Homeಅಂಕಣಗಳು2019ರ ಚುನಾವಣೆ: ಜವಾನ್ ಔರ್ ಕಿಸಾನ್

2019ರ ಚುನಾವಣೆ: ಜವಾನ್ ಔರ್ ಕಿಸಾನ್

- Advertisement -
- Advertisement -

2014ರ ಲೋಕಸಭಾ ಚುನಾವಣೆ ನಡೆದಾಗ ಬಿಜೆಪಿಯು ರೈತರ ಆದಾಯ ದ್ವಿಗುಣ ಮಾಡುವುದಾಗಿಯೂ, ರೈತರ ಎಲ್ಲಾ ಬೆಳೆಗಳಿಗೂ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಬೆಲೆ ಸಿಗುವಂತೆ ಮಾಡುವುದಾಗಿಯೂ ಹೇಳಿತ್ತು. ಆದರೆ, ಆ ಚುನಾವಣೆಯು ಗ್ರಾಮೀಣ ಭಾಗದ ಇಶ್ಯೂಗಳನ್ನು ಕೇಂದ್ರವಾಗಿಟ್ಟುಕೊಂಡು ನಡೆಯಲಿಲ್ಲ. ಯುಪಿಎ ಭ್ರಷ್ಟಾಚಾರ, 10 ವರ್ಷಗಳ ಆಡಳಿತ ವಿರೋಧಿ ಅಲೆ, ಕಪ್ಪುಹಣ, ಹೊಸ ಪರ್ಯಾಯ, ಮೋದಿ ಮಾದರಿ ಮತ್ತು ಗುಜರಾತ್ ಮಾದರಿ, ಅಭಿವೃದ್ಧಿ, ಕೋಮು ಧ್ರುವೀಕರಣ ಹೀಗೆ ಹತ್ತು ಹಲವು ಅಂಶಗಳನ್ನೊಳಗೊಂಡ ಒಂದು ಪ್ಯಾಕೇಜ್‍ಅನ್ನು ಬಿಜೆಪಿಯು ಮುಂದಿಟ್ಟಿತ್ತು. ಮಾಧ್ಯಮಗಳು ಮತ್ತು ಹಣದ ಬಲದೊಂದಿಗೆ ಅತ್ಯಂತ ಚಾಣಾಕ್ಷತೆ ಮತ್ತು ಕಠಿಣ ಶ್ರಮದ ಮೂಲಕ ಅದನ್ನು ಜನರ ಮುಂದಿಟ್ಟು ಸೃಷ್ಟಿಸಿದ ಅಲೆಯು, ಬಿಜೆಪಿಗೆ ಸ್ವಂತ ಬಲದ ಮೇಲೆ ಅಧಿಕಾರ ಪಡೆದುಕೊಳ್ಳುವಷ್ಟು ಜೋರಾಗಿ ಬೀಸಿತ್ತು. ಆದರೆ, 2019ರ ಚುನಾವಣೆಯು ಹಾಗಿರುವುದಿಲ್ಲವೆಂದು ಭಾವಿಸಲು ಕಾರಣಗಳಿವೆ.
