Homeಅಂಕಣಗಳು2019ರ ಚುನಾವಣೆ: ಜವಾನ್ ಔರ್ ಕಿಸಾನ್

2019ರ ಚುನಾವಣೆ: ಜವಾನ್ ಔರ್ ಕಿಸಾನ್

- Advertisement -
- Advertisement -

2014ರ ಲೋಕಸಭಾ ಚುನಾವಣೆ ನಡೆದಾಗ ಬಿಜೆಪಿಯು ರೈತರ ಆದಾಯ ದ್ವಿಗುಣ ಮಾಡುವುದಾಗಿಯೂ, ರೈತರ ಎಲ್ಲಾ ಬೆಳೆಗಳಿಗೂ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಬೆಲೆ ಸಿಗುವಂತೆ ಮಾಡುವುದಾಗಿಯೂ ಹೇಳಿತ್ತು. ಆದರೆ, ಆ ಚುನಾವಣೆಯು ಗ್ರಾಮೀಣ ಭಾಗದ ಇಶ್ಯೂಗಳನ್ನು ಕೇಂದ್ರವಾಗಿಟ್ಟುಕೊಂಡು ನಡೆಯಲಿಲ್ಲ. ಯುಪಿಎ ಭ್ರಷ್ಟಾಚಾರ, 10 ವರ್ಷಗಳ ಆಡಳಿತ ವಿರೋಧಿ ಅಲೆ, ಕಪ್ಪುಹಣ, ಹೊಸ ಪರ್ಯಾಯ, ಮೋದಿ ಮಾದರಿ ಮತ್ತು ಗುಜರಾತ್ ಮಾದರಿ, ಅಭಿವೃದ್ಧಿ, ಕೋಮು ಧ್ರುವೀಕರಣ ಹೀಗೆ ಹತ್ತು ಹಲವು ಅಂಶಗಳನ್ನೊಳಗೊಂಡ ಒಂದು ಪ್ಯಾಕೇಜ್‍ಅನ್ನು ಬಿಜೆಪಿಯು ಮುಂದಿಟ್ಟಿತ್ತು. ಮಾಧ್ಯಮಗಳು ಮತ್ತು ಹಣದ ಬಲದೊಂದಿಗೆ ಅತ್ಯಂತ ಚಾಣಾಕ್ಷತೆ ಮತ್ತು ಕಠಿಣ ಶ್ರಮದ ಮೂಲಕ ಅದನ್ನು ಜನರ ಮುಂದಿಟ್ಟು ಸೃಷ್ಟಿಸಿದ ಅಲೆಯು, ಬಿಜೆಪಿಗೆ ಸ್ವಂತ ಬಲದ ಮೇಲೆ ಅಧಿಕಾರ ಪಡೆದುಕೊಳ್ಳುವಷ್ಟು ಜೋರಾಗಿ ಬೀಸಿತ್ತು. ಆದರೆ, 2019ರ ಚುನಾವಣೆಯು ಹಾಗಿರುವುದಿಲ್ಲವೆಂದು ಭಾವಿಸಲು ಕಾರಣಗಳಿವೆ.
