Homeಮುಖಪುಟಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

ಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

- Advertisement -
- Advertisement -

ಪೂಂಛ್‌ನಲ್ಲಿ ಸೇನಾ ಪಡೆಗಳ ವಿರುದ್ಧ ಮೂವರು ನಾಗರಿಕರ ಹತ್ಯೆಯ ಆರೋಪ ಕೇಳಿ ಬಂದಿತ್ತು. ಇದೀಗ ಭದ್ರತಾ ಪಡೆಗಳಿಂದ ಬಂಧಿತ ವ್ಯಕ್ತಿಗಳಲ್ಲಿ ಓರ್ವರು ತಮ್ಮ ಮೇಲೆ ನಡೆದ ದೌರ್ಜನ್ಯವನ್ನು ಬಿಚ್ಚಿಟ್ಟಿದ್ದಾರೆ. ನಮ್ಮನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ ಮತ್ತು ಅವರು ಗಾಯಗಳ ಮೇಲೆ ಮೆಣಸಿನ ಪುಡಿ ಎರಚಿ ಪ್ರಜ್ಞೆ ಕಳೆದುಕೊಳ್ಳುವವರೆಗೂ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಆಸ್ಪತ್ರೆಯಿಂದಲೇ ಮಾದ್ಯಮಗಳ ಜೊತೆ ಮಾತನಾಡಿದ ಮೊಹಮ್ಮದ್ ಅಶ್ರಫ್ (52), ಕಳೆದ ವಾರ ಸೇನಾಪಡೆಗಳು ತನ್ನನ್ನು ಮತ್ತು ಇತರ ನಾಲ್ವರನ್ನು ಕರೆದೊಯ್ದಿದ್ದರು. ನಂತರ ಅವರು ನಮ್ಮ ಬಟ್ಟೆಗಳನ್ನು ಬಿಚ್ಚಿಸಿ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹೊಡೆದರು ಮತ್ತು ನಮ್ಮ ಮೇಲಾದ ಗಾಯಗಳ ಮೇಲೆ ಮೆಣಸಿನ ಪುಡಿಯನ್ನು ಹಾಕಿದ್ದಾರೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಉಗ್ರರು ನಡೆಸಿದ ಹೊಂಚು ದಾಳಿಯಲ್ಲಿ ನಾಲ್ವರು ಸೇನಾಧಿಕಾರಿಗಳ ಹತ್ಯೆ ನಡೆದಿತ್ತು. ಘಟನೆಗೆ ಸಂಬಂಧಿಸಿ ಸೇನಾಧಿಕಾರಿಗಳು 8 ಮಂದಿ ನಾಗರಿಕರನ್ನು ವಶಕ್ಕೆ ಪಡೆದುಕೊಂಡಿದ್ದರು. ಅದರಲ್ಲಿ ಮೂವರು ನಾಗರಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅಶ್ರಫ್ ಸೇರಿದಂತೆ ಐವರನ್ನು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಮೊದಲು ಸೇನಾ ಸಿಬ್ಬಂದಿಯೋರ್ವ, ವ್ಯಕ್ತಿಯೊಬ್ಬನಿಗೆ ಕಬ್ಬಿಣದ ರಾಡ್ ಮತ್ತು ಲಾಠಿಗಳಿಂದ ಥಳಿಸುತ್ತಿರುವುದನ್ನು ತೋರಿಸುವ ವಿಡಿಯೋ ವೈರಲ್ ಆಗಿದೆ. ಆ ವೀಡಿಯೊದಲ್ಲಿರುವ ವ್ಯಕ್ತಿ ನಾನು, ಈ ಆಘಾತದಿಂದ ಕಳೆದ ಶನಿವಾರದಿಂದ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ. ದೇಹದಾದ್ಯಂತ ತೀವ್ರವಾದ ನೋವು ಮತ್ತು ಚಿತ್ರಹಿಂಸೆಯ ದೃಶ್ಯಗಳು ಕಣ್ಣ ಮುಂದೆ ಇದೆ. ಇದರಿಂದ ನಿದ್ರೆಯೇ ಬಂದಿಲ್ಲ ಎಂದು ಅಶ್ರಫ್ ಹೇಳಿದ್ದಾರೆ.

ರಜೌರಿ ಜಿಲ್ಲೆಯ ಥಾನಮಂಡಿ ಪ್ರದೇಶದ ನಿವಾಸಿ ಅಶ್ರಫ್ 2007ರಿಂದ ಜಮ್ಮು-ಕಾಶ್ಮೀರದ ವಿದ್ಯುತ್  ಇಲಾಖೆಯಲ್ಲಿ ಲೈನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ತಿಂಗಳಿಗೆ 9,330ರೂ.ವೇತನ ನೀಡಲಾಗುತ್ತಿತ್ತು. ಅವರಿಗೆ ಓರ್ವ ಮಗಳು ಸೇರಿ ಮೂವರು ಮಕ್ಕಳಿದ್ದಾರೆ. ಅವರ ಪತ್ನಿ ಈ ವರ್ಷ ಮಾ. 23ರಂದು ಮೃತಪಟ್ಟಿದ್ದರು.

