Homeಮುಖಪುಟಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು 'ಆಧಾರ ರಹಿತ' ಎಂದ ಇರಾನ್‌

ಡ್ರೋನ್‌ ದಾಳಿ: ಅಮೆರಿಕದ ಆರೋಪವನ್ನು ‘ಆಧಾರ ರಹಿತ’ ಎಂದ ಇರಾನ್‌

- Advertisement -
- Advertisement -

ಗುಜರಾತ್ ಪೋರಬಂದರ್‌ ಕರವಾಳಿಯ ಹಿಂದೂ ಮಹಾಸಾಗರದಲ್ಲಿ ರಾಸಾಯನಿಕ ಟ್ಯಾಂಕರ್ ಮೇಲೆ ಇರಾನ್‌ ಡ್ರೋನ್‌ ದಾಳಿ ನಡೆಸಿದೆ ಎಂಬ ಯುಎಸ್ ಹೇಳಿಕೆಯನ್ನು ಇರಾನ್ ತಿರಸ್ಕರಿಸಿದ್ದು, ಆಧಾರ ರಹಿತ ಆರೋಪ ಎಂದು ಹೇಳಿದೆ.

ದಾಳಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಇರಾನ್‌ನ ವಿದೇಶಾಂಗ ಸಚಿವಾಲಯದ ವಕ್ತಾರರು, ಅಮೆರಿಕದ ಆರೋಪ ಆಧಾರ ರಹಿತವಾಗಿದೆ. ಇರಾನ್‌ನಿಂದ ಉಡಾವಣೆಯಾದ ಡ್ರೋನ್ ಹಿಂದೂ ಮಹಾಸಾಗರದಲ್ಲಿ ಹಡಗಿನ ಮೇಲೆ ದಾಳಿ ನಡೆಸಿದೆ ಎಂದು ಅಮೆರಿಕ ಹೇಳಿದ ಒಂದು ದಿನದ ನಂತರ ಈ ಪ್ರತಿಕ್ರಿಯೆ ಹೊರಬಿದ್ದಿದೆ.

ಲೈಬೀರಿಯಾ-ಧ್ವಜವನ್ನು ಹೊಂದಿದ್ದ ಜಪಾನೀಸ್ ಒಡೆತನದ ಮತ್ತು ನೆದರ್ಲ್ಯಾಂಡ್ಸ್-ಚಾಲಿತ ರಾಸಾಯನಿಕ ಟ್ಯಾಂಕರ್ ಮೋಟಾರು ನೌಕೆ CHEM PLUTO ಮೇಲೆ ಹಿಂದೂ ಮಹಾಸಾಗರದಲ್ಲಿ ಭಾರತದ ಕರಾವಳಿಯಿಂದ 200 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಶನಿವಾರ ಬೆಳಿಗ್ಗೆ ಡ್ರೋನ್‌ ಅಪ್ಪಳಿಸಿದೆ. ಇರಾನ್‌ ಡ್ರೋನ್‌ನ್ನು ದಾಳಿ ಮಾಡಿದೆ ಎಂದು ಅಮೆರಿಕ ಆರೋಪಿಸಿತ್ತು. 2021ರಿಂದ ವಾಣಿಜ್ಯ ಹಡಗುಗಳ ಮೇಲೆ ಇರಾನ್‌ ನಡೆಸುತ್ತಿರುವ 7ನೇ ದಾಳಿ ಇದು ಎಂದು ಅಮೆರಿಕ ಆರೋಪಿಸಿತ್ತು.

ದಾಳಿಯ ಪರಿಣಾಮವಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಟ್ಯಾಂಕರ್‌ಗೆ ಸ್ವಲ್ಪ  ಬೆಂಕಿ ಕಾಣಿಸಿಕೊಂಡಿದೆ. 20 ಭಾರತೀಯ ಮತ್ತು ಒಬ್ಬ ವಿಯೆಟ್ನಾಂ ಸಿಬ್ಬಂದಿಯನ್ನು ಹೊಂದಿರುವ ಹಡಗು ಡಿಸೆಂಬರ್ 19 ರಂದು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಹೊರಟು ಡಿ.25 ರಂದು ಮಂಗಳೂರು ಬಂದರನ್ನು ತಲುಪುವ ನಿರೀಕ್ಷೆಯಿತ್ತು.

ಇರಾನ್ ಸರ್ಕಾರ ಮತ್ತು ಯೆಮನ್‌ನಲ್ಲಿರುವ ಅದರ ಮಿತ್ರ ಪಡೆಗಳು ಗಾಝಾದ ಮೇಲೆ ಇಸ್ರೇಲ್‌ ಸರ್ಕಾರ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ಬಲವಾಗಿ ವಿರೋಧಿಸುತ್ತಿದೆ. ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚುವುದಾಗಿ ಬೆದರಿಸಿತ್ತು. ಇದರ ಬೆನ್ನಲ್ಲೇ  ಇರಾನ್‌ ವಿರುದ್ಧ ಅಮೆರಿಕ ಡ್ರೋನ್‌ ದಾಳಿಯ ಆರೋಪವನ್ನು ಮಾಡಿತ್ತು.

ಭಾರತೀಯ ಕೋಸ್ಟ್ ಗಾರ್ಡ್ ಹಡಗು ಐಸಿಜಿಎಸ್ ವಿಕ್ರಮ್, ಡ್ರೋನ್ ದಾಳಿಯಿಂದ ಬೆಂಕಿ ಕಾಣಿಸಿಕೊಂಡ ಎಂವಿ CHEM PLUTO ಹಡಗಿನ ರಕ್ಷಣೆಗೆ ತೆರಳಿದೆ. ಪೋರಬಂದರ್ ಕರಾವಳಿಯಿಂದ 217 ನಾಟಿಕಲ್ ಮೈಲಿ ದೂರದಲ್ಲಿರುವ ಅರಬ್ಬಿ ಸಮುದ್ರದಲ್ಲಿ ಘಟನೆ ನಡೆದಿದೆ ಎಂದು ಭಾರತೀಯ ರಕ್ಷಣಾ ಅಧಿಕಾರಿಗಳು ತಿಳಿಸಿದ್ದರು. ನಾವು ಸ್ವೀಕರಿಸಿದ ಮಾಹಿತಿ ಪ್ರಕಾರ ಹಡಗಿನಲ್ಲಿ ಬೆಂಕಿಯನ್ನು ನಂದಿಸಲಾಗಿದೆ ಆದರೆ ಬೆಂಕಿಯು ಹಡಗಿನ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದೆ. ಹಡಗಿನಲ್ಲಿದ್ದ ಸುಮಾರು 20 ಭಾರತೀಯರನ್ನು ಒಳಗೊಂಡಂತೆ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದರು.

ಇದನ್ನು ಓದಿ: ಗಾಝಾ ನಾಗರಿಕರಿಗೆ ಕುಡಿಯಲು ನೀರು ಸಿಗದಂತೆ ಮಾಡುತ್ತಿರುವ ಇಸ್ರೇಲ್!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...