Homeಮುಖಪುಟ'ರಾಜಕೀಯ ಪ್ರವೇಶಕ್ಕಾಗಿ ಕುಸ್ತಿ ತೊರೆದಿದ್ದಾರೆ’; ಅಥ್ಲೀಟ್‌ಗಳ ವಿರುದ್ಧ ಸಂಜಯ್ ಸಿಂಗ್ ಆರೋಪ

‘ರಾಜಕೀಯ ಪ್ರವೇಶಕ್ಕಾಗಿ ಕುಸ್ತಿ ತೊರೆದಿದ್ದಾರೆ’; ಅಥ್ಲೀಟ್‌ಗಳ ವಿರುದ್ಧ ಸಂಜಯ್ ಸಿಂಗ್ ಆರೋಪ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ದೈನಂದಿನ ವ್ಯವಹಾರಗಳನ್ನು ನಿರ್ವಹಿಸಲು ಮೂವರು ಸದಸ್ಯರ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ತಾತ್ಕಾಲಿಕ ಸಮಿತಿಯನ್ನು ರಚಿಸಿದ ನಂತರ, ಅಮಾನತಾಗಿರುವ ಅಧ್ಯಕ್ಷ ಸಂಜಯ್ ಸಿಂಗ್ ಆಕ್ರೋಶ ಹರಹಾಕಿದ್ದಾರೆ. ಬಜರಂಗ್ ಪುನಿಯಾ ವಿರುದ್ಧ ಕಿಡಿಕಾರಿರುವ ಅವರು, ‘ಪುನಿಯಾ ಮತ್ತು ಇತರೆ ಕುಸ್ತಿಪಟುಗಳು ರಾಜಕೀಯ ಪ್ರವೇಶದ ಉದ್ದೇಶದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ; ಆಟಗಾರರಾಗಿ ಅವರು ತಮ್ಮ ವ್ಯಾಪ್ತಿಯನ್ನು ಮೀರಿದ್ದಾರೆ’ ಎಂದು ಹೇಳಿದರು.

ಕೇಂದ್ರ ಕ್ರೀಡಾ ಸಚಿವಾಲಯವು ಡಬ್ಲ್ಯೂಎಫ್ಐನ ಎಲ್ಲ ಪದಾಧಿಕಾರಿಗಳ ಆಡಳಿತ ಮಂಡಳಿಯನ್ನು ಭಾನುವಾರ ಅಮಾನತುಗೊಳಿಸಿದೆ. ಅದೇ ಸಮಯದಲ್ಲಿ ಸಚಿವಾಲಯವು, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ)ಗೆ ಸೂಚನೆ ನೀಡಿದ್ದು, ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯೂಎಫ್‌ಐ) ವ್ಯವಹಾರಗಳನ್ನು ನಿರ್ವಹಿಸಲು ಮತ್ತು ನಿಯಂತ್ರಿಸಲು ತಾತ್ಕಾಲಿಕ ಸಮಿತಿಯನ್ನು ರಚಿಸುವಂತೆ ನಿರ್ದೇಶನ ನೀಡಿತ್ತು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಂಜಯ್ ಸಿಂಗ್, ‘ಈ ಆಟಗಾರರು ಕುಸ್ತಿ ಆಡುವ ತಮ್ಮ ಪ್ರಾಯ ಮೀರಿದ್ದಾರೆ. ನೀವು ಬಜರಂಗ್ ಪುನಿಯಾ ಅವರನ್ನು ನೋಡಿ, ಅವರು ತಮ್ಮ ಕೊನೆಯ ಪಂದ್ಯವನ್ನು 10-0 ಅಂತರದಿಂದ ಸೋತರು. ಈಗ ಅವರು ರಾಜಕೀಯ ಸೇರುವುದಕ್ಕಾಗಿ ಕುಸ್ತಿಯನ್ನು ತೊರೆದಿದ್ದಾರೆ. ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ, ಅವರೊಂದಿಗೆ ಕುಸ್ತಿ ಮ್ಯಾಟ್ ಮೇಲೆ ಸೆಣಸಾಡಿದ್ದಾರೆ. ಇದು ಆಟಗಾರರು ಮಾಡುವ ಕೆಲಸವಲ್ಲ’ ಎಂದು ಸಂಜಯ್ ಸಿಂಗ್ ಕಿಡಿಕಾರಿದ್ದಾರೆ.

