Homeಮುಖಪುಟ'ಹಿಂದೂ' ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

- Advertisement -
- Advertisement -

ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ‘ಹಿಂದೂ ಏಕ್ ಧೋಖಾ ಹೈ'( ಹಿಂದೂ ಎಂಬುವುದು ಒಂದು ವಂಚನೆಯಾಗಿದೆ) ಎಂದು ಹೇಳಿಕೆಯನ್ನು ನೀಡಿದ್ದು,  ‘ಹಿಂದೂ’ ಬಗ್ಗೆ ಪ್ರಧಾನಿ ಮೋದಿ, ಆರೆಸ್ಸೆಸ್‌ ನಾಯಕರು ಹೇಳಿಕೆಯನ್ನು ಕೊಟ್ಟಾಗ ಯಾರ ಭಾವನೆಗೂ ಧಕ್ಕೆಯಾಗುವುದಿಲ್ಲ. ನಾನು ಅದೇ ಹೇಳಿಕೆಯನ್ನು ಕೊಟ್ಟಾಗ ದೊಡ್ಡ ವಿವಾದ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಬೌದ್ಧ ಮತ್ತು ಬಹುಜನ ಹಕ್ಕುಗಳ ಸಭೆಯಲ್ಲಿ ಮಾತನಾಡಿದ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ, ಈ ಕುರಿತು ತಮ್ಮ ಹೇಳಿಕೆಯಲ್ಲಿ ಸುಪ್ರೀಂಕೋರ್ಟ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ.

‘ಹಿಂದೂ ಏಕ್ ಧೋಖಾ ಹೈ’, 1955ರಲ್ಲಿ ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಹಿಂದೂ ಧರ್ಮವಲ್ಲ ಆದರೆ ಜೀವನ ವಿಧಾನ ಎಂದು ಹೇಳಿದೆ. ಇದು 200ಕ್ಕೂ ಹೆಚ್ಚು ಧರ್ಮಗಳ ಒಕ್ಕೂಟವಾಗಿದೆ. ಹಿಂದೂ ಎಂಬುವುದು ಧರ್ಮವಲ್ಲ, ಜೀವನ ವಿಧಾನವಾಗಿದೆ ಎಂದು ಮೋಹನ್ ಭಾಗವತ್ ಕೂಡ ಒಂದಲ್ಲ ಎರಡು ಬಾರಿ ಹೇಳಿದ್ದರು.  ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂ ಧರ್ಮವಲ್ಲ ಎಂದು ಹೇಳಿದ್ದಾರೆ ಎಂದ ಸ್ವಾಮಿ ಪ್ರಸಾದ್ ಮೌರ್ಯ, ಬಿಜೆಪಿ, ಆರೆಸ್ಸೆಸ್ ನಾಯಕರು ಇದನ್ನು ಹೇಳಿದಾಗ ಯಾರ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ. ಆದರೆ ಸ್ವಾಮಿ ಪ್ರಸಾದ್ ಮೌರ್ಯ ಅವರು ಹಿಂದೂ ಧರ್ಮವಲ್ಲ ಎಂದು ಹೇಳಿದಾಗ ಇಡೀ ದೇಶದಲ್ಲಿ ಗದ್ದಲ ಉಂಟಾಗುತ್ತದೆ ಎಂದು ಹೇಳಿದ್ದಾರೆ.

1955ರಲ್ಲಿ ಸುಪ್ರೀಂಕೋರ್ಟ್ ಹೇಳಿದಾಗ ಯಾರೂ ವಿರೋಧಿಸಿಲ್ಲ. ಆದರೆ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದಾಗ ದೇಶಾದ್ಯಂತ ಎಫ್‌ಐಆರ್‌ಗಳು ದಾಖಲಾಗಿವೆ. ನಾನು ಭಾರತೀಯ ಸಂವಿಧಾನ ಹೇಳುತ್ತಿರುವಂತೆಯೇ ಹೇಳುತ್ತಿದ್ದೇನೆ. ಹಿಂದೂ ಮೇಲ್ವರ್ಗದವರು ಅಧಿಕಾರಕ್ಕೆ ಬರಲು ಬಹುಜನ ಮತಬ್ಯಾಂಕ್ ಬಳಸುತ್ತಾರೆ. ಆದರೆ ಅಧಿಕಾರಕ್ಕೆ ಬಂದ ಬಳಿಕ ಅವರು ಮೀಸಲಾತಿಯನ್ನು ರದ್ದುಗೊಳಿಸುತ್ತಾರೆ ಎಂದು ಸಮಾಜವಾದಿ ಪಕ್ಷದ ನಾಯಕ ಹೇಳಿದ್ದಾರೆ.