2004ರಲ್ಲಿ ವಾಜಪೇಯಿಯವರ ನೇತೃತ್ವದಲ್ಲಿ ‘ಭಾರತ ಪ್ರಕಾಶಿಸುತ್ತಿದೆ’ ಎಂಬ ಘೋಷಣೆಯಡಿ ಚುನಾವಣೆಗೆ ಹೊರಟಾಗ, ಜನರಲ್ಲಿ ‘ಫೀಲ್ ಗುಡ್ ಫ್ಯಾಕ್ಟರ್ (ಎಲ್ಲಾ ಚೆನ್ನಾಗಿದೆ ಎಂಬ ಭಾವನೆ)’ ಇದೆ ಎಂಬ ತಪ್ಪು ಲೆಕ್ಕಾಚಾರ ಮಾಡಲಾಗಿತ್ತು. ಗ್ರಾಮೀಣ ಭಾರತವು ಆಗ ತತ್ತರಿಸಿತ್ತು. ಹೀಗಾಗಿ ಎಲ್ಲರ ನಿರೀಕ್ಷೆಗೆ ವಿರುದ್ಧವಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ-1 ಅಧಿಕಾರಕ್ಕೆ ಬಂದಿತ್ತು. 2009ಕ್ಕೆ ಮತ್ತೆ ಚುನಾವಣೆಗೆ ಹೊರಟಾಗ ಕಾಂಗ್ರೆಸ್ ಮತ್ತು ಯುಪಿಎಗೆ ಕಡಿಮೆ ಸೀಟು ಬರುತ್ತದೆಂದು ಭಾವಿಸಲಾಗಿತ್ತು. ಆರ್‍ಜೆಡಿಯಂತಹ ಕೆಲವು ಪಕ್ಷಗಳು ಚುನಾವಣೆಗೆ ಸ್ವಲ್ಪ ಮುಂಚೆ ಯುಪಿಎ ತೊರೆದಿದ್ದವು. ಆದರೆ, ಚುನಾವಣೆಗೆ ಮುಂಚೆ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಅತೀ ದೊಡ್ಡ ರೈತರ ಸಾಲಮನ್ನಾ ಮಾಡಿತು. ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಂಡಿತಲ್ಲದೇ, ಹೆಚ್ಚು ಕಷ್ಟವಿಲ್ಲದೇ ಯುಪಿಎ-2ರ ಮುಖಾಂತರ ಮತ್ತೆ ಅಧಿಕಾರ ಹಿಡಿಯಿತು.
ಹಾಗಾದರೆ 2014ರಲ್ಲಿ ಗ್ರಾಮೀಣ ಭಾರತವು ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಪಾತ್ರ ಕಳೆದುಕೊಂಡಿತೇ? ಹಾಗೆ ಹೇಳಲು ಯಾವ ಕಾರಣವೂ ಇಲ್ಲ. ಈ ಮಧ್ಯೆ ಹೆಚ್ಚಾದ ಕೃಷಿ ಬಿಕ್ಕಟ್ಟಿಗೆ ಯುಪಿಎ ಸಹಾ ಯಾವ ವಿಶೇಷ ಕ್ರಮವನ್ನೂ ತೆಗೆದುಕೊಂಡಿರಲಿಲ್ಲ. ನರೇಗಾದಂತಹ ಕ್ರಮಗಳು ಈ ಬಿಕ್ಕಟ್ಟನ್ನು ಮರೆಮಾಚುವಷ್ಟು ಸಮರ್ಥವೂ ಆಗಿರಲಿಲ್ಲ; ಇದ್ದಷ್ಟು ಪ್ರಮಾಣದಲ್ಲಿ ಜಾರಿಯೂ ಆಗಲಿಲ್ಲ. ಇದರಾಚೆಗೂ ಯುಪಿಎ ಸರ್ಕಾರದ ತಂದಿದ್ದ ಕೆಲವು ಕ್ರಮಗಳ ಜನಪರತೆಯನ್ನು ಜನರ ಮುಂದಿಡುವಷ್ಟು ಸಾಮಥ್ರ್ಯ ಕಾಂಗ್ರೆಸ್ಸಿನ ಪ್ರಚಾರ ಯಂತ್ರಾಂಗಕ್ಕೆ ಅಂದೂ ಇರಲಿಲ್ಲ; ಇಂದೂ ಇಲ್ಲ. ಯುಪಿಎ ತಂದಿದ್ದ ಭೂಸ್ವಾಧೀನ ಕಾಯ್ದೆ ಎಷ್ಟು ಜನಪರ ಎಂದು ಗೊತ್ತಾದದ್ದು, ಮೋದಿ ಸರ್ಕಾರ ಬಂದ ಮೇಲೆ ಅದನ್ನು ತಿದ್ದಲು ಯತ್ನಿಸಿದಾಗಲೇ!
