Homeಮುಖಪುಟಯಡಿಯೂರಪ್ಪ ಸಿಎಂ ಆಗಿದ್ದಾಗ ಕೋವಿಡ್ ಹೆಸರಿನಲ್ಲಿ ₹40 ಸಾವಿರ ಕೋಟಿ ಅವ್ಯವಹಾರ: ಶಾಸಕ ಯತ್ನಾಳ್ ಗಂಭೀರ...

ಯಡಿಯೂರಪ್ಪ ಸಿಎಂ ಆಗಿದ್ದಾಗ ಕೋವಿಡ್ ಹೆಸರಿನಲ್ಲಿ ₹40 ಸಾವಿರ ಕೋಟಿ ಅವ್ಯವಹಾರ: ಶಾಸಕ ಯತ್ನಾಳ್ ಗಂಭೀರ ಆರೋಪ

- Advertisement -
- Advertisement -

ಕೋವಿಡ್ ಮೊದಲನೇ ಅಲೆಯ ಅವಧಿಯಲ್ಲಿ ಬಿ.ಎಸ್​ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಈ ವೇಳೆ ಬರೋಬ್ಬರಿ 40,000 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ 45 ರೂಪಾಯಿ ಮಾಸ್ಕ್​ಗೆ 485 ರೂಪಾಯಿ ನಿಗದಿಪಡಿಸಿದ್ದರು. ಬೆಂಗಳೂರಿನಲ್ಲಿ 10 ಸಾವಿರ ಬೆಡ್ ಸಿದ್ದಪಡಿಸಿದ್ದರು. ಪ್ರತಿ ಬೆಡ್‌ಗೆ 10 ಸಾವಿರ ರೂ. ಬಾಡಿಗೆ ಕೊಡಲಾಗಿತ್ತು. ಆ ಹಣದಲ್ಲಿ ಎರಡೆರಡು ಹೊಸ ಬೆಡ್​​ಗಳನ್ನು ಖರೀದಿಸಬಹುದಿತ್ತು. ಇದರಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದೀರಿ? ಈ ವಿಚಾರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸೌಧದಲ್ಲಿ ಹೇಳಿದ್ದೇನೆ ಎಂದಿದ್ದಾರೆ.

ನನಗೆ ಕೋವಿಡ್ ಪಾಸಿಟಿವ್ ಆದಾಗ ಮಣಿಪಾಲ್ ಆಸ್ಪತ್ರೆಯಲ್ಲಿ 5 ಲಕ್ಷ 80 ಸಾವಿರ ರೂ. ಬಿಲ್‌ ಮಾಡಿದ್ದರು. ಇಷ್ಟು ಹಣ ಬಡವರಾದವರು ಎಲ್ಲಿಂದ ತರಬೇಕು? ಈ ಬಗ್ಗೆ ನಾನು ವಿಧಾನಸೌಧದಲ್ಲಿ ಮಾತನಾಡಿದ್ದೆ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಯಾರು ಯಾರು ಲೂಟಿ ಮಾಡಿ, ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಎಂಬುದನ್ನು ಹೊರ ತೆಗೆಯುವೆ. ನಮ್ಮ ಸರ್ಕಾರವಿದ್ದರೇನು? ಬೇರೆ ಸರ್ಕಾರ ಇದ್ದರೇನು? ಕಳ್ಳರು ಕಳ್ಳರೇ ಅಲ್ವಾ? ಎಂದು ಪ್ರಶ್ನಿಸಿದ್ದಾರೆ.

ಶಾಸಕ ಯತ್ನಾಳ್ ಆರೋಪದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ ಪೋಸ್ಟ್‌ ಮೂಲಕ ಪ್ರತಿಕ್ರಿಯಿಸಿದ್ದು, ಕೊರೊನಾ ಕಾಲದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ಎಸಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಈ ಮೂಲಕ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿತ್ತು ಎನ್ನುವ ನಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣದ ಹೆಸರಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಮಾರು ರೂ.4,000 ಕೋಟಿ ರೂಪಾಯಿಗಳ ಭ್ರಷ್ಟಾಚಾರ ಮಾಡಿದೆ ಎಂದು ಪತ್ರಿಕಾಗೋಷ್ಠಿ ಕರೆದು ದಾಖಲೆಗಳ ಸಮೇತ ನಾವು ಆರೋಪ ಮಾಡಿದ್ದೆವು. ಯತ್ನಾಳ್ ಅವರ ಆರೋಪವನ್ನು ಗಮನಿಸಿದರೆ ನಮ್ಮ ಅಂದಾಜಿಗಿಂತಲೂ ಹತ್ತು ಪಟ್ಟು ಹೆಚ್ಚಿನ ಭ್ರಷ್ಟಾಚಾರ ನಡೆದಿರುವಂತೆ ಕಾಣುತ್ತಿದೆ. ನಮ್ಮ ಆರೋಪ ಕೇಳಿ ಹೌಹಾರಿ ಬಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಆಗಿನ ಸಚಿವರ ದಂಡು ಈಗ ಎಲ್ಲಿ ಅಡಗಿ ಕೂತಿದೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಭಟ್‌ ವಿರುದ್ಧ ದೂರು ದಾಖಲಿಸಿದ ನಜ್ಮಾ ನಝೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...