Homeಮುಖಪುಟಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

ಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

- Advertisement -
- Advertisement -

ಪೂಂಛ್‌ನಲ್ಲಿ ಸೇನಾ ಪಡೆಗಳ ವಿರುದ್ಧ ಮೂವರು ನಾಗರಿಕರ ಹತ್ಯೆಯ ಆರೋಪ ಕೇಳಿ ಬಂದಿತ್ತು. ಇದೀಗ ಭದ್ರತಾ ಪಡೆಗಳಿಂದ ಬಂಧಿತ ವ್ಯಕ್ತಿಗಳಲ್ಲಿ ಓರ್ವರು ತಮ್ಮ ಮೇಲೆ ನಡೆದ ದೌರ್ಜನ್ಯವನ್ನು ಬಿಚ್ಚಿಟ್ಟಿದ್ದಾರೆ. ನಮ್ಮನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ ಮತ್ತು ಅವರು ಗಾಯಗಳ ಮೇಲೆ ಮೆಣಸಿನ ಪುಡಿ ಎರಚಿ ಪ್ರಜ್ಞೆ ಕಳೆದುಕೊಳ್ಳುವವರೆಗೂ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಆಸ್ಪತ್ರೆಯಿಂದಲೇ ಮಾದ್ಯಮಗಳ ಜೊತೆ ಮಾತನಾಡಿದ ಮೊಹಮ್ಮದ್ ಅಶ್ರಫ್ (52), ಕಳೆದ ವಾರ ಸೇನಾಪಡೆಗಳು ತನ್ನನ್ನು ಮತ್ತು ಇತರ ನಾಲ್ವರನ್ನು ಕರೆದೊಯ್ದಿದ್ದರು. ನಂತರ ಅವರು ನಮ್ಮ ಬಟ್ಟೆಗಳನ್ನು ಬಿಚ್ಚಿಸಿ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹೊಡೆದರು ಮತ್ತು ನಮ್ಮ ಮೇಲಾದ ಗಾಯಗಳ ಮೇಲೆ ಮೆಣಸಿನ ಪುಡಿಯನ್ನು ಹಾಕಿದ್ದಾರೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಉಗ್ರರು ನಡೆಸಿದ ಹೊಂಚು ದಾಳಿಯಲ್ಲಿ ನಾಲ್ವರು ಸೇನಾಧಿಕಾರಿಗಳ ಹತ್ಯೆ ನಡೆದಿತ್ತು. ಘಟನೆಗೆ ಸಂಬಂಧಿಸಿ ಸೇನಾಧಿಕಾರಿಗಳು 8 ಮಂದಿ ನಾಗರಿಕರನ್ನು ವಶಕ್ಕೆ ಪಡೆದುಕೊಂಡಿದ್ದರು. ಅದರಲ್ಲಿ ಮೂವರು ನಾಗರಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅಶ್ರಫ್ ಸೇರಿದಂತೆ ಐವರನ್ನು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಮೊದಲು ಸೇನಾ ಸಿಬ್ಬಂದಿಯೋರ್ವ, ವ್ಯಕ್ತಿಯೊಬ್ಬನಿಗೆ ಕಬ್ಬಿಣದ ರಾಡ್ ಮತ್ತು ಲಾಠಿಗಳಿಂದ ಥಳಿಸುತ್ತಿರುವುದನ್ನು ತೋರಿಸುವ ವಿಡಿಯೋ ವೈರಲ್ ಆಗಿದೆ. ಆ ವೀಡಿಯೊದಲ್ಲಿರುವ ವ್ಯಕ್ತಿ ನಾನು, ಈ ಆಘಾತದಿಂದ ಕಳೆದ ಶನಿವಾರದಿಂದ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ. ದೇಹದಾದ್ಯಂತ ತೀವ್ರವಾದ ನೋವು ಮತ್ತು ಚಿತ್ರಹಿಂಸೆಯ ದೃಶ್ಯಗಳು ಕಣ್ಣ ಮುಂದೆ ಇದೆ. ಇದರಿಂದ ನಿದ್ರೆಯೇ ಬಂದಿಲ್ಲ ಎಂದು ಅಶ್ರಫ್ ಹೇಳಿದ್ದಾರೆ.

ರಜೌರಿ ಜಿಲ್ಲೆಯ ಥಾನಮಂಡಿ ಪ್ರದೇಶದ ನಿವಾಸಿ ಅಶ್ರಫ್ 2007ರಿಂದ ಜಮ್ಮು-ಕಾಶ್ಮೀರದ ವಿದ್ಯುತ್  ಇಲಾಖೆಯಲ್ಲಿ ಲೈನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ತಿಂಗಳಿಗೆ 9,330ರೂ.ವೇತನ ನೀಡಲಾಗುತ್ತಿತ್ತು. ಅವರಿಗೆ ಓರ್ವ ಮಗಳು ಸೇರಿ ಮೂವರು ಮಕ್ಕಳಿದ್ದಾರೆ. ಅವರ ಪತ್ನಿ ಈ ವರ್ಷ ಮಾ. 23ರಂದು ಮೃತಪಟ್ಟಿದ್ದರು.

