Homeಮುಖಪುಟಯಡಿಯೂರಪ್ಪ ಸಿಎಂ ಆಗಿದ್ದಾಗ ಕೋವಿಡ್ ಹೆಸರಿನಲ್ಲಿ ₹40 ಸಾವಿರ ಕೋಟಿ ಅವ್ಯವಹಾರ: ಶಾಸಕ ಯತ್ನಾಳ್ ಗಂಭೀರ...

ಯಡಿಯೂರಪ್ಪ ಸಿಎಂ ಆಗಿದ್ದಾಗ ಕೋವಿಡ್ ಹೆಸರಿನಲ್ಲಿ ₹40 ಸಾವಿರ ಕೋಟಿ ಅವ್ಯವಹಾರ: ಶಾಸಕ ಯತ್ನಾಳ್ ಗಂಭೀರ ಆರೋಪ

- Advertisement -
- Advertisement -

ಕೋವಿಡ್ ಮೊದಲನೇ ಅಲೆಯ ಅವಧಿಯಲ್ಲಿ ಬಿ.ಎಸ್​ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈ ವೇಳೆ ಬರೋಬ್ಬರಿ 40,000 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ 45 ರೂಪಾಯಿ ಮಾಸ್ಕ್​ಗೆ 485 ರೂಪಾಯಿ ನಿಗದಿಪಡಿಸಿದ್ದರು. ಬೆಂಗಳೂರಿನಲ್ಲಿ 10 ಸಾವಿರ ಬೆಡ್ ಸಿದ್ದಪಡಿಸಿದ್ದರು. ಪ್ರತಿ ಬೆಡ್‌ಗೆ 10 ಸಾವಿರ ರೂ. ಬಾಡಿಗೆ ಕೊಡಲಾಗಿತ್ತು. ಆ ಹಣದಲ್ಲಿ ಎರಡೆರಡು ಹೊಸ ಬೆಡ್​​ಗಳನ್ನು ಖರೀದಿಸಬಹುದಿತ್ತು. ಇದರಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದೀರಿ? ಈ ವಿಚಾರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸೌಧದಲ್ಲಿ ಹೇಳಿದ್ದೇನೆ ಎಂದಿದ್ದಾರೆ.

ನನಗೆ ಕೋವಿಡ್ ಪಾಸಿಟಿವ್ ಆದಾಗ ಮಣಿಪಾಲ್ ಆಸ್ಪತ್ರೆಯಲ್ಲಿ 5 ಲಕ್ಷ 80 ಸಾವಿರ ರೂ. ಬಿಲ್‌ ಮಾಡಿದ್ದರು. ಇಷ್ಟು ಹಣ ಬಡವರಾದವರು ಎಲ್ಲಿಂದ ತರಬೇಕು? ಈ ಬಗ್ಗೆ ನಾನು ವಿಧಾನಸೌಧದಲ್ಲಿ ಮಾತನಾಡಿದ್ದೆ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಯಾರು ಯಾರು ಲೂಟಿ ಮಾಡಿ, ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಎಂಬುದನ್ನು ಹೊರ ತೆಗೆಯುವೆ. ನಮ್ಮ ಸರ್ಕಾರವಿದ್ದರೇನು? ಬೇರೆ ಸರ್ಕಾರ ಇದ್ದರೇನು? ಕಳ್ಳರು ಕಳ್ಳರೇ ಅಲ್ವಾ? ಎಂದು ಪ್ರಶ್ನಿಸಿದ್ದಾರೆ.

ಶಾಸಕ ಯತ್ನಾಳ್ ಆರೋಪದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ ಪೋಸ್ಟ್‌ ಮೂಲಕ ಪ್ರತಿಕ್ರಿಯಿಸಿದ್ದು, ಕೊರೊನಾ ಕಾಲದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಈ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು ರೂ.4,000 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ದೂರು ದಾಖಲಿಸಿದ ನಜ್ಮಾ ನಝೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...