2016ರ ಡಿಸೆಂಬರ್‍ನಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಗುಜರಾತ್‍ನ ಗ್ರಾಮೀಣ ಭಾಗ ಮತ್ತು ನಗರ ಭಾಗಗಳು ಭಿನ್ನ ರೀತಿಯಲ್ಲಿ ಮತ ಚಲಾಯಿಸಿದವು ಎಂಬುದನ್ನು ಎಲ್ಲರೂ ಗುರುತಿಸಿದ್ದಾರೆ. ಇದಕ್ಕೆ ಕಾರಣವಿಲ್ಲದಿಲ್ಲ. ಯಾವ ಕಛ್ ಮತ್ತು ಸೌರಾಷ್ಟ್ರದ ಹೆಸರೇಳಿ ನರ್ಮದಾ ನದಿಗೆ ಒಂದಾದ ಮೇಲೆ ಒಂದರಂತೆ ಅಣೆಕಟ್ಟುಗಳನ್ನು ಕಟ್ಟಲಾಯಿತೋ, ಅಲ್ಲಿಗೆ ನೀರೂ ಹೋಗಿರಲಿಲ್ಲ; ಅವರ ಬವಣೆಯೂ ತೀರಿರಲಿಲ್ಲ. ಇಂತಹ ಹಲವು ಕಾರಣಗಳಿಂದ ಅಲ್ಲಿನ ಗ್ರಾಮೀಣ ಭಾಗ ಆಡಳಿತ ಪಕ್ಷದ ವಿರುದ್ಧ ಮತ ಚಲಾಯಿಸಿತು.
ಮುಂದಿನ ಚುನಾವಣೆಗಳಿರುವುದು ಛತ್ತೀಸ್‍ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ. ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಮಹಾರಾಷ್ಟ್ರಗಳು ಸೇರಿದಂತೆ ಇವಿಷ್ಟೂ ರಾಜ್ಯಗಳಲ್ಲಿ ಪಡೆದುಕೊಂಡ ಸೀಟುಗಳೇ ಮೋದಿಯವರನ್ನು ಪ್ರಧಾನಿಯಾಗಿಸಿದ್ದು. ಅಲ್ಲಿ ಬಿಜೆಪಿಯು ಎಷ್ಟು ಸೀಟುಗಳನ್ನು ಪಡೆದುಕೊಂಡಿತ್ತು ಎಂದು ನೋಡುವ ಮುನ್ನ ಉತ್ತರ ಪ್ರದೇಶದ ಈಚಿನ ಒಂದು ವಿದ್ಯಮಾನವನ್ನು ನೋಡೋಣ.
ಕೈರಾನಾ ಎಂಬ ಲೋಕಸಭಾ ಕ್ಷೇತ್ರದಲ್ಲಿ 2014ರಲ್ಲಿ ಬಿಜೆಪಿ ಗೆದ್ದಿತ್ತು. ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ, ಇತರ ಮತಗಳ ಧ್ರುವೀಕರಣ ಬಿಜೆಪಿಗೆ ಸಾಧ್ಯವಾಗಿದ್ದು ಮುಜಫ್ಫರ್‍ನಗರದ ಕೋಮುಗಲಭೆಯಿಂದ. ಈ ಕ್ಷೇತ್ರದ ಬಿಜೆಪಿ ಸಂಸದ ತೀರಿಕೊಂಡಿದ್ದರಿಂದ ಅಲ್ಲಿ ಉಪಚುನಾವಣೆ ನಡೆಯಿತು. ಮತ್ತೆ ಕೋಮು ಧ್ರುವೀಕರಣ ನಡೆಸಲು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಕಾಲದಿಂದಲೂ ಇದ್ದ ಜಿನ್ನಾ ಅವರ ಭಾವಚಿತ್ರದ ವಿಚಾರವನ್ನು ಬಿಜೆಪಿಯು ಬಳಸಿಕೊಂಡಿತು. ಮೇಲಾಗಿ ಈ ಸಾರಿ ಬಿಜೆಪಿಗೆದುರಾಗಿ ನಿಂತ ಮುಸ್ಲಿಂ ಮಹಿಳೆಯ ವಿರುದ್ಧವೂ ಸಾಕಷ್ಟು ಅಪಪ್ರಚಾರ ನಡೆಸಲಾಯಿತು. ಆಕೆ ಐಎಸ್‍ಐ ಏಜೆಂಟ್ ಇತ್ಯಾದಿ ಪೋಸ್ಟ್‍ಗಳನ್ನು ಯಥೇಚ್ಛವಾಗಿ ಹಾಕಲಾಯಿತು.
