Homeಮುಖಪುಟ'ಹಿಂದೂ' ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

- Advertisement -
- Advertisement -

ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ‘ಹಿಂದೂ ಏಕ್ ಧೋಖಾ ಹೈ'( ಹಿಂದೂ ಎಂಬುವುದು ಒಂದು ವಂಚನೆಯಾಗಿದೆ) ಎಂದು ಹೇಳಿಕೆಯನ್ನು ನೀಡಿದ್ದು,  ‘ಹಿಂದೂ’ ಬಗ್ಗೆ ಪ್ರಧಾನಿ ಮೋದಿ, ಆರೆಸ್ಸೆಸ್‌ ನಾಯಕರು ಹೇಳಿಕೆಯನ್ನು ಕೊಟ್ಟಾಗ ಯಾರ ಭಾವನೆಗೂ ಧಕ್ಕೆಯಾಗುವುದಿಲ್ಲ. ನಾನು ಅದೇ ಹೇಳಿಕೆಯನ್ನು ಕೊಟ್ಟಾಗ ದೊಡ್ಡ ವಿವಾದ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಬೌದ್ಧ ಮತ್ತು ಬಹುಜನ ಹಕ್ಕುಗಳ ಸಭೆಯಲ್ಲಿ ಮಾತನಾಡಿದ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ, ಈ ಕುರಿತು ತಮ್ಮ ಹೇಳಿಕೆಯಲ್ಲಿ ಸುಪ್ರೀಂಕೋರ್ಟ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ.

‘ಹಿಂದೂ ಏಕ್ ಧೋಖಾ ಹೈ’, 1955ರಲ್ಲಿ ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಹಿಂದೂ ಧರ್ಮವಲ್ಲ ಆದರೆ ಜೀವನ ವಿಧಾನ ಎಂದು ಹೇಳಿದೆ. ಇದು 200ಕ್ಕೂ ಹೆಚ್ಚು ಧರ್ಮಗಳ ಒಕ್ಕೂಟವಾಗಿದೆ. ಹಿಂದೂ ಎಂಬುವುದು ಧರ್ಮವಲ್ಲ, ಜೀವನ ವಿಧಾನವಾಗಿದೆ ಎಂದು ಮೋಹನ್ ಭಾಗವತ್ ಕೂಡ ಒಂದಲ್ಲ ಎರಡು ಬಾರಿ ಹೇಳಿದ್ದರು.  ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂ ಧರ್ಮವಲ್ಲ ಎಂದು ಹೇಳಿದ್ದಾರೆ ಎಂದ ಸ್ವಾಮಿ ಪ್ರಸಾದ್ ಮೌರ್ಯ, ಬಿಜೆಪಿ, ಆರೆಸ್ಸೆಸ್ ನಾಯಕರು ಇದನ್ನು ಹೇಳಿದಾಗ ಯಾರ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ. ಆದರೆ ಸ್ವಾಮಿ ಪ್ರಸಾದ್ ಮೌರ್ಯ ಅವರು ಹಿಂದೂ ಧರ್ಮವಲ್ಲ ಎಂದು ಹೇಳಿದಾಗ ಇಡೀ ದೇಶದಲ್ಲಿ ಗದ್ದಲ ಉಂಟಾಗುತ್ತದೆ ಎಂದು ಹೇಳಿದ್ದಾರೆ.

1955ರಲ್ಲಿ ಸುಪ್ರೀಂಕೋರ್ಟ್ ಹೇಳಿದಾಗ ಯಾರೂ ವಿರೋಧಿಸಿಲ್ಲ. ಆದರೆ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದಾಗ ದೇಶಾದ್ಯಂತ ಎಫ್‌ಐಆರ್‌ಗಳು ದಾಖಲಾಗಿವೆ. ನಾನು ಭಾರತೀಯ ಸಂವಿಧಾನ ಹೇಳುತ್ತಿರುವಂತೆಯೇ ಹೇಳುತ್ತಿದ್ದೇನೆ. ಹಿಂದೂ ಮೇಲ್ವರ್ಗದವರು ಅಧಿಕಾರಕ್ಕೆ ಬರಲು ಬಹುಜನ ಮತಬ್ಯಾಂಕ್ ಬಳಸುತ್ತಾರೆ. ಆದರೆ ಅಧಿಕಾರಕ್ಕೆ ಬಂದ ಬಳಿಕ ಅವರು ಮೀಸಲಾತಿಯನ್ನು ರದ್ದುಗೊಳಿಸುತ್ತಾರೆ ಎಂದು ಸಮಾಜವಾದಿ ಪಕ್ಷದ ನಾಯಕ ಹೇಳಿದ್ದಾರೆ.