ಬ್ರಾಹ್ಮಣ, ಕ್ಷತ್ರಿಯ ಮತ್ತು ವೈಶ್ಯರು ಒಟ್ಟು ಜನಸಂಖ್ಯೆಯಲ್ಲಿ 8 ಪ್ರತಿಶತದಷ್ಟಿದ್ದಾರೆ. ಈ ಎಂಟು ಪ್ರತಿಶತ ಜನರು ಸ್ವಂತವಾಗಿ ಸರ್ಕಾರ ರಚಿಸಲು ಸಾಧ್ಯವಿಲ್ಲ. ಇವರು ಹಿಂದುಳಿದ ವರ್ಗಗಳನ್ನು ಶೋಷಣೆ ಮಾಡಿ ಹಿಂದೂ ಹೆಸರಿನಲ್ಲಿ ಸರ್ಕಾರವನ್ನು ರಚಿಸಿದ್ದಾರೆ. ಮತಗಳ ಉದ್ದೇಶಕ್ಕಾಗಿ ನಾವು ಹಿಂದೂಗಳು, ಆದರೆ ಸರ್ಕಾರ ರಚಿಸಿದ ನಂತರ ನಾವು  ಹಿಂದೂಗಳಲ್ಲ. ಒಂದು ವೇಳೆ ನಾವು ಹಿಂದೂಗಳಾಗಿರುತ್ತಿದ್ದರೆ ಅವರು ಎಂದಿಗೂ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಅಥವಾ ಹಿಂದುಳಿದ ಜಾತಿಗಳಿಗೆ ಸೇರಿದ ಮೀಸಲಾತಿಯನ್ನು ರದ್ದುಗೊಳಿಸುತ್ತಿರಲಿಲ್ಲ ಎಂದು ಮೌರ್ಯ ಹೇಳಿದ್ದಾರೆ.

ಅಧಿಕಾರದ ಉನ್ನತ ಸ್ಥಾನದಲ್ಲಿ ಕುಳಿತವರು ಮೀಸಲಾತಿಯನ್ನು ಕಿತ್ತುಕೊಳ್ಳುವ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಹೇಳಿದ ಸ್ವಾಮಿ ಪ್ರಸಾದ್ ಮೌರ್ಯ, ಸಂವಿಧಾನದ ಮೇಲೆ ಆಣೆ ಮಾಡಿ ಪ್ರಮಾಣವಚನ ಸ್ವೀಕರಿಸುವ ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ಅಧಿಕಾರದ ಚುಕ್ಕಾಣಿ ಹಿಡಿದವರು ಮನುವಾದಕ್ಕೆ ಆದ್ಯತೆ ನೀಡುತ್ತಿದ್ದಾರೆ. ಸಂವಿಧಾನವನ್ನು ನಿಷ್ಫಲಗೊಳಿಸಲಾಗುತ್ತಿದೆ. ಮೀಸಲಾತಿಯನ್ನು ಕಸಿದುಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲಾಗುತ್ತಿದೆ. ಸುಮಾರು 150 ಸಂಸದರನ್ನು ಸಂಸತ್ತಿನಿಂದ ಅನರ್ಹಗೊಳಿಸಲಾಗಿದೆ. ಇದು ಪ್ರಜಾಪ್ರಭುತ್ವದ ವಿರುದ್ಧದ ಪಿತೂರಿಯಲ್ಲವೇ? ಎಂದು ಮೌರ್ಯ ಪ್ರಶ್ನಿಸಿದ್ದಾರೆ.

ಇದನ್ನು ಓದಿ; ವಾಮಾಚಾರದ ಶಂಕೆಯಲ್ಲಿ ಆದಿವಾಸಿ ಮಹಿಳೆಯ ಸಜೀವ ದಹನ: ಕೊನೆಗೊಳ್ಳದ ‘ಮಾಟಗಾತಿ’ ಹಣೆಪಟ್ಟಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...