Homeಮುಖಪುಟಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

ಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

- Advertisement -
- Advertisement -

ದೇಶದಲ್ಲಿ ನಿರೋದ್ಯೋಗದ ಸಮಸ್ಯೆ ಉತ್ತುಂಗಕ್ಕೆ ಏರಿರುವ ನಡುವೆ, ಸಾವಿರಾರು ಉದ್ಯೋಗಿಗಳು ಪ್ರಸ್ತುತ ಇರುವ ಕೆಲಸವನ್ನೂ ಕಳೆದುಕೊಳ್ಳುತ್ತಿದ್ದಾರೆ. ಕಾರ್ಪೋರೇಟ್ ಕಂಪನಿಗಳ ಹಠಾತ್ ವಜಾಗೊಳಿಸುವಿಕೆ ಪ್ರಕ್ರಿಯೆ ಮುಂದುವರೆದಿದ್ದು, ಯುವ ಉದ್ಯೋಗಿಗಳಿಗೆ ಆತಂಕಕಾರಿ ಬೆಳವಣಿಗೆಯಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ, ಡಿಜಿಟಲ್ ಪಾವತಿ ಆ್ಯಪ್‌ ಪೇಟಿಎಂ(Paytm) ತನ್ನ 1,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ. ಕಂಪನಿಯ ಮಾರಾಟ ಮತ್ತು ಇಂಜಿನಿಯರಿಂಗ್ ವಿಭಾಗದ ಉದ್ಯೋಗಿಗಳನ್ನು ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಕೃತಕ ಬುದ್ದಿಮತ್ತೆ(Artificial Intelligence-AI)ಗೆ ಬದಲಾಗುತ್ತಿದ್ದೇವೆ. ಇದರ ಪರಿಣಾಮ ನಮ್ಮ ಇಂಜಿನಿಯರಿಂಗ್ ಮತ್ತು ಮಾರಾಟ ವಿಭಾಗದ ಉದ್ಯೋಗಿಗಳನ್ನು ವಜಾಗೊಳಿಸುತ್ತಿದ್ದೇವೆ. ಸಂಸ್ಥೆಯ ನಿರ್ವಹಣಾ ವೆಚ್ಚ ಕಡಿತಗೊಳಿಸುವುದು ವಜಾಗೊಳಿಸುವಿಕೆಯ ಪ್ರಮುಖ ಉದ್ದೇಶ. ಇದಕ್ಕಾಗಿ ನಾವು ಎಐ ತಂತ್ರಜ್ಞಾನ ಅಳವಡಿಸಿಕೊಂಡಿದ್ದೇವೆ. ಎಐ ತಂತ್ರಜ್ಞಾನದಿಂದ ಶೇ.10ರಿಂದ 15ರಷ್ಟು ವೆಚ್ಚ ಕಡಿಮೆಯಾಗಲಿದೆ. ಅಲ್ಲದೆ ಕೆಲಸವೂ ಅತೀ ವೇಗದಲ್ಲಿ ಆಗಲಿದೆ” ಎಂದು ಪೇಟಿಎಂ ವಕ್ತಾರ ಹೇಳಿರುವುದಾಗಿ ಮನಿ ಕಂಟ್ರೋಲ್ ವರದಿ ಮಾಡಿದೆ.

ಒನ್ 97 ಕಮ್ಯೂನಿಕೇಶನ್ ಮಾಲಕತ್ವದ ಪೇಟಿಎಂ ಸಂಸ್ಥೆ, 2021ರಲ್ಲಿ 500ರಿಂದ 700 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಗಳು ಹೇಳಿವೆ.

ಇತ್ತೀಚೆಗೆ ಉದ್ಯೋಗಿಗಳನ್ನು ವಜಾಗೊಳಿಸಿದ ಮತ್ತೊಂದು ಕಾರ್ಪೋರೇಟ್ ಸಂಸ್ಥೆ ಶೇರ್ ಚಾಟ್. ಬೆಂಗಳೂರು ಮೂಲದ ಮೊಹಲ್ಲಾ ಟೆಕ್ ಸಂಸ್ಥೆಯ ಮಾಲಕತ್ವದ ಸಾಮಾಜಿಕ ಜಾಲತಾಣ ಆ್ಯಪ್‌ ಶೇರ್ ಚಾಟ್ ಸುಮಾರು 200 ಉದ್ಯೋಗಿಗಳನ್ನು ಇತ್ತೀಚೆಗೆ ವಜಾಗೊಳಿಸಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ತಿಳಿಸಿದೆ.

