Homeಮುಖಪುಟಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

ಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

- Advertisement -
- Advertisement -

ದೇಶದಲ್ಲಿ ನಿರೋದ್ಯೋಗದ ಸಮಸ್ಯೆ ಉತ್ತುಂಗಕ್ಕೆ ಏರಿರುವ ನಡುವೆ, ಸಾವಿರಾರು ಉದ್ಯೋಗಿಗಳು ಪ್ರಸ್ತುತ ಇರುವ ಕೆಲಸವನ್ನೂ ಕಳೆದುಕೊಳ್ಳುತ್ತಿದ್ದಾರೆ. ಕಾರ್ಪೋರೇಟ್ ಕಂಪನಿಗಳ ಹಠಾತ್ ವಜಾಗೊಳಿಸುವಿಕೆ ಪ್ರಕ್ರಿಯೆ ಮುಂದುವರೆದಿದ್ದು, ಯುವ ಉದ್ಯೋಗಿಗಳಿಗೆ ಆತಂಕಕಾರಿ ಬೆಳವಣಿಗೆಯಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ, ಡಿಜಿಟಲ್ ಪಾವತಿ ಆ್ಯಪ್‌ ಪೇಟಿಎಂ(Paytm) ತನ್ನ 1,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ. ಕಂಪನಿಯ ಮಾರಾಟ ಮತ್ತು ಇಂಜಿನಿಯರಿಂಗ್ ವಿಭಾಗದ ಉದ್ಯೋಗಿಗಳನ್ನು ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಕೃತಕ ಬುದ್ದಿಮತ್ತೆ(Artificial Intelligence-AI)ಗೆ ಬದಲಾಗುತ್ತಿದ್ದೇವೆ. ಇದರ ಪರಿಣಾಮ ನಮ್ಮ ಇಂಜಿನಿಯರಿಂಗ್ ಮತ್ತು ಮಾರಾಟ ವಿಭಾಗದ ಉದ್ಯೋಗಿಗಳನ್ನು ವಜಾಗೊಳಿಸುತ್ತಿದ್ದೇವೆ. ಸಂಸ್ಥೆಯ ನಿರ್ವಹಣಾ ವೆಚ್ಚ ಕಡಿತಗೊಳಿಸುವುದು ವಜಾಗೊಳಿಸುವಿಕೆಯ ಪ್ರಮುಖ ಉದ್ದೇಶ. ಇದಕ್ಕಾಗಿ ನಾವು ಎಐ ತಂತ್ರಜ್ಞಾನ ಅಳವಡಿಸಿಕೊಂಡಿದ್ದೇವೆ. ಎಐ ತಂತ್ರಜ್ಞಾನದಿಂದ ಶೇ.10ರಿಂದ 15ರಷ್ಟು ವೆಚ್ಚ ಕಡಿಮೆಯಾಗಲಿದೆ. ಅಲ್ಲದೆ ಕೆಲಸವೂ ಅತೀ ವೇಗದಲ್ಲಿ ಆಗಲಿದೆ” ಎಂದು ಪೇಟಿಎಂ ವಕ್ತಾರ ಹೇಳಿರುವುದಾಗಿ ಮನಿ ಕಂಟ್ರೋಲ್ ವರದಿ ಮಾಡಿದೆ.

ಒನ್ 97 ಕಮ್ಯೂನಿಕೇಶನ್ ಮಾಲಕತ್ವದ ಪೇಟಿಎಂ ಸಂಸ್ಥೆ, 2021ರಲ್ಲಿ 500ರಿಂದ 700 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಗಳು ಹೇಳಿವೆ.

ಇತ್ತೀಚೆಗೆ ಉದ್ಯೋಗಿಗಳನ್ನು ವಜಾಗೊಳಿಸಿದ ಮತ್ತೊಂದು ಕಾರ್ಪೋರೇಟ್ ಸಂಸ್ಥೆ ಶೇರ್ ಚಾಟ್. ಬೆಂಗಳೂರು ಮೂಲದ ಮೊಹಲ್ಲಾ ಟೆಕ್ ಸಂಸ್ಥೆಯ ಮಾಲಕತ್ವದ ಸಾಮಾಜಿಕ ಜಾಲತಾಣ ಆ್ಯಪ್‌ ಶೇರ್ ಚಾಟ್ ಸುಮಾರು 200 ಉದ್ಯೋಗಿಗಳನ್ನು ಇತ್ತೀಚೆಗೆ ವಜಾಗೊಳಿಸಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ತಿಳಿಸಿದೆ.

