Homeಮುಖಪುಟಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

ಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

- Advertisement -
- Advertisement -

ಗಾಝಾ ನಾಗರಿಕರ ಮಾರಣಹೋಮ ಮತ್ತು ಆಕ್ರಮಿತ ಪಶ್ಚಿಮ ದಂಡೆ (West Bank)ಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ಖಂಡಿಸಿ ಯೇಸುಕ್ರಿಸ್ತನ ಜನ್ಮಸ್ಥಳ ಬೆಥ್ಲೆಹೆಮ್‌ನಲ್ಲಿ ಈ ವರ್ಷ ಸಾಂಪ್ರಾದಾಯಿಕ ಕ್ರಿಸ್ಮಸ್‌ ಆಚರಣೆ ರದ್ದುಗೊಳಿಸಲಾಗಿದೆ.

ಪ್ರತಿ ವರ್ಷ ಕ್ರಿಸ್ಮಸ್‌ಗೆ ತಿಂಗಳ ಮೊದಲೇ ಬೆಥ್ಲೆಹೆಮ್ ಸಜ್ಜಾಗುತ್ತಿತ್ತು. ಅಲ್ಲಿನ ಮ್ಯಾಂಗರ್ ಸ್ಕ್ವೇರ್‌ನಲ್ಲಿನ ಎತ್ತರದ ಕ್ರಿಸ್ಮಸ್‌ ಮರದ ಫೋಟೋ ಸೆರೆ ಹಿಡಿಯಲು ಜಗತ್ತಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ಕ್ಯಾಮರಾ ಹಿಡಿದು ನಿಲ್ಲುತ್ತಿದ್ದರು. ಮಧ್ಯರಾತ್ರಿಯ ಪ್ರಾರ್ಥನೆಗೆ ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು. ಆದರೆ, ಈ ಬಾರಿ ಮೆರವಣಿಗೆಯಿಲ್ಲ, ಬ್ಯಾಂಡ್‌, ಸಂಗೀತವಿಲ್ಲ. ದೀಪಾಲಂಕಾರ, ಮಾರುಕಟ್ಟೆಗಳಿಲ್ಲ. ಮಕ್ಕಳಿಗೆ ಸಿಹಿ ಹಂಚುವ ಸಂತಸವೇ ಇಲ್ಲ ಎಂದು ವಾಶಿಂಗ್ಟನ್‌ ಪೋಸ್ಟ್ ವರದಿ ತಿಳಿಸಿದೆ.

ಈ ಬಾರಿ ಬೆಥ್ಲೆಹೆಮ್‌ನಲ್ಲಿ ಸಾಂಕೇತಿಕವಾಗಿ ಮೂಲ ಚರ್ಚೊಂದಕ್ಕೆ ಮಾತ್ರ ಸರಳವಾದ ಅಲಂಕಾರ ಮಾಡಲಾಗಿದೆ. ಗಾಝಾದ ಧ್ವಂಸಗೊಂಡ ಕಟ್ಟಡಗಳು ಮತ್ತು ಇಸ್ರೇಲ್ ದಾಳಿಗೆ ಬಲಿಯಾದ ಪುಟ್ಟ ಕಂದಮ್ಮಗಳನ್ನು ಸ್ಮರಿಸಿ ಕಟ್ಟದ ಅವೇಶಗಳ ಮೇಲೆ ಬಾಲ ಏಸುವನ್ನು ಸ್ವಾಗತಿಸಲಾಗಿದೆ.