ಸ್ಟಾರ್ಟ್‌ ಅಪ್‌ ಅಗಿರುವ ಶೇರ್‌ ಚಾಟ್, ಕಂಪನಿಯ ಕಾರ್ಯತಂತ್ರದ ಪುನರ್‌ರಚನೆ ಮತ್ತು ವೆಚ್ಚ ಕಡಿತದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ ಕಳೆದ ಬುಧವಾರ ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಕಂಪನಿ ಈ ವರ್ಷ ನಷ್ಟ ಅನುಭವಿಸಿರುವುದೂ ಉದ್ಯೋಗಿಗಳ ವಜಾಕ್ಕೆ ಮತ್ತೊಂದು ಕಾರಣ. 2023ರಲ್ಲಿ ಕಂಪನಿ ಸುಮಾರು 28,300 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಈ ವರ್ಷ ವಿವಿಧ ಕಾರಣಗಳಿಗೆ ಒಟ್ಟು 800 ಉದ್ಯೋಗಿಗಳನ್ನು ಶೇರ್‌ ಚಾಟ್ ಕೈ ಬಿಟ್ಟಿದೆ. ಎಐ ತಂತ್ರಜ್ಞಾನ ಅಳವಡಿಕೆಯೂ ಉದ್ಯೋಗಿಗಳ ವಜಾಕ್ಕೆ ಮಗದೊಂದು ಕಾರಣ ಎನ್ನಲಾಗಿದೆ.

ಈ ಕುರಿತು ನಾನೂ ಗೌರಿ ಜೊತೆ ಮಾತನಾಡಿರುವ ಕಂಪನಿಯ ಉದ್ಯೋಗಿಯೊಬ್ಬರು, “ವಜಾಗೊಳಿಸುವ ಮುನ್ನ ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡಿಲ್ಲ. ಏಕಾಏಕಿ ವಜಾ ಪ್ರಕ್ರಿಯೆ ನಡೆದಿದೆ. ವಜಾಗೊಂಡವರು ಕಚೇರಿಗೆ ಬಂದು ಇಡೀ ದಿನ ಮಾಡುವ ಕೆಲಸಗಳೇನು ಇರಲಿಲ್ಲ. ಉದ್ಯೋಗಿಗಳ ಸಂಖ್ಯೆ ಅಗತ್ಯಕ್ಕಿಂತ ಹೆಚ್ಚಿತ್ತು. ಇದು ಕೂಡ ವಜಾಕ್ಕೆ ಕಾರಣ. ನನಗೆ ತಿಳಿದಿರುವ ಪ್ರಕಾರ, ವಜಾಗೊಂಡವರಿಗೆ ಕಂಪನಿ ಮುಂದಿನ ಮೂರು ತಿಂಗಳ ವೇತನ ಪಾವತಿಸಿದೆ. ಆದರೆ, ಏಕಾಏಕಿ ಕೆಲಸ ಕಳೆದುಕೊಂಡವರು ಅತಂತ್ರರಾಗಿದ್ದಾರೆ” ಎಂದು ಹೇಳಿದ್ದಾರೆ.

