Homeಮುಖಪುಟಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

- Advertisement -
- Advertisement -

ತಮಿಳುನಾಡಿನ ತಿರುಪ್ಪೂರ್‌ ಜಿಲ್ಲೆಯಲ್ಲಿ ಸವರ್ಣಿಯ ಜಾತಿಯ ಜನರು ವಿಧಿಸಿದ್ದ ನಿರ್ಬಂಧವನ್ನು ಮುರಿದ ದಲಿತ ಸಮುದಾಯದ ಜನರು ಇದೇ ಮೊದಲ ಬಾರಿಗೆ ಗ್ರಾಮದಲ್ಲಿ ಪಾದರಕ್ಷೆಗಳನ್ನು ಹಾಕಿಕೊಂಡು  ಸವರ್ಣಿಯರು ವಾಸವಿದ್ದ ಬೀದಿಯಲ್ಲಿ ನಡೆದಾಡಿದ್ದಾರೆ.

ಮಡತುಕುಲಂ ತಾಲೂಕಿನ ರಾಜವೂರ್ ಗ್ರಾಮದ ‘ಕಂಬಳ ನಾಯ್ಕನ್ ಸ್ಟ್ರೀಟ್’ನಲ್ಲಿ  ದಲಿತ ಸಮುದಾಯಕ್ಕೆ ಸೇರಿದ 60 ಮಂದಿ ಪಾದರಕ್ಷೆಗಳನ್ನು ಧರಿಸಿ ನಡೆದಿದ್ದು, ಸವರ್ಣಿಯರು ವಿಧಿಸಿದ್ದ ಪಾದರಕ್ಷೆಗಳನ್ನು ಧರಿಸಿ ನಡೆಯಬಾರದು ಎಂಬ ಅಲಿಖಿತ ನಿರ್ಬಂಧವನ್ನು ಮುರಿದಿದ್ದಾರೆ. ಇದಲ್ಲದೆ ಗ್ರಾಮದಲ್ಲಿ ದಲಿತ ಸಮುದಾಯದ ಜನರಿಗೆ ಸೈಕಲ್ ಸವಾರಿ ಮಾಡದಂತೆ ಕೂಡ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗಿದೆ.

300 ಮೀಟರ್‌ ಉದ್ದದ ರಸ್ತೆಯ ಇಕ್ಕೆಲದ ಸುಮಾರು 60 ನಿವಾಸಿಗಳು ಹಿಂದುಳಿದ ಜಾತಿಗೆ ಸೇರಿದವರು. ಈ ಗ್ರಾಮದ 900 ಕುಟುಂಬಗಳ ಪೈಕಿ 800 ಕುಟುಂಬಗಳು ಗೌಂಡರ್‌ ಸಮುದಾಯಕ್ಕೆ ಸೇರಿದವರು.

ಈ ಬಗ್ಗೆ ಮಾತನಾಡಿದ ಗ್ರಾಮಸ್ಥರೊರ್ವರು, ಇಲ್ಲಿ ಚಪ್ಪಲಿ ಹಾಕಿಕೊಂಡು ನಡೆಯದಂತೆ ಎಸ್‌ಸಿ ಸಮುದಾಯದ ಜನರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಹಲ್ಲೆ ಕೂಡ ಮಾಡಲಾಗಿದೆ. ಸವರ್ಣಿಯ ಜಾತಿಯ ಮಹಿಳೆಯರು ಕೂಡ ದಲಿತರು ತಮ್ಮ ಬೀದಿಯಲ್ಲಿ ಚಪ್ಪಲಿ ಹಾಕಿಕೊಂಡು ನಡೆದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ನಾವು ಬೀದಿ ತಪ್ಪಿಸಿ ದಶಕಗಳಿಂದ ದಬ್ಬಾಳಿಕೆಯಲ್ಲಿ ಬದುಕುತ್ತಿದ್ದೇವೆ. ಕೆಲವು ವಾರಗಳ ಹಿಂದೆ ನಾವು ಸಮಸ್ಯೆಯನ್ನು ದಲಿತ ಸಂಘಟನೆಗಳ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.

ನಾವು ಚಪ್ಪಲಿಯೊಂದಿಗೆ ಬೀದಿಯಲ್ಲಿ ನಡೆದು ದಶಕಗಳ ಕಾಲದ ದಬ್ಬಾಳಿಕೆಯನ್ನು ಕೊನೆಗೊಳಿಸಿದ್ದೇವೆ ಎಂದು ಮತ್ತೋರ್ವ ಗ್ರಾಮಸ್ಥರು ಹೇಳಿದ್ದಾರೆ.

