Homeಮುಖಪುಟಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

ಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

- Advertisement -
- Advertisement -

ಅಕ್ಟೋಬರ್‌ 7ರಂದು ಇಸ್ರೇಲ್‌-ಹಮಾಸ್ ನಡುವೆ ಸಂಘರ್ಷ ಪ್ರಾರಂಭವಾದಾಗಿನಿಂದ ಇದುವರೆಗೆ (ಡಿ.26) ಯುಎಸ್ 230 ಸರಕು ವಿಮಾನಗಳು ಮತ್ತು 20 ಹಡಗುಗಳಲ್ಲಿ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಉಪಕರಣಗಳನ್ನು ಕಳುಹಿಸಿಕೊಟ್ಟಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ವರದಿಗಳು ತಿಳಿಸಿವೆ.

ಯುಎಸ್ ಮಿಲಿಟರಿ ನೆರವು ಫಿರಂಗಿ ಶೆಲ್‌ಗಳು, ಶಸ್ತ್ರಸಜ್ಜಿತ ವಾಹನಗಳು ಮತ್ತು ಸೈನಿಕರಿಗೆ ಬೇಕಾದ ಮೂಲಭೂತ ಯುದ್ಧ ಸಾಧನಗಳನ್ನು ಒಳಗೊಂಡಿತ್ತು ಎಂದು ಇಸ್ರೇಲ್ ಮೂಲದ ಯೆಡಿಯಟ್ ಅಹ್ರೊನೊತ್ ಪತ್ರಿಕೆ ವರದಿ ಮಾಡಿದೆ.

ಇಸ್ರೇಲ್‌ನ ರಕ್ಷಣಾ ಸಚಿವಾಲಯವು ಗಾಝಾ ಪಟ್ಟಿಯ ಮೇಲಿನ ಪ್ರಸ್ತುತ ಯುದ್ಧದ ವೆಚ್ಚವನ್ನು ಸುಮಾರು 65 ಶತಕೋಟಿ ಶೆಕೆಲ್‌ಗಳು ($17 ಶತಕೋಟಿ) ಎಂದು ಅಂದಾಜಿಸಿದೆ.

ಯುದ್ದದ ಆರಂಭದಲ್ಲಿ ಇಸ್ರೇಲ್ ತನ್ನ ಗೋದಾಮಿನಲ್ಲಿ ಶೇಖರಿಸಿಟ್ಟ ಯುದ್ದ ಸಾಮಾಗ್ರಿಗಳು, ಮದ್ದು ಗುಂಡುಗಳನ್ನು ಬಳಸಿತ್ತು. ಅದನ್ನು ತುಂಬಿಸುವ ಸಲುವಾಗಿ ಯುಎಸ್‌ನ ನೆರವು ಪಡೆದುಕೊಂಡಿದೆ. ಲೆಬಾನಾನಿನ ಹಿಝ್ಬುಲ್ಲಾ ಗುಂಪಿನ ಜೊತೆ ಯುದ್ಧ ನಡೆಯುವ ಸಾಧ್ಯತೆಗಳು ಇರುವ ಹಿನ್ನೆಲೆ, ಇಸ್ರೇಲ್ ತನ್ನ ಸೇನಾ ಗೋದಾಮನ್ನು ತುಂಬಿಸುತ್ತಿದೆ ಎಂದು ಯೆಡಿಯಟ್ ಅಹ್ರೊನೊತ್ ವರದಿ ಹೇಳಿದೆ.

ಅಂದರೆ, ಇಸ್ರೇಲ್‌ನ ರಕ್ತದಾಹ ಇನ್ನೂ ನೀಗಿಲ್ಲ. ಹಮಾಸ್‌ನಂತೆ ಹಿಝ್ಬುಲ್ಲಾದ ಹೆಸರೇಳಿಕೊಂಡು ಲೆಬಾನಾನಿನ ಮಣ್ಣಿನಲ್ಲಿ ರಕ್ತ ಹರಿಸುವ ಉತ್ಸಾಹದಲ್ಲಿದೆ ಎಂಬುವುದು ಇದರಿಂದ ಖಾತ್ರಿಯಾಗುತ್ತಿದೆ.

ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದಾಗಿನಿಂದ ಯುಎಸ್ ಇಸ್ರೇಲ್ ಪರವಾಗಿ ನಿಂತಿದೆ. ಹಮಾಸ್‌ ಅನ್ನು ಭಯೋತ್ಪಾದಕ ಸಂಘಟನೆ ಎಂದು ಪರಿಗಣಿಸಿರುವ ಯುಎಸ್, ಅದನ್ನು ನಿರ್ಣಾಮ ಮಾಡಲು ಹೊರಟಿರುವ ಇಸ್ರೇಲ್‌ಗೆ ನಮ್ಮ ಬೆಂಬಲ ಎಂದು ಹೇಳಿಕೊಳ್ಳುತ್ತಿದೆ.

