಲೆ ಮಾಡುತ್ತಿದ್ದಾರೆ ಎಂದು ತನ್ನ ತಾಯಿಗೆ ಮಗು ದೂರು ನೀಡುವ ರೀತಿ ವೇದಿಕೆ ಮೇಲೆ ನಟನೆ ಮಾಡಿದರು.

‘ತೃಣಮೂಲ ಸಂಸದರ ನಾಚಿಕೆಗೇಡಿನ ಮಿಮಿಕ್ರಿ ಕೃತ್ಯವು ನನಗೆ ನೋವು ತಂದಿದೆ ಮತ್ತು ಜಾಟ್ ಸಮುದಾಯದ ರೈತನ ಮಗನೆಂದು ಅವಮಾನಿಸಲಾಗಿದೆ ಎಂದು ಸದನದಲ್ಲಿ ಧನ್ಖರ್ ಹೇಳಿದ್ದಾರೆ. ಬ್ಯಾನರ್ಜಿ ಅವರ ಕೃತ್ಯವನ್ನು ಚಿತ್ರೀಕರಿಸಿದ್ದಕ್ಕಾಗಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ವಿರುದ್ಧವೂ ವಾಗ್ದಾಳಿ ನಡೆಸಿದ್ದರು.

ರೈತನ ಮಗನೆಂದು ಅವಮಾನಿಸಲಾಗಿದೆ ಎಂಬ ಉಪರಾಷ್ಟ್ರಪತಿ ಹೇಳಿಕೆಗೆ ತಿರುಗೇಟು ನೀಡಿದ ತೃಣಮೂಲ ಸಂಸದರು, ‘ತಾವು ಎಷ್ಟು ದಿನ ಹೊಲದಲ್ಲಿ ದುಡಿದಿದ್ದೇನೆ ಎಂಬುದನ್ನು ದೇಶದ ಜನತೆಗೆ ಹೇಳಬೇಕು ಎಂದು ಸವಾಲು ಹಾಕಿದ್ದಾರೆ. ದೇಶದ ಕೋಟ್ಯಂತರ ರೈತರು ಅವರಷ್ಟು ಆಸ್ತಿಯನ್ನು ಸಂಗ್ರಹಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಅವರು ಲೇವಡಿ ಮಾಡಿದ್ದಾರೆ.

‘ನೀವು ರೈತನ ಮಗ ಎಂದು ಹೇಳಿರುವ ನೀವು ₹20 ಲಕ್ಷ ಮೌಲ್ಯದ ಸೂಟ್ ಧರಿಸುತ್ತೀರ. ಈ ಚಳಿಯಲ್ಲಿ ಭಾರತದ ಎಷ್ಟೋ ರೈತರಿಗೆ ಕಂಬಳಿ ಕೂಡ ಕೊಡೋಕಾಗಲ್ಲ.. ಹಾಗಾಗಿ, ಅಂತಹ ಸ್ಥಿತಿಗೆ ಏರಿದ ಮೇಲೆ ಅವರ ಮನೆಗೆ ಎಷ್ಟು ಲಕ್ಷ ಕಂಬಳಿ ಕಳಿಸಿದ್ದೀರಿ. ದಯವಿಟ್ಟು ಜನರಿಗೆ ತಿಳಿಸಿ’ ಎಂದು ಬ್ಯಾನರ್ಜಿ ತರಾಟೆಗೆ ತೆಗೆದುಕೊಂಡರು.

ರೈತನ ಮಗ ಎಂದು ಹೇಳುವ ನೀವು ನಿಮ್ಮ ವಕೀಲ ವೃತ್ತಿಯಲ್ಲಿ ಎಷ್ಟು ಸಲ ರೈತರ ಪರವಾಗಿ ವಕಾಲತ್ತು ವಹಿಸಿದ್ದೀರಿ ಎಂದು ಪ್ರಶ್ನಿಸಿದರು.

ಬಿಜೆಪಿ ಸಂಸದ ಮತ್ತು ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಅವರನ್ನು ಉಪಾಧ್ಯಕ್ಷರು ಏಕೆ ಬೆಂಬಲಿಸಲಿಲ್ಲ ಎಂದು ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಬಿಜೆಪಿ ಸಂಸದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಲಿಕ್ ಮತ್ತು ಇತರ ಕುಸ್ತಿಪಟುಗಳು ಆರೋಪಿಸಿದ್ದಾರೆ. ‘ನೀವು ಒಂದು ಮಾತನ್ನೂ ಮಾತನಾಡಲಿಲ್ಲ, ಏಕೆ? ದಯವಿಟ್ಟು ಉತ್ತರಿಸಿ, ಅಂತಹ ಉನ್ನತ ಹುದ್ದೆಯಲ್ಲಿದ್ದರೂ ನಾನು, ನಾನು, ನಾನು ಮಾತ್ರ’ ಎಂದು ಕಿಡಿಕಾರಿದರು.

‘ಉಪರಾಷ್ಟ್ರಪತಿಯವರು ಪ್ರಧಾನಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದ ಬ್ಯಾನರ್ಜಿ, ‘ನೀವು ಪ್ರತಿಪಕ್ಷಗಳ ಧ್ವನಿಯನ್ನು ಉಸಿರುಗಟ್ಟಿಸಿದ್ದೀರಿ. ತದನಂತರ ನೀವು ನರೇಂದ್ರ ಮೋದಿಯನ್ನು ಈ ಶತಮಾನದ ‘ಮಹಾಪುರುಷ’ ಎಂದು ಹೇಳುತ್ತೀರಿ. ನೀವು ಅವರನ್ನು ಎಷ್ಟು ಹೊಗಳುತ್ತೀರಿ ಎಂಬುದು ಸ್ಪಷ್ಟವಾಗಿದೆ’ ಎಂದು ಟೀಕಿಸಿದರು.

ಲೋಕಸಭೆ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರಿಂದ ಹೇಳಿಕೆಗೆ ಒತ್ತಾಯಿಸಿದ ನಂತರ ‘ಅಶಿಸ್ತಿನ ವರ್ತನೆ’ಗಾಗಿ ಒಟ್ಟು 146 ಪ್ರತಿಪಕ್ಷಗಳ ಸಂಸದರನ್ನು ಉಭಯ ಸದನಗಳಿಂದ ಅಮಾನತುಗೊಳಿಸಲಾಗಿದೆ. ಸಂಸತ್ತಿನ ಆವರಣದಲ್ಲಿ ವಿರೋಧ ಪಕ್ಷದ ಸಂಸದರು ಅಮಾನತುಗೊಳಿಸಿರುವುದನ್ನು ವಿರೋಧಿಸಿ ನಡೆಸಿದ ಪ್ರತಿಭಟನೆಯ ವೇಳೆ ಮಿಮಿಕ್ರಿ ಮಾಡಿದ ಬ್ಯಾನರ್ಜಿ, ಜಗದೀಪ್ ಧನ್ಖರ್ ಅವರನ್ನು ಮಿಮಿಕ್ರಿ ಮಾಡಿದ್ದರು. ಅದನ್ನು ರಾಹುಲ್ ಗಾಂಧಿ ತಮ್ಮ ಮೊಬೈಲ್ ಫೋನಿನಲ್ಲಿ ಚಿತ್ರೀಕರಿಸಿದ್ದರು.

ಇದನ್ನೂ ಓದಿ; ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...