2004ರಲ್ಲಿ ವಾಜಪೇಯಿಯವರ ನೇತೃತ್ವದಲ್ಲಿ ‘ಭಾರತ ಪ್ರಕಾಶಿಸುತ್ತಿದೆ’ ಎಂಬ ಘೋಷಣೆಯಡಿ ಚುನಾವಣೆಗೆ ಹೊರಟಾಗ, ಜನರಲ್ಲಿ ‘ಫೀಲ್ ಗುಡ್ ಫ್ಯಾಕ್ಟರ್ (ಎಲ್ಲಾ ಚೆನ್ನಾಗಿದೆ ಎಂಬ ಭಾವನೆ)’ ಇದೆ ಎಂಬ ತಪ್ಪು ಲೆಕ್ಕಾಚಾರ ಮಾಡಲಾಗಿತ್ತು. ಗ್ರಾಮೀಣ ಭಾರತವು ಆಗ ತತ್ತರಿಸಿತ್ತು. ಹೀಗಾಗಿ ಎಲ್ಲರ ನಿರೀಕ್ಷೆಗೆ ವಿರುದ್ಧವಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ-1 ಅಧಿಕಾರಕ್ಕೆ ಬಂದಿತ್ತು. 2009ಕ್ಕೆ ಮತ್ತೆ ಚುನಾವಣೆಗೆ ಹೊರಟಾಗ ಕಾಂಗ್ರೆಸ್ ಮತ್ತು ಯುಪಿಎಗೆ ಕಡಿಮೆ ಸೀಟು ಬರುತ್ತದೆಂದು ಭಾವಿಸಲಾಗಿತ್ತು. ಆರ್‍ಜೆಡಿಯಂತಹ ಕೆಲವು ಪಕ್ಷಗಳು ಚುನಾವಣೆಗೆ ಸ್ವಲ್ಪ ಮುಂಚೆ ಯುಪಿಎ ತೊರೆದಿದ್ದವು. ಆದರೆ, ಚುನಾವಣೆಗೆ ಮುಂಚೆ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಅತೀ ದೊಡ್ಡ ರೈತರ ಸಾಲಮನ್ನಾ ಮಾಡಿತು. ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಂಡಿತಲ್ಲದೇ, ಹೆಚ್ಚು ಕಷ್ಟವಿಲ್ಲದೇ ಯುಪಿಎ-2ರ ಮುಖಾಂತರ ಮತ್ತೆ ಅಧಿಕಾರ ಹಿಡಿಯಿತು.
ಹಾಗಾದರೆ 2014ರಲ್ಲಿ ಗ್ರಾಮೀಣ ಭಾರತವು ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಪಾತ್ರ ಕಳೆದುಕೊಂಡಿತೇ? ಹಾಗೆ ಹೇಳಲು ಯಾವ ಕಾರಣವೂ ಇಲ್ಲ. ಈ ಮಧ್ಯೆ ಹೆಚ್ಚಾದ ಕೃಷಿ ಬಿಕ್ಕಟ್ಟಿಗೆ ಯುಪಿಎ ಸಹಾ ಯಾವ ವಿಶೇಷ ಕ್ರಮವನ್ನೂ ತೆಗೆದುಕೊಂಡಿರಲಿಲ್ಲ. ನರೇಗಾದಂತಹ ಕ್ರಮಗಳು ಈ ಬಿಕ್ಕಟ್ಟನ್ನು ಮರೆಮಾಚುವಷ್ಟು ಸಮರ್ಥವೂ ಆಗಿರಲಿಲ್ಲ; ಇದ್ದಷ್ಟು ಪ್ರಮಾಣದಲ್ಲಿ ಜಾರಿಯೂ ಆಗಲಿಲ್ಲ. ಇದರಾಚೆಗೂ ಯುಪಿಎ ಸರ್ಕಾರದ ತಂದಿದ್ದ ಕೆಲವು ಕ್ರಮಗಳ ಜನಪರತೆಯನ್ನು ಜನರ ಮುಂದಿಡುವಷ್ಟು ಸಾಮಥ್ರ್ಯ ಕಾಂಗ್ರೆಸ್ಸಿನ ಪ್ರಚಾರ ಯಂತ್ರಾಂಗಕ್ಕೆ ಅಂದೂ ಇರಲಿಲ್ಲ; ಇಂದೂ ಇಲ್ಲ. ಯುಪಿಎ ತಂದಿದ್ದ ಭೂಸ್ವಾಧೀನ ಕಾಯ್ದೆ ಎಷ್ಟು ಜನಪರ ಎಂದು ಗೊತ್ತಾದದ್ದು, ಮೋದಿ ಸರ್ಕಾರ ಬಂದ ಮೇಲೆ ಅದನ್ನು ತಿದ್ದಲು ಯತ್ನಿಸಿದಾಗಲೇ!