ಅಶ್ರಫ್ ಅವರೊಂದಿಗೆ ರಾಜೌರಿ ಆಸ್ಪತ್ರೆಯಲ್ಲಿ ಫಾರೂಕ್ ಅಹ್ಮದ್ (45), ಫಝಲ್ ಹುಸೇನ್(50), ಮೊಹಮ್ಮದ್ ಬೇತಾಬ್ (25) ಮತ್ತು ಇನೋರ್ವ 15 ವರ್ಷದ ಬಾಲಕ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇವರೆಲ್ಲರೂ ಕೂಡ ಥಾನಮಂಡಿ ಪ್ರದೇಶದವರಾಗಿದ್ದರು.

ಆಸ್ಪತ್ರೆಯ ವೈದ್ಯರು ಆಸ್ಪತ್ರೆಗೆ ದಾಖಲಾಗಿದ್ದ ಐವರಿಗೂ ಗಾಯಗಳಿವೆ ಎಂದು ಹೇಳಿದ್ದರು. ಆದರೆ ಈ ಬಗ್ಗೆ  ಹೆಚ್ಚಿನದ್ದನ್ನು ಏನೂ ವಿವರಿಸಿರಲಿಲ್ಲ. ನಮಗೆ ಯಾರಿಗೂ ನಿಲ್ಲಲು ಮತ್ತು ಕುಳಿತುಕೊಳ್ಳಲು ಆಗುತ್ತಿಲ್ಲ. ನಾವು  ಶೌಚಾಲಯಕ್ಕೆ ಹೋಗಬೇಕಾದರೆ ಆಸ್ಪತ್ರೆ ಸಿಬ್ಬಂದಿಗಳು ನಮ್ಮನ್ನು ಗಾಲಿಕುರ್ಚಿ ಅಥವಾ ಸ್ಟ್ರೆಚರ್‌ಗಳಲ್ಲಿ ಕರೆದೊಯ್ಯುತ್ತಾರೆ ಎಂದು ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ನನ್ನನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. DKG ಶಿಬಿರಕ್ಕೆ ಫಾರೂಕ್ ಅಹ್ಮದ್‌, ಮೊಹಮ್ಮದ್ ಬೇತಾಬ್ ಮತ್ತು ಅವನ ಸಹೋದರನ ಜೊತೆ ಕೆರದುಕೊಂಡು ಹೋಗಿದ್ದಾರೆ. ನಾವು ಅಲ್ಲಿಗೆ ತಲುಪಿದ ನಂತರ ಬೆಳಿಗ್ಗೆ 10.30ಕ್ಕೆ ಅವರು ನಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿದರು ಮತ್ತು ಏನನ್ನೂ ಹೇಳದೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ನಮಗೆ ಹೊಡೆಯಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ ಅವರು ನಮ್ಮನ್ನು ವಿವಸ್ತ್ರಗೊಳಿಸಿ ಮತ್ತೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹೊಡೆಯಲು ಪ್ರಾರಂಭಿಸಿದರು ಮತ್ತು ನಾವು ಪ್ರಜ್ಞಾಹೀನರಾಗುವವರೆಗೂ ನಮ್ಮ ಗಾಯಗಳ ಮೇಲೆ ಮೆಣಸಿನ ಪುಡಿಯನ್ನು ಹಾಕಿದ್ದರು ಎಂದು ಹೇಳಿದ್ದಾರೆ.

ಏನಿದು ಘಟನೆ?

ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಾಲ್ವರು ಯೋಧರು ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ 8 ಮಂದಿಯಲ್ಲಿ ಮೂವರು ನಾಗರಿಕರು ಸೇನೆಯ ವಶದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಚಿತ್ರಹಿಂಸೆಗೆ ಒಳಗಾದ ಐವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತ ಪ್ರಸಾರವಾಗುತ್ತಿರುವ ವೀಡಿಯೋಗಳು ಹತ್ಯೆಗೊಳಗದವರಿಗೆ ಚಿತ್ರಹಿಂಸೆ ನೀಡಿರುವುದನ್ನು ಬಹಿರಂಗಪಡಿಸುತ್ತದೆ.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರದ ಆಡಳಿತವು ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ. ಇದಲ್ಲದೆ ಮೂವರು ಸೇನಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಕರಣದ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ಘಟನೆ ಬಳಿಕ ಪೂಂಛ್‌ನಲ್ಲಿ ಭಾರೀ ಪ್ರಮಾಣದಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ. ಕರ್ಪ್ಯೂ ವಿಧಿಸಲಾಗಿದೆ. ಇಂಟರ್ನೆಟ್‌ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಪೂಂಛ್‌ಗೆ ತೆರಳಿ ಸಂತ್ರಸ್ತ ಕುಟುಂಬದ ಭೇಟಿಗೆ ಮುಂದಾಗಿದ್ದ ಜಮ್ಮು-ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ)  ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನವನ್ನು ವಿಧಿಸಲಾಗಿದೆ.

ಇದನ್ನು ಓದಿ: ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...