ಅತಂತ್ರರಾದ ಉದ್ಯೋಗಿಗಳು : ಕೋವಿಡ್ ಸಾಂಕ್ರಾಮಿಕದ ಬಳಿಕ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ವಜಾಗೊಳಿಸುವಿಕೆ ನಡೆಸುತ್ತಿವೆ. ಟೆಕ್ ದೈತ್ಯಗಳಾದ ಗೂಗಲ್, ಮೈಕ್ರೋಸಾಫ್ಟ್, ಇನ್ಪೋಸಿಸ್, ವಿಪ್ರೋಗಳು ಕೂಡ ಇದಕ್ಕೆ ಹೊರತಾಗಿಲ್ಲ. ವಜಾಗೊಳಿಸುವಿಕೆಗೆ ಕಂಪನಿಗಳು ನೀಡುತ್ತಿರುವ ಕಾರಣ ವೆಚ್ಚ ಕಡಿತ ಮತ್ತು ಎಐ ತಂತ್ರಜ್ಞಾನದ ಅನುಷ್ಠಾನ. ಏನೇ ಆದರೂ, ಕಂಪನಿಗಳ ದಿಢೀರ್ ನಿರ್ಧಾರದಿಂದ ಕೆಲಸ ಕಳೆದುಕೊಂಡ ಉದ್ಯೋಗಿಗಳು ಮಾತ್ರ ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ತಮ್ಮ ಸಂಬಳಕ್ಕೆ ತಕ್ಕಂತೆ ನಗರಕ್ಕೆ ಬಂದು ಜೀವನ ರೂಪಿಸಿಕೊಂಡಿರುವ ಉದ್ಯೋಗಿಗಳು, ಹಠಾತ್ ಕೆಲಸ ಕಳೆದುಕೊಂಡಾಗ ಹೊಸ ಕೆಲಸ ಹುಡುಕುವ ಅನಿವಾರ್ಯತೆ ಎದುರಾಗುತ್ತದೆ. ಹೊಸ ಕೆಲಸ ಸಿಗುವವರೆಗೆ ಕೈಯಲ್ಲಿ ಕೆಲಸ, ಸಂಬಳ ಇಲ್ಲದೆ ಬೆಂಗಳೂರಿನಂತಹ ನಗರಗಳಲ್ಲಿ ಬದುಕುದು ಅಸಾಧ್ಯ. ಹೊಸ ಕೆಲಸ ಹುಡುಕೋಣ ಎಂದರೆ ತ್ವರಿತವಾಗಿ ಎಲ್ಲೂ ಕೆಲಸ ಸಿದ್ದ ಇರುವುದಿಲ್ಲ. ತಮ್ಮ ಶಿಕ್ಷಣ, ಅನುಭವಕ್ಕೆ ತಕ್ಕಂತೆ ಕೆಲಸದ ಅವಕಾಶಗಳನ್ನು ಹುಡುಕಬೇಕು. ಎಲ್ಲಾದರು ಅವಕಾಶ ಇದ್ದರೆ ಲಿಖಿತ ಪರೀಕ್ಷೆ, ಸಂದರ್ಶನಕ್ಕೆ ಹಾಜರಾಗಬೇಕು. ಅದರಲ್ಲಿ ಯಶಸ್ವಿಯಾದರೆ ಮುಂದೆ ಸಂಬಳ ಹೊಂದಾಣಿಕೆಯಾಗಬೇಕು. ಉದ್ಯೋಗಿ ವಜಾಗೊಂಡವರು ಎಂದು ಗೊತ್ತಾದರೆ ಸಂಸ್ಥೆಗಳು ನೋಡುವ ರೀತಿಯೇ ಬೇರೆ. ಎಲ್ಲಾ ಸವಾಲುಗಳನ್ನು ಎದುರಿಸಿ ಕೊನೆಗೆ ಕೆಲಸ ಗಿಟ್ಟಿಸಿಕೊಳ್ಳುವ ಹೊತ್ತಿಗೆ ಬಡ, ಮಧ್ಯಮ ವರ್ಗದ ಯುವ ಜನತೆಯ ಜೀವನ ಬೀದಿಗೆ ಬಂದಿರುತ್ತದೆ. ಒಂದು ವಜಾಗೊಳಿಸುವಿಕೆ ದೊಡ್ಡ ಸಂಕಷ್ಟಕ್ಕೆ ತಳ್ಳಿ ಬಿಡುತ್ತದೆ.

ಇದನ್ನೂ ಓದಿ : WFI ಆಡಳಿತ ಮಂಡಳಿ ಅಮಾನತುಗೊಂಡಿಲ್ಲ, ಗೊಂದಲ ಸೃಷ್ಟಿಸಲು ಚಟುವಟಿಕೆ ಸ್ಥಗಿತ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...