Homeಮುಖಪುಟಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

ಗಾಝಾದಲ್ಲಿ ಇಸ್ರೇಲ್‌ ಮಾರಣಹೋಮ: ಯೇಸುಕ್ರಿಸ್ತನ ಜನ್ಮಸ್ಥಳದಲ್ಲಿ ಕ್ರಿಸ್ಮಸ್‌ ಸಂಭ್ರಮಾಚರಣೆ ರದ್ದು

- Advertisement -
- Advertisement -

ಗಾಝಾ ನಾಗರಿಕರ ಮಾರಣಹೋಮ ಮತ್ತು ಆಕ್ರಮಿತ ಪಶ್ಚಿಮ ದಂಡೆ (West Bank)ಯಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ಖಂಡಿಸಿ ಯೇಸುಕ್ರಿಸ್ತನ ಜನ್ಮಸ್ಥಳ ಬೆಥ್ಲೆಹೆಮ್‌ನಲ್ಲಿ ಈ ವರ್ಷ ಸಾಂಪ್ರಾದಾಯಿಕ ಕ್ರಿಸ್ಮಸ್‌ ಆಚರಣೆ ರದ್ದುಗೊಳಿಸಲಾಗಿದೆ.

ಪ್ರತಿ ವರ್ಷ ಕ್ರಿಸ್ಮಸ್‌ಗೆ ತಿಂಗಳ ಮೊದಲೇ ಬೆಥ್ಲೆಹೆಮ್ ಸಜ್ಜಾಗುತ್ತಿತ್ತು. ಅಲ್ಲಿನ ಮ್ಯಾಂಗರ್ ಸ್ಕ್ವೇರ್‌ನಲ್ಲಿನ ಎತ್ತರದ ಕ್ರಿಸ್ಮಸ್‌ ಮರದ ಫೋಟೋ ಸೆರೆ ಹಿಡಿಯಲು ಜಗತ್ತಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ಕ್ಯಾಮರಾ ಹಿಡಿದು ನಿಲ್ಲುತ್ತಿದ್ದರು. ಮಧ್ಯರಾತ್ರಿಯ ಪ್ರಾರ್ಥನೆಗೆ ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು. ಆದರೆ, ಈ ಬಾರಿ ಮೆರವಣಿಗೆಯಿಲ್ಲ, ಬ್ಯಾಂಡ್‌, ಸಂಗೀತವಿಲ್ಲ. ದೀಪಾಲಂಕಾರ, ಮಾರುಕಟ್ಟೆಗಳಿಲ್ಲ. ಮಕ್ಕಳಿಗೆ ಸಿಹಿ ಹಂಚುವ ಸಂತಸವೇ ಇಲ್ಲ ಎಂದು ವಾಶಿಂಗ್ಟನ್‌ ಪೋಸ್ಟ್ ವರದಿ ತಿಳಿಸಿದೆ.

ಈ ಬಾರಿ ಬೆಥ್ಲೆಹೆಮ್‌ನಲ್ಲಿ ಸಾಂಕೇತಿಕವಾಗಿ ಮೂಲ ಚರ್ಚೊಂದಕ್ಕೆ ಮಾತ್ರ ಸರಳವಾದ ಅಲಂಕಾರ ಮಾಡಲಾಗಿದೆ. ಗಾಝಾದ ಧ್ವಂಸಗೊಂಡ ಕಟ್ಟಡಗಳು ಮತ್ತು ಇಸ್ರೇಲ್ ದಾಳಿಗೆ ಬಲಿಯಾದ ಪುಟ್ಟ ಕಂದಮ್ಮಗಳನ್ನು ಸ್ಮರಿಸಿ ಕಟ್ಟದ ಅವೇಶಗಳ ಮೇಲೆ ಬಾಲ ಏಸುವನ್ನು ಸ್ವಾಗತಿಸಲಾಗಿದೆ.