ಎಸ್‌ಸಿ ಸಮುದಾಯದ ಇನ್ನೋರ್ವ ಸದಸ್ಯರು ಈ ಬಗ್ಗೆ ಮಾತನಾಡಿದ್ದು, ಸ್ವಾತಂತ್ರ್ಯದ ನಂತರ ಅಸ್ಪೃಶ್ಯತೆ ನಿಷೇಧವಾಗಿದ್ದರೂ, ಸವರ್ಣಿಯ ಜಾತಿಯ ಜನ ತಮ್ಮ ಆಚರಣೆಯನ್ನು ಮುಂದುವರಿಸಲು ಕಥೆ ಕಟ್ಟಿದ್ದಾರೆ. ಬೀದಿಯ ಕೆಳಗೆ ವೂಡೂ ಗೊಂಬೆಯನ್ನು ಹೂಳಲಾಗಿದೆ ಮತ್ತು ಎಸ್‌ಸಿ ಜನರು ಚಪ್ಪಲಿಯೊಂದಿಗೆ ಬೀದಿಯಲ್ಲಿ ನಡೆದರೆ ಅವರು 3 ತಿಂಗಳೊಳಗೆ ಸಾಯುತ್ತಾರೆ. ಕೆಲವು ದಲಿತ ಸಮುದಾಯದ ಸದಸ್ಯರು ಆ ಕಥೆಗಳನ್ನು ನಂಬುತ್ತಾರೆ ಮತ್ತು ಚಪ್ಪಲಿಗಳಿಲ್ಲದೆ ನಡೆಯಲು ಪ್ರಾರಂಭಿಸಿದರು ಮತ್ತು ಅಭ್ಯಾಸವು ಇಂದಿಗೂ ಮುಂದುವರಿದಿದೆ ಎಂದು ಹೇಳಿದ್ದಾರೆ.

ತಮಿಳುನಾಡು ಅಸ್ಪೃಶ್ಯತೆ ನಿರ್ಮೂಲನಾ ರಂಗದ ಕಾರ್ಯದರ್ಶಿ ಸಿ.ಕೆ.ಕನಗರಾಜ್ ಮಾತನಾಡಿ, ಕಳೆದ ವಾರ ನಾವು ಗ್ರಾಮಕ್ಕೆ ಹೋಗಿದ್ದೆವು ಮತ್ತು ಹಲವಾರು ದಲಿತ ಮಹಿಳೆಯರು ನಿರ್ದಿಷ್ಟ ರಸ್ತೆಯನ್ನು ನಿರ್ಬಂಧಿಸಿರುವ ಬಗ್ಗೆ ಹೆಳಿದ್ದರು. ನಾವು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೆವು. ಆದರೆ ಪೊಲೀಸರು ಅನುಮತಿ ನಿರಾಕರಿಸಿದರು ಮತ್ತು ಮುಂದೂಡುವಂತೆ ಹೇಳಿದರು. ನಾವು ಆ ಮನವಿಯನ್ನು ಸ್ವೀಕರಿಸಿದ್ದೇವೆ. ಕೊನೆಗೆ ಸಂಘಟನೆಯ ಸದಸ್ಯರು, ಗ್ರಾಮಸ್ಥರು ಹಾಗೂ ಸಿಪಿಎಂ, ವಿಸಿಕೆ ಮತ್ತು ಎಟಿಪಿ ಪ್ರತಿನಿಧಿಗಳು ಈ ರಸ್ತೆ ಮೂಲಕ ಚಪ್ಪಲಿ ಧರಿಸಿ ಸಾಗಿ ಗ್ರಾಮದ ರಾಜಕಾಳಿಯಮ್ಮನ್‌ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ದೇವಸ್ಥಾನಕ್ಕೂ ದಲಿತರಿಗೆ ಪ್ರವೇಶವಿರಲಿಲ್ಲ. ರವಿವಾರ ಸುಮಾರು 60 ದಲಿತರು ಚಪ್ಪಲಿ ಧರಿಸಿ ಈ ರಸ್ತೆಯಲ್ಲಿ ನಡೆದಾಗ ಯಾರೂ ಅವರನ್ನು ತಡೆಯಲಿಲ್ಲ. ಪೊಲೀಸರು ನಿಗಾ ವಹಿಸಿದ್ದರು ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...