Homeಮುಖಪುಟಪಂಜಾಬ್ ಮುಖ್ಯಮಂತ್ರಿ ಕೇಜ್ರಿವಾಲ್, ಭಗವಂತ್ ಮಾನ್ ಅಲ್ಲ..: ಸುಖಬೀರ್ ಸಿಂಗ್ ಬಾದಲ್

ಪಂಜಾಬ್ ಮುಖ್ಯಮಂತ್ರಿ ಕೇಜ್ರಿವಾಲ್, ಭಗವಂತ್ ಮಾನ್ ಅಲ್ಲ..: ಸುಖಬೀರ್ ಸಿಂಗ್ ಬಾದಲ್

- Advertisement -
- Advertisement -

‘ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಂಜಾಬ್ ಸರ್ಕಾರವನ್ನು ನಡೆಸುತ್ತಿದ್ದಾರೆ. ಅವರು (ಎಎಪಿ) ರಾಜ್ಯವನ್ನು ಲೂಟಿ ಮಾಡುತ್ತಿದ್ದು, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅಲ್ಲ’ ಎಂದು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್ ಆಡಳಿತಾರೂಢ ಎಎಪಿ ನಾಯಕರ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ ಅವರು, ‘ಸಿಖ್ಖರ ಇತಿಹಾಸ ಗೊತ್ತಿಲ್ಲದ ಕಾರಣ ನಾನು ಅವರನ್ನು (ಭಗವಂತ್ ಮಾನ್) ಸಿಖ್ ಎಂದು ಪರಿಗಣಿಸುವುದಿಲ್ಲ. ಅವರು ತಮ್ಮನ್ನು ತಾವು ಸಿಖ್ ಎಂದು ಬಿಂಬಿಸಿಕೊಳ್ಳಲು ಪೇಟ ಧರಿಸುತ್ತಾರೆ. ಆದರೆ, ಅವರಿಗೆ ನಮ್ಮ ಇತಿಹಾಸ ತಿಳಿದಿಲ್ಲ. ಅವರನ್ನು ನೋಡಿದಾಗ ಮತ್ತು ಅವರ ಹೇಳಿಕೆಗಳನ್ನು ಕೇಳಿದಾಗ ನಮಗೆ ದುಃಖವಾಗುತ್ತದೆ’ ಎಂದು ದೆಹಲಿಯಲ್ಲಿ ನಡೆದ ಸಿಖ್ ಮುಖಂಡರ ಸಭೆಯಲ್ಲಿ ಕಿಡಿಕಾರಿದರು.

‘ದೇಶದಲ್ಲಿ ಮುಸ್ಲಿಮರ ಜನಸಂಖ್ಯೆಯು ಸುಮಾರು ಶೇ.18ರಷ್ಟಿದೆ. ಅವರಲ್ಲಿ ಒಗ್ಗಟ್ಟಿಲ್ಲದ ಕಾರಣಕ್ಕೆ ಅವರಿಗೆ ಅವರಿಗೆ ನಾಯಕತ್ವವಿಲ್ಲ. ನಾವು ಶೇ.2ರಷ್ಟಿದ್ದರೂ ನಮಗೆ ಶ್ರೀ ಅಕಲ್ ತಖ್ತ್ ಸಾಹಿಬ್ ಅವರ ನಾಯಕತ್ವದಲ್ಲಿ ಒಗ್ಗೂಡಿದ್ದೇವೆ’ ಎಂದು ಹೇಳಿದರು.

61 ವರ್ಷದ ಅಕಾಲಿ ನಾಯಕ ಸೋಮವಾರ ಬಿಹಾರ ಮತ್ತು ಮಹಾರಾಷ್ಟ್ರದ ಸಿಖ್ ಸಂಗತ್ ಸದಸ್ಯರನ್ನು ಪಕ್ಷದ ದೆಹಲಿ ರಾಜ್ಯ ಘಟಕದ ಅಧ್ಯಕ್ಷ ಎಸ್ ಪರಮ್ಜಿತ್ ಸಿಂಗ್ ಸರ್ನಾ ಅವರ ನಿವಾಸದಲ್ಲಿ ಭೇಟಿಯಾದರು. ‘ಶಿರೋಮಣಿ ಅಕಾಲಿದಳವು ಸಿಖ್ ಜನಸಂಖ್ಯೆಯನ್ನು ಹೊಂದಿರುವ ಎಲ್ಲ ರಾಜ್ಯಗಳಲ್ಲಿ ಪಕ್ಷದ ಘಟಕಗಳನ್ನು ಸ್ಥಾಪಿಸುತ್ತದೆ’ ಎಂದು ಅವರು ಘೋಷಿಸಿದರು.

ಒಗ್ಗಟ್ಟಾಗಿ ಉಳಿಯಲು ಸಮುದಾಯಕ್ಕೆ ಮನವಿ:

‘ಒಡೆದು ಹೋಗಬೇಡಿ, ಒಗ್ಗಟ್ಟಾಗಿ ಉಳಿಯುವಂತೆ ನಿಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ… ಶಿರೋಮಣಿ ಅಕಾಲಿದಳವು ಎಲ್ಲ ರಾಜ್ಯಗಳಲ್ಲಿ ಪಕ್ಷದ ಘಟಕಗಳನ್ನು ಸ್ಥಾಪಿಸಲಿದೆ…’ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಹಿರಿಯ ಅಕಾಲಿ ನಾಯಕ ಎಸ್ ಮಂಜಿತ್ ಸಿಂಗ್ ಜಿಕೆ ಅವರು ತಮ್ಮ ಸಂಪೂರ್ಣ ಜಾಗೋ ಪಕ್ಷದ ತಂಡದೊಂದಿಗೆ ಶಿರೋಮಣಿ ಅಕಾಲಿ ದಳಕ್ಕೆ ಮರುಸೇರ್ಪಡೆಯಾಗುವುದಕ್ಕೆ ಸಭೆ ಸಾಕ್ಷಿಯಾಯಿತು.

‘ಈ ಏಕತೆಯು ಸಿಖ್ ಸಮುದಾಯವನ್ನು ಬಲಪಡಿಸುವುದಲ್ಲದೆ, ನಮ್ಮ ಎಲ್ಲಾ ಬಾಕಿ ಇರುವ ಬೇಡಿಕೆಗಳ ಪರಿಹಾರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ನನಗೆ ಖಾತ್ರಿಯಿದೆ. ಸಿಖ್ ಸಮುದಾಯವು ವಿವಿಧ ಸವಾಲುಗಳನ್ನು ಎದುರಿಸುತ್ತಿದೆ ಮತ್ತು ಎಲ್ಲರ ನಿರ್ಣಯವನ್ನು ಸಾಧಿಸಲು ಮಾತ್ರ ನಾವು ಎಲ್ಲರೂ ಪಂಥ್ನ ಧ್ವಜದ ಅಡಿಯಲ್ಲಿ ಒಂದಾಗಬಹುದು’ ಎಂದು ಬಾದಲ್ ಹೇಳಿದರು.

ಇದನ್ನೂ ಓದಿ; ಬ್ರಿಟನ್‌ನಲ್ಲಿ ರಾಜಕೀಯದ ಚಿತ್ರಣ ಬದಲಿಸಿದ ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...