ಸ್ಟಾರ್ಟ್‌ ಅಪ್‌ ಅಗಿರುವ ಶೇರ್‌ ಚಾಟ್, ಕಂಪನಿಯ ಕಾರ್ಯತಂತ್ರದ ಪುನರ್‌ರಚನೆ ಮತ್ತು ವೆಚ್ಚ ಕಡಿತದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ ಕಳೆದ ಬುಧವಾರ ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಕಂಪನಿ ಈ ವರ್ಷ ನಷ್ಟ ಅನುಭವಿಸಿರುವುದೂ ಉದ್ಯೋಗಿಗಳ ವಜಾಕ್ಕೆ ಮತ್ತೊಂದು ಕಾರಣ. 2023ರಲ್ಲಿ ಕಂಪನಿ ಸುಮಾರು 28,300 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಈ ವರ್ಷ ವಿವಿಧ ಕಾರಣಗಳಿಗೆ ಒಟ್ಟು 800 ಉದ್ಯೋಗಿಗಳನ್ನು ಶೇರ್‌ ಚಾಟ್ ಕೈ ಬಿಟ್ಟಿದೆ. ಎಐ ತಂತ್ರಜ್ಞಾನ ಅಳವಡಿಕೆಯೂ ಉದ್ಯೋಗಿಗಳ ವಜಾಕ್ಕೆ ಮಗದೊಂದು ಕಾರಣ ಎನ್ನಲಾಗಿದೆ.

ಈ ಕುರಿತು ನಾನೂ ಗೌರಿ ಜೊತೆ ಮಾತನಾಡಿರುವ ಕಂಪನಿಯ ಉದ್ಯೋಗಿಯೊಬ್ಬರು, “ವಜಾಗೊಳಿಸುವ ಮುನ್ನ ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡಿಲ್ಲ. ಏಕಾಏಕಿ ವಜಾ ಪ್ರಕ್ರಿಯೆ ನಡೆದಿದೆ. ವಜಾಗೊಂಡವರು ಕಚೇರಿಗೆ ಬಂದು ಇಡೀ ದಿನ ಮಾಡುವ ಕೆಲಸಗಳೇನು ಇರಲಿಲ್ಲ. ಉದ್ಯೋಗಿಗಳ ಸಂಖ್ಯೆ ಅಗತ್ಯಕ್ಕಿಂತ ಹೆಚ್ಚಿತ್ತು. ಇದು ಕೂಡ ವಜಾಕ್ಕೆ ಕಾರಣ. ನನಗೆ ತಿಳಿದಿರುವ ಪ್ರಕಾರ, ವಜಾಗೊಂಡವರಿಗೆ ಕಂಪನಿ ಮುಂದಿನ ಮೂರು ತಿಂಗಳ ವೇತನ ಪಾವತಿಸಿದೆ. ಆದರೆ, ಏಕಾಏಕಿ ಕೆಲಸ ಕಳೆದುಕೊಂಡವರು ಅತಂತ್ರರಾಗಿದ್ದಾರೆ” ಎಂದು ಹೇಳಿದ್ದಾರೆ.