ಬಿಜೆಪಿಗೆದುರಾಗಿ ನಿಂತಿದ್ದು ರಾಷ್ಟ್ರೀಯ ಲೋಕದಳದ ಅಭ್ಯರ್ಥಿ ತಬಸ್ಸುಮ್ ಹಸನ್. ಆಕೆ ವಾಸ್ತವದಲ್ಲಿ ಸಮಾಜವಾದಿ ಪಕ್ಷದ ಕುಟುಂಬದವರು. ಆಕೆಯ ಪತಿ ಎಸ್‍ಪಿಯಿಂದ ಎಂ.ಎಲ್.ಎ ಮತ್ತು ಎಂ.ಪಿ ಆಗಿದ್ದವರು. ಈ ಮುಸ್ಲಿಂ ಅಭ್ಯರ್ಥಿ ನಿಂತಿದ್ದು ಜಾಟ್ ಸಮುದಾಯದ ಪಕ್ಷವೆಂದು ಹೆಸರಾದ ಲೋಕದಳದಿಂದ. ಈಕೆಯ ಪತಿ ಇಲ್ಲಿನ ಕಬ್ಬು (ಹಿಂದಿಯಲ್ಲಿ ಗನ್ನಾ) ಬೆಳೆಗಾರರ ಪರವಾಗಿ ಕೆಲಸ ಮಾಡಿದ್ದವರು. ಇವೆಲ್ಲವೂ ಸೇರಿ ಕೈರಾನಾದಲ್ಲಿ ಬಿಜೆಪಿ ಸೋತಿತು.
ಅಂದರೆ, ಕಟು ಕೋಮು ಧ್ರುವೀಕರಣವನ್ನು ದಾಟಿ ಕೃಷಿ ಬಿಕ್ಕಟ್ಟಿನ ಸಮಸ್ಯೆಯ ಪರಿಹಾರ ಗ್ರಾಮೀಣ ಭಾರತಕ್ಕೆ ಮುಖ್ಯವಾಗಿದೆ. ಈ ಸದ್ಯ ಕೃಷಿ ಬಿಕ್ಕಟ್ಟು ಬಾಧಿಸುತ್ತಿರುವ, ರೈತ ಹೋರಾಟವೂ ಗರಿಗೆದರಿರುವ ಮತ್ತು ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಬಿಜೆಪಿ ಎಷ್ಟು ಸ್ಥಾನ ಗೆದ್ದಿತ್ತು ಎಂಬುದನ್ನು ನೋಡೋಣ. ಮಧ್ಯಪ್ರದೇಶದ 29 ಸೀಟುಗಳಲ್ಲಿ 27, ಛತ್ತೀಸ್‍ಗಡದ 11 ಸೀಟುಗಳಲ್ಲಿ 10, ರಾಜಸ್ಥಾನದ 25 ಸೀಟುಗಳಲ್ಲಿ 25, ಮಹಾರಾಷ್ಟ್ರದ 42 ಸ್ಥಾನಗಳಲ್ಲಿ ಬಿಜೆಪಿ 18, ಶಿವಸೇನಾ 16 ಮತ್ತು ಅವರ ಇನ್ನೊಬ್ಬ ಎನ್‍ಡಿಎ ಸಂಬಂಧಿ 1 ಸೀಟು. ಈ ಒಂದು ಸೀಟು ಸ್ವಾಭಿಮಾನಿ ಷೇತ್ಕರಿ ಸಂಘಟನೆ (ರೈತ ಸಂಘಟನೆ)ಯ ರಾಜು ಶೆಟ್ಟಿಯವರದ್ದಾಗಿತ್ತು. ರಾಜು ಶೆಟ್ಟಿಯವರು ಈಗ ಎನ್‍ಡಿಎಯಿಂದ ಹೊರಬಂದಿದ್ದಾರೆ ಮತ್ತು ಅಖಿಲ ಭಾರತ ರೈತ ಹೋರಾಟ ಸಮನ್ವಯ ಸಮಿತಿಯ ಭಾಗವಾಗಿದ್ದಾರೆ.
