Homeಕರ್ನಾಟಕಅಕ್ರಮವಾಗಿ ಮರ ಕಡಿದು ಸಾಗಾಟ: ಸಂಸದ ಪ್ರತಾಪ್ ಸಿಂಹ ಸಹೋದರನ ವಿರುದ್ಧ ಎಫ್ಐಆರ್ ದಾಖಲು

ಅಕ್ರಮವಾಗಿ ಮರ ಕಡಿದು ಸಾಗಾಟ: ಸಂಸದ ಪ್ರತಾಪ್ ಸಿಂಹ ಸಹೋದರನ ವಿರುದ್ಧ ಎಫ್ಐಆರ್ ದಾಖಲು

- Advertisement -
- Advertisement -

ಸಂಸತ್ತಿನ ಭದ್ರತೆ ಉಲ್ಲಂಘಿಸಿದವರಿಗೆ ಪಾಸ್ ನೀಡಿದ ಆರೋಪದಲ್ಲಿ ಸಿಲುಕಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಸರ್ಕಾರಿ ಜಾಗದಲ್ಲಿದ್ದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ಅವರ ಸಹೋದರ ವಿಕ್ರಮ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿ ಗ್ರಾಮದಲ್ಲಿ ನೂರಾರು ಮರಗಳನ್ನು ಅನಧಿಕೃತವಾಗಿ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಮ್ ವಿರುದ್ಧ ದೂರು ದಾಖಲಾಗಿದ್ದು, ಬೇಲೂರು ತಹಶೀಲ್ದಾರ್ ಮಮತಾ ಅವರು ಗ್ರಾಮಕ್ಕೆ ತೆರಳಿ ನಡೆಸಿದ ರಹಸ್ಯ ಕಾರ್ಯಾಚರಣೆ ವೇಳೆ ಸರ್ಕಾರಿ ಜಮೀನಿನಲ್ಲಿ ನಡೆದ ಕೃತ್ಯ ಬೆಳಕಿಗೆ ಬಂದಿದೆ.

ಸಂಬಂಧಪಟ್ಟ ಅಧಿಕಾರಿಗಳ ಅನುಮತಿಯಿಲ್ಲದೆ ಬೆಲೆಬಾಳುವ ನೂರಾರು ಮರಗಳನ್ನು ಕಡಿದು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬಿಜೆಪಿ ಸಂಸದರ ಸಹೋದರನ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.
ಘಟನೆ ಕುರಿತು ವಿವರವಾದ ತನಿಖೆ ನಡೆಸುವಂತೆ ಆದೇಶಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ‘ಆರೋಪಿಯ ರಾಜಕೀಯ ಪ್ರಭಾವ ಲೆಕ್ಕಿಸದೆ ಕಾನೂನಿನ ಪ್ರಕಾರ ತ್ವರಿತ ಕ್ರಮ ಕೈಗೊಳ್ಳುವುದಾಗಿ’ ಅವರು ಭರವಸೆ ನೀಡಿದ್ದಾರೆ. ಆದರೆ, ಎಫ್ಐಆರ್ ದಾಖಲಾಗಿ 10 ದಿನ ಕಳೆದರೂ ಇವರೆಗೂ ವಿಕ್ರಮ್‌ನನ್ನು ಬಂಧಿಸಿಲ್ಲ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಕಾಫಿ ಮತ್ತು ಶುಂಠಿ ಕೃಷಿ ಮಾಡುತ್ತಿದ್ದಾರೆ. ತಮ್ಮ 5 ಎಕರೆ ಸೇರಿದಂತೆ ಸರ್ಕಾರದ 12 ಎಕರೆ ಜಮೀನಿನಲ್ಲಿದ್ದ ನೂರಾರು ನಿಗದಿತ ಮರಗಳನ್ನು ಅನಧಿಕೃತವಾಗಿ ಕಡಿದು ಕಳ್ಳಸಾಗಾಣೆ ಮಾಡುವಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿದೆ.

ಅರಣ್ಯ ಅಧಿಕಾರಿಗಳಿಂದ ಅಗತ್ಯ ಅನುಮತಿಗಳ ಪಡೆದುಕೊಳ್ಳದೆ ಇರುವುದರಿಂದ, ಈ ಘಟನೆಯು ಪರಿಸರ ಸಂರಕ್ಷಣೆ ಮತ್ತು ಕಾನೂನು ಕಾರ್ಯವಿಧಾನಗಳ ಅನುಸರಣೆಯ ಉಲ್ಲಂಘನೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಬೆಲೆಬಾಳುವ ಮರಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆಯದೆ ಕಡಿದು ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.

ಮರ ಕಡಿದಿರುವ 4 ಎಕರೆ ಜಮೀನನ್ನು ಬೇಲೂರು ತಾಲೂಕಿನ ಇಬ್ಬರು ವ್ಯಕ್ತಿಗಳಿಗೆ ಮಂಜೂರು ಮಾಡುವ ಪ್ರಕ್ರಿಯೆಯಲ್ಲಿ ಸರ್ಕಾರ ಮುಂದಾಗಿದ್ದು, ಆ ಜಮೀನಿನಲ್ಲಿ ಶುಂಠಿ ಕೃಷಿ ಮಾಡಲು ವಿಕ್ರಮ ಸಿಂಹ ಇಬ್ಬರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎನ್ನಲಾಗಿದೆ.

