Homeಮುಖಪುಟಸಂಸದರ ಸಾಮೂಹಿಕ ಅಮಾನತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ; ಧನ್ಖರ್‌ಗೆ ಪತ್ರ ಬರೆದ ಖರ್ಗೆ

ಸಂಸದರ ಸಾಮೂಹಿಕ ಅಮಾನತು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ; ಧನ್ಖರ್‌ಗೆ ಪತ್ರ ಬರೆದ ಖರ್ಗೆ

- Advertisement -
- Advertisement -

ಲೋಕಸಭೆ ಭದ್ರತೆ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ತರ ನೀಡುವಂತೆ ಪ್ರತಿಪಕ್ಷಗಳು ನಡೆಸಿದ ಗದ್ದಲ ಕಾರಣಕ್ಕೆ, ರಾಜ್ಯಸಭೆಯಿಂದ ಸದಸ್ಯರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ವಿಷಯದ ಕುರಿತು ಚರ್ಚಿಸಲು ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಖರ್ ಅವರು ಇಂದು (ಡಿಸೆಂಬರ್ 25) ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದಾರೆ.

‘ಭೇಟಿ ಮಾಡಲು ಸಾಧ್ಯವಾಗುವುದಿಲ್ಲ’ ಎಂದು ಪತ್ರ ಬರೆದಿರುವ ಖರ್ಗೆ, ಭೇಟಿಯಾಗದಿರಲು ಕಾರಣ ವಿವರಿಸಿ ಪತ್ರ ಬರೆದಿದ್ದಾರೆ. ಸದ್ಯ ದೆಹಲಿಯಿಂದ ಹೊರಗಿರುವ ಕಾರಣ ಇಂದು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ, ದೆಹಲಿಗೆ ಮರಳಿದ ತಕ್ಷಣ ಭೇಟಿ ಮಾಡುವುದಾಗಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಲೋಕಸಭೆ ಭದ್ರತೆ ಉಲ್ಲಂಘನೆಯ ಗದ್ದಲದಲ್ಲೆ ಸಂಸತ್ತಿನ ಚಳಿಗಾಲದ ಅಧಿವೇಶನ ಮುಗಿದ ಒಂದು ದಿನದ ನಂತರ, ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರಿಗೆ ಪತ್ರ ಬರೆದು, ‘ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತುಗೊಳಿಸಿರುವುದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಹಾನಿಕಾರಕ. ರಚನಾತ್ಮಕವಾಗಿ ಸಮಸ್ಯೆಗಳನ್ನು ಪರಿಹರಿಸಲು ಉಪಾಧ್ಯಕ್ಷರನ್ನು ಭೇಟಿ ಮಾಡಲು ಸಿದ್ಧ’ ಎಂದು ಹೇಳಿದ್ದಾರೆ.

‘ಸಂಸತ್ತಿನ ಭದ್ರತೆಯ ಉಲ್ಲಂಘನೆಯ ತುರ್ತು ಸಮಸ್ಯೆಯನ್ನು ಪರಿಹರಿಸಲು ರಾಜ್ಯಸಭೆ ನಿಯಮಗಳು ಮತ್ತು ಕಾರ್ಯವಿಧಾನದ ಸಂಬಂಧಿತ ನಿಯಮಗಳ ಅಡಿಯಲ್ಲಿ ಅನೇಕ ಸೂಚನೆಗಳನ್ನು ಸಲ್ಲಿಸಲಾಗಿದೆ ಎಂದು ನಾನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಮುಕ್ತ ಚರ್ಚೆ ಮತ್ತು ಸಂವಾದಕ್ಕೆ ನನ್ನ ಬದ್ಧತೆಯನ್ನು ಪುನರುಚ್ಚರಿಸಲು ನಾನು ಬಯಸುತ್ತೇನೆ. ಇವುಗಳನ್ನು ಪರಿಹರಿಸಲು ಮುಂದಿನ ದಿನಗಳಲ್ಲಿ ಪರಸ್ಪರ ಅನುಕೂಲಕರ ದಿನಾಂಕ ಮತ್ತು ಸಮಯದಲ್ಲಿ ನಿಮ್ಮೊಂದಿಗೆ ಸಭೆ ನಡೆಸಲು ನಾನು ಸಿದ್ಧನಿದ್ದೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಅಧ್ಯಕ್ಷರು ಸದನದ ಪಾಲಕರಾಗಿದ್ದು, ನೀವು ಸದನದ ಘನತೆಯನ್ನು ಎತ್ತಿಹಿಡಿಯಲು, ಸಂಸದೀಯ ಸವಲತ್ತುಗಳನ್ನು ರಕ್ಷಿಸಲು, ಚರ್ಚೆಗಳು ಮತ್ತು ಉತ್ತರಗಳ ಮೂಲಕ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಜನರ ಹಕ್ಕನ್ನು ರಕ್ಷಿಸಲು ಮುಂಚೂಣಿಯಲ್ಲಿರಬೇಕು. ಚರ್ಚೆಯಿಲ್ಲದೆ ಮತ್ತು ಸರ್ಕಾರದಿಂದ ಉತ್ತರದಾಯಿತ್ವವನ್ನು ಕೇಳದೆ ಪೀಠಾಧಿಪತಿಗಳು ವಿಧೇಯಕಗಳನ್ನು ಅಂಗೀಕರಿಸಲು ನಿರ್ಣಯಿಸಿದಾಗ ಅದು ಸಂಕಟವನ್ನುಂಟುಮಾಡುತ್ತದೆ’ ಎಂದು ಹೇಳಿದ್ದಾರೆ.

