Homeಕರ್ನಾಟಕಇಂದಿನಿಂದ ‘ಯುವನಿಧಿ’ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ?

ಇಂದಿನಿಂದ ‘ಯುವನಿಧಿ’ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ?

- Advertisement -
- Advertisement -

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಯುವನಿಧಿ’ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಅರ್ಹ ನಿರುದ್ಯೋಗಿ ಯುವಜನರು ಅರ್ಜಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಐದು ಗ್ಯಾರಂಟಿಗಳಲ್ಲಿ ಸರ್ಕಾರ ಈಗಾಗಲೇ ಅನ್ನಭಾಗ್ಯ, ಶಕ್ತಿ (ಉಚಿತ ಪ್ರಯಾಣ), ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಜೋಜನೆಗಳನ್ನು ಜಾರಿ ಮಾಡಿದೆ. ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳ ನಂತರ ಇದೀಗ ಯುವನಿಧಿ ಜಾರಿ ಮೂಲಕ ಪದವಿ ಹಾಗೂ ಡಿಪ್ಲೋಮಾ ಮುಗಿಸಿರುವ ಅರ್ಹ ಯುವಜನರಿಗೆ ನೆರವಾಗಲು ಸರ್ಕಾರ ಮುಂದಾಗಿದೆ.

‘ಪದವೀಧರ ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ನಮ್ಮ ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಯ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ. ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಜನರು ಯೋಜನೆಗೆ ನೊಂದಾಯಿಸಿಕೊಳ್ಳುವ ಮೂಲಕ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

‘ನಿರುದ್ಯೋಗಿ ಪದವೀಧರರ ಶ್ರೇಯೋಭಿವೃದ್ಧಿಗಾಗಿ ನಮ್ಮ ಸರ್ಕಾರ ಘೋಷಿಸಿದ್ದ “ಯುವನಿಧಿ” ಗ್ಯಾರಂಟಿಯ ನೋಂದಣಿ ಪ್ರಕ್ರಿಯೆಗೆ ಇಂದು ಚಾಲನೆ ದೊರೆಯಲಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ’ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಅರ್ಜಿ ಸಲ್ಲಿಸುವುದು ಹೇಗೆ?

ಯುವನಿಧಿ ಫಲಾನುಭವಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಯ್ಕೆಯಾಗುವ ಫಲಾನುಭವಿಗಳ ಬ್ಯಾಂಕ್ ಖಾತೆಗೆ 2024ರ ಜನವರಿ 12ರಂದು ಹಣ ಜಮಾವಣೆ ಆಗಲಿದೆ.
ಯುವನಿಧಿ ಯೋಜನೆಯನ್ನು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಚಾಲನೆ ನೀಡಲಾಗುತ್ತಿದ್ದು, 2022-23ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ತೇರ್ಗಡೆ ಆಗಿ 6 ತಿಂಗಳಿಂದ ಉದ್ಯೋಗ ಸಿಗದೇ ಇರುವವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆ ಪಡೆದುಕೊಂಡಿರುತ್ತಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು https://sevasindhu.karnataka.gov.in ಲಿಂಕ್ ಬಳಸಿ ಸೇವಾಸಿಂಧು ಪೋರ್ಟಲ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಸೇರಿದಂತೆ ಇತರೆ ಅಧಿಕೃತ ಡಿಜಿಟಲ್ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಳ್ಳಲು ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಭರಿಸಬೇಕಾದ ಅಗತ್ಯ ಇಲ್ಲ ಎಂದು ಸರ್ಕಾರ ಹೇಳಿದೆ.

ಯುವನಿಧಿ ಯೋಜನೆ ಮೂಲಕ ಅರ್ಹ ಪಧವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ₹3000 ಹಾಗೂ ಡಿಪ್ಲೊಮ ಉತ್ತೀರ್ಣರಾಗಿರುವ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ₹1500 ಸಿಗಲಿದೆ. ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದ್ದು, ಈ ಯೋಜನೆಯಡಿ ಮುಂದಿನ 2 ವರ್ಷಗಳ ಅವಧಿಗೆ ಮಾತ್ರ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಭತ್ಯೆ ಪಡೆಯುತ್ತಿರುವಗಲೇ ಯುವಜನರು ಉದ್ಯೋಗಕ್ಕೆ ಸೇರಿಕೊಂಡರೆ ತಕ್ಷಣವೇ ಭತ್ಯೆ ನಿಲ್ಲಿಸಲಾಗುತ್ತದೆ.

ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ್ಯ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲರಾದರೆ ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರುಸುವವರಿಗೆ ಯೋಜನೆ ಅನ್ವಯಿಸುವುದಿಲ್ಲ ಹಾಗೂ ವಿದ್ಯಾಭ್ಯಾಸ ಮುಗಿಸಿ ಕಂಪನಿಗಳಲ್ಲಿ ಅಪ್ರೆಂಟಿಸ್ ತರಬೇತಿ ವೇತನ ಪಡೆಯುತ್ತಿರುವವರಿಗೆ ಯುವನಿಧಿ ಅನ್ವಯಿಸುವಿದಿಲ್ಲ. ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರಿಗೂ ಅನ್ವಯ ಆಗುವುದಿಲ್ಲ. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರಿಗೂ ಯೋಜನೆ ಅನ್ವಯ ಆಗುವುದಿಲ್ಲ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ; WFI ಆಡಳಿತ ಮಂಡಳಿ ಅಮಾನತುಗೊಂಡಿಲ್ಲ, ಗೊಂದಲ ಸೃಷ್ಟಿಸಲು ಚಟುವಟಿಕೆ ಸ್ಥಗಿತ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...