ಖಾಸಗಿ ಮಾಧ್ಯಮವೊಂದರ ಜತೆ ಮಾತನಾಡಿರುವ ಬೇಲೂರು ತಹಶೀಲ್ದಾರ್ ಮಮತಾ, ‘ವಿಕ್ರಮ್ ಸಿಂಹ ಎಂಬ ವ್ಯಕ್ತಿ ಕಳ್ಳಸಾಗಣೆ ಮಾಡುವ ಉದ್ದೇಶದಿಂದ ಐದು ಎಕರೆಗೂ ಹೆಚ್ಚು ಸರ್ಕಾರಿ ಭೂಮಿಯಲ್ಲಿ ನೂರಾರು ಮರಗಳನ್ನು ಕಡಿದು ಹಾಕಿರುವುದು ನಿಜ. ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂಬಂಧಿತ ಅಧಿಕಾರಿಗಳ ಅನುಮತಿಯಿಲ್ಲದೆ ಸರ್ಕಾರಿ ಭೂಮಿಯಲ್ಲಿ ಈ ಮರಗಳನ್ನು ಕಡಿಯಲು ಯಾರಿಗೂ ಅವಕಾಶವಿಲ್ಲ, ಏಕೆಂದರೆ ಇವುಗಳು ನಿಗದಿತ ಮರಗಳು – ಸರ್ಕಾರದ ಆಸ್ತಿ. ತನಿಖೆ ಪ್ರಾರಂಭಿಸಲಾಗಿದೆ; ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ನಾವು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿಲ್ಲ’ ಎಂದು ಹೇಳಿದ್ದಾರೆ.

ತನಿಖೆಗೆ ಆದೇಶಿಸಿದ ಅರಣ್ಯ ಸಚಿವ ಖಂಡ್ರೆ:

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದ್ದಾರೆ. ‘ನಾನು ಹಾಸನ ಸಿಸಿಎಫ್‌ನಿಂದ ಘಟನೆಯ ಬಗ್ಗೆ ವಿವರಗಳನ್ನು ಕೇಳಿದ್ದೇನೆ. ಪ್ರಾಥಮಿಕ ವರದಿಗಳ ಪ್ರಕಾರ, ನೂರಾರು ನಿಗದಿತ ಮರಗಳನ್ನು ಅಕ್ರಮವಾಗಿ ಕಡಿದುಹಾಕಿದ್ದಕ್ಕಾಗಿ ವಿಕ್ರಮ್ ಸಿಂಹ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ಮರಗಳನ್ನು ಕಡಿದು ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪವೂ ಇದೆ. ಯಾರೂ ಕಾನೂನಿಗಿಂತ ಮೇಲಲ್ಲ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆರೋಪಿಯ ರಾಜಕೀಯ ಸಂಬಂಧಗಳು ಏನೇ ಇರಲಿ ನಾವು ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

ಆರೋಪಿ ವಿಕ್ರಮಸಿಂಹ ಅವರು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ಎಂಬುದು ನಿಮಗೆ ತಿಳಿದಿದೆಯೇ ಎಂದು ಚಿತ್ರದುರ್ಗದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಆರೋಪಿ ಬಿಜೆಪಿ ಸಂಸದರ ಸಹೋದರ ಎಂದು ನನಗೆ ತಿಳಿದಿರಲಿಲ್ಲ. ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅನುಮತಿಯಿಲ್ಲದೆ ನೂರಾರು ಮರಗಳನ್ನು ಕಡಿಯುವುದು ಸ್ಪಷ್ಟವಾಗಿ ಕಾನೂನಿನ ಉಲ್ಲಂಘನೆಯಾಗಿದೆ’ ಎಂದರು.

ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ವಾಗ್ದಾಳಿ:

ಅಕ್ರಮಮವಾಗಿ ಮರ ಕಡಿದು ಸಾಗಾಣೆ ಮಾಡಿರುವ ಬಗ್ಗೆ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯ ಕಾಂಗ್ರೆಸ್, ಅಣ್ಣ ಪ್ರತಾಪ್ ಸಿಂಹ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ’ ಎಂದು ಟೀಕಿಸಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ‘ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ. ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದು ಈ ಬಗ್ಗೆ ಸಚಿವ ಈಶ್ವರ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆ. ಡಿಯರ್ ಬಿಜೆಪಿ, ನಿಮ್ಮ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ’ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ; ಮಿಮಿಕ್ರಿ ಒಂದು ಕಲೆ; ಅದನ್ನು ಮೆಚ್ಚುವ ಮನಸ್ಸು ಇಲ್ಲದಿದ್ದರೆ ನಾನೇನು ಮಾಡಲಿ: ಕಲ್ಯಾಣ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...