ಸಾಂಪ್ರದಾಯಿಕವಾಗಿ ಬೆಥ್ಲೆಹೆಮ್‌ ನಗರಕ್ಕೆ ಲ್ಯಾಟಿನ್ ಪ್ಯಾಟ್ರಿಯಾರ್ಕ್‌ ಮೆರವಣಿಗೆಯೊಂದಿಗೆ 28 ಸ್ಕೌಟ್‌ ತಂಡಗಳು ಬರುವುದನ್ನು 1 ತಂಡಕ್ಕೆ ಸೀಮಿತಗೊಳಿಸಲಾಗಿದೆ. ಬಾಲಕರು ಬೈಬಲ್‌ನ ಶಾಂತಿಯ ವಾಕ್ಯಗಳನ್ನು ಓದಿ, ಪದ್ಯಗಳನ್ನು ಹಾಡಲಿದ್ದಾರೆ. ಅವರು ಯುದ್ಧಕ್ಕೆ ಬಲಿಯಾದ ಗಾಝಾದ ಮಕ್ಕಳ ಫೋಟೋಗಳನ್ನು ಹಿಡಿದು ಕದನ ವಿರಾಮದ ಸಂದೇಶ ಸಾರಲಿದ್ದಾರೆ ವಾಶಿಂಗ್ಟನ್‌ ಪೋಸ್ಟ್ ಹೇಳಿದೆ.

ಬೆಥ್ಲೆಹೆಮ್‌ ನೇಟಿವಿಟಿ ಚರ್ಚ್ ನ ಫಾದರ್ ಈಸಾ ಥಲ್ಜಿಯಾ ಅವರು ಕ್ರಿಸ್ಮಸ್‌ ಸಂದೇಶ ತಿಳಿಸುವ ವೇಳೆ ಗಾಝಾದ ಕ್ರಿಸ್ಮಸ್ ಆಚರಣೆಯ ರದ್ದತಿ ಕುರಿತು ಮಾತನಾಡಿದ್ದು, ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲೂ ಈ ರೀತಿಯ ಕ್ರಿಸ್ಮಸ್ ಆಚರಿಸಿಲ್ಲ. ಗಾಝಾದಲ್ಲಿವವರು ನಮ್ಮ ಸೋದರರು ಮತ್ತು ಸೋದರಿಯರು. ಅವರು ಸಂಕಷ್ಟದಲ್ಲಿರುವಾಗ ನಾವು ಅದ್ದೂರಿ ಕ್ರಿಸ್ಮಸ್ ಆಚರಿಸಲು ಕಷ್ಟವಾಗುತ್ತದೆ. ಆದರೆ, ಪ್ರಾರ್ಥನೆಯಲ್ಲಿ ಒಂದಾಗಿರುವುದು ಒಳ್ಳೆಯದು. ನಾವು ಅವರಿಗಾಗಿ ಪ್ರಾರ್ಥಿಸುತ್ತೇವೆ” ಎಂದು ಹೇಳಿದ್ದಾರೆ.

ಬೆಥ್ಲೆಹೆಮ್‌ ಮಾತ್ರವಲ್ಲದೆ ಜೆರುಸಲೇಂ, ಜೋರ್ಡಾನ್‌ನಲ್ಲಿಯೂ ಕ್ರಿಸ್ಮಸ್ ಸಂಭ್ರಮಾಚರಣೆ ರದ್ದುಗೊಳಿಸಲಾಗಿದೆ ಎಂದು ಕ್ರಿಸ್ತಿಯಾನಿಟಿ ಟುಡೇ ವರದಿ ಮಾಡಿದೆ.

ಅಕ್ಟೋಬರ್‌ 7ರಂದು ಪ್ರಾರಂಭವಾದ ಇಸ್ರೇಲ್‌-ಹಮಾಸ್‌ ಸಂಘರ್ಷದಲ್ಲಿ ಇದುವರೆಗೆ 20 ಸಾವಿರಕ್ಕೂ ಅಧಿಕ ಗಾಝಾ ಅಥವಾ ಪ್ಯಾಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ. ಇಸ್ರೇಲ್‌ನ 1,200ರಷ್ಟು ಜನರು ಸಾವನಪ್ಪಿದ್ದಾರೆ. ಇಸ್ರೇಲ್ ಗಾಝಾ ಮೇಲಿನ ದಾಳಿ ಮುಂದುವರೆಸಿದ್ದು, ಇಂದು(ಡಿ.25) ಕೂಡ ಸುಮಾರು 60 ನಾಗರಿಕರು ಬಲಿಯಾಗಿದ್ದಾರೆ.

ಇದನ್ನೂ ಓದಿ : ಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...