Homeಕರ್ನಾಟಕಕಡ್ಡಾಯ ಕನ್ನಡ ನಾಮಫಲಕ ಅಭಿಯಾನ: ಬೆಂಗಳೂರಿನಲ್ಲಿ ತೀವ್ರಗೊಂಡ ಕನ್ನಡಪರ ಕಾರ್ಯಕರ್ತರ ಹೋರಾಟ

ಕಡ್ಡಾಯ ಕನ್ನಡ ನಾಮಫಲಕ ಅಭಿಯಾನ: ಬೆಂಗಳೂರಿನಲ್ಲಿ ತೀವ್ರಗೊಂಡ ಕನ್ನಡಪರ ಕಾರ್ಯಕರ್ತರ ಹೋರಾಟ

- Advertisement -
- Advertisement -

ಸರ್ಕಾರ ಹಲವು ಬಾರಿ ಎಚ್ಚರಿಕೆ ನೀಡಿದ ನಂತರವೂ ರಾಜ್ಯದ ಹಲವು ವಾಣಿಜ್ಯ ಸಂಸ್ಥೆಗಳು ಹಾಗೂ ಉತ್ತರ ಭಾರತದ ಅಂಗಡಿ ಮಾಲೀಕರು ಕನ್ನಡ ನಾಮಫಲಕ ಅಳವಡಿಸಿಕೊಂಡಿಲ್ಲ. ನಾಮಫಲಕಗಳಲ್ಲಿ ಶೇ. 60% ರಷ್ಟು ಕನ್ನಡ ಇರಬೇಕು ಎಂಬ ಆದೇಶವನ್ನು ಬಹುತೇಕರು ಪಾಲನೆ ಮಾಡುತ್ತಿಲ್ಲ. ಅನ್ಯ ರಾಜ್ಯಗಳ ಅಂಗಡಿ ಮಾಲೀಕರು ಕನ್ನಡ ವಿರೋಧಿ ನಡೆ ವಿರೊಧಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಇಂದು ಹೋರಾಟಕ್ಕೆ ಧುಮುಕಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹಲವು ಸಂಘಟನೆಗಳ ಕಾರ್ಯಕರ್ತರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಬ್ಬನ್‌ ಪಾರ್ಕ್‌ ವರೆಗೆ ಅಳವಡಿಸಿರುವ ಇಂಗ್ಲಿಷ್ ನಾಮಫಲಕಗಳನ್ನು ತೆರವುಗೊಳಿಸುವ ಕೆಲಸ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿಯೂ ಕನ್ನಡಪರ ಕಾರ್ಯಕರ್ತರು ಕಡ್ಡಾಯ ಕನ್ನಡ ನಾಮಫಲಕ ಅಭಿಯಾನ ಕೈಗೊಂಡಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ನಡೆಸಿದ ಪ್ರತಿಭಟನೆ ತೀವ್ರಗೊಂಡಿದ್ದು, ತಮ್ಮ ಸೈನ್ ಬೋರ್ಡ್‌ಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸಬೇಕೆಂದು ಒತ್ತಾಯಿಸಿ, ಖಾಸಗಿ ಹೋಟೆಲ್ ಇಂಗ್ಲಿಷ್ ನಾಮಫಲಕವನ್ನು ಧ್ವಂಸಗೊಳಿಸಿದರು.

ಬೆಂಗಳೂರಿನ ಬೀದಿಗಳಲ್ಲಿ ಅಳವಡಿಸಿದ್ದ ಇಂಗ್ಲಿಷ್ ಪೋಸ್ಟರ್‌ಗಳನ್ನು ಸಹ ಹರಿದು ಹಾಕಿದರು. 2024ರ ಫೆಬ್ರವರಿ 28ರೊಳಗೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವಂತೆ ರಾಜಧಾನಿಯ ವಾಣಿಜ್ಯ ಸಂಸ್ಥೆಗಳಿಗೆ ಬಿಬಿಎಂಪಿ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

ಕೂಡಲೇ ಕನ್ನಡ ಭಾಷೆಯಲ್ಲಿ ಜಾಹೀರಾತು ಫಲಕಗಳನ್ನು ಹಾಕಬೇಕು ಎಂದು ಕನ್ನಡ ಪರ ಕಾರ್ಯಕರ್ತರು ಅಂಗಡಿ ಮಾಲೀಕರಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಎಲ್ಲ ಸಂಸ್ಥೆಗಳು ಮತ್ತು ಅಂಗಡಿಗಳು ಫೆಬ್ರವರಿ 28 ರ ಮೊದಲು ಕಡ್ಡಾಯ ಕನ್ನಡ ನಾಮಫಲಕ ಆದೇಶವನ್ನು ಪಾಲಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

‘ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ. ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ’ ಎಂದು ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಚಿಕ್ಕಪೇಟೆ, ಅವಿನ್ಯೂ ರಸ್ತೆ ಹಾಗೂ ಅಕ್ಕಪಕ್ಕದ ವ್ಯಾಪಾರ ಸ್ಥಳಗಳಲ್ಲಿ ಅಂಗಡಿ ತೆರೆದಿರುವ ಉತ್ತರ ಭಾರತದವರು ಕನ್ನಡ ನಾಮಫಲಕಗಳ ಬದಲಿಗೆ ಇಂಗ್ಲಿಷ್ ಬಳಸಿದ್ದಾರೆ. ಇದನ್ನು ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುತಿಸಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ಕನ್ನಡ ಪರ ಹೋರಾಟಗಾರರನ್ನು ಭೇಟಿ ಮಾಡಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ‘ಫೆಬ್ರವರಿ 28ರ ಮೊದಲು ಬೆಂಗಳೂರಿನ ಎಲ್ಲಾ ವಾಣಿಜ್ಯ ಸಂಸ್ಥೆಗಳು ಕನ್ನಡದಲ್ಲಿ ಫಲಕಗಳನ್ನು ಸ್ಥಾಪಿಸುವುದನ್ನು ಖಚಿತಪಡಿಸಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

‘ಬೆಂಗಳೂರಿನಲ್ಲಿ 1,400 ಕಿ.ಮೀ. ಮತ್ತು ಎಲ್ಲ ವಾಣಿಜ್ಯ ಸಂಸ್ಥೆಗಳನ್ನು ವಲಯವಾರು ಸಮೀಕ್ಷೆ ಮಾಡಲಾಗುವುದು. ನಾಮಫಲಕಗಳಲ್ಲಿ ಕನ್ನಡ ಬಳಸದವರಿಗೆ ನಾವು ನೋಟಿಸ್ ನೀಡುತ್ತೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ; ಮಣಿಪುರದಿಂದ ಮುಂಬೈ; ‘ಭಾರತ ನ್ಯಾಯ ಯಾತ್ರೆ’ ಆರಂಭಿಸಲಿರುವ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...