Homeಮುಖಪುಟಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

ಪೂಂಛ್ ನಾಗರಿಕರ ಹತ್ಯೆ ಪ್ರಕರಣ: ಸೇನಾಧಿಕಾರಿಗಳ ಚಿತ್ರಹಿಂಸೆ ಬಿಚ್ಚಿಟ್ಟ ಸಂತ್ರಸ್ತ..

- Advertisement -
- Advertisement -

ಪೂಂಛ್‌ನಲ್ಲಿ ಸೇನಾ ಪಡೆಗಳ ವಿರುದ್ಧ ಮೂವರು ನಾಗರಿಕರ ಹತ್ಯೆಯ ಆರೋಪ ಕೇಳಿ ಬಂದಿತ್ತು. ಇದೀಗ ಭದ್ರತಾ ಪಡೆಗಳಿಂದ ಬಂಧಿತ ವ್ಯಕ್ತಿಗಳಲ್ಲಿ ಓರ್ವರು ತಮ್ಮ ಮೇಲೆ ನಡೆದ ದೌರ್ಜನ್ಯವನ್ನು ಬಿಚ್ಚಿಟ್ಟಿದ್ದಾರೆ. ನಮ್ಮನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ ಮತ್ತು ಅವರು ಗಾಯಗಳ ಮೇಲೆ ಮೆಣಸಿನ ಪುಡಿ ಎರಚಿ ಪ್ರಜ್ಞೆ ಕಳೆದುಕೊಳ್ಳುವವರೆಗೂ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಆಸ್ಪತ್ರೆಯಿಂದಲೇ ಮಾದ್ಯಮಗಳ ಜೊತೆ ಮಾತನಾಡಿದ ಮೊಹಮ್ಮದ್ ಅಶ್ರಫ್ (52), ಕಳೆದ ವಾರ ಸೇನಾಪಡೆಗಳು ತನ್ನನ್ನು ಮತ್ತು ಇತರ ನಾಲ್ವರನ್ನು ಕರೆದೊಯ್ದಿದ್ದರು. ನಂತರ ಅವರು ನಮ್ಮ ಬಟ್ಟೆಗಳನ್ನು ಬಿಚ್ಚಿಸಿ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹೊಡೆದರು ಮತ್ತು ನಮ್ಮ ಮೇಲಾದ ಗಾಯಗಳ ಮೇಲೆ ಮೆಣಸಿನ ಪುಡಿಯನ್ನು ಹಾಕಿದ್ದಾರೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಉಗ್ರರು ನಡೆಸಿದ ಹೊಂಚು ದಾಳಿಯಲ್ಲಿ ನಾಲ್ವರು ಸೇನಾಧಿಕಾರಿಗಳ ಹತ್ಯೆ ನಡೆದಿತ್ತು. ಘಟನೆಗೆ ಸಂಬಂಧಿಸಿ ಸೇನಾಧಿಕಾರಿಗಳು 8 ಮಂದಿ ನಾಗರಿಕರನ್ನು ವಶಕ್ಕೆ ಪಡೆದುಕೊಂಡಿದ್ದರು. ಅದರಲ್ಲಿ ಮೂವರು ನಾಗರಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅಶ್ರಫ್ ಸೇರಿದಂತೆ ಐವರನ್ನು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಮೊದಲು ಸೇನಾ ಸಿಬ್ಬಂದಿಯೋರ್ವ, ವ್ಯಕ್ತಿಯೊಬ್ಬನಿಗೆ ಕಬ್ಬಿಣದ ರಾಡ್ ಮತ್ತು ಲಾಠಿಗಳಿಂದ ಥಳಿಸುತ್ತಿರುವುದನ್ನು ತೋರಿಸುವ ವಿಡಿಯೋ ವೈರಲ್ ಆಗಿದೆ. ಆ ವೀಡಿಯೊದಲ್ಲಿರುವ ವ್ಯಕ್ತಿ ನಾನು, ಈ ಆಘಾತದಿಂದ ಕಳೆದ ಶನಿವಾರದಿಂದ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ. ದೇಹದಾದ್ಯಂತ ತೀವ್ರವಾದ ನೋವು ಮತ್ತು ಚಿತ್ರಹಿಂಸೆಯ ದೃಶ್ಯಗಳು ಕಣ್ಣ ಮುಂದೆ ಇದೆ. ಇದರಿಂದ ನಿದ್ರೆಯೇ ಬಂದಿಲ್ಲ ಎಂದು ಅಶ್ರಫ್ ಹೇಳಿದ್ದಾರೆ.

ರಜೌರಿ ಜಿಲ್ಲೆಯ ಥಾನಮಂಡಿ ಪ್ರದೇಶದ ನಿವಾಸಿ ಅಶ್ರಫ್ 2007ರಿಂದ ಜಮ್ಮು-ಕಾಶ್ಮೀರದ ವಿದ್ಯುತ್  ಇಲಾಖೆಯಲ್ಲಿ ಲೈನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ತಿಂಗಳಿಗೆ 9,330ರೂ.ವೇತನ ನೀಡಲಾಗುತ್ತಿತ್ತು. ಅವರಿಗೆ ಓರ್ವ ಮಗಳು ಸೇರಿ ಮೂವರು ಮಕ್ಕಳಿದ್ದಾರೆ. ಅವರ ಪತ್ನಿ ಈ ವರ್ಷ ಮಾ. 23ರಂದು ಮೃತಪಟ್ಟಿದ್ದರು.