ಅತಂತ್ರರಾದ ಉದ್ಯೋಗಿಗಳು : ಕೋವಿಡ್ ಸಾಂಕ್ರಾಮಿಕದ ಬಳಿಕ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ವಜಾಗೊಳಿಸುವಿಕೆ ನಡೆಸುತ್ತಿವೆ. ಟೆಕ್ ದೈತ್ಯಗಳಾದ ಗೂಗಲ್, ಮೈಕ್ರೋಸಾಫ್ಟ್, ಇನ್ಪೋಸಿಸ್, ವಿಪ್ರೋಗಳು ಕೂಡ ಇದಕ್ಕೆ ಹೊರತಾಗಿಲ್ಲ. ವಜಾಗೊಳಿಸುವಿಕೆಗೆ ಕಂಪನಿಗಳು ನೀಡುತ್ತಿರುವ ಕಾರಣ ವೆಚ್ಚ ಕಡಿತ ಮತ್ತು ಎಐ ತಂತ್ರಜ್ಞಾನದ ಅನುಷ್ಠಾನ. ಏನೇ ಆದರೂ, ಕಂಪನಿಗಳ ದಿಢೀರ್ ನಿರ್ಧಾರದಿಂದ ಕೆಲಸ ಕಳೆದುಕೊಂಡ ಉದ್ಯೋಗಿಗಳು ಮಾತ್ರ ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ತಮ್ಮ ಸಂಬಳಕ್ಕೆ ತಕ್ಕಂತೆ ನಗರಕ್ಕೆ ಬಂದು ಜೀವನ ರೂಪಿಸಿಕೊಂಡಿರುವ ಉದ್ಯೋಗಿಗಳು, ಹಠಾತ್ ಕೆಲಸ ಕಳೆದುಕೊಂಡಾಗ ಹೊಸ ಕೆಲಸ ಹುಡುಕುವ ಅನಿವಾರ್ಯತೆ ಎದುರಾಗುತ್ತದೆ. ಹೊಸ ಕೆಲಸ ಸಿಗುವವರೆಗೆ ಕೈಯಲ್ಲಿ ಕೆಲಸ, ಸಂಬಳ ಇಲ್ಲದೆ ಬೆಂಗಳೂರಿನಂತಹ ನಗರಗಳಲ್ಲಿ ಬದುಕುದು ಅಸಾಧ್ಯ. ಹೊಸ ಕೆಲಸ ಹುಡುಕೋಣ ಎಂದರೆ ತ್ವರಿತವಾಗಿ ಎಲ್ಲೂ ಕೆಲಸ ಸಿದ್ದ ಇರುವುದಿಲ್ಲ. ತಮ್ಮ ಶಿಕ್ಷಣ, ಅನುಭವಕ್ಕೆ ತಕ್ಕಂತೆ ಕೆಲಸದ ಅವಕಾಶಗಳನ್ನು ಹುಡುಕಬೇಕು. ಎಲ್ಲಾದರು ಅವಕಾಶ ಇದ್ದರೆ ಲಿಖಿತ ಪರೀಕ್ಷೆ, ಸಂದರ್ಶನಕ್ಕೆ ಹಾಜರಾಗಬೇಕು. ಅದರಲ್ಲಿ ಯಶಸ್ವಿಯಾದರೆ ಮುಂದೆ ಸಂಬಳ ಹೊಂದಾಣಿಕೆಯಾಗಬೇಕು. ಉದ್ಯೋಗಿ ವಜಾಗೊಂಡವರು ಎಂದು ಗೊತ್ತಾದರೆ ಸಂಸ್ಥೆಗಳು ನೋಡುವ ರೀತಿಯೇ ಬೇರೆ. ಎಲ್ಲಾ ಸವಾಲುಗಳನ್ನು ಎದುರಿಸಿ ಕೊನೆಗೆ ಕೆಲಸ ಗಿಟ್ಟಿಸಿಕೊಳ್ಳುವ ಹೊತ್ತಿಗೆ ಬಡ, ಮಧ್ಯಮ ವರ್ಗದ ಯುವ ಜನತೆಯ ಜೀವನ ಬೀದಿಗೆ ಬಂದಿರುತ್ತದೆ. ಒಂದು ವಜಾಗೊಳಿಸುವಿಕೆ ದೊಡ್ಡ ಸಂಕಷ್ಟಕ್ಕೆ ತಳ್ಳಿ ಬಿಡುತ್ತದೆ.

ಇದನ್ನೂ ಓದಿ : WFI ಆಡಳಿತ ಮಂಡಳಿ ಅಮಾನತುಗೊಂಡಿಲ್ಲ, ಗೊಂದಲ ಸೃಷ್ಟಿಸಲು ಚಟುವಟಿಕೆ ಸ್ಥಗಿತ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...