Homeಮುಖಪುಟಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

ಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

- Advertisement -
- Advertisement -

ಗಾಝಾ ನಾಗರಿಕರ ಮಾರಣಹೋಮ ಮತ್ತು ಆಕ್ರಮಿತ ಪಶ್ಚಿಮ ದಂಡೆ (West Bank)ಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ಖಂಡಿಸಿ ಯೇಸುಕ್ರಿಸ್ತನ ಜನ್ಮಸ್ಥಳ ಬೆಥ್ಲೆಹೆಮ್‌ನಲ್ಲಿ ಈ ವರ್ಷ ಸಾಂಪ್ರಾದಾಯಿಕ ಕ್ರಿಸ್ಮಸ್‌ ಆಚರಣೆ ರದ್ದುಗೊಳಿಸಲಾಗಿದೆ.

ಪ್ರತಿ ವರ್ಷ ಕ್ರಿಸ್ಮಸ್‌ಗೆ ತಿಂಗಳ ಮೊದಲೇ ಬೆಥ್ಲೆಹೆಮ್ ಸಜ್ಜಾಗುತ್ತಿತ್ತು. ಅಲ್ಲಿನ ಮ್ಯಾಂಗರ್ ಸ್ಕ್ವೇರ್‌ನಲ್ಲಿನ ಎತ್ತರದ ಕ್ರಿಸ್ಮಸ್‌ ಮರದ ಫೋಟೋ ಸೆರೆ ಹಿಡಿಯಲು ಜಗತ್ತಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ಕ್ಯಾಮರಾ ಹಿಡಿದು ನಿಲ್ಲುತ್ತಿದ್ದರು. ಮಧ್ಯರಾತ್ರಿಯ ಪ್ರಾರ್ಥನೆಗೆ ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು. ಆದರೆ, ಈ ಬಾರಿ ಮೆರವಣಿಗೆಯಿಲ್ಲ, ಬ್ಯಾಂಡ್‌, ಸಂಗೀತವಿಲ್ಲ. ದೀಪಾಲಂಕಾರ, ಮಾರುಕಟ್ಟೆಗಳಿಲ್ಲ. ಮಕ್ಕಳಿಗೆ ಸಿಹಿ ಹಂಚುವ ಸಂತಸವೇ ಇಲ್ಲ ಎಂದು ವಾಶಿಂಗ್ಟನ್‌ ಪೋಸ್ಟ್ ವರದಿ ತಿಳಿಸಿದೆ.

ಈ ಬಾರಿ ಬೆಥ್ಲೆಹೆಮ್‌ನಲ್ಲಿ ಸಾಂಕೇತಿಕವಾಗಿ ಮೂಲ ಚರ್ಚೊಂದಕ್ಕೆ ಮಾತ್ರ ಸರಳವಾದ ಅಲಂಕಾರ ಮಾಡಲಾಗಿದೆ. ಗಾಝಾದ ಧ್ವಂಸಗೊಂಡ ಕಟ್ಟಡಗಳು ಮತ್ತು ಇಸ್ರೇಲ್ ದಾಳಿಗೆ ಬಲಿಯಾದ ಪುಟ್ಟ ಕಂದಮ್ಮಗಳನ್ನು ಸ್ಮರಿಸಿ ಕಟ್ಟದ ಅವೇಶಗಳ ಮೇಲೆ ಬಾಲ ಏಸುವನ್ನು ಸ್ವಾಗತಿಸಲಾಗಿದೆ.