ಅಶ್ರಫ್ ಅವರೊಂದಿಗೆ ರಾಜೌರಿ ಆಸ್ಪತ್ರೆಯಲ್ಲಿ ಫಾರೂಕ್ ಅಹ್ಮದ್ (45), ಫಝಲ್ ಹುಸೇನ್(50), ಮೊಹಮ್ಮದ್ ಬೇತಾಬ್ (25) ಮತ್ತು ಇನೋರ್ವ 15 ವರ್ಷದ ಬಾಲಕ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇವರೆಲ್ಲರೂ ಕೂಡ ಥಾನಮಂಡಿ ಪ್ರದೇಶದವರಾಗಿದ್ದರು.

ಆಸ್ಪತ್ರೆಯ ವೈದ್ಯರು ಆಸ್ಪತ್ರೆಗೆ ದಾಖಲಾಗಿದ್ದ ಐವರಿಗೂ ಗಾಯಗಳಿವೆ ಎಂದು ಹೇಳಿದ್ದರು. ಆದರೆ ಈ ಬಗ್ಗೆ  ಹೆಚ್ಚಿನದ್ದನ್ನು ಏನೂ ವಿವರಿಸಿರಲಿಲ್ಲ. ನಮಗೆ ಯಾರಿಗೂ ನಿಲ್ಲಲು ಮತ್ತು ಕುಳಿತುಕೊಳ್ಳಲು ಆಗುತ್ತಿಲ್ಲ. ನಾವು  ಶೌಚಾಲಯಕ್ಕೆ ಹೋಗಬೇಕಾದರೆ ಆಸ್ಪತ್ರೆ ಸಿಬ್ಬಂದಿಗಳು ನಮ್ಮನ್ನು ಗಾಲಿಕುರ್ಚಿ ಅಥವಾ ಸ್ಟ್ರೆಚರ್‌ಗಳಲ್ಲಿ ಕರೆದೊಯ್ಯುತ್ತಾರೆ ಎಂದು ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ 9.30ರ ಸುಮಾರಿಗೆ ನನ್ನನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. DKG ಶಿಬಿರಕ್ಕೆ ಫಾರೂಕ್ ಅಹ್ಮದ್‌, ಮೊಹಮ್ಮದ್ ಬೇತಾಬ್ ಮತ್ತು ಅವನ ಸಹೋದರನ ಜೊತೆ ಕೆರದುಕೊಂಡು ಹೋಗಿದ್ದಾರೆ. ನಾವು ಅಲ್ಲಿಗೆ ತಲುಪಿದ ನಂತರ ಬೆಳಿಗ್ಗೆ 10.30ಕ್ಕೆ ಅವರು ನಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿದರು ಮತ್ತು ಏನನ್ನೂ ಹೇಳದೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ನಮಗೆ ಹೊಡೆಯಲು ಪ್ರಾರಂಭಿಸಿದರು. ಸ್ವಲ್ಪ ಸಮಯದ ನಂತರ ಅವರು ನಮ್ಮನ್ನು ವಿವಸ್ತ್ರಗೊಳಿಸಿ ಮತ್ತೆ ಲಾಠಿ ಮತ್ತು ಕಬ್ಬಿಣದ ರಾಡ್‌ಗಳಿಂದ ಹೊಡೆಯಲು ಪ್ರಾರಂಭಿಸಿದರು ಮತ್ತು ನಾವು ಪ್ರಜ್ಞಾಹೀನರಾಗುವವರೆಗೂ ನಮ್ಮ ಗಾಯಗಳ ಮೇಲೆ ಮೆಣಸಿನ ಪುಡಿಯನ್ನು ಹಾಕಿದ್ದರು ಎಂದು ಹೇಳಿದ್ದಾರೆ.

ಏನಿದು ಘಟನೆ?

ಜಮ್ಮು-ಕಾಶ್ಮೀರದ ಪೂಂಛ್‌ನಲ್ಲಿ ನಾಲ್ವರು ಯೋಧರು ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ 8 ಮಂದಿಯಲ್ಲಿ ಮೂವರು ನಾಗರಿಕರು ಸೇನೆಯ ವಶದಲ್ಲಿ ಮೃತಪಟ್ಟಿದ್ದರು. ಘಟನೆಯಲ್ಲಿ ಚಿತ್ರಹಿಂಸೆಗೆ ಒಳಗಾದ ಐವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತ ಪ್ರಸಾರವಾಗುತ್ತಿರುವ ವೀಡಿಯೋಗಳು ಹತ್ಯೆಗೊಳಗದವರಿಗೆ ಚಿತ್ರಹಿಂಸೆ ನೀಡಿರುವುದನ್ನು ಬಹಿರಂಗಪಡಿಸುತ್ತದೆ.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರದ ಆಡಳಿತವು ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ. ಇದಲ್ಲದೆ ಮೂವರು ಸೇನಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಪ್ರಕರಣದ ಕುರಿತು ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸೇನೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.

ಘಟನೆ ಬಳಿಕ ಪೂಂಛ್‌ನಲ್ಲಿ ಭಾರೀ ಪ್ರಮಾಣದಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ. ಕರ್ಪ್ಯೂ ವಿಧಿಸಲಾಗಿದೆ. ಇಂಟರ್ನೆಟ್‌ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಪೂಂಛ್‌ಗೆ ತೆರಳಿ ಸಂತ್ರಸ್ತ ಕುಟುಂಬದ ಭೇಟಿಗೆ ಮುಂದಾಗಿದ್ದ ಜಮ್ಮು-ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ)  ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನವನ್ನು ವಿಧಿಸಲಾಗಿದೆ.

ಇದನ್ನು ಓದಿ: ಸವರ್ಣಿಯರು ವಿಧಿಸಿದ್ದ ನಿರ್ಬಂಧ ಮುರಿದ ದಲಿತ ಸಮುದಾಯ: 60 ಜನರಿಂದ ಪಾದರಕ್ಷೆ ಧರಿಸಿ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...