ಬುಧವಾರ ಬೆಳಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಜಜ್ಜರ್ ಜಿಲ್ಲೆಯ ಛಾರಾ ಗ್ರಾಮದ ವೀರೇಂದ್ರ ಆರ್ಯ ಅಖಾರಾ ತಲುಪಿ ಒಲಿಂಪಿಯನ್ ಬಜರಂಗ್ ಪುನಿಯಾ ಸೇರಿದಂತೆ ಕುಸ್ತಿಪಟುಗಳೊಂದಿಗೆ ಸಂವಾದ ನಡೆಸಿದ್ದರು.

‘ಪ್ರತಿಭಟನೆ ನಡೆಸುತ್ತಿರುವ ಹಿರಿಯ ಕುಸ್ತಿಪಟುಗಳು ಕಿರಿಯರ ಪ್ರಗತಿ ಬಯಸುತ್ತಿಲ್ಲ. ಅವರ ಪ್ರತಿಭಟನೆಯು ಎಲ್ಲ ಕುಸ್ತಿ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಅವರು ಕಿರಿಯ ಆಟಗಾರರ ಹಿತ ಬಯಸುವುದಿಲ್ಲ, ಅವರು ರಾಜಕೀಯ ಮಾಡುತ್ತಿದ್ದಾರೆ, ಬೇರೆಬೇರೆ ಪಕ್ಷದ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಇದರಿಂದ ಟ್ರಯಲ್ಸ್ ನಡೆಯದೆ ಜೂನಿಯರ್‌ಗಳಿಗೆ ಸಾಕಷ್ಟು ನಷ್ಟವಾಗುತ್ತಿದೆ. ನಾನು 10-12 ವರ್ಷಗಳಿಂದ ಕುಸ್ತಿಯೊಂದಿಗೆ ಸಂಬಂಧ ಹೊಂದಿದ್ದೇನೆ. ಎಂದಾದರೂ ಕುಸ್ತಿಪಟುವಿಗೆ ಅಗೌರವ ತೋರಿದ್ದರೆ, ಅವರು ಅದಕ್ಕೆ ಪುರಾವೆ ತೋರಿಸಬೇಕು’ ಎಂದು ಸಿಂಗ್ ಹೇಳಿದರು.

‘ನಾನು ಅಧ್ಯಕ್ಷನಾಗಿ ಆಯ್ಕೆಯಾದ ಕೂಡಲೇ ಪ್ರತಿಭಟನೆ ಆರಂಭಿಸಿದ್ದಾರೆ, ಅದರಲ್ಲಿ ನನ್ನ ತಪ್ಪೇನು’ ಎಂದು ಕುಸ್ತಿಪಟುಗಳನ್ನು ಪ್ರಶ್ನಿಸಿದರು.

ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸಿದ ಬಗ್ಗೆ ಕೇಳಿದಾಗ, ‘ಇದು ಅವರ ವೈಯಕ್ತಿಕ ವಿಷಯ; ಆದರೆ, ಅವರು ಹಾಗೆ ಮಾಡಬಾರದು. ಏಕೆಂದರೆ ನಮ್ಮ ನಾಗರಿಕರ ಹಣ ಮತ್ತು ಭಾವನೆಗಳು ಅವರನ್ನು ಇಂದು ಸ್ಟಾರ್‌ಗಳನ್ನಾಗಿ ಮಾಡಿದೆ’ ಎಂದರು.

ಇದನ್ನೂ ಓದಿ; ‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...