ಸಾಂಪ್ರದಾಯಿಕವಾಗಿ ಬೆಥ್ಲೆಹೆಮ್‌ ನಗರಕ್ಕೆ ಲ್ಯಾಟಿನ್ ಪ್ಯಾಟ್ರಿಯಾರ್ಕ್‌ ಮೆರವಣಿಗೆಯೊಂದಿಗೆ 28 ಸ್ಕೌಟ್‌ ತಂಡಗಳು ಬರುವುದನ್ನು 1 ತಂಡಕ್ಕೆ ಸೀಮಿತಗೊಳಿಸಲಾಗಿದೆ. ಬಾಲಕರು ಬೈಬಲ್‌ನ ಶಾಂತಿಯ ವಾಕ್ಯಗಳನ್ನು ಓದಿ, ಪದ್ಯಗಳನ್ನು ಹಾಡಲಿದ್ದಾರೆ. ಅವರು ಯುದ್ಧಕ್ಕೆ ಬಲಿಯಾದ ಗಾಝಾದ ಮಕ್ಕಳ ಫೋಟೋಗಳನ್ನು ಹಿಡಿದು ಕದನ ವಿರಾಮದ ಸಂದೇಶ ಸಾರಲಿದ್ದಾರೆ ವಾಶಿಂಗ್ಟನ್‌ ಪೋಸ್ಟ್ ಹೇಳಿದೆ.

ಬೆಥ್ಲೆಹೆಮ್‌ ನೇಟಿವಿಟಿ ಚರ್ಚ್ ನ ಫಾದರ್ ಈಸಾ ಥಲ್ಜಿಯಾ ಅವರು ಕ್ರಿಸ್ಮಸ್‌ ಸಂದೇಶ ತಿಳಿಸುವ ವೇಳೆ ಗಾಝಾದ ಕ್ರಿಸ್ಮಸ್ ಆಚರಣೆಯ ರದ್ದತಿ ಕುರಿತು ಮಾತನಾಡಿದ್ದು, ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲೂ ಈ ರೀತಿಯ ಕ್ರಿಸ್ಮಸ್ ಆಚರಿಸಿಲ್ಲ. ಗಾಝಾದಲ್ಲಿವವರು ನಮ್ಮ ಸೋದರರು ಮತ್ತು ಸೋದರಿಯರು. ಅವರು ಸಂಕಷ್ಟದಲ್ಲಿರುವಾಗ ನಾವು ಅದ್ದೂರಿ ಕ್ರಿಸ್ಮಸ್ ಆಚರಿಸಲು ಕಷ್ಟವಾಗುತ್ತದೆ. ಆದರೆ, ಪ್ರಾರ್ಥನೆಯಲ್ಲಿ ಒಂದಾಗಿರುವುದು ಒಳ್ಳೆಯದು. ನಾವು ಅವರಿಗಾಗಿ ಪ್ರಾರ್ಥಿಸುತ್ತೇವೆ” ಎಂದು ಹೇಳಿದ್ದಾರೆ.

ಬೆಥ್ಲೆಹೆಮ್‌ ಮಾತ್ರವಲ್ಲದೆ ಜೆರುಸಲೇಂ, ಜೋರ್ಡಾನ್‌ನಲ್ಲಿಯೂ ಕ್ರಿಸ್ಮಸ್ ಸಂಭ್ರಮಾಚರಣೆ ರದ್ದುಗೊಳಿಸಲಾಗಿದೆ ಎಂದು ಕ್ರಿಸ್ತಿಯಾನಿಟಿ ಟುಡೇ ವರದಿ ಮಾಡಿದೆ.

ಅಕ್ಟೋಬರ್‌ 7ರಂದು ಪ್ರಾರಂಭವಾದ ಇಸ್ರೇಲ್‌-ಹಮಾಸ್‌ ಸಂಘರ್ಷದಲ್ಲಿ ಇದುವರೆಗೆ 20 ಸಾವಿರಕ್ಕೂ ಅಧಿಕ ಗಾಝಾ ಅಥವಾ ಪ್ಯಾಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ. ಇಸ್ರೇಲ್‌ನ 1,200ರಷ್ಟು ಜನರು ಸಾವನಪ್ಪಿದ್ದಾರೆ. ಇಸ್ರೇಲ್ ಗಾಝಾ ಮೇಲಿನ ದಾಳಿ ಮುಂದುವರೆಸಿದ್ದು, ಇಂದು(ಡಿ.25) ಕೂಡ ಸುಮಾರು 60 ನಾಗರಿಕರು ಬಲಿಯಾಗಿದ್ದಾರೆ.

ಇದನ್ನೂ ಓದಿ : ಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...