ವರದಿಗಳನ್ನು ಗಮನಿಸಿದರೆ, ಇದುವರೆಗೆ 8 ಸಾವಿರ ಹಮಾಸ್ ಸದಸ್ಯರನ್ನು ಹತ್ಯೆಗೈದಿದ್ದೇವೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಈ ನಡುವೆ ಇಸ್ರೇಲ್ ದಾಳಿಗೆ ಬಲಿಯಾದ ಗಾಝಾದ ಅಮಾಯಕ ನಾಗರಿಕರ ಸಂಖ್ಯೆ 20 ಸಾವಿರ ದಾಟಿದೆ.

ನಾವು ಹಮಾಸ್ ಭಯೋತ್ಪಾದಕರನ್ನು ನಿರ್ಣಾಮ ಮಾಡಲು ಇಸ್ರೇಲ್‌ಗೆ ಸಹಾಯ ಮಾಡಿದ್ದೇವೆ ಎಂದು ಹೇಳಿಕೊಳ್ಳುವ ಯುಎಸ್‌, ಮೇಲೆ ತಿಳಿಸಿದ ಪುಟ್ಟ ಕಂದಮ್ಮಗಳೂ ಸೇರಿದಂತೆ 20 ಸಾವಿರಕ್ಕಿಂತಲೂ ಅಧಿಕ ಅಮಾಯಕ ನಾಗರಿಕರ ರಕ್ತವನ್ನು ತನ್ನ ಕೈಯಲ್ಲಿ ಮೆತ್ತಿಕೊಂಡಿದೆ.

ಶಾಂತಿಗೆ ದೊಡ್ಡಣ್ಣನ ಸ್ಥಾನದಲ್ಲಿ ನಿಂತು ಪಾಠ ಮಾಡುವ ಯುಎಸ್‌ನಲ್ಲಿ, ಜನಾಂಗೀಯ ದ್ವೇಷ ಹರಡುವ ಡೊನಾಲ್ಡ್ ಟ್ರಂಪ್‌ನ ಆಡಳಿತ ಹೋಗಿ ಜೋ ಬೈಡೆನ್‌ ಅಧ್ಯಕ್ಷಗಾದಿಗೆ ಏರಿದಾಗ ಇಡೀ ಮಾನವ ಜಗತ್ತು ಖುಷಿ ಪಟ್ಟಿತ್ತು. ಆರಂಭದಲ್ಲಿ ಮಾಧ್ಯಮಗಳ ಮುಂದೆ ಮುಸ್ಲಿಂ ಮಕ್ಕಳನ್ನು ಮುದ್ದಿಸಿ ಜೋ ಬೈಡೆನ್ ಭರವಸೆ ಮೂಡಿಸಿದ್ದರು. ಆದರೆ, ಗಾಝಾದಲ್ಲಿ ಸಾವಿರಾರು ಕಂದಮ್ಮಗಳು ಇದೇ ಬೈಡೆನ್ ಆಡಳಿತ ನೆರವಿನಿಂದ ಬಲಿಯಾಗಿವೆ, ಆಗುತ್ತಿವೆ ಎಂಬುವುದು ದುಖಃದ ಸಂಗತಿ.

ಇಸ್ರೇಲಿ ಮಿಲಿಟರಿ ಅಂಕಿ ಅಂಶಗಳ ಪ್ರಕಾರ, ಅಕ್ಟೋಬರ್ 7 ರಿಂದ ಗಾಝಾ ಪಟ್ಟಿಯ ನಡೆದ ಘರ್ಷಣೆಯಲ್ಲಿ ಕನಿಷ್ಠ 489 ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,200 ಇಸ್ರೇಲಿಗಳು ಸಾವನ್ನಪ್ಪಿದ್ದಾರೆ.

ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ನಿರಂತರ ದಾಳಿಯಿಂದ ಇದುವರೆಗೆ 20,674 ಪ್ಯಾಲೆಸ್ತೀನಿಯರು ಬಲಿಯಾಗಿದ್ದಾರೆ ಮತ್ತು 54,536 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಇಸ್ರೇಲ್‌ ದಾಳಿಯಿಂದ ಸುಂದರ ಗಾಝಾ ಪಾಳುಬಿದ್ದಿದೆ. ಇಲ್ಲಿನ ಕರಾವಳಿ ಪ್ರದೇಶದ ಅರ್ಧದಷ್ಟು ವಸತಿ ಕಟ್ಟಡಗಳು ಹಾನಿಗೊಳಗಾಗಿವೆ ಅಥವಾ ನಾಶವಾಗಿವೆ. ಆಹಾರ ಮತ್ತು ಶುದ್ಧ ನೀರಿನ ಕೊರತೆಯ ನಡುವೆ ಸುಮಾರು 2 ಮಿಲಿಯನ್ ಜನರು ಜನನಿಬಿಡ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಇದನ್ನೂ ಓದಿ : ಮೌಸಾವಿ ಹತ್ಯೆ: ಗಾಝಾದಂತೆ ಸಿರಿಯಾ ಮೇಲೂ ದಾಳಿಗೆ ಇಸ್ರೇಲ್‌ ಸಜ್ಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...