ಬ್ರಾಹ್ಮಣ, ಕ್ಷತ್ರಿಯ ಮತ್ತು ವೈಶ್ಯರು ಒಟ್ಟು ಜನಸಂಖ್ಯೆಯಲ್ಲಿ 8 ಪ್ರತಿಶತದಷ್ಟಿದ್ದಾರೆ. ಈ ಎಂಟು ಪ್ರತಿಶತ ಜನರು ಸ್ವಂತವಾಗಿ ಸರ್ಕಾರ ರಚಿಸಲು ಸಾಧ್ಯವಿಲ್ಲ. ಇವರು ಹಿಂದುಳಿದ ವರ್ಗಗಳನ್ನು ಶೋಷಣೆ ಮಾಡಿ ಹಿಂದೂ ಹೆಸರಿನಲ್ಲಿ ಸರ್ಕಾರವನ್ನು ರಚಿಸಿದ್ದಾರೆ. ಮತಗಳ ಉದ್ದೇಶಕ್ಕಾಗಿ ನಾವು ಹಿಂದೂಗಳು, ಆದರೆ ಸರ್ಕಾರ ರಚಿಸಿದ ನಂತರ ನಾವು  ಹಿಂದೂಗಳಲ್ಲ. ಒಂದು ವೇಳೆ ನಾವು ಹಿಂದೂಗಳಾಗಿರುತ್ತಿದ್ದರೆ ಅವರು ಎಂದಿಗೂ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಅಥವಾ ಹಿಂದುಳಿದ ಜಾತಿಗಳಿಗೆ ಸೇರಿದ ಮೀಸಲಾತಿಯನ್ನು ರದ್ದುಗೊಳಿಸುತ್ತಿರಲಿಲ್ಲ ಎಂದು ಮೌರ್ಯ ಹೇಳಿದ್ದಾರೆ.

ಅಧಿಕಾರದ ಉನ್ನತ ಸ್ಥಾನದಲ್ಲಿ ಕುಳಿತವರು ಮೀಸಲಾತಿಯನ್ನು ಕಿತ್ತುಕೊಳ್ಳುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಹೇಳಿದ ಸ್ವಾಮಿ ಪ್ರಸಾದ್ ಮೌರ್ಯ, ಸಂವಿಧಾನದ ಮೇಲೆ ಆಣೆ ಮಾಡಿ ಪ್ರಮಾಣವಚನ ಸ್ವೀಕರಿಸುವ ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ಅಧಿಕಾರದ ಚುಕ್ಕಾಣಿ ಹಿಡಿದವರು ಮನುವಾದಕ್ಕೆ ಆದ್ಯತೆ ನೀಡುತ್ತಿದ್ದಾರೆ. ಸಂವಿಧಾನವನ್ನು ನಿಷ್ಫಲಗೊಳಿಸಲಾಗುತ್ತಿದೆ. ಮೀಸಲಾತಿಯನ್ನು ಕಸಿದುಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲಾಗುತ್ತಿದೆ. ಸುಮಾರು 150 ಸಂಸದರನ್ನು ಸಂಸತ್ತಿನಿಂದ ಅನರ್ಹಗೊಳಿಸಲಾಗಿದೆ. ಇದು ಪ್ರಜಾಪ್ರಭುತ್ವದ ವಿರುದ್ಧದ ಪಿತೂರಿಯಲ್ಲವೇ? ಎಂದು ಮೌರ್ಯ ಪ್ರಶ್ನಿಸಿದ್ದಾರೆ.

ಇದನ್ನು ಓದಿ; ವಾಮಾಚಾರದ ಶಂಕೆಯಲ್ಲಿ ಆದಿವಾಸಿ ಮಹಿಳೆಯ ಸಜೀವ ದಹನ: ಕೊನೆಗೊಳ್ಳದ ‘ಮಾಟಗಾತಿ’ ಹಣೆಪಟ್ಟಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...