ಸದಸ್ಯರ ಅಮಾನತು ನಿರ್ಧಾರದ ಮೂಲಕ 146 ಸಂಸದರ ಧ್ವನಿಯನ್ನು ಸರ್ಕಾರ ಅಡಗಿಸುತ್ತಿದೆ. ಡಿಸೆಂಬರ್ 14 ರಂದು ನಡೆದ ಭದ್ರತಾ ಲೋಪ ಘಟನೆ ಬಗ್ಗೆ ಸಂಸದರ ಅಮಾನತುಗೊಳಿಸುವುದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಪ್ರತಿಕ್ರಿಯೆ ಕೇಳಲಾಗಿತ್ತು. ಆದರೆ, ಸದನದಲ್ಲಿ ಸಚಿವರು ಹೇಳಿಕೆಯನ್ನು ನೀಡಲಿಲ್ಲ. ಬದಲಿಗೆ ಅವರು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು. ಅವರು ಪ್ರಜಾಪ್ರಭುತ್ವ ಮಂದಿರವನ್ನು ಅಪಹಾಸ್ಯ ಮಾಡಿರುವುದು ವಿಷಾದನೀಯವಾದದ್ದು’ ಎಂದು ಹೇಳಿದ್ದಾರೆ.

‘ರಾಜ್ಯಸಭೆಗೆ ಗೃಹ ಸಚಿವರು ಹಾಜರಾಗುವುದಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ವಿಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗುವುದು ಎಂದು ಕೇಂದ್ರ ಸಚಿವರೊಬ್ಬರು ವಿರೋಧ ಪಕ್ಷದ ನಾಯಕರಿಗೆ ಮೊದಲೆ ತಿಳಿಸಿದ್ದರು. ಇಂತಹ ಬೆದರಿಕೆಗಳ ಕುರಿತು ಸಭಾಧ್ಯಕ್ಷಕರು ಪರಿಶೀಲಿಸಬೇಕೆಂದು ನಾವು ಬಯಸುತ್ತೇವೆ’ ಎಂದು ಮನವಿ ಮಾಡಿದ್ದಾರೆ.

‘ದೇಶದ ಗಡಿಯಲ್ಲಿ ಚೀನಾ ಅತಿಕ್ರಮಣ, ಮಣಿಪುರದಲ್ಲಿ ಅಶಾಂತಿ ಸೇರಿದಂತೆ ಹಲವು ಗಂಭೀರ ವಿಚಾರಗಳ ಕುರಿತ ಚರ್ಚೆಯಿಂದ ಸರ್ಕಾರ ನುಣುಚಿಕೊಂಡಿರುವುದನ್ನು ಸಭಾಧ್ಯಕ್ಷರು ಗಮನಿಸಬೇಕು. ನೀವು ಸದನದ ಕಾವಲುಗಾರರಾಗಿದ್ದು, ಸದನದ ಘನತೆ ಕಾಪಾಡಬೇಕು, ಸಂಸದೀಯ ಸವಲತ್ತುಗಳನ್ನು ಕಾಪಾಡಬೇಕು. ಸಂಸತ್ತಿನಲ್ಲಿ ಕಲಾಪ, ಚರ್ಚೆ ಮತ್ತು ಉತ್ತರದ ಮೂಲಕ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವ ಹಕ್ಕು ಜನರಿಗಿದೆ’ ಎಂದು ಖರ್ಗೆ ಪ್ರತಿಪಾದಿಸಿದ್ದಾರೆ.

ಸಂಸತ್ತಿನ ಘನತೆ ರಕ್ಷಿಸುವಲ್ಲಿ ತಾವು ಮುಂಚೂಣಿಯಲ್ಲಿರಬೇಕು. ಆದರೆ, ಚರ್ಚೆಯಿಲ್ಲದೆ ಮಸೂದೆಗಳನ್ನು ಅಂಗೀಕರಿಸಿದ್ದಕ್ಕಾಗಿ ಮತ್ತು ಸರ್ಕಾರದಿಂದ ಉತ್ತರದಾಯಿತ್ವವನ್ನು ಕೇಳದಿದ್ದಕ್ಕಾಗಿ ಸಭಾಧ್ಯಕ್ಷ ಮೇಲೆ ಅಸಮಾಧಾನವಿದೆ. ಸದನದಲ್ಲಿ ಕಲಾಪ ಮುಂದುವರೆಯಬೇಕೆಂಬ ಸಭಾಧ್ಯಕ್ಷ ಮಾತನ್ನು ನಾನು ಒಪ್ಪುತ್ತೇನೆ. ಆದರೆ, ಸದನದಲ್ಲಿ ಚರ್ಚೆ ನಡೆಸಲು ಸರ್ಕಾರ ಉತ್ಸುಕವಾಗಿರದಿದ್ದರೆ, ಚರ್ಚೆಗಳಿಗೆ ಉತ್ತರ ಸಿಗುವುದಿಲ್ಲ ಎಂದು’ ಕಾಂಗ್ರೆಸ್ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; INDIA ಮೈತ್ರಿಕೂಟಕ್ಕೆ BSP? ಒಕ್ಕೂಟ ತ್ಯಜಿಸುವ ಬೆದರಿಕೆ ಹಾಕಿದ ಅಖಿಲೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...