ಅಶ್ರಫ್ ಅವರೊಂದಿಗೆ ರಾಜೌರಿ ಆಸ್ಪತ್ರೆಯಲ್ಲಿ ಫಾರೂಕ್ ಅಹ್ಮದ್ (45), ಫಝಲ್ ಹುಸೇನ್(50), ಮೊಹಮ್ಮದ್ ಬೇತಾಬ್ (25) ಮತ್ತು ಇನೋರ್ವ 15 ವರ್ಷದ ಬಾಲಕ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇವರೆಲ್ಲರೂ ಕೂಡ ಥಾನಮಂಡಿ ಪ್ರದೇಶದವರಾಗಿದ್ದರು.

ಆಸ್ಪತ್ರೆಯ ವೈದ್ಯರು ಆಸ್ಪತ್ರೆಗೆ ದಾಖಲಾಗಿದ್ದ ಐವರಿಗೂ ಗಾಯಗಳಿವೆ ಎಂದು ಹೇಳಿದ್ದರು. ಆದರೆ ಈ ಬಗ್ಗೆ  ಹೆಚ್ಚಿನದ್ದನ್ನು ಏನೂ ವಿವರಿಸಿರಲಿಲ್ಲ. ನಮಗೆ ಯಾರಿಗೂ ನಿಲ್ಲಲು ಮತ್ತು ಕುಳಿತುಕೊಳ್ಳಲು ಆಗುತ್ತಿಲ್ಲ. ನಾವು  ಶೌಚಾಲಯಕ್ಕೆ ಹೋಗಬೇಕಾದರೆ ಆಸ್ಪತ್ರೆ ಸಿಬ್ಬಂದಿಗಳು ನಮ್ಮನ್ನು ಗಾಲಿಕುರ್ಚಿ ಅಥವಾ ಸ್ಟ್ರೆಚರ್‌ಗಳಲ್ಲಿ ಕರೆದೊಯ್ಯುತ್ತಾರೆ ಎಂದು ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ನನ್ನನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. DKG ಶಿಬಿರಕ್ಕೆ ಫಾರೂಕ್ ಅಹ್ಮದ್‌, ಮೊಹಮ್ಮದ್ ಬೇತಾಬ್ ಮತ್ತು ಅವನ ಸಹೋದರನ ಜೊತೆ ಕೆರದುಕೊಂಡು ಹೋಗಿದ್ದಾರೆ. ನಾವು ಅಲ್ಲಿಗೆ ತಲುಪಿದ ನಂತರ ಬೆಳಿಗ್ಗೆ 10.30ಕ್ಕೆ ಅವರು ನಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿದರು ಮತ್ತು ಏನನ್ನೂ ಹೇಳದೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ನಮಗೆ ಹೊಡೆಯಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ ಅವರು ನಮ್ಮನ್ನು ವಿವಸ್ತ್ರಗೊಳಿಸಿ ಮತ್ತೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹೊಡೆಯಲು ಪ್ರಾರಂಭಿಸಿದರು ಮತ್ತು ನಾವು ಪ್ರಜ್ಞಾಹೀನರಾಗುವವರೆಗೂ ನಮ್ಮ ಗಾಯಗಳ ಮೇಲೆ ಮೆಣಸಿನ ಪುಡಿಯನ್ನು ಹಾಕಿದ್ದರು ಎಂದು ಹೇಳಿದ್ದಾರೆ.

ಏನಿದು ಘಟನೆ?

ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಾಲ್ವರು ಯೋಧರು ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ 8 ಮಂದಿಯಲ್ಲಿ ಮೂವರು ನಾಗರಿಕರು ಸೇನೆಯ ವಶದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಚಿತ್ರಹಿಂಸೆಗೆ ಒಳಗಾದ ಐವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತ ಪ್ರಸಾರವಾಗುತ್ತಿರುವ ವೀಡಿಯೋಗಳು ಹತ್ಯೆಗೊಳಗದವರಿಗೆ ಚಿತ್ರಹಿಂಸೆ ನೀಡಿರುವುದನ್ನು ಬಹಿರಂಗಪಡಿಸುತ್ತದೆ.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರದ ಆಡಳಿತವು ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ. ಇದಲ್ಲದೆ ಮೂವರು ಸೇನಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಕರಣದ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ಘಟನೆ ಬಳಿಕ ಪೂಂಛ್‌ನಲ್ಲಿ ಭಾರೀ ಪ್ರಮಾಣದಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ. ಕರ್ಪ್ಯೂ ವಿಧಿಸಲಾಗಿದೆ. ಇಂಟರ್ನೆಟ್‌ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಪೂಂಛ್‌ಗೆ ತೆರಳಿ ಸಂತ್ರಸ್ತ ಕುಟುಂಬದ ಭೇಟಿಗೆ ಮುಂದಾಗಿದ್ದ ಜಮ್ಮು-ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ)  ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನವನ್ನು ವಿಧಿಸಲಾಗಿದೆ.

ಇದನ್ನು ಓದಿ: ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...