ಸಾಂಪ್ರದಾಯಿಕವಾಗಿ ಬೆಥ್ಲೆಹೆಮ್‌ ನಗರಕ್ಕೆ ಲ್ಯಾಟಿನ್ ಪ್ಯಾಟ್ರಿಯಾರ್ಕ್‌ ಮೆರವಣಿಗೆಯೊಂದಿಗೆ 28 ಸ್ಕೌಟ್‌ ತಂಡಗಳು ಬರುವುದನ್ನು 1 ತಂಡಕ್ಕೆ ಸೀಮಿತಗೊಳಿಸಲಾಗಿದೆ. ಬಾಲಕರು ಬೈಬಲ್‌ನ ಶಾಂತಿಯ ವಾಕ್ಯಗಳನ್ನು ಓದಿ, ಪದ್ಯಗಳನ್ನು ಹಾಡಲಿದ್ದಾರೆ. ಅವರು ಯುದ್ಧಕ್ಕೆ ಬಲಿಯಾದ ಗಾಝಾದ ಮಕ್ಕಳ ಫೋಟೋಗಳನ್ನು ಹಿಡಿದು ಕದನ ವಿರಾಮದ ಸಂದೇಶ ಸಾರಲಿದ್ದಾರೆ ವಾಶಿಂಗ್ಟನ್‌ ಪೋಸ್ಟ್ ಹೇಳಿದೆ.

ಬೆಥ್ಲೆಹೆಮ್‌ ನೇಟಿವಿಟಿ ಚರ್ಚ್ ನ ಫಾದರ್ ಈಸಾ ಥಲ್ಜಿಯಾ ಅವರು ಕ್ರಿಸ್ಮಸ್‌ ಸಂದೇಶ ತಿಳಿಸುವ ವೇಳೆ ಗಾಝಾದ ಕ್ರಿಸ್ಮಸ್ ಆಚರಣೆಯ ರದ್ದತಿ ಕುರಿತು ಮಾತನಾಡಿದ್ದು, ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲೂ ಈ ರೀತಿಯ ಕ್ರಿಸ್ಮಸ್ ಆಚರಿಸಿಲ್ಲ. ಗಾಝಾದಲ್ಲಿವವರು ನಮ್ಮ ಸೋದರರು ಮತ್ತು ಸೋದರಿಯರು. ಅವರು ಸಂಕಷ್ಟದಲ್ಲಿರುವಾಗ ನಾವು ಅದ್ದೂರಿ ಕ್ರಿಸ್ಮಸ್ ಆಚರಿಸಲು ಕಷ್ಟವಾಗುತ್ತದೆ. ಆದರೆ, ಪ್ರಾರ್ಥನೆಯಲ್ಲಿ ಒಂದಾಗಿರುವುದು ಒಳ್ಳೆಯದು. ನಾವು ಅವರಿಗಾಗಿ ಪ್ರಾರ್ಥಿಸುತ್ತೇವೆ” ಎಂದು ಹೇಳಿದ್ದಾರೆ.

ಬೆಥ್ಲೆಹೆಮ್‌ ಮಾತ್ರವಲ್ಲದೆ ಜೆರುಸಲೇಂ, ಜೋರ್ಡಾನ್‌ನಲ್ಲಿಯೂ ಕ್ರಿಸ್ಮಸ್ ಸಂಭ್ರಮಾಚರಣೆ ರದ್ದುಗೊಳಿಸಲಾಗಿದೆ ಎಂದು ಕ್ರಿಸ್ತಿಯಾನಿಟಿ ಟುಡೇ ವರದಿ ಮಾಡಿದೆ.

ಅಕ್ಟೋಬರ್‌ 7ರಂದು ಪ್ರಾರಂಭವಾದ ಇಸ್ರೇಲ್‌-ಹಮಾಸ್‌ ಸಂಘರ್ಷದಲ್ಲಿ ಇದುವರೆಗೆ 20 ಸಾವಿರಕ್ಕೂ ಅಧಿಕ ಗಾಝಾ ಅಥವಾ ಪ್ಯಾಲೆಸ್ತೀನ್ ನಾಗರಿಕರು ಮೃತಪಟ್ಟಿದ್ದಾರೆ. ಇಸ್ರೇಲ್‌ನ 1,200ರಷ್ಟು ಜನರು ಸಾವನಪ್ಪಿದ್ದಾರೆ. ಇಸ್ರೇಲ್ ಗಾಝಾ ಮೇಲಿನ ದಾಳಿ ಮುಂದುವರೆಸಿದ್ದು, ಇಂದು(ಡಿ.25) ಕೂಡ ಸುಮಾರು 60 ನಾಗರಿಕರು ಬಲಿಯಾಗಿದ್ದಾರೆ.

ಇದನ್ನೂ ಓದಿ : ಹಿಂದೂ ಮಹಾಸಾಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ 185 ರೋಹಿಂಗ್ಯಾಗಳು: ರಕ್ಷಣೆಗೆ ವಿಶ್ವಸಂಸ್ಥೆ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...