2016ರ ಡಿಸೆಂಬರ್‍ನಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಗುಜರಾತ್‍ನ ಗ್ರಾಮೀಣ ಭಾಗ ಮತ್ತು ನಗರ ಭಾಗಗಳು ಭಿನ್ನ ರೀತಿಯಲ್ಲಿ ಮತ ಚಲಾಯಿಸಿದವು ಎಂಬುದನ್ನು ಎಲ್ಲರೂ ಗುರುತಿಸಿದ್ದಾರೆ. ಇದಕ್ಕೆ ಕಾರಣವಿಲ್ಲದಿಲ್ಲ. ಯಾವ ಕಛ್ ಮತ್ತು ಸೌರಾಷ್ಟ್ರದ ಹೆಸರೇಳಿ ನರ್ಮದಾ ನದಿಗೆ ಒಂದಾದ ಮೇಲೆ ಒಂದರಂತೆ ಅಣೆಕಟ್ಟುಗಳನ್ನು ಕಟ್ಟಲಾಯಿತೋ, ಅಲ್ಲಿಗೆ ನೀರೂ ಹೋಗಿರಲಿಲ್ಲ; ಅವರ ಬವಣೆಯೂ ತೀರಿರಲಿಲ್ಲ. ಇಂತಹ ಹಲವು ಕಾರಣಗಳಿಂದ ಅಲ್ಲಿನ ಗ್ರಾಮೀಣ ಭಾಗ ಆಡಳಿತ ಪಕ್ಷದ ವಿರುದ್ಧ ಮತ ಚಲಾಯಿಸಿತು.
ಮುಂದಿನ ಚುನಾವಣೆಗಳಿರುವುದು ಛತ್ತೀಸ್‍ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ. ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಮಹಾರಾಷ್ಟ್ರಗಳು ಸೇರಿದಂತೆ ಇವಿಷ್ಟೂ ರಾಜ್ಯಗಳಲ್ಲಿ ಪಡೆದುಕೊಂಡ ಸೀಟುಗಳೇ ಮೋದಿಯವರನ್ನು ಪ್ರಧಾನಿಯಾಗಿಸಿದ್ದು. ಅಲ್ಲಿ ಬಿಜೆಪಿಯು ಎಷ್ಟು ಸೀಟುಗಳನ್ನು ಪಡೆದುಕೊಂಡಿತ್ತು ಎಂದು ನೋಡುವ ಮುನ್ನ ಉತ್ತರ ಪ್ರದೇಶದ ಈಚಿನ ಒಂದು ವಿದ್ಯಮಾನವನ್ನು ನೋಡೋಣ.
ಕೈರಾನಾ ಎಂಬ ಲೋಕಸಭಾ ಕ್ಷೇತ್ರದಲ್ಲಿ 2014ರಲ್ಲಿ ಬಿಜೆಪಿ ಗೆದ್ದಿತ್ತು. ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ, ಇತರ ಮತಗಳ ಧ್ರುವೀಕರಣ ಬಿಜೆಪಿಗೆ ಸಾಧ್ಯವಾಗಿದ್ದು ಮುಜಫ್ಫರ್‍ನಗರದ ಕೋಮುಗಲಭೆಯಿಂದ. ಈ ಕ್ಷೇತ್ರದ ಬಿಜೆಪಿ ಸಂಸದ ತೀರಿಕೊಂಡಿದ್ದರಿಂದ ಅಲ್ಲಿ ಉಪಚುನಾವಣೆ ನಡೆಯಿತು. ಮತ್ತೆ ಕೋಮು ಧ್ರುವೀಕರಣ ನಡೆಸಲು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಕಾಲದಿಂದಲೂ ಇದ್ದ ಜಿನ್ನಾ ಅವರ ಭಾವಚಿತ್ರದ ವಿಚಾರವನ್ನು ಬಿಜೆಪಿಯು ಬಳಸಿಕೊಂಡಿತು. ಮೇಲಾಗಿ ಈ ಸಾರಿ ಬಿಜೆಪಿಗೆದುರಾಗಿ ನಿಂತ ಮುಸ್ಲಿಂ ಮಹಿಳೆಯ ವಿರುದ್ಧವೂ ಸಾಕಷ್ಟು ಅಪಪ್ರಚಾರ ನಡೆಸಲಾಯಿತು. ಆಕೆ ಐಎಸ್‍ಐ ಏಜೆಂಟ್ ಇತ್ಯಾದಿ ಪೋಸ್ಟ್‍ಗಳನ್ನು ಯಥೇಚ್ಛವಾಗಿ ಹಾಕಲಾಯಿತು.
