Homeಮುಖಪುಟ'ಹಿಂದೂ' ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

- Advertisement -
- Advertisement -

ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ‘ಹಿಂದೂ ಏಕ್ ಧೋಖಾ ಹೈ'( ಹಿಂದೂ ಎಂಬುವುದು ಒಂದು ವಂಚನೆಯಾಗಿದೆ) ಎಂದು ಹೇಳಿಕೆಯನ್ನು ನೀಡಿದ್ದು,  ‘ಹಿಂದೂ’ ಬಗ್ಗೆ ಪ್ರಧಾನಿ ಮೋದಿ, ಆರೆಸ್ಸೆಸ್‌ ನಾಯಕರು ಹೇಳಿಕೆಯನ್ನು ಕೊಟ್ಟಾಗ ಯಾರ ಭಾವನೆಗೂ ಧಕ್ಕೆಯಾಗುವುದಿಲ್ಲ. ನಾನು ಅದೇ ಹೇಳಿಕೆಯನ್ನು ಕೊಟ್ಟಾಗ ದೊಡ್ಡ ವಿವಾದ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಬೌದ್ಧ ಮತ್ತು ಬಹುಜನ ಹಕ್ಕುಗಳ ಸಭೆಯಲ್ಲಿ ಮಾತನಾಡಿದ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ, ಈ ಕುರಿತು ತಮ್ಮ ಹೇಳಿಕೆಯಲ್ಲಿ ಸುಪ್ರೀಂಕೋರ್ಟ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ.

‘ಹಿಂದೂ ಏಕ್ ಧೋಖಾ ಹೈ’, 1955ರಲ್ಲಿ ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಹಿಂದೂ ಧರ್ಮವಲ್ಲ ಆದರೆ ಜೀವನ ವಿಧಾನ ಎಂದು ಹೇಳಿದೆ. ಇದು 200ಕ್ಕೂ ಹೆಚ್ಚು ಧರ್ಮಗಳ ಒಕ್ಕೂಟವಾಗಿದೆ. ಹಿಂದೂ ಎಂಬುವುದು ಧರ್ಮವಲ್ಲ, ಜೀವನ ವಿಧಾನವಾಗಿದೆ ಎಂದು ಮೋಹನ್ ಭಾಗವತ್ ಕೂಡ ಒಂದಲ್ಲ ಎರಡು ಬಾರಿ ಹೇಳಿದ್ದರು.  ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂ ಧರ್ಮವಲ್ಲ ಎಂದು ಹೇಳಿದ್ದಾರೆ ಎಂದ ಸ್ವಾಮಿ ಪ್ರಸಾದ್ ಮೌರ್ಯ, ಬಿಜೆಪಿ, ಆರೆಸ್ಸೆಸ್ ನಾಯಕರು ಇದನ್ನು ಹೇಳಿದಾಗ ಯಾರ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ. ಆದರೆ ಸ್ವಾಮಿ ಪ್ರಸಾದ್ ಮೌರ್ಯ ಅವರು ಹಿಂದೂ ಧರ್ಮವಲ್ಲ ಎಂದು ಹೇಳಿದಾಗ ಇಡೀ ದೇಶದಲ್ಲಿ ಗದ್ದಲ ಉಂಟಾಗುತ್ತದೆ ಎಂದು ಹೇಳಿದ್ದಾರೆ.

1955ರಲ್ಲಿ ಸುಪ್ರೀಂಕೋರ್ಟ್ ಹೇಳಿದಾಗ ಯಾರೂ ವಿರೋಧಿಸಿಲ್ಲ. ಆದರೆ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದಾಗ ದೇಶಾದ್ಯಂತ ಎಫ್‌ಐಆರ್‌ಗಳು ದಾಖಲಾಗಿವೆ. ನಾನು ಭಾರತೀಯ ಸಂವಿಧಾನ ಹೇಳುತ್ತಿರುವಂತೆಯೇ ಹೇಳುತ್ತಿದ್ದೇನೆ. ಹಿಂದೂ ಮೇಲ್ವರ್ಗದವರು ಅಧಿಕಾರಕ್ಕೆ ಬರಲು ಬಹುಜನ ಮತಬ್ಯಾಂಕ್ ಬಳಸುತ್ತಾರೆ. ಆದರೆ ಅಧಿಕಾರಕ್ಕೆ ಬಂದ ಬಳಿಕ ಅವರು ಮೀಸಲಾತಿಯನ್ನು ರದ್ದುಗೊಳಿಸುತ್ತಾರೆ ಎಂದು ಸಮಾಜವಾದಿ ಪಕ್ಷದ ನಾಯಕ ಹೇಳಿದ್ದಾರೆ.