ಅಂದರೆ, ಇದು 2019ರಲ್ಲಿ ಬಿಜೆಪಿಗೆ ಇದು ತಲೆ ನೋವಾಗಲಿದೆ. ಹಾಗಾಗಿಯೇ ಈ ಸಾರಿಯ ಬಜೆಟ್‍ನಲ್ಲಿ ಮತ್ತೆ ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸಾದ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಖಾತರಿ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿತು. ಆ ನಿಟ್ಟಿನಲ್ಲಿ ಈವರೆಗೂ ಏನೂ ಆಗಿಲ್ಲ ಎಂಬುದು ಮಾತ್ರ ವಾಸ್ತವ.
ಈ ಮಧ್ಯೆ, ದೇಶದ ಉತ್ತರ ಭಾಗದಲ್ಲಿ ನಡೆಯುತ್ತಿರುವ ಆಂದೋಲನದ ಬಗ್ಗೆ ಕೇಳಲಾದ ಪ್ರಶ್ನೆಗೆ ಕೇಂದ್ರ ಕೃಷಿ ಸಚಿವ ರಾಧಾಮೋಹನ್, ಇದು ಪ್ರಚಾರಕ್ಕಾಗಿ ಮಾಡುತ್ತಿರುವುದು ಮತ್ತು ಈ ಸಂಘಟನೆಗಳಲ್ಲಿ ಕೆಲವು ಸಾವಿರ ಸದಸ್ಯರಿರಬಹುದು ಅಷ್ಟೇ ಎಂದಿದ್ದಾರೆ. ಕಡಿಮೆ ಸಂಖ್ಯೆಯ ಸದಸ್ಯರಿರುವ ಸಂಘಟನೆಗಳೇ ಮೂವತ್ತು ಸಾವಿರಕ್ಕೂ ಹೆಚ್ಚು ರೈತರನ್ನು ಒಟ್ಟುಗೂಡಿಸಿ ನೂರಾರು ಕಿ.ಮೀ. ದೂರದ ಜಾಥಾ ಮಾಡಿದ್ದು ಎಂಬುದನ್ನು ಅವರು ಮರೆತಂತಿದೆ.
ಇವೆಲ್ಲಾ ಕಾರಣಗಳಿಂದ, ದೇಶದ ಗ್ರಾಮೀಣ ಭಾಗವು 2019ರ ಚುನಾವಣೆಗೆ ಮುಂಚೆ ವಿಶೇಷ ಮಹತ್ವವನ್ನು ಪಡೆದುಕೊಳ್ಳಲಿದೆ. ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿಯ ನೇತಾರರಲ್ಲೊಬ್ಬರಾದ ಯೋಗೇಂದ್ರ ಯಾದವ್‍ರ ಪ್ರಕಾರ ಜವಾನ್ ಮತ್ತು ಕಿಸಾನ್ ಮುಂದಿನ ದಿನಗಳ ದೇಶದ ದಿಕ್ಕನ್ನು ನಿರ್ಧರಿಸುತ್ತಾರೆ. ಇಲ್ಲಿ ಜವಾನ್ ಎಂದರೆ ಸೈನಿಕರಲ್ಲ; ಯುವಜನರು. ಕಿಸಾನ್, ರೈತರು. ಯುವಜನರು ಮತ್ತು ರೈತರು ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡುವವರು ಯಾರು ಎಂಬುದು ಮುಂದಿನ ಚುನಾವಣೆಗಳ ದಿಕ್ಕನ್ನೂ ಬದಲಿಸುತ್ತದೆ.

– ಡಾ.ವಾಸು ಎಚ್.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...