ಬಿಜೆಪಿಗೆದುರಾಗಿ ನಿಂತಿದ್ದು ರಾಷ್ಟ್ರೀಯ ಲೋಕದಳದ ಅಭ್ಯರ್ಥಿ ತಬಸ್ಸುಮ್ ಹಸನ್. ಆಕೆ ವಾಸ್ತವದಲ್ಲಿ ಸಮಾಜವಾದಿ ಪಕ್ಷದ ಕುಟುಂಬದವರು. ಆಕೆಯ ಪತಿ ಎಸ್‍ಪಿಯಿಂದ ಎಂ.ಎಲ್.ಎ ಮತ್ತು ಎಂ.ಪಿ ಆಗಿದ್ದವರು. ಈ ಮುಸ್ಲಿಂ ಅಭ್ಯರ್ಥಿ ನಿಂತಿದ್ದು ಜಾಟ್ ಸಮುದಾಯದ ಪಕ್ಷವೆಂದು ಹೆಸರಾದ ಲೋಕದಳದಿಂದ. ಈಕೆಯ ಪತಿ ಇಲ್ಲಿನ ಕಬ್ಬು (ಹಿಂದಿಯಲ್ಲಿ ಗನ್ನಾ) ಬೆಳೆಗಾರರ ಪರವಾಗಿ ಕೆಲಸ ಮಾಡಿದ್ದವರು. ಇವೆಲ್ಲವೂ ಸೇರಿ ಕೈರಾನಾದಲ್ಲಿ ಬಿಜೆಪಿ ಸೋತಿತು.
ಅಂದರೆ, ಕಟು ಕೋಮು ಧ್ರುವೀಕರಣವನ್ನು ದಾಟಿ ಕೃಷಿ ಬಿಕ್ಕಟ್ಟಿನ ಸಮಸ್ಯೆಯ ಪರಿಹಾರ ಗ್ರಾಮೀಣ ಭಾರತಕ್ಕೆ ಮುಖ್ಯವಾಗಿದೆ. ಈ ಸದ್ಯ ಕೃಷಿ ಬಿಕ್ಕಟ್ಟು ಬಾಧಿಸುತ್ತಿರುವ, ರೈತ ಹೋರಾಟವೂ ಗರಿಗೆದರಿರುವ ಮತ್ತು ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಬಿಜೆಪಿ ಎಷ್ಟು ಸ್ಥಾನ ಗೆದ್ದಿತ್ತು ಎಂಬುದನ್ನು ನೋಡೋಣ. ಮಧ್ಯಪ್ರದೇಶದ 29 ಸೀಟುಗಳಲ್ಲಿ 27, ಛತ್ತೀಸ್‍ಗಡದ 11 ಸೀಟುಗಳಲ್ಲಿ 10, ರಾಜಸ್ಥಾನದ 25 ಸೀಟುಗಳಲ್ಲಿ 25, ಮಹಾರಾಷ್ಟ್ರದ 42 ಸ್ಥಾನಗಳಲ್ಲಿ ಬಿಜೆಪಿ 18, ಶಿವಸೇನಾ 16 ಮತ್ತು ಅವರ ಇನ್ನೊಬ್ಬ ಎನ್‍ಡಿಎ ಸಂಬಂಧಿ 1 ಸೀಟು. ಈ ಒಂದು ಸೀಟು ಸ್ವಾಭಿಮಾನಿ ಷೇತ್ಕರಿ ಸಂಘಟನೆ (ರೈತ ಸಂಘಟನೆ)ಯ ರಾಜು ಶೆಟ್ಟಿಯವರದ್ದಾಗಿತ್ತು. ರಾಜು ಶೆಟ್ಟಿಯವರು ಈಗ ಎನ್‍ಡಿಎಯಿಂದ ಹೊರಬಂದಿದ್ದಾರೆ ಮತ್ತು ಅಖಿಲ ಭಾರತ ರೈತ ಹೋರಾಟ ಸಮನ್ವಯ ಸಮಿತಿಯ ಭಾಗವಾಗಿದ್ದಾರೆ.