ಬ್ರಾಹ್ಮಣ, ಕ್ಷತ್ರಿಯ ಮತ್ತು ವೈಶ್ಯರು ಒಟ್ಟು ಜನಸಂಖ್ಯೆಯಲ್ಲಿ 8 ಪ್ರತಿಶತದಷ್ಟಿದ್ದಾರೆ. ಈ ಎಂಟು ಪ್ರತಿಶತ ಜನರು ಸ್ವಂತವಾಗಿ ಸರ್ಕಾರ ರಚಿಸಲು ಸಾಧ್ಯವಿಲ್ಲ. ಇವರು ಹಿಂದುಳಿದ ವರ್ಗಗಳನ್ನು ಶೋಷಣೆ ಮಾಡಿ ಹಿಂದೂ ಹೆಸರಿನಲ್ಲಿ ಸರ್ಕಾರವನ್ನು ರಚಿಸಿದ್ದಾರೆ. ಮತಗಳ ಉದ್ದೇಶಕ್ಕಾಗಿ ನಾವು ಹಿಂದೂಗಳು, ಆದರೆ ಸರ್ಕಾರ ರಚಿಸಿದ ನಂತರ ನಾವು  ಹಿಂದೂಗಳಲ್ಲ. ಒಂದು ವೇಳೆ ನಾವು ಹಿಂದೂಗಳಾಗಿರುತ್ತಿದ್ದರೆ ಅವರು ಎಂದಿಗೂ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಅಥವಾ ಹಿಂದುಳಿದ ಜಾತಿಗಳಿಗೆ ಸೇರಿದ ಮೀಸಲಾತಿಯನ್ನು ರದ್ದುಗೊಳಿಸುತ್ತಿರಲಿಲ್ಲ ಎಂದು ಮೌರ್ಯ ಹೇಳಿದ್ದಾರೆ.

ಅಧಿಕಾರದ ಉನ್ನತ ಸ್ಥಾನದಲ್ಲಿ ಕುಳಿತವರು ಮೀಸಲಾತಿಯನ್ನು ಕಿತ್ತುಕೊಳ್ಳುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಹೇಳಿದ ಸ್ವಾಮಿ ಪ್ರಸಾದ್ ಮೌರ್ಯ, ಸಂವಿಧಾನದ ಮೇಲೆ ಆಣೆ ಮಾಡಿ ಪ್ರಮಾಣವಚನ ಸ್ವೀಕರಿಸುವ ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ಅಧಿಕಾರದ ಚುಕ್ಕಾಣಿ ಹಿಡಿದವರು ಮನುವಾದಕ್ಕೆ ಆದ್ಯತೆ ನೀಡುತ್ತಿದ್ದಾರೆ. ಸಂವಿಧಾನವನ್ನು ನಿಷ್ಫಲಗೊಳಿಸಲಾಗುತ್ತಿದೆ. ಮೀಸಲಾತಿಯನ್ನು ಕಸಿದುಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲಾಗುತ್ತಿದೆ. ಸುಮಾರು 150 ಸಂಸದರನ್ನು ಸಂಸತ್ತಿನಿಂದ ಅನರ್ಹಗೊಳಿಸಲಾಗಿದೆ. ಇದು ಪ್ರಜಾಪ್ರಭುತ್ವದ ವಿರುದ್ಧದ ಪಿತೂರಿಯಲ್ಲವೇ? ಎಂದು ಮೌರ್ಯ ಪ್ರಶ್ನಿಸಿದ್ದಾರೆ.

ಇದನ್ನು ಓದಿ; ವಾಮಾಚಾರದ ಶಂಕೆಯಲ್ಲಿ ಆದಿವಾಸಿ ಮಹಿಳೆಯ ಸಜೀವ ದಹನ: ಕೊನೆಗೊಳ್ಳದ ‘ಮಾಟಗಾತಿ’ ಹಣೆಪಟ್ಟಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...