ಅಂದರೆ, ಇದು 2019ರಲ್ಲಿ ಬಿಜೆಪಿಗೆ ಇದು ತಲೆ ನೋವಾಗಲಿದೆ. ಹಾಗಾಗಿಯೇ ಈ ಸಾರಿಯ ಬಜೆಟ್‍ನಲ್ಲಿ ಮತ್ತೆ ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸಾದ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಖಾತರಿ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿತು. ಆ ನಿಟ್ಟಿನಲ್ಲಿ ಈವರೆಗೂ ಏನೂ ಆಗಿಲ್ಲ ಎಂಬುದು ಮಾತ್ರ ವಾಸ್ತವ.
ಈ ಮಧ್ಯೆ, ದೇಶದ ಉತ್ತರ ಭಾಗದಲ್ಲಿ ನಡೆಯುತ್ತಿರುವ ಆಂದೋಲನದ ಬಗ್ಗೆ ಕೇಳಲಾದ ಪ್ರಶ್ನೆಗೆ ಕೇಂದ್ರ ಕೃಷಿ ಸಚಿವ ರಾಧಾಮೋಹನ್, ಇದು ಪ್ರಚಾರಕ್ಕಾಗಿ ಮಾಡುತ್ತಿರುವುದು ಮತ್ತು ಈ ಸಂಘಟನೆಗಳಲ್ಲಿ ಕೆಲವು ಸಾವಿರ ಸದಸ್ಯರಿರಬಹುದು ಅಷ್ಟೇ ಎಂದಿದ್ದಾರೆ. ಕಡಿಮೆ ಸಂಖ್ಯೆಯ ಸದಸ್ಯರಿರುವ ಸಂಘಟನೆಗಳೇ ಮೂವತ್ತು ಸಾವಿರಕ್ಕೂ ಹೆಚ್ಚು ರೈತರನ್ನು ಒಟ್ಟುಗೂಡಿಸಿ ನೂರಾರು ಕಿ.ಮೀ. ದೂರದ ಜಾಥಾ ಮಾಡಿದ್ದು ಎಂಬುದನ್ನು ಅವರು ಮರೆತಂತಿದೆ.
ಇವೆಲ್ಲಾ ಕಾರಣಗಳಿಂದ, ದೇಶದ ಗ್ರಾಮೀಣ ಭಾಗವು 2019ರ ಚುನಾವಣೆಗೆ ಮುಂಚೆ ವಿಶೇಷ ಮಹತ್ವವನ್ನು ಪಡೆದುಕೊಳ್ಳಲಿದೆ. ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿಯ ನೇತಾರರಲ್ಲೊಬ್ಬರಾದ ಯೋಗೇಂದ್ರ ಯಾದವ್‍ರ ಪ್ರಕಾರ ಜವಾನ್ ಮತ್ತು ಕಿಸಾನ್ ಮುಂದಿನ ದಿನಗಳ ದೇಶದ ದಿಕ್ಕನ್ನು ನಿರ್ಧರಿಸುತ್ತಾರೆ. ಇಲ್ಲಿ ಜವಾನ್ ಎಂದರೆ ಸೈನಿಕರಲ್ಲ; ಯುವಜನರು. ಕಿಸಾನ್, ರೈತರು. ಯುವಜನರು ಮತ್ತು ರೈತರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡುವವರು ಯಾರು ಎಂಬುದು ಮುಂದಿನ ಚುನಾವಣೆಗಳ ದಿಕ್ಕನ್ನೂ ಬದಲಿಸುತ್ತದೆ.

– ಡಾ.ವಾಸು ಎಚ್.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...